ಪುತ್ತೂರು

ಹಲಾಲ್ ಮುಕ್ತ ದೀಪಾವಳಿ ಆಚರಿಸೋಣ | ಪುತ್ತೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕರಪತ್ರ ಹಂಚುವ ಮೂಲಕ ಅಭಿಯಾನ

ಪುತ್ತೂರು: ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಹಲಾಲ್ ಮುಕ್ತ ದೀಪಾವಳಿ ಆಚರಿಸುವಂತೆ ಪುತ್ತೂರಿನಾದ್ಯಂತ ಅಭಿಯಾನ ಆರಂಭಿಸಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಕರಪತ್ರ ಹಂಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ದೀಪಾವಳಿಯನ್ನು ರಾಷ್ಟ್ರದ್ರೋಹಿ ಹಲಾಲ್ ಮುಕ್ತವಾಗಿ ಆಚರಿಸಿ ಎಂದು ಈ ಸಂದರ್ಭದಲ್ಲಿ ಕರೆ ನೀಡಿದದರು. ಭಾರತದಲ್ಲಿ ಇಸ್ಲಾಂ ಮೇಲಾಧಾರಿತ ಹಲಾಲ್ ಆರ್ಥಿಕ ವ್ಯವಸ್ಥೆ ನಿರ್ಮಿಸಲು ಪ್ರಯತ್ನಗಳಾಗುತ್ತಿವೆ. ಎಫ್ ಎಸ್ ಎಸ್ ಎ ಐ’ ನಂತಹ ಸರ್ಕಾರಿ ಸಂಸ್ಥೆಯ ಪ್ರಮಾಣಪತ್ರ ತೆಗೆದುಕೊಂಡ ನಂತರವೂ ಇಸ್ಲಾಮೀ ಸಂಸ್ಥೆಗಳು […]

ಹಲಾಲ್ ಮುಕ್ತ ದೀಪಾವಳಿ ಆಚರಿಸೋಣ | ಪುತ್ತೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕರಪತ್ರ ಹಂಚುವ ಮೂಲಕ ಅಭಿಯಾನ Read More »

ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣಕ್ಕಾಗಿ 20 ಎಕ್ರೆ ಜಾಗ ಗುರುತಿಸಲಾಗಿದ್ದು, ಜತೆಗೆ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ರೀಡಾಂಗಣ ನಿರ್ಮಾಣಕ್ಕಾಗಿ ಸಂಬಂಧ ಪಟ್ಟ ಇಲಾಖೆಯಲ್ಲಿ ಕಡತದ ಕೆಲಸ ಕಾರ್ಯಗಳು ಪ್ರೊಸೆಸ್ ಹಂತದಲ್ಲಿದೆ ಎಂದು ಶಾಸಕ ಅಶೋಕ್ ಕುಮಾರ್ ಹೇಳಿದರು. ಅವರು ಸೋಮವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ 2024-25ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾಂಗಣದಲ್ಲಿ ಒಳಾಂಗಣ

ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ Read More »

ಕಾನೂನು ವಿದ್ಯಾರ್ಥಿಗಳಿಗೆ ಜವಾಬ್ದಾರಿ ಜಾಸ್ತಿಯಿದೆ : ಸಂಸದ ಕ್ಯಾ. ಬ್ರಿಜೇಶ್ ಚೌಟ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಸಂಸದರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಮಹಾವಿದ್ಯಾಲಯಕ್ಕೆ ಬಂದ ಸಂಸದರನ್ನು ಆಡಳಿತ ಮಂಡಳಿ ಸದಸ್ಯರು ಹಾಗೂ ಉಪನ್ಯಾಸಕ ವೃಂದದವರು ಸೇರಿ ಸ್ವಾಗತಿಸಿ,  ಗೌರವಿಸಲಾಯಿತು. ಬಳಿಕ ಮಹಾವಿದ್ಯಾಲಯದ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲರ ಸಹಕಾರದಿಂದ ಸಂಸದರಾಗಿ, ನಿಮ್ಮೆಲರ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ

