ಪುತ್ತೂರು

ಮರ ಬಿದ್ದು ತಂತಿಗೆ  ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರು

ಪುತ್ತೂರು: ಮರ ಬಿದ್ದು ವಿದ್ಯುತ್ ತಂತಿಗೆ ಗೆ ಹಾನಿಯಾದ ಘಟನೆ ಪುತ್ತೂರಿನ ಕಲ್ಲರ್ಪೆ ಬಳಿ ನಡೆದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ವಾಹನವೊಂದು ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.

ಮರ ಬಿದ್ದು ತಂತಿಗೆ  ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರು Read More »

ಸರಕಾರಿ ಗೋಮಾಳ ಜಾಗವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಹಸ್ತಾಂತರ ಮಾಡುವಂತೆ ಮನವಿ

ಪುತ್ತೂರು: ಮುಂಡೂರು ಗ್ರಾಮದ ಬದಿಯಡ್ಕ ದಲ್ಲಿರುವ ಸರಕಾರಿ ಗೋಮಾಳ ಜಾಗವನ್ನು ಗೋಶಾಲೆ ಮಾಡಲು ಪುತ್ತೂರಿನ ಪ್ರತಿಷ್ಠಿತ ಸಮಾಜ ಸೇವಾ ಟ್ರಸ್ಟ್ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಹಸ್ತಾಂತರ ಮಾಡಬೇಕೆಂದು ಪುತ್ತಿಲ ಪರಿವಾರ ಟ್ರಸ್ಟ್ ಸಹಾಯಕ ಆಯುಕ್ತರಿಗೆ ಬುಧವಾರ ಮನವಿ ನೀಡಿತು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮನವಿ ನೀಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ

ಸರಕಾರಿ ಗೋಮಾಳ ಜಾಗವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಹಸ್ತಾಂತರ ಮಾಡುವಂತೆ ಮನವಿ Read More »

ಸಿಂಧೂರ ಆಪರೇಷನ್ ನಿಂದ ಕಂಗೆಟ್ಟ ಪಾಕಿಸ್ತಾನ | ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ತುಂಬುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು : ಕಾಶ್ಮೀರದ ಪಹಲ್ಗಾಮ್‍ ನಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ಬುಧವಾರ ತಡರಾತ್ರಿ ಭಾರತೀಯ ಸೇನೆ ನಡೆಸಿ ಸಿಂಧೂರ ಆಪರೇಷನ್‍ ನಲ್ಲಿ ಹಲವಾರು ಉಗ್ರರನ್ನು ಹತ್ಯೆಗೈದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಭಾರತೀಯ ಸೇನೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ಗರ್ಭಗುಡಿ ಎದುರು ಪ್ರಧಾನ ಅರ್ಚಕ ವಿ.ಎಸ್‍.ಭಟ್‍ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿಂದೂ

ಸಿಂಧೂರ ಆಪರೇಷನ್ ನಿಂದ ಕಂಗೆಟ್ಟ ಪಾಕಿಸ್ತಾನ | ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ತುಂಬುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ನಾಳೆ ಮಂಗಳೂರು ಆಕಾಶವಾಣಿಯಲ್ಲಿ ಸೀತಾರಾಮ ಕೇವಳರ ಚಿಂತನ

