ಪುತ್ತೂರು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ಎನ್ ವಹಿಸಿದರು. ಕೆ ಎಸ್ ಎಸ್ ಕಾಲೇಜಿನ ಕಚೇರಿ ಸಿಬ್ಬಂದಿ ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು. ಅತಿಥಿಗಳು ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಶಾಂತ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅನ್ವಿತಾ ಹಚ್ಚೇವು ಕನ್ನಡದ ದೀಪ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 69ನೇ ವರ್ಷದ ಕನ್ನಡ ರಾಜ್ಯೋತ್ಸವ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ವರ್ಷ ಕನ್ನಡ ರಾಜ್ಯೋತ್ಸವ ಸಮಾರಂಭ ಶುಕ್ರವಾರ ಪುರಭವನದಲ್ಲಿ ನಡೆಯಿತು. ಸಮಾರಂಭದ ಮೊದಲು ದರ್ಬೆ ವೃತ್ತದಿಂದ ವಿವಿಧ ಶಾಲೆಗಳ ಗೈಡ್ಸ್, ಸ್ಕೌಟ್ಸ್, ವಿದ್ಯಾರ್ಥಿಗಳ ಪಥಸಂಚಲನ ಕನ್ನಡ ಭುವನೇಶ್ವರಿ ಭಾವಚಿತ್ರದೊಂದಿಗೆ, ಬ್ಯಾಂಡ್‍ವಾದ್ಯಗಳ ಸಮೇತ ಮೆರವಣಿಗೆ ಮೂಲಕ ಕಿಲ್ಲೇ ಮೈದಾನಕ್ಕೆ ಆಗಮಿಸಿತು. ಬಳಿಕ ಕಿಲ್ಲೇ ಮೈದಾನದಲ್ಲಿ ಕನ್ನಡ ಧ್ವಜಾರೋಹಣ, ರಾಷ್ಟ್ರ ಧ್ವಜಾರೋಹಣವನ್ನು ಗಣ್ಯರು ಮಾಡುವ ಮೂಲಕ ಚಾಲನೆ ನೀಡಲಾಯಿತು. ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಧ್ವಜಾರೋಹಣ ನೆರವೇರಿಸಿ ಕನ್ನಡ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 69ನೇ ವರ್ಷದ ಕನ್ನಡ ರಾಜ್ಯೋತ್ಸವ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ Read More »

ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ  | ನ.4 ರಂದು ಬೀದಿಗಿಳಿದು ಬಿಜೆಪಿಯಿಂದ ಹೋರಾಟ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಸಿದ್ಧರಾಮಯ್ಯ ಸರಕಾರ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುವ ಮಾಡುವ ಮೂಲಕ ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ ನಡೆಯುತ್ತಿದ್ದು,ಅತಿರೇಕದ ವರ್ತನೆಯಿಂದ ದೀಪಾವಳಿ ಸಂದರ್ಭದಲ್ಲಿ ಸಂತೋಷದಲ್ಲಿರಬೇಕಾದ ರೈತರನ್ನು ಕತ್ತಲೆಗೆ ತಳ್ಳಿದೆ. ಈ ನಿಟ್ಟಿನಲ್ಲಿ ನ.4 ರಂದು ರಾಜ್ಯದ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪುತ್ತೂರಿನಲ್ಲಿ ದರ್ಬೆ ವೃತ್ತದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದಲೇ

ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ  | ನ.4 ರಂದು ಬೀದಿಗಿಳಿದು ಬಿಜೆಪಿಯಿಂದ ಹೋರಾಟ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು Read More »

ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವವು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕರಾದ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರು ಕನ್ನಡ ಧ್ವಜಾರೋಹಣ ಮಾಡುವುದರೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆಯ ಮಹತ್ತ್ವವನ್ನು ತಿಳಿಸಿ ಹೇಳಿ ಭಾಷಾಭಿಮಾನ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ವಿದ್ಯಾರ್ಥಿನಿಯರಾದ 10ನೇ ತರಗತಿಯ ಎಂ. ವೈಷ್ಣವಿ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅವನಿ ಆರ್. ರೈ ಅವರು ಕನ್ನಡದ ಕುರಿತು ಮಾತನಾಡಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ

ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ Read More »

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಉಪ್ಪಿನಂಗಡಿ: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ನಡೆದಿದೆ. ಅಂಬೇಡ್ಕರ್ ಎಂಬವರ ಪತ್ನಿ ಸೀತಾ (47) ಎಂಬವರು  ಆತ್ಮಹತ್ಯೆ ಮಾಡಿಕೊಂಡವರು. ಕ್ಯಾನ್ಸರ್ ಪೀಡಿತರಾಗಿದ್ದ ಸೀತಾ ಅವರು ನಿರಂತರ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ಇದ್ದ ಬಗ್ಗೆ ಮನನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಜ.1 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ದಶಮಾನೋತ್ಸವ ಸಮಿತಿ ವತಿಯಿಂದ ಪೂರ್ವಸಿದ್ಧತಾ ಸಭೆ

ಪುತ್ತೂರು: ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜ.1 ರಂದು ನಡೆಯಲಿರುವ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ನ ದಶಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭದ ಪೂರ್ವ ಸಿದ್ಧತೆಯಾಗಿ ಟ್ರಸ್ಟ್ ಮತ್ತು ದಶಮಾನೋತ್ಸವ ಸಮಿತಿ ವತಿಯಿಂದ ಸಭೆ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ದಶಮಾನೋತ್ಸವ ಸಮಿತಿ ಅಧ್ಯಕ್ಷ ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ ಮಾತನಾಡಿ, ಒಕ್ಕಲಿಗ ಸ್ವಸಹಾಯ ಸಂಘ ಕೇವಲ ಒಂದು ತಾಲೂಕು, ಜಿಲ್ಲೆ, ರಾಜ್ಯಕ್ಕೆ ಸೀಮಿತವಾಗಿಲ್ಲ. ಇಂದೊಂದು ರಾಷ್ಟ್ರ ಮಟ್ಟದ ಒಕ್ಕೂಟವಾಗಿದೆ.

