ಪುತ್ತೂರು

ಮೇಸ್ತ್ರೀ ಕೆಲಸ ಸಹಾಯಕರಾಗಿದ್ದ ಶಿವಪ್ಪ ಸಾವಿನ ಪ್ರಕರಣ | ಮಾಲಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡುತ್ತಿದ್ದ ಮಾಲಕರ ಸಹಿತ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾಮ್ರ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು ಹೆನ್ರಿ ತಾವೋ, ಸ್ಪ್ಯಾನಿ  ಹಾಗೂ ಇನ್ನೊಬ್ಬರು […]

ಮೇಸ್ತ್ರೀ ಕೆಲಸ ಸಹಾಯಕರಾಗಿದ್ದ ಶಿವಪ್ಪ ಸಾವಿನ ಪ್ರಕರಣ | ಮಾಲಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು Read More »

ಸಂತಫಿಲೋಮಿನ(ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಯರು ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವಿದ್ಯಾರ್ಥಿನಿಯರು 64 ಕೆಜಿ ವಿಭಾಗದ ಸೌತ್ ವೆಸ್ಟ್ ಝೋನ್ ವೇಟ್ ಲಿಫ್ಟಿಂಗ್ ಸ್ಪರ್ಧೆಗೆ ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಆಯ್ಕೆ ಟ್ರಯಲ್ ನಡೆಯಿತು. ಬ್ಯೂಲಾ ಪಿ. ಟಿ. 64 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾದರು. ದ್ವಿತೀಯ ಬಿಎಸ್ಸಿ ಯ. ಸ್ಪಂದನಾ 45 ಕೆಜಿ ವಿಭಾಗದಲ್ಲಿ ಆಯ್ಕೆಯಾದರು. ಅಂತರ್ ವಿಶ್ವವಿದ್ಯಾಲಯದ ಸ್ಪರ್ಧೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆಯಲಿದೆ.

ಸಂತಫಿಲೋಮಿನ(ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಯರು ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆ Read More »

ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ | ಜಿ.ಎಲ್‍.ಆಚಾರ್ಯರು ಸಮಾಜಕ್ಕೆ ಸ್ಪೂರ್ತಿಯಾಗಿದ್ದರು : ಹರಿಕೃಷ್ಣ ಪುನರೂರು

ಪುತ್ತೂರು: ಸಮಾಜ ಸೇವಕರಾಗಿ, ಹಿರಿಯರ ನೆಲೆಯಲ್ಲಿ ಜಿ.ಎಲ್‍.ಆಾಚಾರ್ಯ ಅವರು ಸಮಾಜಕ್ಕೆ ಸ್ಪೂರ್ತಿಯಾಗಿದ್ದರು. ಅವರ ಕುರಿತು ಮುಂದಿನ ಪೀಳಿಗೆಯ ಸಮಾಜಕ್ಕೆ ತಿಳಿಯಬೇಕು. ಈ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಪ್ರಶಸ್ತಿ ರಚನೆಯಾಗಬೇಕು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು. ಅವರು ಭಾನುವಾರ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಜಿ.ಎಲ್‍.ಆಚಾರ್ಯ ಜನ್ಮಶತಮಾನೋತ್ಸವ ಸಮಿತಿ ಜಂಟಿ ಆಾಶ್ರಯದಲ್ಲಿ ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮವನ್ನು ಬೈಪಾಸ್‍ರಸ್ತೆಯಲ್ಲಿರುವ ಆಶ್ಮಿ ಕಂಫರ್ಟ್ಸ್  ನಲ್ಲಿ ಉದ್ಘಾಟಿಸಿ ಮಾತನಾಡಿದರು.

ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ | ಜಿ.ಎಲ್‍.ಆಚಾರ್ಯರು ಸಮಾಜಕ್ಕೆ ಸ್ಪೂರ್ತಿಯಾಗಿದ್ದರು : ಹರಿಕೃಷ್ಣ ಪುನರೂರು Read More »

ಡಿವೈಡರ್‍ ಗೆ ಕಾರು ಡಿಕ್ಕಿ : ಪ್ರಯಾಣಿಕ ಮೃತ್ಯು

ನೆಲ್ಯಾಡಿ: ಕಾರೊಂದು ಡಿವೈಡರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಇಂದು ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದಿದೆ. ಮೃತಪಟ್ಟ ಕಾರು ಪ್ರಯಾಣಿಕ ಕುಂಬ್ರ ನಿವಾಸಿ ಎನ್ನಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಡಿವೈಡರ್‍ ಗೆ ಕಾರು ಡಿಕ್ಕಿ : ಪ್ರಯಾಣಿಕ ಮೃತ್ಯು Read More »

