ಪುತ್ತೂರು

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ | ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು  ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ

ಪುತ್ತೂರು: ವಿದ್ಯಾಮಾತಾ ಅಕಾಡೆಮಿಯಲ್ಲಿ  ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು  ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545 ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುತ್ತಾರೆ. ಮೂಲತಃ  ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ […]

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ | ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು  ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ Read More »

ಆಕರ್ಷಣ್ ಇಂಡಸ್ಟ್ರೀಸ್ ನ 29ನೇ ʻವರುಷದ ಹರುಷʼ ಮೆಗಾ ಆಫರ್‌ ಸೇಲ್‌ – ದೀಪಾವಳಿ ಆಫರ್‌ – ಕ್ಯಾಶ್ ಡಿಸ್ಕೌಂಟ್ – ʻಹೀರೋ ಬೈಕ್ʼ ಸೇರಿದಂತೆ ಹಲವಾರು ಬಹುಮಾನಗಳು ನಿಮಗಾಗಿ

ಪುತ್ತೂರು: ಇಲ್ಲಿನ ಮುಕ್ರಂಪಾಡಿಯಲ್ಲಿರುವ ಆಕರ್ಷಣ್ ಇಂಡಸ್ಟ್ರೀಸ್ ನ 29 ನೇ ವರ್ಷಾಚರಣೆ ಅಂಗವಾಗಿ ʻವರುಷದ ಹರುಷʼ ಮೆಗಾ ಆಫರ್ ಸೇಲ್, ದೀಪಾವಳಿ ಆಫರ್‌ ಹಾಗೂ ಬಂಪರ್ ಬಹುಮಾನ ಕೂಪನ್ ಬಿಡುಗಡೆ ಕಾರ್ಯಕ್ರಮ ಸೋಮವಾರ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಕುಂಬ್ರ ವರ್ತಕ ಸಂಘದ ಸ್ಥಾಪಕಾದ್ಯಕ್ಷ ಶ್ಯಾಮ್ ಸುಂದರ್ ರೈ ಕೊಪ್ಪಳ ಪ್ರಥಮ ಗ್ರಾಹಕ ಕೂಪನ್ ಸ್ವೀಕರಿಸಿದರು. ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಸಂಸ್ಥೆಯಾಗಿರುವ ಪುತ್ತೂರಿನ ಆಕರ್ಷಣ್ ಇಂಡಸ್ಟ್ರೀಸ್ 29 ನೇ ವರ್ಷಕ್ಕೆ ಪಾದಾರ್ಪಣೆಯ  ಪ್ರಯುಕ್ತ  ಹಾಗೂ ದೀಪಾವಳಿ ಹಬ್ಬದ  ಅಂಗವಾಗಿ  ಸಂಸ್ಥೆಯಲ್ಲಿ

ಆಕರ್ಷಣ್ ಇಂಡಸ್ಟ್ರೀಸ್ ನ 29ನೇ ʻವರುಷದ ಹರುಷʼ ಮೆಗಾ ಆಫರ್‌ ಸೇಲ್‌ – ದೀಪಾವಳಿ ಆಫರ್‌ – ಕ್ಯಾಶ್ ಡಿಸ್ಕೌಂಟ್ – ʻಹೀರೋ ಬೈಕ್ʼ ಸೇರಿದಂತೆ ಹಲವಾರು ಬಹುಮಾನಗಳು ನಿಮಗಾಗಿ Read More »

ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ | ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಸಾನ್ವಿ ಜಿ ರಾಷ್ಟ್ರಮಟ್ಟಕ್ಕೆ  ಆಯ್ಕೆ

ಪುತ್ತೂರು:  ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ವತಿಯಿಂದ ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ 24ನೇ ಪ್ರಾಂತೀಯ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ. ಬಾಲ ವರ್ಗದ ಗಣಿತ ವಸ್ತು ಪ್ರದರ್ಶನದಲ್ಲಿ ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾಳೆ. ಈಕೆ ಬಂಟ್ವಾಳ

ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ | ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಸಾನ್ವಿ ಜಿ ರಾಷ್ಟ್ರಮಟ್ಟಕ್ಕೆ  ಆಯ್ಕೆ Read More »

