ಪುತ್ತೂರು

ಪುತ್ತೂರಿನಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ‌ಜೆಟ್ ವಿಮಾನ

ಪುತ್ತೂರು: ಭೂಮಿಯಿಂದ ಕೆಲವೇ ಮಟ್ಟಗಳ ದೂರದಲ್ಲಿ ಜೆಟ್ ವಿಮಾನವೊಂದು ಹಾರಾಟ ನಡೆಸಿದ್ದು, ಪುತ್ತೂರಿಗರಲ್ಲಿ ‌ಕೆಲಕಾಲ ಆಂತಕ ಸೃಷ್ಟಿಸಿದ ಘಟನೆ ನಡೆಯಿತು. ಮಂಗಳವಾರ ಮಧ್ಯಾಹ್ನ ಮಹಾಲಿಂಗೇಶ್ವರ ದೇಗುಲದ ಸಮೀಪದಲ್ಲಿ ಜೆಟ್ ವಿಮಾನ ಹಾರಾಟ ನಡೆಸಿದ್ದು, ಏನಿದು? ಯಾತಕ್ಕಾಗಿ ವಿಮಾನ ಹಾರಾಟ ನಡೆಸುತ್ತಿದೆ ಎಂಬ ಗೊಂದಲ ಕೆಲಕಾಲ ಸೃಷ್ಟಿಯಾಯಿತು. ಆ ಬಳಿಕ ಇದು ಭೂಮಿಯ ರಚನೆ, ಅಧ್ಯಯನಕ್ಕೆ ನಡೆದ ಜೆಟ್ ವಿಮಾನ ಸರ್ವೇ ಕಾರ್ಯ. ಭೂ ವಿಜ್ಞಾನಕ್ಕೆ ನಡೆದ ವೈಮಾನಿಕ ಸರ್ವೇ ಎಂದು ತಿಳಿದ ಬಳಿಕ ಜನರು ನಿರಾಳರಾದರು ಎಂದು […]

ಪುತ್ತೂರಿನಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ‌ಜೆಟ್ ವಿಮಾನ Read More »

ಅಕ್ಷಯ ಕಾಲೇಜು ವಾರ್ಷಿಕ ಶಿಬಿರ 2025-26 ಸಮಾರೋಪ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯಡಿ ಅಕ್ಷಯ ಕಾಲೇಜು ಪುತ್ತೂರು ವತಿಯಿಂದ “ನನ್ನ ಭಾರತಕ್ಕಾಗಿ ಯುವಜನತೆ – ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ” ಎಂಬ ಆಶಯದೊಂದಿಗೆ ಆಯೋಜಿಸಲಾದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಶ್ರೀ ರಾಮಚಂದ್ರ ಪದವಿ ಪರ‍್ವ ವಿದ್ಯಾಲಯದಲ್ಲಿ ನೆರವೇರಿತು. ಅಧ್ಯಕ್ಷತೆಯನ್ನು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ವಹಿಸಿದ್ದರು. ಅಧ್ಯಕ್ಷ ಜಯಂತ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಏಳು ದಿನಗಳ ಕಾಲ ಪರ್ನೆ ಪರಿಸರವನ್ನು ಆಯ್ಕೆ ಮಾಡಿಕೊಂಡು ಶಿಬಿರವನ್ನು

ಅಕ್ಷಯ ಕಾಲೇಜು ವಾರ್ಷಿಕ ಶಿಬಿರ 2025-26 ಸಮಾರೋಪ Read More »

ಕುಣಿತ ಭಜನೆ ಮಾಡುತ್ತಿರುವಾಗಲೇ ಮಹಿಳೆ ಸಾವು

ಜಾತ್ರೋತ್ಸವದಲ್ಲಿ ಕುಣಿತ ಭಜನೆ ನಡೆಯುತ್ತಿರುವಾಗ ಸಂಭವಿಸಿದ ದುರಂತ ಈಶ್ವರಮಂಗಲ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಎಂಬವರು ಕುಣಿತ ಭಜನೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿದ್ದ ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಇವರ ಇಬ್ಬರು ಪುತ್ರರು ಹಾಗೂ

ಕುಣಿತ ಭಜನೆ ಮಾಡುತ್ತಿರುವಾಗಲೇ ಮಹಿಳೆ ಸಾವು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾಗವನ್ನು ದೇವರಿಗೆ ಪ್ರೀತಿಯಿಂದ ಬಿಟ್ಟು ಕೊಟ್ಟ ವಾಲ್ಟರ್ ಲೋಬೋ

