ಪುತ್ತೂರು

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಸ್ವಂತ ಸಂಸ್ಥೆಯೊಂದನ್ನು ಸ್ಥಾಪಿಸುವ ಹಂಬಲ ಪ್ರತಿಯೊಬ್ಬನಲ್ಲೂ ಮೂಡಬೇಕು. ಆಲೋಚನೆಗಳು ನಿರ್ದಿಷ್ಟ ಪರಿಧಿಗೆ ಸೀಮಿತವಾಗದೆ ವಿವಿಧ ಆಯಾಮಗಳಲ್ಲಿ ಚಿಂತಿಸುವಂತಾಗಬೇಕು. ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರನಾಗಬೇಕು ಎಂದು ಕುಂಬ್ಳೆ ಸಮೂಹ ಸಂಸ್ಥೆಗಳ ನಿರ್ದೇಶಕ ಕುಂಬ್ಳೆ ನರಸಿಂಹ ಪ್ರಭು ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ’ಉದ್ಯಮಶೀಲತೆ- ಕಲ್ಪನೆಯಿಂದ ವಾಸ್ತವಕ್ಕೆ ಪರಿವರ್ತನೆ’ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾರಾಯಣಮೂರ್ತಿ, ಅಜಿಂ ಪ್ರೇಮ್‌ಜಿ ಇನ್ಫೋಸಿಸ್, ವಿಪ್ರೋ ಕಂಪನಿಗಳನ್ನು ಕಟ್ಟುವ […]

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ Read More »

ಕಾಂಗ್ರೆಸ್ ಮುಖಂಡನಿಗೆ ಗಂಭೀರ ಹಲ್ಲೆ | ಆರೋಪಿಗಳು ಪೊಲೀಸ್ ವಶಕ್ಕೆ,, ವಿಚಾರಣೆ

ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಜಂಕ್ಷನ್ ನಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರಿಗೆ ಇಬ್ಬರು ಸೇರಿಕೊಂಡು ಗಂಭೀರ ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಸ್ಥಳೀಯ ನಿವಾಸಿ, ಕಾಂಗ್ರೆಸ್ ಮುಖಂಡರಾದ  ರಘುನಾಥ ರೈ ಎಂಬವರ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ತಿಂಗಳಾಡಿಯ ಅಂಗಡಿಯೊಂದರ ಬಳಿ ರಘುನಾಥ ರೈ ಅವರು ನಿಂತಿದ್ದಾಗ ಅಲ್ಲಿಗೆ ಬಂದ ಯುವಕರಿಬ್ಬರು ಮಾತಿಗೆ ಮಾತು ಬೆಳೆಸಿ ಹಲ್ಲೆ ಮಾಡಿದ್ದಾರೆ. ತಲೆಯನ್ನು ಹಿಡಿದು ಗೋಡೆಗೆ ಜಜ್ಜಿದ್ದು ಗಂಭೀರ ಗಾಯಗೊಂಡ ರಘುನಾಥ ರೈ ಅವರನ್ನು ಆಸ್ಪತ್ರೆಗೆ

ಕಾಂಗ್ರೆಸ್ ಮುಖಂಡನಿಗೆ ಗಂಭೀರ ಹಲ್ಲೆ | ಆರೋಪಿಗಳು ಪೊಲೀಸ್ ವಶಕ್ಕೆ,, ವಿಚಾರಣೆ Read More »

ಅರಿಯಡ್ಕದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಮಳೆಯ ಸಂದರ್ಭ ಸಿಡಿಲು ಬಡಿದು    ಮನೆಯೊಂದಕ್ಕೆ ಅಪಾರ ಹಾನಿ ಉಂಟಾದ ಘಟನೆ ತಾಲೂಕಿನ ಅರಿಯಡ್ಕ ಗ್ರಾಮದ ಪಾಪೆಮಜಲು ಸಮೀಪದ ಪಾದಲಾಡಿ ಎಂಬಲ್ಲಿ ಸಂಭವಿಸಿದೆ. ಪಾದಲಾಡಿ ನಿವಾಸಿ ಶೇಖರ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ. ಗೋಡೆ ಬಿರುಕು ಬಿಟ್ಟಿದ್ದು ಟಿವಿ, ಫ್ರಿಜ್ ಮತ್ತಿತರ ಇಲೆಕ್ಟ್ರಾನಿಕ್ ಸೊತ್ತುಗಳು ಸುಟ್ಟು ಹೋಗಿವೆ. ವಿದ್ಯುತ್ ಲೈನ್ ಕೂಡಾ ಸುಟ್ಟು ಹೋಗಿದೆ. ಮನೆಯ ಹೊರಗೆ ಅಂಗಳದಲ್ಲಿದ್ದ ಸಾಕು ನಾಯಿ ಸಿಡಿಲಾಘಾತದಲ್ಲಿ ಮೃತಪಟ್ಟಿದೆ. ಸುಮಾರು ಐವತ್ತು ಸಾವಿರಕ್ಕೂ

