ಪುತ್ತೂರು

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನ ವತಿಯಿಂದ ಕಾಲೇಜಿನ ಸಂಶೋಧನಾ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ ‘ಎನ್ವೋ-ಟೆಕ್‍-2024’ ನ.8 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಈ ಸಮಸ್ಯೆಗಳನ್ನು […]

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ Read More »

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಪುತ್ತೂರು ಸಂತ ವಿಕ್ಟರ್ ವಿದ್ಯಾಸಂಸ್ಥೆಯಲ್ಲಿ ಸಹಪಠ್ಯ ಸ್ಪರ್ಧೆ ನಡೆಯಿತು. ಈ ಮೂಲಕ ಪ್ರದೀಪ್‍ ಬಾಕಿಲ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಹಾಗೂ ಎಚ್.ಡಿ.ಎಫ್.ಸಿ. ಬ್ಯಾಂಕ್ ನ ಪುತ್ತೂರು ಘಟಕದ ಸಹಯೋಗದಲ್ಲಿ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ “ಸ್ವಯಂಪ್ರೇರಿತ ರಕ್ತದಾನ ಶಿಬಿರ” ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗೀ ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಸೀತಾರಾಮ ಭಟ್, ರಕ್ತದಾನ ಶ್ರೇಷ್ಠ ದಾನವಾಗಿದೆ. ಆರೋಗ್ಯವಂತರೆಲ್ಲರೂ ರಕ್ತದಾನ ಮಾಡಬಹುದು. ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ Read More »

ಡಿ.8 : ಯುವವಾಹಿನಿ ಪುತ್ತೂರು ಘಟಕದಿಂದ ‘ಕೋಟಿ-ಚೆನ್ನಯ’ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೊಳಪಟ್ಟ ಸಮಾಜ ಬಾಂಧವರಿಗಾಗಿ ಡಿ.8 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ‘ಕೋಟಿ-ಚೆನ್ನಯ’ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಬುಧವಾರ ನಡೆಯಿತು. ಮೊದಲಿಗೆ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ಪಾದದಲ್ಲಿಟ್ಟು ಪೂಜೆ ನೆರವೇರಿಸಲಾಯಿತು. ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ

ಡಿ.8 : ಯುವವಾಹಿನಿ ಪುತ್ತೂರು ಘಟಕದಿಂದ ‘ಕೋಟಿ-ಚೆನ್ನಯ’ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ಎಂ.ಕೀರ್ತಿ 17 ವಯೋಮಾನದ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳು ತರಬೇತಿ ನೀಡಿರುತ್ತಾರೆ. ಕೀರ್ತಿ ಗುಮ್ಮಟೆಗದ್ದೆ ನಿವಾಸಿ ಮೋನಪ್ಪ ಗೌಡ ಮತ್ತು ಲಲಿತಾ.ಕೆ ದಂಪತಿ ಪುತ್ರಿ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆನಡ್ಕ ಹಿ ಪ್ರಾ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪ್ರಗತಿ 600 ಮೀಟರ್ ಓಟದ ಸ್ವರ್ಧೆಯಲ್ಲಿ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಗತಿ ಗುರಿಯಡ್ಕ ನಿವಾಸಿ ನಾರಾಯಣ ನಾಯ್ಕ ಪೂರ್ಣಿಮಾ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಎಸ್‍ ಡಿಎಂಸಿ, ಮುಖ್ಯ ಶಿಕ್ಷಕರು, ಶಿಕ್ಷರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಎಡನೀರು ಶ್ರೀಗಳ ಮೇಲಿನ ದಾಳಿ ಕೇರಳದಲ್ಲಿ ಪಿಣರಾಯಿ ಸರಕಾರದ ಹಿಂದೂ ವಿರೋಧಿ ಧೋರಣೆ : ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಹಿಂದೂ ಸಮಾಜ ಪೂಜನೀಯ ಭಾವನೆಯಲ್ಲಿ ಕಾಣುವ ಎಡನೀರು ಸಂಸ್ಥಾನದ ಶ್ರೀಗಳ ವಾಹನವನ್ನು ಅಡ್ಡಗಟ್ಟಿ ದಾಳಿ ಮಾಡಿರುವುದು  ಹಿಂದೂ ಸಮಾಜದ ಭಾವನೆಯನ್ನು ಕೆರಳಿಸಿರುವುದಾಗಿದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆರೋಪಿಸಿದ್ದಾರೆ. ಕೇರಳ ರಾಜ್ಯಾದ್ಯಂತ ನಡೆಯುವ ಇಂತಹ ಘಟನೆಗಳು ಕೇರಳದಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಘಟನೆಯನ್ನು ಭಾರತೀಯ  ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು