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ

ಪುತ್ತೂರು: ಶ್ರೀಕ್ಷೇತ್ರ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಕ್ಷೇತ್ರದ ಪರಿವಾರ ಸಾನಿಧ್ಯಗಳಾದ ಧೂಮಾವತಿ ದೈವದ ನೇಮ ಹಾಗೂ ಅಪರಾಹ್ನ ವ್ಯಾಘ್ರಚಾಮುಂಡಿ ಹುಲಿಭೂತ ನೇಮೋತ್ಸವದೊಂದಿಗೆ ಈ ವರ್ಷದ ಮೊದಲ ಜಾತ್ರೋತ್ಸವ ಭಾನುವಾರ ಸಂಪನ್ನಗೊಂಡಿತು. ವರ್ಷದ ಆದಿಯ ಜಾತ್ರೆ ಎಂದು ಪ್ರಸಿದ್ದಿ ಪಡೆದಿರುವ ಕ್ಷೇತ್ರದ ಜಾತ್ರೋತ್ಸವದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಉತ್ಸವ ಬಲಿ, ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ, ಮಂತ್ರಾಕ್ಷತೆಯಾಗಿ ಮಹಾಪೂಜೆ ಹಾಗೂ

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ Read More »

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಮೃತಪಟ್ಟವರು. ಮೃತರು ತಂದೆ ಪುತ್ತೂರು ಕಮ್ಯುನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗು ಕುಟುಂಬಸ್ಥರನ್ನು ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು Read More »

ಪಿಕಪ್‍ ನಲ್ಲಿ ಕಾರ್ಮಿಕನ ಮೃತದೇಹ ತಂದು ಇಳಿಸಿ ಹೋದ ಮಾಲಕ | ಪ್ರತಿಭಟನೆಗೆ ಇಳಿದ ದಲಿತ ಸಂಘಟನೆ, ಹಿಂದೂ ಮುಖಂಡರು | ಪಿಕಪ್‍ ಜಪ್ತಿ

ಪುತ್ತೂರು: ಕಾರ್ಮಿಕನ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಮನೆಯ ಮುಂದಿನ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಿಧಾನಗೊಳಿಸಿ ಹಿನ್ನಲೆಯಲ್ಲಿ ದಲಿತ ಸಂಘಟನೆ ಹಾಗೂ ಹಿಂದೂ ಮುಖಂಡರು ಪ್ರತಿಭಟನೆ ನಡೆಸಿ ಪಿಕಪ್ ವಾಹನವನ್ನು ಜಪ್ತಿ ಮಾಡಿದ ಘಟನೆ ಭಾನುವಾರ ನಡೆದಿದೆ. ಸಾಲ್ಮರ ಕೆರೆಮೂಲೆ ನಿವಾಸಿ ಸಿಮೆಂಟ್ ಸಾರಣೆ ಮೇ ಜೊತೆ ಸಹಾಯಕರಾಗಿ ಹೋಗುತ್ತಿದ್ದ ಕೂಲಿ ಕಾರ್ಮಿಕ, ಪರಿಶಿಷ್ಟ ಜಾತಿಗೆ ಸೇರಿದ ಶಿವಪ್ಪ (69) ಶನಿವಾರ ಮೃತಪಟ್ಟಿದ್ದರು. ಶಿವಪ್ಪ ಅವರು ಬೆಳಿಗ್ಗೆ ಮನೆಯಲ್ಲಿದ್ದ

ಪಿಕಪ್‍ ನಲ್ಲಿ ಕಾರ್ಮಿಕನ ಮೃತದೇಹ ತಂದು ಇಳಿಸಿ ಹೋದ ಮಾಲಕ | ಪ್ರತಿಭಟನೆಗೆ ಇಳಿದ ದಲಿತ ಸಂಘಟನೆ, ಹಿಂದೂ ಮುಖಂಡರು | ಪಿಕಪ್‍ ಜಪ್ತಿ Read More »

ನೂತನವಾಗಿ ಆರಂಭಗೊಂಡ ದ.ಕ.ಜಿಲ್ಲಾ ಒಕ್ಕಲಿಗ ಸೇವಾವಾಹಿನಿಯಿಂದ ಸಹಾಯಾರ್ಥ ಕಾರ್ಯಕ್ರಮ | ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ನೆರವಿನ ಹಸ್ತ ಯೋಜನೆಗೆ ಚಾಲನೆ

