ಪುತ್ತೂರು

ಹೊಸ ಅಡಿಕೆ ದರ ಏರಿಕೆಯಿಂದ ರೈತರಲ್ಲಿ ಹರ್ಷ |ಮಾರುಕಟ್ಟೆಯಲ್ಲಿ ಸಂಚಲನ

ಪುತ್ತೂರು: ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಧಾರಣೆ, ಅದರಲ್ಲೂ ವಿಶೇಷವಾಗಿ ಹೊಸ ಅಡಿಕೆಯ ದರವು ಮಾರುಕಟ್ಟೆಯಲ್ಲಿ ಕೆ.ಜಿ. ಒಂದಕ್ಕೆ 500 ರೂಪಾಯಿಗಳ ಗಡಿಯನ್ನು ದಾಟಿ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಬೆಳೆಗಾರರಲ್ಲಿ ಹೊಸ ಭರವಸೆ ಮತ್ತು ಸಂಭ್ರಮವನ್ನು ಸೃಷ್ಟಿಸಿದೆ. ಅಡಿಕೆ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸುವ ಸುದ್ದಿ ಹೊರಬಿದ್ದಿದೆ. ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಧಾರಣೆ, ಅದರಲ್ಲೂ ವಿಶೇಷವಾಗಿ ಹೊಸ ಅಡಿಕೆಯ ದರವು ಮಾರುಕಟ್ಟೆಯಲ್ಲಿ ಕೆ.ಜಿ. ಒಂದಕ್ಕೆ 500 ರೂಪಾಯಿಗಳ ಗಡಿಯನ್ನು ದಾಟಿ ಐತಿಹಾಸಿಕ […]

ಹೊಸ ಅಡಿಕೆ ದರ ಏರಿಕೆಯಿಂದ ರೈತರಲ್ಲಿ ಹರ್ಷ |ಮಾರುಕಟ್ಟೆಯಲ್ಲಿ ಸಂಚಲನ Read More »

ನಿಂತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರು

ಕಡಬ: ಕೊಯಿಲ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ಕಾರಿನ ಮೇಲೆ ಬಿದ್ದ ಘಟನೆ ಇಂದು ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಮೂರು ಮಂದಿ ಇದ್ದು, ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ನಿಂತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರು Read More »

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

ವೀರಮಂಗಲ  : ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆಯು ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ನಡೆಯಿತು. ದಿ.ರಾಮಚಂದ್ರ ಅರ್ಬಿತ್ತಾಯ ಸಂಸ್ಮರಣೆ ಹಾಗೂ ಸುಶ್ರಾವ್ಯ ಸ್ವರದ ಯಕ್ಷಗಾನ ಭಾಗವತರಾದ ಕು.ರಚನಾ ಚಿದ್ಗಲ್ ಇವರಿಗೆ  ಶ್ರವಣಸ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಯಾಗಿದ್ದುಕೊಂಡು ಯಕ್ಷಗಾನದಲ್ಲಿ ಸಾಧನೆ ಮಾಡುತ್ತಿರುವ ಕಲಾವಿದರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಆ ಬಳಿಕ ನಡೆದ  ಜಾಂಬವತಿ‌ ಕಲ್ಯಾಣ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದ ಭಾಗವತರಾಗಿ ಆನಂದ ಸವಣೂರು,  ಕು.ರಚನಾ ಹಾಗೂ

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ Read More »

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳ ಖರೀದಿಗೆ ಸಹಾಯ ಧನ – ವಿವಿಧ ಕೃಷಿಗೆ ಸಹಾಯ ಧನ | ತೋಟಗಾರಿಕೆ ಇಲಾಖೆ ಮಾಹಿತಿ

ಪುತ್ತೂರು: ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳಾದ ಪ್ರೋಪಿಕೋನಜಾಲ್, ಟ್ಯುಬಿಕೊನಾಜಾಲ್, ಪ್ರೋಪಿನೆಬ್, ಕಾರ್ಬನ್ ಡೈಜಿಮ್ + ಮ್ಯಾಂಕೇಜೆಬ್, ಕಾಪರ್ ಸಲ್ವೇಟ್ (ಮೈಲು ತುತ್ತು) ಖರೀದಿಗೆ ಶೇಕಡಾ 30 ರಂತೆ ಪ್ರತೀ ಎಕರೆಗೆ ರೂ. 600 ಸಹಾಯಧನ ಲಭ್ಯವಿದೆ. ಪ್ರತಿ ರೈತರಿಗೆ 5 ಎಕರೆಗೆ ಗರಿಷ್ಟ 3000 ಸಹಾಯಧನ ನೀಡಲಾಗುವುದು. ರೈತರು ಅರ್ಜಿಯೊಂದಿಗೆ 1) ಅಧಿಕೃತ ಕೀಟನಾಶಕ ಮಾರಾಟ ಪರವಾನಿಗೆ ಇರುವ ಮಾರಾಟಗಾರರಿಂದ ಮೇಲಿನ ಸಸ್ಯ ಸಂರಕ್ಷಣಾ ಔಷಧಿ ಖರೀದಿಸಿ, ಜಿ.ಎಸ್.ಟಿ. ಬಿಲ್ಲು.

