ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ | ‘ನನಗಲ್ಲ ನಿನಗೆ’ ಎನ್ನುವ ಸೇವಾ ಭಾವನೆಯೇ ದೇಶ ಸೇವೆಯ ಮೊದಲ ಹೆಜ್ಜೆ : ಡಾ.ನಂದೀಶ್ ವೈ.ಡಿ.
ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2023-24ನೇ ಸಾಲಿನ ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ಡಾ. ನಂದೀಶ್ ವೈ. ಡಿ., ಭಾವನಾತ್ಮಕ ಬುದ್ಧಿವಂತಿಕೆ ಮತ್ತು ದೇಶ ಪ್ರೇಮ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ನಮ್ಮ ಮನಸ್ಸು ಯಾವ ರೀತಿ ಯೋಚನೆ ಮಾಡುತ್ತದೆಯೋ ಅದೇ […]