ಪುತ್ತೂರು: ಅಂತಾರಾಷ್ಟ್ರೀಯ  ರೆಡ್ ಕ್ರಾಸ್ ದಿನ (ಕ್ರೆಸೆಂಟ್ ಡೇ) ಕುರಿತಾಗಿ ಸೀತಾರಾಮ ಕೇವಳ ಅವರು ಮಂಡಿಸಿದ ಚಿಂತನವು  ಬೆಳಿಗ್ಗೆ 6.30ಕ್ಕೆ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರವಾಗಲಿದೆ. ಕೇವಳ ಅವರ ಇನ್ನೂ ಮೂರು ಇತರ ಚಿಂತನಗಳು ( ರಾಷ್ಟ್ರೀಯ  ಕ್ವಿಟ್ ಇಂಡಿಯಾ ಡೇ, ಆಹಾರದ ಸಮರ್ಪಕ ಬಳಕೆ ಮತ್ತು ಉತ್ಸವಗಳು ಹೇಗಿರಬೇಕು ) ಕ್ರಮವಾಗಿ 2025ರ ಜೂನ್ 8, ಜುಲೈ 8 ಮತ್ತು ಆಗಸ್ಟ್ 8ರಂದು ಮುಂಜಾನೆ 6.30ಕ್ಕೆ ಪ್ರಸಾರವಾಗಲಿವೆ.

ನಾಳೆ ಮಂಗಳೂರು ಆಕಾಶವಾಣಿಯಲ್ಲಿ ಸೀತಾರಾಮ ಕೇವಳರ ಚಿಂತನ Read More »

ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು : ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ | ನೀರಿಗೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಪುತ್ತೂರು: ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜನರ ದೂರುಗಳಿಗೆ ಸರಿಯಾದ ಸ್ಪಂದನೆಯನ್ನು ನೀಡಬೇಕು. ವಸತಿ ನಿಲಯಗಳಲ್ಲಿ ನಿರ್ವಹಣೆಯ ಶಿಕ್ಷಣ ನೀಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ ಹೇಳಿದರು. ಅವರು ಮಂಗಳವಾರ ತಾಲೂಕು ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಭೂಕುಸಿತ, ಚರಂಡಿ ನಿರ್ವಹಣೆ ಸೇರಿ ಮಳೆಗಾಲದ ಬಗ್ಗೆ ಮುನ್ನೆಚ್ಚರಿಕೆಯನ್ನು ವಹಿಸಬೇಕು. ಅಗತ್ಯ ಯಂತ್ರೋಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರತಿಯೊಂದು

ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು : ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ | ನೀರಿಗೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ

ಪುತ್ತೂರು:  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ಸುಮಾರು 16 ಲಕ್ಷ ವೆಚ್ಚದಲ್ಲಿ ಅಳವಡಿಸಲಾದ ಸ್ಟೀಮ್ ಬಾಯ್ಲರ್ ಸಿಸ್ಟಮ್ ನ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಕೆನರಾ ಬ್ಯಾಂಕ್ ನ 10 ಲಕ್ಷ ರೂ.,  ಕರ್ಣಾಟಕ ಬ್ಯಾಂಕ್ ನ 5 ಲಕ್ಷ ರೂ. ಹಾಗೂ ದಾನಿಗಳ ದೇಣಿಗೆಯಲ್ಲಿ ಸ್ಟೀಮ್ ಬಾಯ್ಲರ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು. ಬೆಳಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕುಮಾರ್ ಕೆದಿಲಾಯರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಬಳಿಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ Read More »

ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ

ಪುತ್ತೂರು: ಕಾರು – ಆಟೋ ರಿಕ್ಷಾ ನಡುವೆ ಅಪಘಾತವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದ್ದು, ಅವರನ್ನು  ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.

ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ Read More »

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ನಿಧನ

ಪುತ್ತೂರು: ಉದ್ಯಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್‍ ಕುಮಾರ್‍ ಪುತ್ತಿಲ ಅವರ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ರಾಜಾರಾಮ ಭಟ್ ರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯನ್ನು ಹೊಂದಿದ್ದರಲ್ಲದೆ, ದುಬೈ ಮಸ್ಮತ್ ಗಳಲ್ಲಿ ಖರ್ಜೂರದ ವ್ಯಾಪಾರ ಕೂಡ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಅಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಕಳೆದ

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ನಿಧನ Read More »

