ಪುತ್ತೂರು

ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್‍ ಎಸ್‍.ಡಿ. ಆತ್ಮಹತ್ಯೆ

ಪುತ್ತೂರು: ತಾಲೂಕಿನ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ, ಸರ್ವೆ ಷಣ್ಮುಖ ಯುವಕ ಮಂಡಲದ ಮಾಜಿ ಅಧ್ಯಕ್ಷ, ರಾಜೇಶ್ ಎಸ್. .ಡಿ (45) ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ರಾಜೇಶ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್‍ ಎಸ್‍.ಡಿ. ಆತ್ಮಹತ್ಯೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆ | ಸಂಪ್ಯ ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಮಾನವಿಕ ಸಂಘ ಆಯೋಜಿಸಿದ “ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂಪ್ಯ ಅಕ್ಷಯ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಫ್ಯಾಶನ್ ಶೋದಲ್ಲಿ ಪ್ರಥಮ, ಗಾಯನದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ದ್ವಿತೀಯ, ಫೇಸ್ ಪೇಂಟಿಂಗ್ ನಲ್ಲಿ ದ್ವಿತೀಯ, ಮತ್ತು ಮೋಕ್ ಪ್ರೆಸ್ ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ. ಕಾಲೇಜಿನ ಅಧ್ಯಕ್ಷರು, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆ | ಸಂಪ್ಯ ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ಹೊಸದಾಗಿ ಖರೀದಿಸಿದ ರಿಕ್ಷಾ ಪಲ್ಟಿ | ಚಾಲಕ ಅಪಾಯದಿಂದ ಪಾರು

ಪುತ್ತೂರು : ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾದ ಘಟನೆ ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ನಡೆದಿದೆ. ಹೊಸ ರಿಕ್ಷಾ ಖರೀದಿಸಿದ ವ್ಯಕ್ತಿ ಚಲಾವಣೆ ಕಲಿಯುತ್ತಿದ್ದ ಎನ್ನಲಾಗಿದೆ. ರಿಕ್ಷಾಕ್ಕೆ ಹಾನಿಯಾಗಿದ್ದು, ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ರಿಕ್ಷಾದಲ್ಲಿದ್ದರು ಸಹ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹೊಸದಾಗಿ ಖರೀದಿಸಿದ ರಿಕ್ಷಾ ಪಲ್ಟಿ | ಚಾಲಕ ಅಪಾಯದಿಂದ ಪಾರು Read More »

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ

ಪುತ್ತೂರು: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭೂತಾರಾಧನೆ-ಜಾನಪದೀಯ ಅಧ್ಯಯನ, ಜಾಲಾಟ, ಸಂಸ್ಕೃತಿ ಸಿರಿ, ತುಳುಮಾನ್ಯ ಹಾಗೂ ಇನ್ನಿತರ ಕೃತಿಗಳು ಡಾ.ಚಿನ್ನಪ್ಪ ಗೌಡರ ಸಾಹಿತ್ಯ ಕೃತಿಗಳಾಗಿವೆ. ಈ ಹಿಂದೆ ಕರ್ನಾಟಕ ಸಾಹಿತ್ಯ

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ

ಪುತ್ತೂರು : ಹತ್ತೂರು ಒಡೆಯ ಪುತ್ತೂರಿನ ಮಹತೋಬಾರ ಶ್ರೀ ಮಹಾಲಿಂಗೇಶ್ವರ ಅನೇಕ ಇತಿಹಾಸವನ್ನು ಒಳಗೊಂಡಿದೆ. ಕಾರಣಿಕ ಕಥೆಯನ್ನು ಹೊಂದಿರುವ  ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದ ಅಗಳುಗಳು ಮುತ್ತಾಗಿರುವ  ಇತಿಹಾಸವಿದೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಬಾರಿಯ ಜಾತ್ರೆಯಲ್ಲಿ ಭಕ್ತರಿಗೆ ಅನ್ನಪ್ರಸಾದವನ್ನು ದೇವಳದ ಕೆರೆಯ ಬಳಿಯ ವಿಶಾಲವಾದ ಜಾಗದಲ್ಲಿ ವಿತರಣೆ ಮಾಡುವುದೆಂದು ತೀರ್ಮಾನಿಸಿದಂತೆ ಮಾ.24ರಂದು ದೇವಳದ ಕೆರೆಯ ಬಳಿ ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಇದೀಗ ಈ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ Read More »

ಕೆ.ಎಸ್‌.ಎಸ್ ಕಾಲೇಜಿನ  ರೇಂಜರ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸುವಿಕೆ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರ ಮಾ. 10 ಸೋಮವಾರದಿಂದ ಮಾ.12ರವರೆಗೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ರಾಜ್ಯ ಪುರಸ್ಕಾರ ಪಡೆದ ರೇಂಜರ್ ವಿದ್ಯಾರ್ಥಿ ಶರಣ್ಯ ಮತ್ತು ಕವಿತಾಕ್ಷಿ ಅವರು ಭಾಗವಹಿಸಿದ್ದಾರೆ.