ಕಾನೂನು ವಿದ್ಯಾರ್ಥಿಗಳಿಗೆ ಜವಾಬ್ದಾರಿ ಜಾಸ್ತಿಯಿದೆ : ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಬೀಡಿ ಕಳ್ಳತನ ಆರೋಪಿ ಉಳ್ಳಾಲದಲ್ಲಿ ಬಂಧನ | ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ

ಪುತ್ತೂರು: ಬೀಡಿ ಕಳ್ಳತನ ಆರೋಪದಲ್ಲಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಉಳ್ಳಾಲದಲ್ಲಿ ಬಂಧಿಸಿದ್ದಾರೆ. ಆರೋಪಿಯು ಎರಡು ವರ್ಷಗಳ ಹಿಂದೆ ಪುತ್ತೂರಿನ ಬೀಡಿ ಬ್ರಾಂಚೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿಗಳನ್ನು ಕದ್ದು ಸಿಕ್ಕಿ ಹಾಕಿಕೊಂಡಿದ್ದ. ಬಂಧಿತ ಆರೋಪಿ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ ಮಹಮ್ಮದ್  ಕುಂಞಿ ಎಂದು ಗುರುತಿಸಲಾಗಿದೆ. 2022ರಲ್ಲಿ ಕೂರ್ನಡ್ಕದ ಬೀಡಿ ಬ್ರಾಂಚೊಂದರಲ್ಲಿ ಸುಮಾರು 22 ಸಾವಿರ ರೂಪಾಯಿ ಮೌಲ್ಯದ ಬೀಡಿಗಳನ್ನು ಕಳವು ಮಾಡಿದ

ಬೀಡಿ ಕಳ್ಳತನ ಆರೋಪಿ ಉಳ್ಳಾಲದಲ್ಲಿ ಬಂಧನ | ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ Read More »

ಪಾಣಾಜೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರಮದಾನ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ , ತುಳುನಾಡು ಫ್ರೆಂಡ್ಸ್ ತೂಂಬಡ್ಕ ಓಂ ಫ್ರೆಂಡ್ಸ್  ಭರಣ್ಯ ಮತ್ತು ಗ್ರಾಮಸ್ಥರ ನೆರವಿನಿಂದ ಶ್ರಮದಾನ ನಡೆಯಿತು. ರಣಮಂಗಳ ದೇವಸ್ಥಾನ ಮತ್ತು ಪಾಣಾಜೆ ಗ್ರಾಮದ ಮೂರು ಮತ್ತು ನಾಲ್ಕನೇ ವಾರ್ಡಿನ ಪ್ರಧಾನ ಸಂಪರ್ಕ ರಸ್ತೆಯ ಗುಂಡಿಗಳನ್ನು ಶ್ರಮದಾನದ ಮೂಲಕ ಮುಚ್ಚಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಭಟ್ ಬೊಲ್ಲುಕಲ್ಲು, ಪ್ರವೀಣ್ ರೈ ಕೋಟೆ ಉಪಹಾರ ಮತ್ತು ತಂಪು ಪಾನೀಯದ ವ್ಯವಸ್ಥೆಯನ್ನು ಮಾಡಿದರು

ಪಾಣಾಜೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರಮದಾನ Read More »

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಕಾಂಗ್ರೇಸ್‍  ಮುಖಂಡ ಬಿ.ಕೆ ಹರಿಪ್ರಸಾದ್  ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ. ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯಾಗಿ ಮಾತನಾಡಿ  ಸಮಾಜದಲ್ಲಿ ಶಾಂತಿ ಕೆದಡುವ ಪ್ರಯತ್ನವಿದು. ಹಿಂದೂ ಸಮಾಜಕ್ಕೆ ಪ್ರಾತಸ್ಮರಣಿಯರಾಗಿರುವ ಶ್ರೀಗಳಿಗೆ ಈ ರೀತಿಯ ಹೇಳಿಕೆ ನೀಡಿರುವುದು ಸಮಸ್ತ ಹಿಂದೂ  ಸಮಾಜಕ್ಕೆ  ಮಾಡಿರುವ ಅವಮಾನ. ಬಿ.ಕೆ ಹರಿಪ್ರಸಾದ್ ಸ್ವಾಮಿಜೀಯವರಲ್ಲಿ ಕ್ಷಮೆಯಾಚಿಸಬೇಕು