ಪುತ್ತೂರಿನ ಧರ್ಮಶಿಕ್ಷಣ ತರಗತಿಗಳಿಗೆ ಶೃಂಗೇರಿ ಜಗದ್ಗುರುಗಳಿಂದ ಚಾಲನೆ | ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಎರಡು ಸಾವಿರಕ್ಕೂ ಅಧಿಕ ಮಂದಿ ಧಾರ್ಮಿಕ ಕಾರ್ಯಕರ್ತರು

ಪುತ್ತೂರು: ಇಡಿಯ ದೇಶದಲ್ಲೇ ಪ್ರಪ್ರಥಮವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲು ಯೋಜಿಸಿರುವ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಧಾರ್ಮಿಕ ಶಿಕ್ಷಣದ ಮಾರ್ಗದರ್ಶಕರೂ, ಪ್ರೇರಕರೂ ಆದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಅಮೃತ ಹಸ್ತದಿಂದ ಧರ್ಮ ಶಿಕ್ಷಣ ತರಗತಿ – ಧರ್ಮಾಭ್ಯುದಯವನ್ನು  ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ಸ್ವಾಮೀಜಿಗಳು, ಹಿಂದೂ ಧರ್ಮವೆಂಬುದು ಅನಾದಿ ಕಾಲದಿಂದಲೂ ಬಂದ ಸನಾತನ ಧರ್ಮ. ಎಷ್ಟೇ ಜನ ಈ ಧರ್ಮವನ್ನು ನಾಶಗೊಳಿಸುತ್ತೇವೆಂದು ಅಂದುಕೊಂಡರೂ ಅದು

ಪುತ್ತೂರಿನ ಧರ್ಮಶಿಕ್ಷಣ ತರಗತಿಗಳಿಗೆ ಶೃಂಗೇರಿ ಜಗದ್ಗುರುಗಳಿಂದ ಚಾಲನೆ | ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಎರಡು ಸಾವಿರಕ್ಕೂ ಅಧಿಕ ಮಂದಿ ಧಾರ್ಮಿಕ ಕಾರ್ಯಕರ್ತರು Read More »

ದ.ಕ.ಜಿಲ್ಲೆಯಲ್ಲಿ ನೀರ ಸೆಲೆಗಳ ರಕ್ಷಣೆಗಾಗಿ ಪರಿಸರ ಪ್ರೇಮಿಗಳಿಂದ ಮಾಹಿತಿ, ಜಾಗೃತಿ, ಅನುಷ್ಠಾನದ ಯೋಜನೆಗೆ ಚಾಲನೆ

ಪುತ್ತೂರು: ನಮ್ಮ ನೀರ ಸೆಲೆ ರಕ್ಷಿಸೋಣ ಮತ್ತು ಮಣ್ಣು ನಮ್ಮ ಆತ್ಮ ಎಂಬ ಪರಿಕಲ್ಪನೆಯಲ್ಲಿ ಪುತ್ತೂರಿನ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ನೇತೃತ್ವದಲ್ಲಿ ಪರಿಸರ ಪ್ರೇಮಿಗಳಿಂದ ಮಾಹಿತಿ, ಜಾಗೃತಿ ಅನುಷ್ಠಾನದ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಯೋಜನೆಯ ರೂವಾರಿ ಮತ್ತು ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಮತ್ತುಯೋಜನೆಯ ಸಲಹೆಗಾರ ನಿವೃತ್ತ ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ನೀರ ಸೆಲೆಗಳ ಅಧ್ಯಯ, ತ್ಯಾಜ್ಯ ವಿಲೇವಾರಿ ಜಾಗೃತಿ,

ದ.ಕ.ಜಿಲ್ಲೆಯಲ್ಲಿ ನೀರ ಸೆಲೆಗಳ ರಕ್ಷಣೆಗಾಗಿ ಪರಿಸರ ಪ್ರೇಮಿಗಳಿಂದ ಮಾಹಿತಿ, ಜಾಗೃತಿ, ಅನುಷ್ಠಾನದ ಯೋಜನೆಗೆ ಚಾಲನೆ Read More »

error: Content is protected !!
Scroll to Top