ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ, ಕರಪತ್ರ ಹಂಚಿಕೆ | ಗ್ರಾಮ ವಿಕಾಸ ಯೋಜನೆಯ ಮತ್ತೊಂದು ಮೈಲಿಗಲ್ಲು
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಕಿಲ್ ಫೊರ್ಜ್ ವಿದ್ಯಾರ್ಥಿ ಬಳಗ, ಐಇಇಇ ವಿದ್ಯಾರ್ಥಿ ವಿಭಾಗ ಮತ್ತು ಗ್ರಾಮ ವಿಕಾಸ ಯೋಜನೆ ವಿಸಿಇಟಿ ಸಂಯುಕ್ತ ಆಶ್ರಯದಲ್ಲಿ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ಹಂಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಜ್ಞ ವೈದ್ಯರಿಂದ ಮಾಹಿತಿಯನ್ನು ಪಡೆದ ಸುಮಾರು 35 ವಿದ್ಯಾರ್ಥಿಗಳ ತಂಡ ಉಪನ್ಯಾಸಕರು ಹಾಗೂ ಊರವರ ಸಹಕಾರದೊಂದಿಗೆ 170 ಕ್ಕೂ ಹೆಚ್ಚಿನ ಮನೆಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ, ಸ್ತನ ಕ್ಯಾನ್ಸರ್ ಬಗ್ಗೆ […]