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ Read More »

ಅಕ್ಷಯ ಕಾಲೇಜಿನಲ್ಲಿ “ಡೆಲಿಸಿಯಾ” ಹಾಸ್ಪಿಟಲಿಟಿ ಕ್ಲಬ್ ಆತಿಥ್ಯ ಉದ್ಯಮದ ಕುರಿತು ಸಂವಾದ

ಪುತ್ತೂರು: ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ  ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಎಚ್.ಎಸ್. ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ   “ಡೆಲಿಸಿಯಾ” ಹಾಸ್ಪಿಟಲಿಟಿ ಕ್ಲಬ್  ಆತಿಥ್ಯ ಉದ್ಯಮದ  ಕುರಿತು  ಸಂವಾದ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪೆಸ್ಟ್ರಿ ಶೇಫ್ Ncl ಕ್ರೂಸ್ ಲೈನ್ ನ ಯತೀರಾಜ್ ಪೂಜಾರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಹಾಸ್ಪಿಟಾಲಿಟಿ ಸೈನ್ಸ್  ಗ್ರಾಹಕರಿಗೆ ಆಹಾರ ಮತ್ತು ವಸತಿ ಅಗತ್ಯಗಳನ್ನು ಪೂರೈಸುವ ಸೇವಾ ಉದ್ಯಮವಾಗಿದೆ. ಹಾಸ್ಪಿಟಾಲಿಟಿ ಸೈನ್ಸ್ ನಲ್ಲಿ ವಿವಿಧ ಆಡಳಿತಾತ್ಮಕ,ವ್ಯವಸ್ಥಾಪನಾ

ಅಕ್ಷಯ ಕಾಲೇಜಿನಲ್ಲಿ “ಡೆಲಿಸಿಯಾ” ಹಾಸ್ಪಿಟಲಿಟಿ ಕ್ಲಬ್ ಆತಿಥ್ಯ ಉದ್ಯಮದ ಕುರಿತು ಸಂವಾದ Read More »

ಕೊಕ್ಕಡ ರಾಷ್ಟ್ರೀಕೃತ ಬ್ಯಾಂಕ್‍ ನಲ್ಲಿ ಖಾತೆ ಹೊಂದಿರುವ ಬಡ ಮಹಿಳೆಯರ ಖಾತೆಯಿಂದ ಹಣ ಲಪಟಾಯಿಸಿ ವಂಚನೆ | ಜಾಣ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳು

ಕೊಕ್ಕಡ: ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಡ ಮಹಿಳೆಯರ ಖಾತೆಯಿಂದ ಒಂದಿಲ್ಲೊಂದು ರೀತಿಯಲ್ಲಿ ಹಣ ವರ್ಗಾವಣೆಗೊಳ್ಳುತ್ತಿರುವ ಪ್ರಕರಣ ನಡೆಯುತ್ತಿದ್ದರು ಜಾಣ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳು. ಅ.25ರಂದು ಮಧ್ಯಾಹ್ನ 12.45ಕ್ಕೆ ಬ್ಯಾಂಕ್ ಮ್ಯಾನೇಜರ್ ಎಂದು ಫೋನ್ ಕರೆಯ ಮೂಲಕ ನಂಬಿಸಿ. ವಾಟ್ಸಪ್ ಮುಖಾಂತರ ಮಹಿಳೆಯ ಪಾಸ್ ಬುಕ್ ನಕಲನ್ನು ಪಡೆದು ಮಹಿಳೆಯೋರ್ವರಿಗೆ ರೂ.6,500 ವಂಚಿಸಿದ ಘಟನೆ ನಡೆದಿದೆ. ಕೊಕ್ಕಡ ಗ್ರಾಮದ ಹಾರ ನಿವಾಸಿ ಟಿ.ಜೆ.ರೀನಾ ಅವರ ಬ್ಯಾಂಕ್ ಖಾತೆಯಿಂದ ರೂ. 6,500 ಅನ್ನು ಅಪರಿಚಿತ ವ್ಯಕ್ತಿ

ಕೊಕ್ಕಡ ರಾಷ್ಟ್ರೀಕೃತ ಬ್ಯಾಂಕ್‍ ನಲ್ಲಿ ಖಾತೆ ಹೊಂದಿರುವ ಬಡ ಮಹಿಳೆಯರ ಖಾತೆಯಿಂದ ಹಣ ಲಪಟಾಯಿಸಿ ವಂಚನೆ | ಜಾಣ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳು Read More »

ಬೆಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಸ್ವೀಕರಿಸಿದ ಪುತ್ತೂರಿನ ಲಹರಿ ಕೆ.ಎಂ.

