ಪುತ್ತೂರು

ಡಿ.8 : ಯುವವಾಹಿನಿ ಪುತ್ತೂರು ಘಟಕದಿಂದ ‘ಕೋಟಿ-ಚೆನ್ನಯ’ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೊಳಪಟ್ಟ ಸಮಾಜ ಬಾಂಧವರಿಗಾಗಿ ಡಿ.8 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ‘ಕೋಟಿ-ಚೆನ್ನಯ’ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಬುಧವಾರ ನಡೆಯಿತು. ಮೊದಲಿಗೆ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ಪಾದದಲ್ಲಿಟ್ಟು ಪೂಜೆ ನೆರವೇರಿಸಲಾಯಿತು. ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ […]

ಡಿ.8 : ಯುವವಾಹಿನಿ ಪುತ್ತೂರು ಘಟಕದಿಂದ ‘ಕೋಟಿ-ಚೆನ್ನಯ’ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ಎಂ.ಕೀರ್ತಿ 17 ವಯೋಮಾನದ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳು ತರಬೇತಿ ನೀಡಿರುತ್ತಾರೆ. ಕೀರ್ತಿ ಗುಮ್ಮಟೆಗದ್ದೆ ನಿವಾಸಿ ಮೋನಪ್ಪ ಗೌಡ ಮತ್ತು ಲಲಿತಾ.ಕೆ ದಂಪತಿ ಪುತ್ರಿ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆನಡ್ಕ ಹಿ ಪ್ರಾ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪ್ರಗತಿ 600 ಮೀಟರ್ ಓಟದ ಸ್ವರ್ಧೆಯಲ್ಲಿ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಗತಿ ಗುರಿಯಡ್ಕ ನಿವಾಸಿ ನಾರಾಯಣ ನಾಯ್ಕ ಪೂರ್ಣಿಮಾ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಎಸ್‍ ಡಿಎಂಸಿ, ಮುಖ್ಯ ಶಿಕ್ಷಕರು, ಶಿಕ್ಷರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಎಡನೀರು ಶ್ರೀಗಳ ಮೇಲಿನ ದಾಳಿ ಕೇರಳದಲ್ಲಿ ಪಿಣರಾಯಿ ಸರಕಾರದ ಹಿಂದೂ ವಿರೋಧಿ ಧೋರಣೆ : ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಹಿಂದೂ ಸಮಾಜ ಪೂಜನೀಯ ಭಾವನೆಯಲ್ಲಿ ಕಾಣುವ ಎಡನೀರು ಸಂಸ್ಥಾನದ ಶ್ರೀಗಳ ವಾಹನವನ್ನು ಅಡ್ಡಗಟ್ಟಿ ದಾಳಿ ಮಾಡಿರುವುದು  ಹಿಂದೂ ಸಮಾಜದ ಭಾವನೆಯನ್ನು ಕೆರಳಿಸಿರುವುದಾಗಿದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆರೋಪಿಸಿದ್ದಾರೆ. ಕೇರಳ ರಾಜ್ಯಾದ್ಯಂತ ನಡೆಯುವ ಇಂತಹ ಘಟನೆಗಳು ಕೇರಳದಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಘಟನೆಯನ್ನು ಭಾರತೀಯ  ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು

ಎಡನೀರು ಶ್ರೀಗಳ ಮೇಲಿನ ದಾಳಿ ಕೇರಳದಲ್ಲಿ ಪಿಣರಾಯಿ ಸರಕಾರದ ಹಿಂದೂ ವಿರೋಧಿ ಧೋರಣೆ : ದಯಾನಂದ ಶೆಟ್ಟಿ ಉಜಿರೆಮಾರು Read More »

ಎಡನೀರು ಶ್ರೀಗಳನ್ನು ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಭೇಟಿ ಮಾಡಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ವಾಮಿಜೀಯ ಕಾರಿನ ಮೇಲಾದ ದಾಳಿಯ ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಸ್ವಾಮೀಜಿಯವರಿಗೆ ಧೈರ್ಯ ತುಂಬಿದರು. ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲೆ ಕೇರಳದ ಎಡಪಂಥೀಯ ಸರ್ಕಾರ ಪ್ರೇರಿತ  ದಾಳಿಯನ್ನು ಖಂಡಿಸುತ್ತಾ , ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಬೇಕೆಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ

ಎಡನೀರು ಶ್ರೀಗಳನ್ನು ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ Read More »

ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭ | ಆಸಕ್ತ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭಗೊಂಡಿದೆ. ಪ್ರಸಕ್ತ ಪ್ರಥಮ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ ಉತ್ತಮವಾದ ಕೊಠಡಿಯೊಂದಿಗೆ * ನುರಿತ ಉಪನ್ಯಾಸಕರು * ⁠ಹವಾನಿಯಂತ್ರಿತ ಕೊಠಡಿ * ⁠ಡಿಜಿಟಲ್ class room * online/offline ತರಗತಿಗಳು, ⁠KSRTC ಬಸ್ಸು ನಿಲುಗಡೆಯಿಂದ 250m ಹಾಗೂ ಇನ್ನಿತರ ಸೌಲಭ್ಯಗಳೊಂದಿಗೆ ತರಬೇತಿ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, 2ನೇ ಮಹಡಿ, ಪ್ರಭು ಬಿಲ್ಡಿಂಗ್, ಅರುಣಾ ಕಲಾ ಮಂದಿರದ ಎದುರು, ಕೆನರಾ ಬ್ಯಾಂಕ್ ಹತ್ತಿರ,

ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭ | ಆಸಕ್ತ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ Read More »

ಕೇರಳದಲ್ಲಿ ಹಿಂದೂ ಸಮಾಜದ ಪೂಜ್ಯ ಸಂತರ ವಾಹನದ ಮೇಲೆ ದಾಳಿ : ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷದ್‌ ಖಂಡನೆ

ಪುತ್ತೂರು: ಕೇರಳದ ಬೊವಿಕಾನ ಪರಿಸರದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಮದ್ ಎಡನೀರು ಮಠಾಧೀಶರರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾಂದಗಳವರು ಸಂಚರಿಸುತ್ತಿದ್ದ ವಾಹನದ ಮೇಲೆ ನಡೆದಿರುವಂತಹ ದಾಳಿ ಇದು ಅತ್ಯಂತ ಖಂಡನೀಯವಾಗಿದ್ದು, ಇದನ್ನು ಪುತ್ತೂರು ಜಿಲ್ಲಾ ವಿಶ್ವ ಹಿಂದು ಪರಿಷದ್ ಖಂಡಿಸಿದೆ. ಇಂದು ಸಂತರುಗಳಿಗೆ, ಹಿಂದೂ ಧರ್ಮದ ಶ್ರದ್ಧಾ ಬಿಂದುಗಳಿಗೆ ಸೂಕ್ತ ರಕ್ಷಣೆ ಇಲ್ಲದ ರೀತಿಯಲ್ಲಿ ಕೇರಳದಲ್ಲಿ ಗೂಂಡಾರಾಜ್ಯ ನಿರ್ಮಾಣವಾಗುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ವಿಹಿಂಪ ಹೇಳಿದೆ. .ಶೀಘ್ರ ಕೇರಳ ಪೋಲಿಸ್ ಇಲಾಖೆ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು

ಕೇರಳದಲ್ಲಿ ಹಿಂದೂ ಸಮಾಜದ ಪೂಜ್ಯ ಸಂತರ ವಾಹನದ ಮೇಲೆ ದಾಳಿ : ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷದ್‌ ಖಂಡನೆ Read More »

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತ್ಯು

ಕೊಕ್ಕಡ: ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಪ್ರಿಯಾಂಕಾ ಡಿ’ಸೋಜಾ (19) ಮೃತಪಟ್ಟವರು. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ  ಪ್ರಿಯಾಂಕ ಕೆಲ ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.  ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ವಿದ್ಯಾರ್ಥಿನಿ ಮೃತಪಟ್ಟ ಹಿನ್ನಲೆಯಲ್ಲಿ ಉಪ್ಪಿನಂಗಡಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತ್ಯು Read More »

ಎಡನೀರು ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀಯವರ ಕಾರಿಗೆ ಹಾನಿ | ಮತಾಂಧ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು : ಸಂಜೀವ ಮಠಂದೂರು

ಪುತ್ತೂರು: ಎಡನೀರು ಮಠದ ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀಯವರು ಭಾನುವಾರ ಬೋವಿಕಾನ ಬಾವಿಕೆರೆ ಎಂಬಲ್ಲಿ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಮತಾಂಧ ಕಿಡಿಗೇಡಿಗಳು ಸ್ವಾಮೀಜಿಯವರು ಹೋಗುತ್ತಿದ್ದ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜನ್ನು ಹೊಡೆದು ಹಾನಿಗೊಳಿಸಿದರೆಂದು ತಿಳಿದು ಬಂದಿದ್ದು, ಈ ಘಟನೆಯಲ್ಲಿ ಭಾಗಿಯಾದ ಮತಾಂಧ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ, ಕೇರಳ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ

ಎಡನೀರು ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀಯವರ ಕಾರಿಗೆ ಹಾನಿ | ಮತಾಂಧ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು : ಸಂಜೀವ ಮಠಂದೂರು Read More »

ಮರ ಬಿದ್ದು ಮೃತಪಟ್ಟ ಸೀತಾರಾಮ ಗೌಡರ ಸ್ಕೂಟಿ ಮೇಲೆ ಕೋಳಿ | ಅಪಘಾತ ನಡೆದ ಸ್ಥಳದಲ್ಲಿ ಠಿಕಾಣಿ ಹೂಡಿದ ಹರಕೆಯ ಕೋಳಿ

ಕಡಬ: ಎರಡು ದಿನಗಳ ಹಿಂದೆ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದ್ದ ಪರಿಣಾಮ, ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಸ್ಥಳದಲ್ಲಿ ಪವಾಡವೊಂದು ನಡೆದಿದೆ. ಸೀತಾರಾಮ ಅವರು ತಮ್ಮ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಳಿ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿತ್ತು. ಘಟನೆಯ ವೇಳೆ ಕೋಳಿಯ ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದರಿಂದ ಮೃತದೇಹದ ಬಳಿಯೇ ಕೋಳಿ ಬಿದ್ದಿತ್ತು. ಬಳಿಕ ಸ್ಥಳದಲ್ಲಿದ್ದವರು ಕೋಳಿಯ ಕಾಲಿಗೆ

ಮರ ಬಿದ್ದು ಮೃತಪಟ್ಟ ಸೀತಾರಾಮ ಗೌಡರ ಸ್ಕೂಟಿ ಮೇಲೆ ಕೋಳಿ | ಅಪಘಾತ ನಡೆದ ಸ್ಥಳದಲ್ಲಿ ಠಿಕಾಣಿ ಹೂಡಿದ ಹರಕೆಯ ಕೋಳಿ Read More »

error: Content is protected !!
Scroll to Top