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ ಅಭಿವೃದ್ಧಿ ಹಿನ್ನೆಲೆ ದೇಗುಲಕ್ಕೆ ‌ಸೇರಿದ ಜಮೀನನ್ನು ಮರು ವಶ ಮಾಡಿಕೊಳ್ಳುವ ಕೆಲಸ ನಡೆಯುತ್ತಿದ್ದು, ನೆಲ್ಲಿಕಟ್ಚೆಯ ಅಶ್ವತ್ಥ ಮರದ ಸಮೀಪ ಇದ್ದ ಮನೆಯನ್ನು ಸೌಹಾರ್ಧಯುತವಾಗಿ ‌ತೆರವು ಮಾಡಲಾಗಿದೆ. ಈ ಜಮೀನು ವಾಲ್ಟರ್ ಲೋಬೋ ಎಂಬವರು 60 ವರ್ಷಗಳಿಂದ ಮನೆ ಹೊಂದಿದ್ದು, ಅದನ್ನು ಬಾಡಿಗೆಗೆ ನೀಡುತ್ತಿದ್ದರು. ಸುಮಾರು ಎಂಟರಿಂದ ಹತ್ತು ಸೆಂಟ್ಸ್ ಜಾಗವನ್ನು ವಾಲ್ಟರ್ ಲೋಬೋ ಅವರು ದೇವಸ್ಥಾನಕ್ಕೆ ಪ್ರೀತಿಯಿಂದ ಬಿಟ್ಟುಕೊಟ್ಟಿದ್ದಾರೆ. ಇದರ ಮೌಲ್ಯ ಸುಮಾರು ಒಂದು ಕೋಟಿಗೂ ಅಧಿಕವಾಗಿದ್ದು,

ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾಗವನ್ನು ದೇವರಿಗೆ ಪ್ರೀತಿಯಿಂದ ಬಿಟ್ಟು ಕೊಟ್ಟ ವಾಲ್ಟರ್ ಲೋಬೋ Read More »

ಅಕ್ಷಯ ಕಾಲೇಜಿನ ವಾರ್ಷಿಕ ಶಿಬಿರ 2025-26 :ಸೇವಾ ಪುರಸ್ಕಾರ ಪ್ರದಾನ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ನೇತೃತ್ವದಲ್ಲಿ ನನ್ನ ಭಾರತಕ್ಕಾಗಿ ಯುವಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ವಾರ್ಷಿಕ ವಿಶೇಷ ಶಿಬಿರ 2025-26 ರಂದು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ ಇಲ್ಲಿ ನೆರವೇರಿತು. ಅಧ್ಯಕ್ಷತೆಯನ್ನು ನವೀನ್ ಪದಬರಿ ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರಿ ಸಂಘ ಪೆರ್ನೆ ಇವರು ವೇದಿಕೆಯನ್ನು ಅಲಂಕರಿಸಿ ಶಿಬಿರಾರ್ಥಿಗಳನ್ನು ಹಾಗೂ ಸಭೆಯನ್ನು ಕುರಿತು ಎರಡು ಸಾಲು ಪದ್ಯದ ಮೂಲಕ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಉಮ್ಮಪ್ಪ

ಅಕ್ಷಯ ಕಾಲೇಜಿನ ವಾರ್ಷಿಕ ಶಿಬಿರ 2025-26 :ಸೇವಾ ಪುರಸ್ಕಾರ ಪ್ರದಾನ Read More »

ವಿದ್ಯಾರಶ್ಮಿಯಲ್ಲಿ ಯುಕೆಜಿಯ ಘಟಿಕೋತ್ಸವ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಯು.ಕೆ.ಜಿ. ತರಗತಿಯ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ದಿನ (ಗ್ರಾಜ್ಯುಯೇಷನ್ ಡೇ) ಏರ್ಪಡಿಸಲಾಯಿತು. ಸಮಾರಂಭವನ್ನು ಎಸ್. ಎನ್. ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಸದಸ್ಯೆ ರಶ್ಮಿ ಅಶ್ವಿನ್ ಎಲ್. ಶೆಟ್ಟಿ ಅವರು ಉದ್ಘಾಟಿಸಿದರು. ಅತಿಥಿಯಾಗಿ ಸವಣೂರು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಜಯಂತ್ ವೈ. ಅವರು ಮಕ್ಕಳೇ ನಮ್ಮ ಆಸ್ತಿ, ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ, ಸರಿಯಾದ ಗುರಿ, ಗುರುಗಳ ಮೇಲೆ ಗೌರವ ಇರಬೇಕು ಎಂಬ ಹಿತನುಡಿಯೊಂದಿಗೆ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ಅಢ್ವಕೇಟ್ ಅಶ್ವಿನ್ ಎಲ್. ಶೆಟ್ಟಿ