ಪುತ್ತೂರು: ಪುತ್ತೂರಿನ ಲಹರಿ ಕೆ. ಎಂ. ಅವರು ಎಂ.ಬಿ.ಎ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರಿನ ದಯಾನಂದ ಸಾಗರ್ ಸಂಸ್ಥೆಗಳು ಏರ್ಪಡಿಸಿದ್ದ ಘಟಿಕೋತ್ಸವ ಸಮಾರಂಭದಲ್ಲಿ ಸ್ವೀಕರಿಸಿದರು. ಅವರು ದಯಾನಂದ ಸಾಗರ್ ಕಾಲೇಜ್ ಆಫ್ ಆರ್ಟ್ಸ್ ಸೈನ್ಸ್ ಅಂಡ್ ಕಾಮರ್ಸ್ ನ ವಿದ್ಯಾರ್ಥಿನಿಯಾಗಿದ್ದಾರೆ. ಲಹರಿ ಕೆ.ಎಂ. ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಮನೋಹರ್ ಕೆ ವಿ ಮತ್ತು ಮಮತಾ ಕೆ. ಎ. ದಂಪತಿ ಪುತ್ರಿ,

ಬೆಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಸ್ವೀಕರಿಸಿದ ಪುತ್ತೂರಿನ ಲಹರಿ ಕೆ.ಎಂ. Read More »

ಭಾರತೀಯ ಅರೆಸೇನಾ ಪಡೆಗಳ ಮಾಜಿ ಯೋಧರ ಸಂಘ ದ.ಕ., ಉಡುಪಿ ಜಿಲ್ಲಾ ವಲಯ ಸಂಘಟನಾ ಪುತ್ತೂರು ಘಟಕದ ತ್ರೈಮಾಸಿಕ ಸಭೆ | ನ.18 ರಂದು ಗುರುವಾಯನಕೆರೆಯಲ್ಲಿ ಸಂಘದ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಭಾರತೀಯ ಅರೆಸೇನಾ ಪಡೆಗಳ ಮಾಜಿ ಯೋಧರ ಸಂಘ ದ.ಕ., ಉಡುಪಿ ಜಿಲ್ಲಾ ವಲಯ ಸಂಘಟನಾ ಪುತ್ತೂರು ಘಟಕದ ತ್ರೈಮಾಸಿಕ ಸಭೆ ಭಾನುವಾರ ಕುಂಬ್ರ ರೈತ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಪಿ.ಗೌಡ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ನ.18 ರಂದು ಗುರುವಾಯನಕೆರೆಯಲ್ಲಿ ನಡೆಯುವ ಸಂಘ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ಸಭೆಯ ಉದ್ದೇಶವಾಗಿದ್ದು, ಕಾರ್ಯಕ್ರಮಕ್ಕೆ ಹೊರಗಿನಿಂದ ಯಾವುದೇ ಫಂಡ್‍ ಬರುವುದಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸದಸ್ಯರು ಧನ ಸಹಾಯ ನೀಡುವಂತೆ ಅವರು

ಭಾರತೀಯ ಅರೆಸೇನಾ ಪಡೆಗಳ ಮಾಜಿ ಯೋಧರ ಸಂಘ ದ.ಕ., ಉಡುಪಿ ಜಿಲ್ಲಾ ವಲಯ ಸಂಘಟನಾ ಪುತ್ತೂರು ಘಟಕದ ತ್ರೈಮಾಸಿಕ ಸಭೆ | ನ.18 ರಂದು ಗುರುವಾಯನಕೆರೆಯಲ್ಲಿ ಸಂಘದ ವಾರ್ಷಿಕೋತ್ಸವ ಸಮಾರಂಭ Read More »

error: Content is protected !!
Scroll to Top