ಪುತ್ತೂರು: ಸಮಾನ ಮನಸ್ಕ ಒಕ್ಕಲಿಗ ಯುವಕರು ಸಮಾಜದ ಕಡುಬಡತನ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಬಲವರ್ಧನೆಯ ನೆರವಾಗುವ ಉದ್ದೇಶದಿಂದ ನೂತನವಾಗಿ ಪ್ರಾರಂಭಿಸಲಾದ ದ.ಕ. ಒಕ್ಕಲಿಗ ಗೌಡ ಸೇವಾವಾಹಿನಿ, ಕರ್ನಾಟಕ ಟ್ರಸ್ಟ್ ಚೊಚ್ಚಲ ಸಹಾಯಾರ್ಥ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ  ನೀಡಲಾಯಿತು. ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನೆರವಿನ ಹಸ್ತದ ಯೋಜನೆಗೆ ಚಾಲನೆ ನೀಡಿದರು. ಒಕ್ಕಲಿಗ ಸಮಾಜದ ಬಂಟ್ವಾಳ ತಾಲೂಕಿನ ವಿಟ್ಲ ಮುನ್ನೂರು ಗ್ರಾಮದ ಆಲಂಗಾರು ನಿವಾಸಿ ಪಾಂಬಾರು ತೀರ್ಥರಾಮ ಗೌಡರ ಮನೆಯು ಕಳೆದ ಬಾರಿಯ

ನೂತನವಾಗಿ ಆರಂಭಗೊಂಡ ದ.ಕ.ಜಿಲ್ಲಾ ಒಕ್ಕಲಿಗ ಸೇವಾವಾಹಿನಿಯಿಂದ ಸಹಾಯಾರ್ಥ ಕಾರ್ಯಕ್ರಮ | ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ನೆರವಿನ ಹಸ್ತ ಯೋಜನೆಗೆ ಚಾಲನೆ Read More »

ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಮೋಕ್ಷಿತ್, ಧ್ಯಾನ್ ಅವರಿಗೆ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಸನ್ಮಾನ

ಪುತ್ತೂರು: ಹ್ಯಾಂಡ್‍ ಬಾಲ್‍ ನಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಮೋಕ್ಷಿತ್ ಹಾಗೂ ಧ್ಯಾನ್‍ ಅವರನ್ನು ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಶನಿವಾರ ಸನ್ಮಾನಿಸಲಾಯಿತು. ಇಬ್ಬರು ಹ್ಯಾಂಡ್‍ ಬಾಲ್‍ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ತಂಡ ಜಯಗಳಿಸಿ, ನೇಪಾಳದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟವನ್ನು ಪ್ರತಿನಿಧಿಸಲಿದ್ದಾರೆ. ಮೋಕ್ಷಿತ್ ವಿಟ್ಲ ಪ್ರಿ ಯುನಿವರ್ಸಿಟಿಯ ಕಾಲೇಜಿನ ದ್ವಿತೀಯ ಎಚ್‍ ಇಬಿಎ ವಿದ್ಯಾರ್ಥಿಯಾಗಿದ್ದು, ಕುಕ್ಕಿಲ ಕೊಡಪದವಿನ ರಾಮ ಹಾಗೂ ವಾಣಿ ದಂಪತಿ ಪುತ್ರ. ಧ್ಯಾನ್ ವಿಟ್ಲ ಪ್ರಿ ಯುನಿವರ್ಸಿಟಿಯ ಕಾಲೇಜಿನ ದ್ವಿತೀಯ ಪಿಯುಸಿ ಎಸ್‍

ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಮೋಕ್ಷಿತ್, ಧ್ಯಾನ್ ಅವರಿಗೆ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಸನ್ಮಾನ Read More »

ಬಿಜೆಪಿ ಸಂಘಟನಾ ಪರ್ವ ಕಾರ್ಯಾಗಾರ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಮಂಡಲಗಳ ಸಂಘಟನಾ ಪರ್ವದ ಕಾರ್ಯಗಾರ ಜೈನ ಭವನದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿ ಸಂಘಟನಾ ಪರ್ವದ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಕಾರ್ಯಾಗಾರ ಉದ್ಘಾಟಿಸಿ,  ಸಂಘಟನಾ ಪರ್ವದ ಕುರಿತು ಮಾತನಾಡಿದರು. ಸಂಘಟನೆ ಹಾಗೂ ಸದಸ್ಯತನ ದ ಬಗ್ಗೆ ಸಂಘಟನಾ ಪರ್ವದ ಜಿಲ್ಲಾ ಸಹ ಚುನಾವಣಾಧಿಕಾರಿ ವಿಕಾಸ್ ಪುತ್ತೂರು ಮಾಹಿತಿ ನೀಡಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ , ಪುತ್ತೂರು ಮಂಡಲ ಪ್ರಭಾರಿ

ಬಿಜೆಪಿ ಸಂಘಟನಾ ಪರ್ವ ಕಾರ್ಯಾಗಾರ Read More »

error: Content is protected !!
Scroll to Top