ಪುತ್ತೂರು

ಜೆಸಿಐ ಪುತ್ತೂರು  ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ

ಪುತ್ತೂರು: ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಚುನಾಯಿತರಾಗಿದ್ದಾರೆ. JCI ಮುಳಿಯ  ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ ಉಪಾಧ್ಯಕ್ಷ ಚುನಾವಣಾ ಅಧಿಕಾರಿ JC ಸುಹಾಸ್ ಮರಿಕೆ, ರಾಷ್ಟ್ರೀಯ ಸಂಯೋಜಕಿ JC ಸ್ವಾತಿ ಜೆ ರೈ , ಪೂರ್ವ ಅಧ್ಯಕ್ಷರಾದ JC ಶಶಿರಾಜ್ ರೈ, JC ಮೋಹನ್ ಕೆ ರವರುಗಳು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪೂರ್ವ […]

ಜೆಸಿಐ ಪುತ್ತೂರು  ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ Read More »

ಎನ್.ಎಸ್.ಎಸ್ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ಯೋಜನಾ ಘಟಕದ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ ಮಹಾವಿದ್ಯಾಲಯದ ಸುಜ್ಞಾನ  ದೀಪಿಕಾ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ಎ. ಮಾತನಾಡಿ, ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ತನ್ನಲ್ಲಿ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಭ್ರಷ್ಟಾಚಾರ ವಿರೋಧಿಸುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕು ಎಂದರು. ಸಹಾಯಕ ಪ್ರಾಧ್ಯಾಪಕಿ ಶ್ರೀರಕ್ಷಾ ಭ್ರಷ್ಟಾಚಾರದ ವಿರುದ್ಧದ ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಾವಿದ್ಯಾಲಯದ

ಎನ್.ಎಸ್.ಎಸ್ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ Read More »

ನರಿಮೊಗರು ಸರಸ್ವತಿ ಶಿಶು ಮಂದಿರದ ವಾರ್ಷಿಕ ಕ್ರೀಡಾಕೂಟ.

ಪುತ್ತೂರು: ನರಿಮೊಗರು ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಶಿಶು ಮಂದಿರದ ವಿದ್ಯಾರ್ಥಿಗಳ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟ ಶುಕ್ರವಾರ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ ಮಕ್ಕಳ ಸುರಕ್ಷತಾ ಸಮಿತಿ ಅಧ್ಯಕ್ಷ ಸುರೇಶ್ ಭಟ್ ಸೂರ್ಡೇಲು ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ, ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಿಕ್ಷಕಿಯರಾದ ಶೈಲಜಾ  ಸ್ವಾಗತಿಸಿ, ಸ್ವಾತಿ ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.  ಪ್ರಜ್ಞಾಲತಾ, ತೇಜಸ್ವಿನಿ 

ನರಿಮೊಗರು ಸರಸ್ವತಿ ಶಿಶು ಮಂದಿರದ ವಾರ್ಷಿಕ ಕ್ರೀಡಾಕೂಟ. Read More »

ಎಸ್‌ಆರ್‌ಕೆ ಲ್ಯಾಡರ್ಸ್‌ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ

ಸವಾಲುಗಳನ್ನು ಮೆಟ್ಟಿ ನಿಂತು ಯಶಸ್ಸು ಗಳಿಸಿದವರು ಕೇಶವ ಅಮೈ : ಜುಬಿನ್ ಮೊಹಾಪಾತ್ರ ಮಾನವೀಯ ಗುಣಗಳನ್ನು ಗುಣಗಳನ್ನು ಬೆಳೆಸಿಕೊಂಡರೆ ಯಶಸ್ಸು ಸಾಧ್ಯ : ಜಿ.ಎಲ್. ಬಲರಾಮ ಆಚಾರ್ಯ ಪುತ್ತೂರು: ಎಸ್‌ಆರ್‌ಕೆ ಲ್ಯಾಡರ್ಸ್‌ನ ದಶಮಾನೋತ್ಸವದ ಅಂಗವಾಗಿ ಪುತ್ತೂರು ರೋಟರಿ ಕ್ಲಬ್ ಹಾಗೂ ಎಸ್‌ಆರ್‌ಕೆ ಲ್ಯಾಡರ್ಸ್ ಸಹಯೋಗದಲ್ಲಿ ದೀಪಾವಳಿ ಸಂಭ್ರಮ, ಎಸ್‌ಆರ್‌ಕೆ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಕೊಯಿಲ ಕಲಾಯಿಗುತ್ತುನಲ್ಲಿ ಶುಕ್ರವಾರ ನಡೆಯಿತು.ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ಪುತ್ತೂರು ಸಹಾಯಕ ಆಯುಕ್ತ

ಎಸ್‌ಆರ್‌ಕೆ ಲ್ಯಾಡರ್ಸ್‌ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ Read More »

ಕೆರೆಗೆ ಬಿದ್ದು ಮೃತ್ಯು

ಪುತ್ತೂರು: ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅರಿಯಡ್ಕದಲ್ಲಿ ಇಂದು ನಡೆದಿದೆ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತಪಟ್ಟವರು. ತನ್ನ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ಟರ್ಪಾಲು ಹಾಸಿದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೆರೆಗೆ ಬಿದ್ದು ಮೃತ್ಯು Read More »

ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ಎಲೈಟ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “ವಾಸ್ತು ವಿನ್ಯಾಸ”ದ  ಕುರಿತು ರಾಜ್ಯ  ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಸತ್ಯ ಗಣೇಶ್  ಎಂ. ಕಾರ್ಯಾಗಾರ ಉದ್ಘಾಟಿಸಿ, ವಾಸ್ತು ಶಾಸ್ತ್ರವು ಪ್ರಕೃತಿಗೆ ಹೊಂದಿಕೊಂಡು ಗೃಹ ನಿರ್ಮಾಣ  ಹಾಗೂ ಯಾವುದೇ ಸಂಸ್ಥೆಗಳನ್ನು ನಿರ್ಮಿಸಲು ಅನುಸರಿಸ ಬೇಕಾದ ನಿಯಮಗಳು. ಪುರಾತನ ನಾಗರಿಕತೆ ಕಾಲದಿಂದಲೂ  ವಾಸ್ತು ಶಾಸ್ತ್ರವನ್ನು ಅನುಸರಿಸಿಕೊಂಡು ಬಂದಿದ್ದೇವೆ. ವೈಜ್ಞಾನಿಕವಾಗಿ ವಾಸ್ತು ವಿನ್ಯಾಸ, ವಾಸ್ತು ಶಾಸ್ತ್ರವು  ಪ್ರಸ್ತುತ ವಿವಿಧ ಪದವಿಗಳ ಮೂಲಕ ಲಭ್ಯವಿದ್ದು ಬಹಳಷ್ಟು ವ್ಯಾಪ್ತಿ

ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ Read More »

ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ

ಪುತ್ತೂರು: ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ. ರಾಷ್ಟ್ರೀಯತೆಯ ಚಿಂತನೆಯಲ್ಲಿ ಬೀಜಾಂಕುರವಾದ ಪಕ್ಷ ಇಂದು ದೇಶದ ಜನ ಮಾನಸದಲ್ಲಿ ಆಳವಾಗಿ ಬೇರೂರಿದೆ. ದೇಶದ ಜನತೆಯ ಅಭೂತಪೂರ್ವ ಬೆಂಬಲದಿಂದ ಇವೆಲ್ಲ ಸಾಧ್ಯವಾಗಿದೆ ಎಂದರು.

ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಪುತ್ತೂರು: ಯಾವುದೇ ಅಪರಾಧವನ್ನು ಮಾಡಿ ಪೋಲಿಸ್ ಕೇಸುಗಳಾದರೆ ಅದರಿಂದ ಬಿಡಿಸಿಕೊಳ್ಳುವುದು ತುಂಬಾ ಕಷ್ಟ, ಇದರಿಂದ ವಿದ್ಯಾರ್ಥಿಯೊಬ್ಬನ ಜೀವನವೇ ಹಾಳಾಗಬಹುದು ಹೀಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಆವಶ್ಯಕ ಎಂದು ಪುತ್ತೂರಿನ ಮಹಿಳಾ ಠಾಣೆಯ ಪೋಲಿಸ್ ಸಬ್-ಇನ್ಸ್‌ಪೆಕ್ಟರ್ ಭವಾನಿ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಂಟಿ ರ್ಯಾಗಿಂಗ್‍ ಕಮಿಟಿ, ಆಂಟಿ ರ್‍ಯಾಗಿಂಗ್ ಸ್ಕ್ವಾಡ್ ಮತ್ತು ಕಾಲೇಜು ಆಂತರಿಕ ದೂರು ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು.

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ Read More »

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ | ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ : ನವೀನ್‌ ಭಂಡಾರಿ

ಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್‌ ಮಿಷನ್‌ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ ಗ್ರಾಮ ಪಂಚಾಯತ್‌ಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಭಂಡಾರಿ ಹೇಳಿದರು. ಅವರು ಗುರುವಾರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಲಜೀವನ್‌ ಮಿಷನ್‌ ಯೋಜನೆಯಡಿ ಐಇಸಿ/ಹೆಚ್‌.ಆರ್‌.ಡಿ ಚಟುವಟಿಕೆಗಳನ್ನು ನಡೆಸಲು ಗ್ರಾಮ ಪಂಚಾಯತ್‌ಗಳ ನೀರು

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ | ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ : ನವೀನ್‌ ಭಂಡಾರಿ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ಬಲ್ನಾಡು ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮೂರು ದಂಪತಿಗಳಿಗೆ ಸನ್ಮಾನ

ಪುತ್ತೂರು: ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ನ ದಶಮಾನೋತ್ಸವದ ಅಂಗವಾಗಿ ಟ್ರಸ್ಟ್ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,  ಗುರುವಾರ ಬಲ್ನಾಡು ಗ್ರಾಮದ ಮೂವರು ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮುತ್ತಪ್ಪ ಗೌಡ – ದಮಯಂತಿ  (ಕಾಂತಿಲ ಮನೆ.ಬಲ್ನಾಡು),  ಬಾಬು ಗೌಡ – ಚಂದ್ರಾವತಿ  (ಬ್ರಹ್ಮರಕೋಡಿ,ಬಲ್ನಾಡು) ಹಾಗೂ ಸೇಸಪ್ಪ ಗೌಡ – ಯಮುನಾ  (ಮುದಲಾಜಿ ಮನೆ, ಬಲ್ನಾಡು ಕಾಂತಿಲ ಮಾಧವ ಗೌಡರ ಮನೆ ಬಲ್ನಾಡು) ಅವರನ್ನು ಸನ್ಮಾನಿಸಲಾಯಿತು.

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ಬಲ್ನಾಡು ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮೂರು ದಂಪತಿಗಳಿಗೆ ಸನ್ಮಾನ Read More »

error: Content is protected !!
Scroll to Top