ನ.2 : ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಅಶೋಕ ಜನ-ಮನ-2024’ ವಸ್ತ್ರ ವಿತರಣಾ ಕಾರ್ಯಕ್ರಮ | ಚಪ್ಪರ ಮುಹೂರ್ತ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.2 ರಂದು ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣೆ ಅಂಗವಾಗಿ ನಡೆಯಲಿರುವ ‘ಅಶೋಕ ಜನ-ಮನ-2024’ ಕಾರ್ಯಕ್ರಮದ ಚಪ್ಪರ ಮುಹೂರ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ದೀಪಾವಳಿಯಂದು ಪ್ರತೀ ವರ್ಷ ನಡೆಯುವಂತೆ ಈ ಬಾರಿ 12ನೇ ವರ್ಷದ ವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕಳೆದ ಕೆಲವು ವರ್ಷಗಳಿಂದ ಕೋಡಿಂಬಾಡಿಯಲ್ಲಿರುವ ನಮ್ಮ ಮನೆಯಲ್ಲಿ ನಡೆಯುತ್ತಿತ್ತು.

ನ.2 : ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಅಶೋಕ ಜನ-ಮನ-2024’ ವಸ್ತ್ರ ವಿತರಣಾ ಕಾರ್ಯಕ್ರಮ | ಚಪ್ಪರ ಮುಹೂರ್ತ Read More »

ಜ್ಞಾನ-ವಿಜ್ಞಾನ ಮೇಳ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ವತಿಯಿಂದ ಮಂಗಳೂರು ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ ನಲ್ಲಿ ನಡೆದ ಮಧ್ಯ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ  ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನಿಖಿಲ್ ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ವಿದ್ಯಾರ್ಥಿಗೆ ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಯನ್ನು ಶಾಲಾ

ಜ್ಞಾನ-ವಿಜ್ಞಾನ ಮೇಳ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ವಿಧಾನ ಪರಿಷತ್ ಉಪಚುನಾವಣೆ : ಬಿರುಸಿನ ಮತದಾನ

ಪುತ್ತೂರು: ದ.ಕ.ಸ್ಥಳೀಯ ಪ್ರಾಧೀಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆ ಇಂದು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಬಿರುಸಿನಿಂದ ಸಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯನ್ನೊಳಗೊಂಡ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು, 6032 ಮಂದಿ ಮತದಾರರಿದ್ದಾರೆ. ಉಭಯ ಜಿಲ್ಲೆಗಳ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಶಾಸಕರು ಹಾಗೂ ಸಂಸದರು ಮತದಾನ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನಿಂದ ಮತದಾನ ಆರಂಭಗೊಂಡಿದ್ದು, ಹಲವೆಡೆ ಬಿಜೆಪಿಯ ಚುನಾಯಿತ ಸದಸ್ಯರನ್ನೊಳಗೊಂಡ ಮತದಾರರು

ವಿಧಾನ ಪರಿಷತ್ ಉಪಚುನಾವಣೆ : ಬಿರುಸಿನ ಮತದಾನ Read More »

ಕೇರ್ಪಡ ದಲ್ಲಿ ಹಿಂದೂ ಧಾರ್ಮಿಕ  ಶಿಕ್ಷಣ ಪ್ರಾರಂಭ

ಕಡಬ: ಕೇರ್ಪಡ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರದ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಆರಂಭಿಸಲಾಯಿತು. ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಖ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ  ಕೇಶವಪ್ರಸಾದ್ ಮುಳಿಯ ಹಾಗೂ ಮುರಳೀಕೃಷ್ಣ ಹಸಂತಡ್ಕ ಅವರ ಮಾರ್ಗದರ್ಶನದಲ್ಲಿ ಆರಂಭಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ದೀಪ ಪ್ರಜ್ವಲನೆಗೊಳಿಸಿ ಕಥೆ, ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100

ಕೇರ್ಪಡ ದಲ್ಲಿ ಹಿಂದೂ ಧಾರ್ಮಿಕ  ಶಿಕ್ಷಣ ಪ್ರಾರಂಭ Read More »

