ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ನಿರಂತರ ಹೋರಾಟ | ಗೋವಾ ತುಳು ಕೂಟ ಉದ್ಘಾಟಿಸಿ ಶಾಸಕ ಅಶೋಕ್ ರೈ
ಪುತ್ತೂರು: ತುಳು ಕರಾವಳಿಗರ ಮಾತೃಭಾಷೆ, ತುಳುವಿಗೆ ಅದರದೇ ಆದ ಇತಿಹಾಸವಿದೆ, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿಭಾಷೆಯನ್ನಾಗಿಸುವಲ್ಲಿನಿರಂತರ ಹೋರಾಟ ಅಗತ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಅ. 20 ರಂದು ತುಳು ಕೂಟ ಗೋವಾ ಇದರ ವತಿಯಿಂದ ಉತ್ತರ ಗೋವಾದ ಪೋವರಿಂ ಪುಂಡಲೀಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಗೋವಾ ತುಳುಕೂಟವನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷಿಗರು, ತುಳು ಮಾತನಾಡುವವರು ವಿಶ್ವದ ಎಲ್ಲೆಡೆ ಇದ್ದಾರೆ. ನಮ್ಮ ದೇಶದ ಪ್ರತೀಯೊಂದು ರಾಜ್ಯದಲ್ಲೂ ತುಳುವರು ವ್ಯಾಪಾರ, ವಹಿವಾಟು […]










