ಪುತ್ತೂರು

ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ

ಬಂಟ್ವಾಳ: ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಬಂಟ್ವಾಳ ತಾಲೂಕಿನ ವಿಟ್ಲ ಶಾಂತಿನಗರದಲ್ಲಿರುವ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತು. ಶುಭಾರಂಭದ ಪ್ರಯುಕ್ತ ಬೆಳಿಗ್ಗೆ  10.30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆ ನಡೆಯಿತು. ಬಳಿಕ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕಾಯಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ.ವಿಟ್ಲ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ದ.ಕ.ಜಿಲ್ಲಾ ಶಾಮಿಯಾನ […]

ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ Read More »

ದೀಕ್ಷಿತ್ – ರಕ್ಷಿತಾ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ

ಪುತ್ತೂರು: ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಮಳುವೇಲು ಮನೆ ಯಶೋದಾ ಮತ್ತು ಗಂಗಾಧರ ಗೌಡರ ಪುತ್ರ ದೀಕ್ಷಿತ್ ಅವರ ವಿವಾಹ ನಿಶ್ಚಿತಾರ್ಥ ಕಡಬ ತಾಲೂಕಿನ ಎಣ್ಮೂರು ಗ್ರಾಮದ ಹೇಮಳ ಕೂರಂಬೇಲು ಭುವನೇಶ್ವರಿ ಮತ್ತು ಬಾಲಕೃಷ್ಣ ಗೌಡರ ಪುತ್ರಿ ರಕ್ಷಿತಾ ಅವರೊಂದಿಗೆ ಕೆಮ್ಮಲೆ ಹೇಮಳದಲ್ಲಿರುವ ಭ್ರಮರಾಂಬಿಕ ನಿಲಯದಲ್ಲಿ ಇಂದು ನಡೆಯಿತು. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು. ವಿವಾಹ ಸಮಾರಂಭ ಫೆ.16, 2025 ನೇ ಶನಿವಾರ ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.

ದೀಕ್ಷಿತ್ – ರಕ್ಷಿತಾ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ Read More »

ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

ಪುತ್ತೂರು: ಸಂಟ್ಯಾರ್ ಪಾಣಾಜೆ ಹೆದ್ದಾರಿಯ ಕೈಕಾರ ಎಂಬಲ್ಲಿ ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಹತೋಟಿ ತಪ್ಪಿದ ಕಾರು ರಸ್ತೆ ಅಂಚಿನಲ್ಲಿದ್ದ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಶನಿವಾರ ತಡರಾತ್ತಿ ಈ ಘಟನೆ ನಡೆದಿದ್ದು, ಪ್ರಪಾತಕ್ಕೆ ಕಾರು ಉರುಳಿ ಬಿದ್ದರೂ, ಯಾವುದೇ ಆಪಾಯಗಳಿಲ್ಲದೇ ಚಾಲಕ ಪಾರಾಗಿದ್ದಾನೆ. ಕಾರು ಕಾಸರಗೋಡು ಜಿಲ್ಲೆಯ ಬದಿಯಡ್ಕ ಬಳಿಯ ಡಾ. ಚಂದ್ರಶೇಖರ್ ಅವರ ಪುತ್ರ ಡಾ. ವಿವೇಕ್ ಅವರಿಗೆ ಸೇರಿದಾಗಿದೆ. ರಾತ್ರಿ ಬದಿಯಡ್ಕದಿಂದ ಅವರು ಪುತ್ತೂರಿಗೆ ಕಾರ್ಯ ನಿಮಿತ್ತ ಬರುತ್ತಿದ್ದರು. ಬಳಕ್ಕೆ

ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಮಹಿಳೆಯ ತಲೆ ಬುರುಡೆ, ಎಲುಬುಗಳು ಪತ್ತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ | ಪೊಲೀಸರಿಂದ ತನಿಖೆ

ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾದ ಘಟನೆ ಒಳಮೊಗ್ರು ಗ್ರಾಮದ ಉರ್ವದಲ್ಲಿ ನಡೆದಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ ಗೊತ್ತಾಗಿದ್ದು ಈ ವೇಳೆ ಮಹಿಳೆಯ ತಲೆ ಬುರುಡೆ ಹಾಗೂ ಕೈ, ಕಾಲುಗಳ ಎಲುಬು ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು ತಲೆ

ಮಹಿಳೆಯ ತಲೆ ಬುರುಡೆ, ಎಲುಬುಗಳು ಪತ್ತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ | ಪೊಲೀಸರಿಂದ ತನಿಖೆ Read More »

ಈಶ್ವರ್ ಮಲ್ಪೆಯವರಿಗೆ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸಂಘದಿಂದ ‘ನ್ಯೂಸ್ ಪುತ್ತೂರು’ ಕಚೇರಿಯಲ್ಲಿ ಸನ್ಮಾನ

ಪುತ್ತೂರು: ಖ್ಯಾತ ಈಜುಪಟು, ನೀರಿಗೆ ಬಿದ್ದ ಶವಗಳನ್ನು ಮೇಲೆತ್ತುವ ಸಾಹಸ ಕಾರ್ಯ ಮಾಡುತ್ತಿರುವ ಅಪತ್ಭಾಂಧವ ಈಶ್ವರ್ ಮಲ್ಪೆ ಅವರನ್ನು ಪುತ್ತೂರಿನ ಏಳ್ಮುಡಿಯಲ್ಲಿರುವ ಪ್ರಾವಿಡೆನ್ಸ್ ಕಾಂಪ್ಲೆಕ್ಸ್ ನಲ್ಲಿರುವ ‘‘ನ್ಯೂಸ್ ಪುತ್ತೂರು’ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನ್ಯೂಸ್ ಪುತ್ತೂರು ಕಚೇರಿಗೆ ಬಂದ ಅವರನ್ನು ಕಚೇರಿಯಲ್ಲಿ ಸ್ವಾಗತಿಸಲಾಯಿತು. ಬಳಿಕ ನ್ಯೂಸ್ ಪುತ್ತೂರು ನಿರ್ದೇಶಕ, ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸಂಘದ ಪ್ರವೀಣ್‍ಕುಂಟ್ಯಾನ ಈಶ್ವರ್ ಮಲ್ಪೆ ಅವರನ್ನು ಪೇಟ ತೊಡಿಸಿ, ಹೂಹಾರ ಹಾಕಿ, ಫಲ, ಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು. ಈ

ಈಶ್ವರ್ ಮಲ್ಪೆಯವರಿಗೆ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸಂಘದಿಂದ ‘ನ್ಯೂಸ್ ಪುತ್ತೂರು’ ಕಚೇರಿಯಲ್ಲಿ ಸನ್ಮಾನ Read More »

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಐಟಿ ಕ್ಲಬ್‍ ನಿಂದ ಕಾರ್ಯಾಗಾರ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನ ಸಂಘದ ವತಿಯಿಂದ  ಸಾಫ್ಟವೇರ್ ಡೆವಲಪ್‍ ಮೆಂಟ್‍ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಸಾಫ್ಟ್ ವೇರ್ ಇಂಜಿನಿಯರ್‍  ಗೌತಮಿ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿ, ಸಾಫ್ಟವೇರ್ ಡೆವಲಪ್‍ ಮೆಂಟ್‍ ಗೆ ಸಂಬಂಧಿಸಿದಂತೆ ಉನ್ನತ ಗುಣಮಟ್ಟದ ಸಾಫ್ಟ್‌ ವೇರ್ ನ್ನು ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಮತ್ತು ಪರೀಕ್ಷಿಸಲು ಸಂಬಂಧಿಸಿದ ಪ್ರಕ್ರಿಯೆಗಳ

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಐಟಿ ಕ್ಲಬ್‍ ನಿಂದ ಕಾರ್ಯಾಗಾರ Read More »

