ಪುತ್ತೂರು

ವಿಟಿಯು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕದ ಸಾಧನೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗಳಿಸಿಕೊಂಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‌ರಾಮ್ ಜಗದೀಶ್ ಭಂಡಾರಿ 73 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕದ ಸಾಧನೆ ಮಾಡಿದ್ದಾರೆ. ಇದೇ […]

ವಿಟಿಯು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕದ ಸಾಧನೆ Read More »

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್

ಪುತ್ತೂರು: ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಾಂತ್ರಿಕ ಯುಗದಲ್ಲಿ ಭಾಷೆಯ ಕುರಿತಾಗಿ ಅಸ್ಥಿರತೆ ಬಂದು ಮಕ್ಕಳ ಮನಸ್ಥಿತಿ ಹದಗೆಟ್ಟಿದೆ. ಇದರಿಂದ ಭಾಷೆ ಮೂಲೆ ಗುಂಪಾಗುವ ಸಾಧ್ಯತೆ ಇದೆ. ನಮ್ಮ ಭಾಷೆಯ ಮೇಲೆ ಅಭಿಮಾನದ ಜೊತೆಗೆ  ಭಾಷೆಯ ಬಾಂಧವ್ಯವೂ ಕೂಡಾ ಬೆಳೆಯಲಿ ಎಂದು ಮಂಗಳೂರು ಕೆನರಾ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್‍ ಡಾ. ಜಿ. ಎನ್. ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಐಕ್ಯೂಎಸಿ ಘಟಕ ಮತ್ತು  ಭಾಷಾ ವಿಭಾಗದ ಜಂಟಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್ Read More »

ನ.16 : ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯರಿಗೆ ಸಾರ್ವಜನಿಕ ಗೌರವಾರ್ಪಣೆ

ಪುತ್ತೂರು: ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು ದ.ಕ.ಜಿಲ್ಲಾ ಸಮಿತಿ, ಪುತ್ತೂರು ಉಪಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯ ಅವರ 80ನೇ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕ ಸನ್ಮಾನ ಹಾಗೂ ಗೌರವಾರ್ಪಣೆ ನ.16 ಶನಿವಾರ ಪುತ್ತೂರು ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೂರ್ಯನಾಥ ಆಳ್ವ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ

ನ.16 : ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯರಿಗೆ ಸಾರ್ವಜನಿಕ ಗೌರವಾರ್ಪಣೆ Read More »

ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪುತ್ತೂರು: ಸಾಮೆತ್ತಡ್ಕ “ನಮ್ಮ ಶಾಲೆ “ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಗುರುವಾರ ನಡೆಯಿತು. ಪಂಡಿತ್ ಜವಾಹರ್ ಲಾಲ್ ನೆಹರು ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಲ ಎಸ್‍ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಎಲ್‍ ಕೆಜಿ ಯಿಂದ 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪುತ್ತೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಧನಸಹಾಯ ಹಸ್ತಾಂತರ

ಬಂಟ್ವಾಳ: ತಾಲೂಕಿನ ವಿಟ್ಲ ಮೂಡ್ನೂರು ಗ್ರಾಮದ ಮರುವಾಳ ಮೇದಪ್ಪ ರವರ 2 ವರ್ಷದ ಮಗಳಾದ ತ್ರಿಷಾ ಅನಾರೋಗ್ಯದಿಂದ ಚಿಕಿತ್ಸೆ ಫಲಾಕಾರಿಯಾಗದೆ ನಿಧನ ಹೊಂದಿದ್ದು ಅವರ ಕುಟುಂಬಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಧನಸಹಾಯ ನೀಡಲಾಯಿತು. ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಮಗುವಿನ ಚಿಕಿತ್ಸೆಗೆ 4-5 ಲಕ್ಷ ಹಣವನ್ನು ಖರ್ಚು ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಮಹೇಂದ್ರ ವರ್ಮಾ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಧನಸಹಾಯ ಹಸ್ತಾಂತರ Read More »

ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಶುಭಾರಂಭ | ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ವಿಟ್ಲ: ಪುತ್ತೂರು ಕೋ ಓಪರೇಟಿವ್‍ಬ್ಯಾಂಕ್‍ನ ನೂತನ ವಿಟ್ಲ ಶಾಖೆ ವಿಟ್ಲದ ಎಂಪೈರ್ ಮಾಲ್‍ನ ಒಂದನೇ ಮಹಡಿಯಲ್ಲಿ ಗುರುವಾರ ಶುಭಾರಂಭಗೊಂಡಿತು. ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೂತನ ಶಾಖೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕ್‍ ಅಧ್ಯಕ್ಷ ಕಿಶೋರ್ ಎನ್‍. ಕೊಳತ್ತಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಎಸ್‍.ಆರ್‍.ಸತೀಶ್ಚಂದ್ರ, ವಿಟ್ಟಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕ ನಾಯ್ತೊಟ್ಟು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಹಕಾರಿ ಸಪ್ತಾಹ ಅಂಗವಾಗಿ ಮೊಳಹಳ್ಳಿ ಶಿವರಾಯರ ಭಾವಚಿತ್ರ ಅನಾವರಣಗೊಳಿಸಲಾಯಿತು. ಬಳಿಕ

ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಶುಭಾರಂಭ | ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು Read More »

ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸೂರಂಬೈಲು ಶಾಲೆಯ ಮೂರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಪುತ್ತೂರು: ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -2024 ರಲ್ಲಿ ಸೂರಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಜಿತೇಶ್ ಮಿಮಿಕ್ರಿ ಯಲ್ಲಿ ಪ್ರಥಮ, ದಿವಸ್ ಚಂದ್ ಹಿರಿಯರ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕಿರಿಯರ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಸಾಕೇತರಾಮ ಪ್ರಥಮ ಸ್ಥಾನದೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಲಿಯಾಶ್ರೀ ದ್ವಿತೀಯ, ಹಿರಿಯ ವಿಭಾಗದ

ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸೂರಂಬೈಲು ಶಾಲೆಯ ಮೂರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿಯಿಂದ ಉಚಿತ ವೈದ್ಯಕೀಯ ತಪಾಸಣೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿ ವತಿಯಿಂದ ಉಚಿತ ವೈದ್ಯಕೀಯ, ದಂತ ಹಾಗೂ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಾವು ಜನಮಂಗಲ ಸಭಾಭವನದಲ್ಲಿ ನಡೆಯಿತು. ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ವಳಾಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅರಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್‍ ಮಣಿಯಾಣಿ, ಕಾವು ಸರಯೂ ಕ್ಲಿನಿಕ್‍

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿಯಿಂದ ಉಚಿತ ವೈದ್ಯಕೀಯ ತಪಾಸಣೆ Read More »

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರಿನ ಲಾಡ್ಜ್ ಒಂದರಲ್ಲಿ ಬೆಂಗಳೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನಾಗಭೂಷಣ್‍ (65) ಮೃತಪಟ್ಟವರು. ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷಣ್‍ ಉದ್ಯೋಗ ನಿಮಿತ್ತ ಪುತ್ತೂರಿಗೆ ಬಂದಿದ್ದು, ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದು ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ Read More »

ಅಂತಿಮ ವರ್ಷದ ಎಂಬಿಎ, ಎಂಸಿಎ ಫಲಿತಾಂಶ ಪ್ರಕಟ : ವಿವೇಕಾನಂದ ಕಾಲೇಜಿಗೆ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024 ನೇ ಸಾಲಿನ ಅಂತಿಮ ವರ್ಷದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಎರಡೂ ವಿಭಾಗಗಳಲ್ಲಿ ಶೇ.100 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ನಡೆದ ಎಂಸಿಎ ವಿಭಾಗದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 60  ವಿದ್ಯಾರ್ಥಿಗಳು ಹಾಜರಾಗಿದ್ದು. ಎಲ್ಲರೂ  ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಅಪೂರ್ವ ಸಾಧನೆಯನ್ನು ಮಾಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಪೂರ್ಣಗೊಂಡ ಎಂಬಿಎ

ಅಂತಿಮ ವರ್ಷದ ಎಂಬಿಎ, ಎಂಸಿಎ ಫಲಿತಾಂಶ ಪ್ರಕಟ : ವಿವೇಕಾನಂದ ಕಾಲೇಜಿಗೆ ಶೇ.100 ಫಲಿತಾಂಶ Read More »

error: Content is protected !!
Scroll to Top