ಜ.1 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ದಶಮಾನೋತ್ಸವ ಸಮಿತಿ ವತಿಯಿಂದ ಪೂರ್ವಸಿದ್ಧತಾ ಸಭೆ Read More »

ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂಡಳಿ ನೂತನ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಅಳಕೆಮಜಲು ಅಶೋಕ ನಗರ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಮಂಡನೆ ಹಾಗೂ ನೂತನ ಸಮಿತಿಯನ್ನು ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಪೂಜಾರಿ, ಗೌರವ ಸಲಹೆಗಾರ ರಾಜಾರಾಮ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನೇಮಿಸಲಾಯಿತು. ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಕೃಷ್ಣಕಿಶೋರ್ ಭಟ್ ಪೆಲತ್ತಿಂಜ, ಉಪಾಧ್ಯಕ್ಷರಾಗಿ ಉದಯ್ ಕುಲಾಲ್ ಪುಂಡಿಕಾಯಿ, ಪ್ರಧಾನ ಕಾರ್ಯದರ್ಶಿಯಾಗಿ ಸಂಜೀವ ಗೌಡ ಪೆಲತ್ತಿಂಜ ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಉರಿಮಜಲು, ಕೋಶಾಧಿಕಾರಿಯಾಗಿ ಸತೀಶ್ ನಾಯ್ಕ್ ಪುಂಡಿಕಾಯಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ

ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂಡಳಿ ನೂತನ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಪಿನ್ಯಾಕಲ್‌ಐಟಿ ಕ್ಲಬ್‌ಹಾಗೂ ಐಐಸಿಗಳ ಸಂಯುಕ್ತ ಆಶ್ರಯದಲ್ಲಿ ಐಒಟಿ ಮಾದರಿಗಳ ಪ್ರದರ್ಶನವನ್ನು ಬುಧವಾರ ಆಯೋಜಿಸಲಾಯಿತು. ಕಾಲೇಜಿನ ಪ್ರಿನ್ಸಿಪಾಲ್ ವಂ.ಡಾ. ಆ್ಯಂಟನಿ ಪ್ರಕಾಶ್‌ಮೊಂತೇರೊ ಅಧ್ಯಕ್ಷತೆ ವಹಿಸಿ, ಸಾಧಿಸುವ ಛಲ ಹಾಗೂ ಒಳ್ಳೆಯ ಮನಸ್ಸಿದ್ದಲ್ಲಿ ಯಾವುದೇ ಕಾರ್ಯವೂ ಕಷ್ಟವೆಂದೆನಿಸುವುದಿಲ್ಲ. ಯಾವುದೇ ಪರಿಸ್ಥಿತಿಯ ಬಗ್ಗೆ ದೂರು ನೀಡಬೇಡಿ ಬದಲಿಗೆ ಪೂರಕವಾಗಿ ಯೋಚನೆ ಮಾಡಲು ಪ್ರಾರಂಭಿಸಿ. ಐಒಟಿ ಮಾದರಿಗಳ ಪ್ರದರ್ಶನವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಪ್ರಶಂಶಿಸಿದರು. ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳು ಹದಿನೈದಕ್ಕೂ ಹೆಚ್ಚಿನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಮಾದರಿಗಳ ಪ್ರದರ್ಶನ ಕಾರ್ಯಕ್ರಮ Read More »

ನ.2 : ವಿಟ್ಲದ ಶಾಂತಿನಗರದಲ್ಲಿ ‘ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್‍’ ಶುಭಾರಂಭ

ವಿಟ್ಲ: ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್‍ ಸಂಸ್ಥೆ ನ.2 ಶನಿವಾರ ಬಂಟ್ವಾಳ ತಾಲೂಕಿನ ವಿಟ್ಲದ ಶಾಂತಿನಗರದಲ್ಲಿರುವ ನೂತನ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಬೆಳಿಗ್ಗೆ 10.30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆ. ಬಳಿಕ 11 ಗಂಟೆಗೆ ಸಂಸ್ಥೆ ಉದ್ಘಾಟನೆಗೊಳ್ಳಲಿದೆ. ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಂಕರನಾರಾಯಣ ಭಟ್‍ ಪುಂಡಿಕಾಯಿ ಸಂಸ್ಥೆಯನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ವಿಟ್ಲ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ,

ನ.2 : ವಿಟ್ಲದ ಶಾಂತಿನಗರದಲ್ಲಿ ‘ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್‍’ ಶುಭಾರಂಭ Read More »

ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆದ ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ತಾಲೂಕು ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಮೂರು ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ  ನಿತಿನ್ ಪಿ 3000ಮೀ ಓಟದಲ್ಲಿ  ದ್ವಿತೀಯ ಹಾಗೂ 1500ಮೀ ಓಟದಲ್ಲಿ ತೃತಿಯ, ಮಹಮ್ಮದ್ ಐರಾಜ್ ಜಾವೇಲಿನ್ ತ್ರೋ ನಲ್ಲಿ ದ್ವಿತೀಯ, ಅನುಷ್ ಬಿ. ಸಿ. 400 ಮೀ ಓಟದಲ್ಲಿ ತೃತಿಯ ಸ್ಥಾನ ಪಡೆದುಕೊಂಡಿದ್ದಾರೆ. ನಿತಿನ್ ಮತ್ತು ಮಹಮ್ಮದ್ ಐರಾಜ್

ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ  Read More »

error: Content is protected !!
Scroll to Top