ಕೆ.ಎಸ್‌.ಎಸ್ ಕಾಲೇಜಿನ  ರೇಂಜರ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸುವಿಕೆ Read More »

ಯಶಸ್ವಿಯಾಗಿ ಮುನ್ನಡೆಯುತ್ತಿರುವ “ಭಾವ ತೀರ ಯಾನ” ಸಿನೆಮಾ ಪ್ರದರ್ಶನ | ಇಂದು (ಮಾ.24) ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು: ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಯಶಸ್ವಿಯಾಗಿ ಮುನ್ನಡೆಯುತ್ತಿರುವ “ಭಾವ ತೀರ ಯಾನ” ಸಿನೆಮಾ ಪ್ರದರ್ಶನ | ಇಂದು (ಮಾ.24) ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ನಿಯಮ ರೂಪಿಸುವವರಿಗೆ ನಿಯಮದ ಪಾಠ ಮಾಡಿದ ಸಾಮಾನ್ಯ ಜನ…

ಪುತ್ತೂರು: ಸಾಮಾನ್ಯ ಜನ ಒಂದು ಮನೆ, ಮಳಿಗೆ ಕಟ್ಟಲು ಮುಂದಾದಲ್ಲಿ, ಸರಕಾರಕ್ಕೆ ಸಂಬಂಧಪಟ್ಟ  ಇಲಾಖೆಗಳು ಹಲವು ಕಾನೂನು, ನಿಯಮಗಳನ್ನು ಆತನ ಮುಂದೆ ಇಡುತ್ತೆ. ಆದರೆ ಸರಕಾರದ ಆಡಳಿತ ವ್ಯವಸ್ಥೆ ರಸ್ತೆಯೋ, ಚರಂಡಿಯೋ ಮಾಡುವ ಸಂದರ್ಭದಲ್ಲಿ ತಾನು ರೂಪಿಸಿದ ಕಾನೂನನ್ನೇ ಮುರಿಯೋದು ಸಾಮಾನ್ಯ. ಇಂಥಹುದೇ ಒಂದು ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ನಡೆದಿದ್ದು, ನಾಗರಿಕರೇ ಇದೀಗ ನಗರಸಭೆ ಅಧಿಕಾರಿಗಳಿಗೆ ಕಾನೂನು ಪಾಲಿಸಿ ಕಾಮಗಾರಿ ನಡೆಸುವಂತೆ ಒತ್ತಡ ಹೇರಲಾರಂಭಿಸಿದ್ದಾರೆ. ಕಾಮಗಾರಿ ನಡೆದ ಬಳಿಕ ಕಳಪೆ, ಉಪಯೋಗಕ್ಕಿಲ್ಲದ್ದು ಎನ್ನುವ

ನಿಯಮ ರೂಪಿಸುವವರಿಗೆ ನಿಯಮದ ಪಾಠ ಮಾಡಿದ ಸಾಮಾನ್ಯ ಜನ… Read More »

ಅಕ್ಷಯ ಕಾಲೇಜು ಎನ್.ಎಸ್.ಎಸ್. ಸ್ವಯಂ ಸೇವಕಿ ವರ್ಷಿಣಿ.ಎಸ್  ಗೆ ರಾಜ್ಯ  ಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ

ಪುತ್ತೂರು: ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೈಸೂರು ಸರಸ್ವತಿಪುರಂ ಎನ್.ಎಸ್.ಎಸ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಬಹುಮಾನ ಪಡೆದುಕೊಂಡಿದ್ದಾರೆ. ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ, ಸಾಮೂಹಿಕ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ  ಹಾಗೂ ಕಿರುನಾಟಕ  ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ

ಅಕ್ಷಯ ಕಾಲೇಜು ಎನ್.ಎಸ್.ಎಸ್. ಸ್ವಯಂ ಸೇವಕಿ ವರ್ಷಿಣಿ.ಎಸ್  ಗೆ ರಾಜ್ಯ  ಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನೆ | ಎಲ್ಲಾ ರೀತಿಯ ಜನರನ್ನೂ ಪ್ರೀತಿಸುವ ಹೃದಯ ವೈಶಾಲ್ಯವಿರಬೇಕು. : ಬಿಷಪ್ ಪರಮ ಪೂಜ್ಯ ಡಾ.ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಮಂಗಳೂರಿನ ಕ್ಯಾಥೊಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿದ್ದು, ಉದ್ಘಾಟನಾ ಸಮಾರಂಭ ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು. ಬೆಂಗಳೂರು ಮಹಾನಗರ ಮೆಟ್ರೊಪೊಲಿಟನ್ ಧರ್ಮಪ್ರಾಂತ್ಯದ ಆರ್ಚ್ ಭಿಷಪ್ ಪರಮ ಪೂಜ್ಯ ಡಾ. ಪೀಟರ್ ಮಚಾದೋರವರು ಸಮಾರಂಭ ಉದ್ಘಾಟಿಸಿ ಮಾತನಾಡಿ, ಜನರು  ವಿಮರ್ಶಾತ್ಮಕ ಚಿಂತನೆ, ಜೀವನ ಪರ್ಯಂತ ಕಲಿಕೆಯ ಬಗ್ಗೆ ಒಲವು, ಸಮರ್ಪಕ ಸಂವಹನ ಹಾಗೂ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನೆ | ಎಲ್ಲಾ ರೀತಿಯ ಜನರನ್ನೂ ಪ್ರೀತಿಸುವ ಹೃದಯ ವೈಶಾಲ್ಯವಿರಬೇಕು. : ಬಿಷಪ್ ಪರಮ ಪೂಜ್ಯ ಡಾ.ಪೀಟರ್ ಪಾವ್ಲ್ ಸಲ್ದಾನ Read More »

error: Content is protected !!
Scroll to Top