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳ ಖರೀದಿಗೆ ಸಹಾಯ ಧನ – ವಿವಿಧ ಕೃಷಿಗೆ ಸಹಾಯ ಧನ | ತೋಟಗಾರಿಕೆ ಇಲಾಖೆ ಮಾಹಿತಿ Read More »

ಬೈಕ್‍ ಗೆ ಸರಕಾರಿ ಬಸ್ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಕಡಬ : ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದು  ಬೈಕ್‌ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ವಿಶ್ವಜಿತ್ (23) ಮೃತಪಟ್ಟವರು. ವಿಶ್ವಜಿತ್ ಮರ್ಧಾಳದ ಪಾಲಡ್ಕದಲ್ಲಿ ಫ್ಯಾಬ್ರಿಕೇಷನ್ ವ್ಯತ್ತಿ ಮಾಡುತ್ತಿದ್ದು, ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆ ಸ್ಟೇಷನ್ ಬಳಿ

ಬೈಕ್‍ ಗೆ ಸರಕಾರಿ ಬಸ್ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ಕಾರು-ಖಾಸಗಿ ಬಸ್‍ ಡಿಕ್ಕಿ : ಮೂವರಿಗೆ ಗಂಭೀರ ಗಾಯ

ಪುತ್ತೂರು : ಕಾರು ಹಾಗೂ ಖಾಸಗಿ ಬಸ್‍ ಡಿಕ್ಕಿ ಹೊಡೆದುಕೊಂಡು ಮೂವರು ಗಂಭೀರ ಗಾಯಗೊಂಡ ಘಟನೆ ಮುರ ಸಮೀಪ ಇಂದು ಮುಂಜಾನೆ ನಡೆದಿದೆ. ಅಪಘಾತದಿಂದ ಅಂಡೆಪುಣಿ ನಿವಾಸಿ ಈಶ್ವರ ಭಟ್‍, ಪುತ್ರಿ ಅಪೂರ್ವ ಹಾಗೂ ಅಪೂರ್ವ ಅವರ ಪುಟಾಣಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ನಡೆಯುವ ಶ್ರಾದ್ಧ ಕಾರ್ಯಕ್ರಮಕ್ಕೆ ಮಗಳು ಮತ್ತು ಮೊಮ್ಮಗಳನ್ನು ಕರೆದುಕೊಂಡು ಬರುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ

ಕಾರು-ಖಾಸಗಿ ಬಸ್‍ ಡಿಕ್ಕಿ : ಮೂವರಿಗೆ ಗಂಭೀರ ಗಾಯ Read More »

ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. : ಡಾ. ಗಿರೀಶ್ ಅಜಕ್ಕಳ | ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಸೋಮವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಅಜಕ್ಕಳ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿದ್ದ ಸಂಪತ್ತನ್ನು ಸದುಪಯೋಗಪಡಿಸಿಕೊಳ್ಳಬೇಕು. ಹಾಗಾದಾಗ ಅದು ಜೀವನ ಪರ್ಯಂತ ಫಲವನ್ನು ನೀಡುತ್ತದೆ. ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. ಬುದ್ಧಿವಂತಿಕೆಯಿಂದ ಕಾರ್ಯೋನ್ಮುಖರಾಗುವ ಮೂಲಕ ಯಶಸ್ಸನ್ನು ಪಡೆಯಬೇಕು. ಇದು ವಿದ್ಯಾರ್ಥಿ ಜೀವನಕ್ಕೆ ಮುಕುಟಪ್ರಾಯವಾದ ಸಂಗತಿಯಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. : ಡಾ. ಗಿರೀಶ್ ಅಜಕ್ಕಳ | ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ Read More »

ವಾಡಿಕೆಗಿಂತ ಭಿನ್ನವಾಗಿ ಅವಧಿಪೂರ್ವ ಪ್ರವೇಶಗೈದ ನೈರುತ್ಯ ಮುಂಗಾರು

ಪುತ್ತೂರು: ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಕರ್ನಾಟಕ ಪ್ರವೇಶಿಸುತ್ತಿದ್ದ ನೈರುತ್ಯ ಮುಂಗಾರು ಈ ಬಾರಿ ಸುಮಾರು 10 ದಿನಗಳ ಮುಂಚಿತವಾಗಿಯೇ ಆಗಮಿಸಿದೆ. ಇದು ಕಳೆದ 16 ವರ್ಷಗಳ ಬಳಿಕ ಸಂಭವಿಸಿದ ವಿದ್ಯಮಾನವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD-India Meteorological Department) ಇದರ ನಿರ್ದೇಶಕರಾದ ಸಿ. ಎಸ್. ಪಾಟೀಲ್ ಅವರು ಹೇಳುವಂತೆ ಈ ಬಾರಿ ಕೇರಳ ಮತ್ತು ಕರ್ನಾಟಕಕ್ಕೆ ಒಂದೇ ಬಾರಿ ಮುಂಗಾರು ಪ್ರವೇಶಿಸಿದೆ. ಮುಂಗಾರು ಮಾರುತದ ಹಾದಿ ಈ ಮುಂಗಾರು ಮಳೆ ಮಾರುತವು ಕರ್ನಾಟಕದ ಕಾರವಾರ ಮತ್ತು