ವಿದ್ಯಾರಶ್ಮಿಯಲ್ಲಿ ಯುಕೆಜಿಯ ಘಟಿಕೋತ್ಸವ Read More »

ಹೃದಯಾಘಾತಕ್ಕೆ ಯುವಕ ಬಲಿ

ಬಂಟ್ವಾಳ: ಕೃಷಿ ಸಂಬಂಧಿ ಕೆಲಸದಲ್ಲಿ ತೊಡಗಿಕೊಂಡಿದ್ದ ಯುವಕನೊಬ್ಬ ಎದೆನೋವಿನ ಕಾರಣಕ್ಕೆ ಹೃದಯಾಘಾತದಿಂದ ಮೃತಪಟ್ಚ ಘಟನೆ ಕುಕ್ಕಿಪಾಡಿ ಎಂಬಲ್ಲಿ ನಡೆದಿದೆ. ಮೃತನನ್ನು ‌ಪ್ರಶಾಂತ್ ಆಚಾರ್ಯ (24) ಎಂದು ಗುರುತಿಸಲಾಗಿದೆ. ಇವರು ಕುಕ್ಕಿಪಾಡಿ ಗ್ರಾಮದ ಮಾಡಮೆ ‌ಎಂಬಲ್ಲಿನ ಶ್ರೀರಾಮ ಆಚಾರ್ಯ ಅವರ ಎರಡನೇ ಪುತ್ರ. ಸಿದ್ಧಕಟ್ಟೆಯ ಯಂತ್ರೋಪಕರಣದ ಅಂಗಡಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಭಾನುವಾರ ಅರಂತಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸಿದ್ಧಕಟ್ಟೆಯ ‌ಆಸ್ಪತ್ರೆಯ ವೈದ್ಯರ ನಿರ್ದೇಶನದಂತೆ ಮೂಡುಬಿದಿರೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ,

ಹೃದಯಾಘಾತಕ್ಕೆ ಯುವಕ ಬಲಿ Read More »

ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ

ನೋಂದಣಿ ಇಲ್ಲದೆ ರಕ್ತ ಪರೀಕ್ಷೆ ಮಾಡುತ್ತಿದ್ದ ಲ್ಯಾಬ್‌ ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಲ್ಯಾಬ್‌ಗೆ ಬೀಗ ಜಡಿದಿದ್ದಾರೆ. ಶರತ್ ಶೆಟ್ಟಿ ಎಂಬವರು ವಿಟ್ಲದಲ್ಲಿರುವ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಇಲ್ಲಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದು, ಲ್ಯಾಬ್‍ನಲ್ಲಿ ಬಂದಿರುವ ವರದಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಬೇರೆಡೆ ರಕ್ತ ಪರೀಕ್ಷೆ ಮಾಡಿಸಿಕೊಂಡಿರುತ್ತಾರೆ. ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಸಂಸ್ಥೆಯವರು ಸಹಿ ಮಾಡದೆ ವರದಿ ನೀಡಿದ್ದು, ಆ ಸಂಸ್ಥೆಯ ವಿರುದ್ಧ

ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ Read More »

ಪುತ್ತೂರು: ರೈಲು ಹಳಿಯಲ್ಲಿ ಶವಪತ್ತೆ

ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಶಂಕೆ ಪುತ್ತೂರು: ನಗರದ ಹಾರಾಡಿ ಸಮೀಪದ ರೈಲ್ವೆ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಹಳಿಯ ಬಳಿ ಶವವನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪುತ್ತೂರು ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯಂತೆ ರೈಲು ಡಿಕ್ಕಿಯಿಂದಲೇ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪುತ್ತೂರು: ರೈಲು ಹಳಿಯಲ್ಲಿ ಶವಪತ್ತೆ Read More »

ಪುತ್ತೂರು : ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂನಿಂದ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾಗಿದೆ.ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆ ಬೆಂಕಿಗೆ ಆಹುತಿಯಾಗಿದೆ. ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪ್‌, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ‌ ನಂದಿಸಲು ಸ್ಥಳೀಯರು ಶ್ರಮಿಸಿದರು.

ಪುತ್ತೂರು : ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ Read More »

error: Content is protected !!
Scroll to Top