ವಿವಿ ಮಟ್ಟದ ಭಾಷಣ ಸ್ಪರ್ಧೆ : ಸಂತ ಫಿಲೋಮಿನಾ ಕಾಲೇಜಿನ ಶ್ರೀದೇವಿ ಎನ್. ಪ್ರಥಮ

ಪುತ್ತೂರು: ಮೂಡುಬಿದಿರೆ ಶ್ರೀ ಧವಲಾ ಮಹಾವಿದ್ಯಾಲಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶ್ರೀದೇವಿ ಎನ್. ಇವರು ಪ್ರಥಮ ಬಹುಮಾನ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಒಟ್ಟು 38 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲ ರೆ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಭಿನಂದಿಸಿದ್ದಾರೆ.

ವಿವಿ ಮಟ್ಟದ ಭಾಷಣ ಸ್ಪರ್ಧೆ : ಸಂತ ಫಿಲೋಮಿನಾ ಕಾಲೇಜಿನ ಶ್ರೀದೇವಿ ಎನ್. ಪ್ರಥಮ Read More »

ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಮೆಸೇಜ್ | ತಂಡದಿಂದ ಹಲ್ಲೆ

ಸುಳ್ಯ: ಅನ್ಯಕೋಮಿನ ಯುವಕನನೋರ್ವ ಹಿಂದೂ ಯುವತಿಗೆ ಮೆಸೇಜ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿದ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ನಯಾಜ್‍ ಎಂಬಾತ ಮೆಸೇಜ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಯುವಕರ ತಂಡ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದ್ದು, ಹಲ್ಲೆಗೊಳಗಾದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ. ಯುವಕನ್ನು ಸ್ಥಳೀಯ ನಿವಾಸಿಯೋರ್ವ ಮಾತನಾಡಲು ಇದೆ ಎಂದು ಗ್ಯಾರೇಜಿಗೆ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವುದಾಗಿ ಯುವಕ ಪೊಲೀಸರಿಗೆ

ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಮೆಸೇಜ್ | ತಂಡದಿಂದ ಹಲ್ಲೆ Read More »

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು

ಕಡಬ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಸ್ಪಂದನ ಸಮುದಾಯ ಸಹಕಾರಿ ಸಂಘದ ಪಿಗ್ಮಿ ಸಂಗ್ರಾಹಕರಾದ ಸೀತಾರಾಮ ಗೌಡ ದೇವಸ್ಯ ಮೃತಪಟ್ಟವರು. ಕಡಬ ಸ್ಪಂದನ ಸಮುದಾಯ ಸಹಕಾರಿ ಸಂಘದ ಸಿಬ್ಬಂದಿ ಶಿಲ್ಪಾ ಅವರ ತಂದೆಯಾಗಿದ್ದಾರೆ.

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು Read More »

ಜಾಗದ ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಬನ್ನೂರಿನ ಚರ್ಚ್‍ ಆಡಳಿತ ಮಂಡಳಿ ಹಾಗೂ ಖಾಸಗಿ ವ್ಯಕ್ತಿಗಳ ನಡುವೆ ನಡೆದ ಮಾತಿನ ಚಕಮಕಿ ಸಂಬಂಧ ಇತ್ತಂಡಗಳ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚರ್ಚ್‌ ಆಡಳಿತ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್ ಆಸ್ಟಿನ್ ಡಿಕೊಸ್ತ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬನ್ನೂರು ಗ್ರಾಮದಲ್ಲಿ ಒಟ್ಟು 4 ಎಕ್ರೆ ಜಮೀನಿಗೆ ಮೌರಿಸ್ ಗೊನ್ಸಾಲ್ವಿಸ್, ವಿಕ್ಟರ್ ಗೊನ್ಸಾಲ್ವಿಸ್, ದೀಕ್ಷಿತ್, ಧೀರಜ್ ಗೊನ್ಸಾಲ್ವಿಸ್, ಬೀನಾ ಗೊನ್ಸಾಲ್ವಿಸ್‌ರವರು ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿದ್ದ ಕೃಷಿ ಹಾಗೂ

ಜಾಗದ ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

error: Content is protected !!
Scroll to Top