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಸ್ವಂತ ಸಂಸ್ಥೆಯೊಂದನ್ನು ಸ್ಥಾಪಿಸುವ ಹಂಬಲ ಪ್ರತಿಯೊಬ್ಬನಲ್ಲೂ ಮೂಡಬೇಕು. ಆಲೋಚನೆಗಳು ನಿರ್ದಿಷ್ಟ ಪರಿಧಿಗೆ ಸೀಮಿತವಾಗದೆ ವಿವಿಧ ಆಯಾಮಗಳಲ್ಲಿ ಚಿಂತಿಸುವಂತಾಗಬೇಕು. ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರನಾಗಬೇಕು ಎಂದು ಕುಂಬ್ಳೆ ಸಮೂಹ ಸಂಸ್ಥೆಗಳ ನಿರ್ದೇಶಕ ಕುಂಬ್ಳೆ ನರಸಿಂಹ ಪ್ರಭು ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ’ಉದ್ಯಮಶೀಲತೆ- ಕಲ್ಪನೆಯಿಂದ ವಾಸ್ತವಕ್ಕೆ ಪರಿವರ್ತನೆ’ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾರಾಯಣಮೂರ್ತಿ, ಅಜಿಂ ಪ್ರೇಮ್‌ಜಿ ಇನ್ಫೋಸಿಸ್, ವಿಪ್ರೋ ಕಂಪನಿಗಳನ್ನು ಕಟ್ಟುವ

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ Read More »

ಕಾಂಗ್ರೆಸ್ ಮುಖಂಡನಿಗೆ ಗಂಭೀರ ಹಲ್ಲೆ | ಆರೋಪಿಗಳು ಪೊಲೀಸ್ ವಶಕ್ಕೆ,, ವಿಚಾರಣೆ

ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಜಂಕ್ಷನ್ ನಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರಿಗೆ ಇಬ್ಬರು ಸೇರಿಕೊಂಡು ಗಂಭೀರ ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಸ್ಥಳೀಯ ನಿವಾಸಿ, ಕಾಂಗ್ರೆಸ್ ಮುಖಂಡರಾದ  ರಘುನಾಥ ರೈ ಎಂಬವರ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ತಿಂಗಳಾಡಿಯ ಅಂಗಡಿಯೊಂದರ ಬಳಿ ರಘುನಾಥ ರೈ ಅವರು ನಿಂತಿದ್ದಾಗ ಅಲ್ಲಿಗೆ ಬಂದ ಯುವಕರಿಬ್ಬರು ಮಾತಿಗೆ ಮಾತು ಬೆಳೆಸಿ ಹಲ್ಲೆ ಮಾಡಿದ್ದಾರೆ. ತಲೆಯನ್ನು ಹಿಡಿದು ಗೋಡೆಗೆ ಜಜ್ಜಿದ್ದು ಗಂಭೀರ ಗಾಯಗೊಂಡ ರಘುನಾಥ ರೈ ಅವರನ್ನು ಆಸ್ಪತ್ರೆಗೆ

ಕಾಂಗ್ರೆಸ್ ಮುಖಂಡನಿಗೆ ಗಂಭೀರ ಹಲ್ಲೆ | ಆರೋಪಿಗಳು ಪೊಲೀಸ್ ವಶಕ್ಕೆ,, ವಿಚಾರಣೆ Read More »

ಅರಿಯಡ್ಕದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಮಳೆಯ ಸಂದರ್ಭ ಸಿಡಿಲು ಬಡಿದು    ಮನೆಯೊಂದಕ್ಕೆ ಅಪಾರ ಹಾನಿ ಉಂಟಾದ ಘಟನೆ ತಾಲೂಕಿನ ಅರಿಯಡ್ಕ ಗ್ರಾಮದ ಪಾಪೆಮಜಲು ಸಮೀಪದ ಪಾದಲಾಡಿ ಎಂಬಲ್ಲಿ ಸಂಭವಿಸಿದೆ. ಪಾದಲಾಡಿ ನಿವಾಸಿ ಶೇಖರ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ. ಗೋಡೆ ಬಿರುಕು ಬಿಟ್ಟಿದ್ದು ಟಿವಿ, ಫ್ರಿಜ್ ಮತ್ತಿತರ ಇಲೆಕ್ಟ್ರಾನಿಕ್ ಸೊತ್ತುಗಳು ಸುಟ್ಟು ಹೋಗಿವೆ. ವಿದ್ಯುತ್ ಲೈನ್ ಕೂಡಾ ಸುಟ್ಟು ಹೋಗಿದೆ. ಮನೆಯ ಹೊರಗೆ ಅಂಗಳದಲ್ಲಿದ್ದ ಸಾಕು ನಾಯಿ ಸಿಡಿಲಾಘಾತದಲ್ಲಿ ಮೃತಪಟ್ಟಿದೆ. ಸುಮಾರು ಐವತ್ತು ಸಾವಿರಕ್ಕೂ

ಅರಿಯಡ್ಕದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ Read More »

error: Content is protected !!
Scroll to Top