ಎಡನೀರು ಶ್ರೀಗಳ ಮೇಲಿನ ದಾಳಿ ಕೇರಳದಲ್ಲಿ ಪಿಣರಾಯಿ ಸರಕಾರದ ಹಿಂದೂ ವಿರೋಧಿ ಧೋರಣೆ : ದಯಾನಂದ ಶೆಟ್ಟಿ ಉಜಿರೆಮಾರು Read More »

ಎಡನೀರು ಶ್ರೀಗಳನ್ನು ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಭೇಟಿ ಮಾಡಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ವಾಮಿಜೀಯ ಕಾರಿನ ಮೇಲಾದ ದಾಳಿಯ ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಸ್ವಾಮೀಜಿಯವರಿಗೆ ಧೈರ್ಯ ತುಂಬಿದರು. ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲೆ ಕೇರಳದ ಎಡಪಂಥೀಯ ಸರ್ಕಾರ ಪ್ರೇರಿತ  ದಾಳಿಯನ್ನು ಖಂಡಿಸುತ್ತಾ , ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಬೇಕೆಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ

ಎಡನೀರು ಶ್ರೀಗಳನ್ನು ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ Read More »

ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭ | ಆಸಕ್ತ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭಗೊಂಡಿದೆ. ಪ್ರಸಕ್ತ ಪ್ರಥಮ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ ಉತ್ತಮವಾದ ಕೊಠಡಿಯೊಂದಿಗೆ * ನುರಿತ ಉಪನ್ಯಾಸಕರು * ⁠ಹವಾನಿಯಂತ್ರಿತ ಕೊಠಡಿ * ⁠ಡಿಜಿಟಲ್ class room * online/offline ತರಗತಿಗಳು, ⁠KSRTC ಬಸ್ಸು ನಿಲುಗಡೆಯಿಂದ 250m ಹಾಗೂ ಇನ್ನಿತರ ಸೌಲಭ್ಯಗಳೊಂದಿಗೆ ತರಬೇತಿ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, 2ನೇ ಮಹಡಿ, ಪ್ರಭು ಬಿಲ್ಡಿಂಗ್, ಅರುಣಾ ಕಲಾ ಮಂದಿರದ ಎದುರು, ಕೆನರಾ ಬ್ಯಾಂಕ್ ಹತ್ತಿರ,

ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭ | ಆಸಕ್ತ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ Read More »

ಕೇರಳದಲ್ಲಿ ಹಿಂದೂ ಸಮಾಜದ ಪೂಜ್ಯ ಸಂತರ ವಾಹನದ ಮೇಲೆ ದಾಳಿ : ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷದ್‌ ಖಂಡನೆ

ಪುತ್ತೂರು: ಕೇರಳದ ಬೊವಿಕಾನ ಪರಿಸರದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಮದ್ ಎಡನೀರು ಮಠಾಧೀಶರರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾಂದಗಳವರು ಸಂಚರಿಸುತ್ತಿದ್ದ ವಾಹನದ ಮೇಲೆ ನಡೆದಿರುವಂತಹ ದಾಳಿ ಇದು ಅತ್ಯಂತ ಖಂಡನೀಯವಾಗಿದ್ದು, ಇದನ್ನು ಪುತ್ತೂರು ಜಿಲ್ಲಾ ವಿಶ್ವ ಹಿಂದು ಪರಿಷದ್ ಖಂಡಿಸಿದೆ. ಇಂದು ಸಂತರುಗಳಿಗೆ, ಹಿಂದೂ ಧರ್ಮದ ಶ್ರದ್ಧಾ ಬಿಂದುಗಳಿಗೆ ಸೂಕ್ತ ರಕ್ಷಣೆ ಇಲ್ಲದ ರೀತಿಯಲ್ಲಿ ಕೇರಳದಲ್ಲಿ ಗೂಂಡಾರಾಜ್ಯ ನಿರ್ಮಾಣವಾಗುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ವಿಹಿಂಪ ಹೇಳಿದೆ. .ಶೀಘ್ರ ಕೇರಳ ಪೋಲಿಸ್ ಇಲಾಖೆ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು

ಕೇರಳದಲ್ಲಿ ಹಿಂದೂ ಸಮಾಜದ ಪೂಜ್ಯ ಸಂತರ ವಾಹನದ ಮೇಲೆ ದಾಳಿ : ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷದ್‌ ಖಂಡನೆ Read More »

error: Content is protected !!
Scroll to Top