ವಾಡಿಕೆಗಿಂತ ಭಿನ್ನವಾಗಿ ಅವಧಿಪೂರ್ವ ಪ್ರವೇಶಗೈದ ನೈರುತ್ಯ ಮುಂಗಾರು Read More »

ಭಾರೀ ಮಳೆ ಹಿನ್ನಲೆ | ಪುತ್ತೂರಿಗೆ ಆಗಮಿಸಿದ ಎನ್‍ ಡಿಆರ್ ಎಫ್‍ ತಂಡ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪುತ್ತೂರಿಗೆ 25 ಸದಸ್ಯರನ್ನೊಳಗೊಂಡ ಎನ್‍ ಡಿಆರ್‍ ಎಫ್ ತಂಡ ಆಗಮಿಸಿದೆ. ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ಎನ್‍ ಡಿಆರ್ ಎಫ್  ಸದಸ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಪುತ್ತೂರು ಕೇಂದ್ರವಾಗಿರಿಸಿ‌ ಕಾರ್ಯಾಚರಣೆ ನಡೆಸಲಿರುವ ತಂಡ, ಮಳೆಯಿಂದ‌ ಹೆಚ್ಚು ಹಾನಿಗೊಳಗಾಗುವ ಬೆಳ್ತಂಗಡಿ, ಕಡಬ, ಬಂಟ್ವಾಳ, ಸುಳ್ಯ ಮತ್ತು ಪುತ್ತೂರು ತಾಲೂಕಿನ ಪರಿಸ್ಥಿತಿ ಅವಲೋಕಿಸಲಿದೆ. ಕಾರ್ಯಾಚರಣೆಯ ವೇಳೆ ಅಪಾಯಕ್ಕೊಳಗಾದ ಜನರನ್ನು ಪತ್ತೆಹಚ್ಚಲು ಬಳಸುವ ಶ್ವಾನ ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳೊಂದಿಗೆ

ಭಾರೀ ಮಳೆ ಹಿನ್ನಲೆ | ಪುತ್ತೂರಿಗೆ ಆಗಮಿಸಿದ ಎನ್‍ ಡಿಆರ್ ಎಫ್‍ ತಂಡ Read More »

ಆಪರೇಷನ್ ಸಿಂದೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪುತ್ತೂರಿನ ಮಳುವೇಲಿನ ಸುಬೇದಾರ್ ಪದ್ಮನಾಭ ಗೌಡರಿಗೆ ಅಭಿನಂದನೆ

ಪುತ್ತೂರು: ಪುತ್ತೂರಿನ ಮಳುವೇಲು ಮನೆಯ ಬಿಎಸ್ಫ್ 148 ಕಂಪೆನಿ ಕಮಾಂಡೆಂಟ್ ಆಗಿದ್ದು 150 ಯೋಧರು ಮತ್ತು ಅಧಿಕಾರಿಗಳನ್ನು ಒಳಗೊಂಡ ಪಡೆಯನ್ನು ಮುನ್ನಡೆಸಿ ಸಮಗ್ರ ಭಾರತವೇ ಹೆಮ್ಮೆ ಪಡುವಂತಹ ಇತ್ತೀಚೆಗೆ ನಡೆದ ‘ಆಪರಷನ್ ಸಿಂಧೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸುಬೇದಾರ್ ಪದ್ಮನಾಭ ಗೌಡರನ್ನು ಮಳುವೇಲು ಕುಟುಂಬ ಆತ್ಮೀಯವಾಗಿ ಬರಮಾಡಿಕೊಂಡು ಅಭಿನಂದಿಸಿತು. ಮಳುವೇಲು ಚೆನ್ನಪ್ಪ ಮತ್ತು ಉಮ್ಮಕ್ಕ ದಂಪತಿಗಳ ಸುಪುತ್ರನಾಗಿರುವ ಗೌಡರು ಪಾಕಿಸ್ತಾನದ ವಿರುದ್ಧ ಬಾರತ ಹೂಡಿದ್ದ ರಕ್ಷಣಾತ್ಮಕ ಯುದ್ಧ ಚಟುವಟಿಕೆಯಲ್ಲಿ ಭಾಗವಹಿಸಿರುವುದು ಪುತ್ತೂರು ಹೆಮ್ಮೆ ಪಡುವಂತಹ ವಿಚಾರವಾಗಿದೆ. ವಾಘಾ

ಆಪರೇಷನ್ ಸಿಂದೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪುತ್ತೂರಿನ ಮಳುವೇಲಿನ ಸುಬೇದಾರ್ ಪದ್ಮನಾಭ ಗೌಡರಿಗೆ ಅಭಿನಂದನೆ Read More »

error: Content is protected !!
Scroll to Top