ಅರಿಯಡ್ಕದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ Read More »

ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶ | ಆಶೀರ್ವಾದ್ ಎಂಟರ್ ಪ್ರೈಸಸ್‍ನಿಂದ ಯೋಜನೆ

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧೈಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ್ ಎಂಟರ್ ಪ್ರೈಸಸ್ ಇದೀಗ ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶವೊಂದನ್ನು ಒದಗಿಸುತ್ತಿದೆ. ತನ್ನ ಪ್ರಥಮ ಯೋಜನೆಯ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶವನ್ನು ನೀಡಿದ್ದ ಆಶೀರ್ವಾದ್ ಸಂಸ್ಥೆ ಇದೀಗ ಆಶೀರ್ವಾದ 2.0ದ ಎರಡನೇ ಲಕ್ಕಿ ಡ್ರಾ ಯೋಜನೆಯಲ್ಲಿ, ಒಬ್ಬ ಅದ್ಯಾಶಾಲಿಗೆ 5 ಸೆಂಟ್ಸ್ ನಿವೇಶನ ಸ್ಥಳವನ್ನು ತಮ್ಮದಾಗಿಸಿಕೊಳ್ಳುವ ಅವಕಾಶವನ್ನು ನೀಡುತ್ತಿದೆ. ಇದಕ್ಕೆ

ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶ | ಆಶೀರ್ವಾದ್ ಎಂಟರ್ ಪ್ರೈಸಸ್‍ನಿಂದ ಯೋಜನೆ Read More »

ಕಿಲ್ಲೆ ಮೈದಾನದಲ್ಲೇ ಸೋಮವಾರದ ಸಂತೆ : ಶಾಸಕರ ಸೂಚನೆ

ಪುತ್ತೂರು: ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾrದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಶಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದಾರೆ. ಅದರಂತೆ ಕಿಲ್ಲೆ ಮೈದಾನದಲ್ಲೇ ಸಂತೆ ನಡೆಯಲಿದೆ. ಪುತ್ತೂರು ನಗರಸಭಾ ವ್ಯಾಪ್ತಿಯ ಮತಗಟ್ಟೆಯಿಂದ 200 ಮೀಟರ್ ದೂರದಲ್ಲಿ ಕಿಲ್ಲೆ ಮೈದಾನ ಇರುವ ಕಾರಣ ನೀತಿ ಸಂಹಿತೆ ನೆಪದಲ್ಲಿ ವಾರದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದರು. ಈ ಬಗ್ಗೆ ಸಂತೆ ವ್ಯಾಪಾರಿಗಳು ಶಾಸಕರ

ಕಿಲ್ಲೆ ಮೈದಾನದಲ್ಲೇ ಸೋಮವಾರದ ಸಂತೆ : ಶಾಸಕರ ಸೂಚನೆ Read More »

ಪುತ್ತೂರಿನ ಸೋಮವಾರದ ಸಂತೆ ರದ್ದು | ನಗರಸಭೆ ಪೌರಾಯುಕ್ತರಿಂದ ಆದೇಶ

ಪುತ್ತೂರು: ಅ.21 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ನಡೆಯುವ ಸಂತೆಯನ್ನು ರದ್ದುಗೊಳಿಸಿ ನಗರಸಭೆ ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರೋರ್ವರ  ಆಯ್ಕೆಗಾಗಿ ಅ. 21ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಂತೆ ರದ್ದುಗೊಳಿಸಲಾಗಿದೆ. ನಗರಸಭಾ ಕಚೇರಿಯೂ ಮತಗಟ್ಟೆಯಾಗಿದ್ದು ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಹಾಗಾಗಿ ಅ. 21ರಂದು ಕಿಲ್ಲೆ ಮೈದಾನದಲ್ಲಿ ನಡೆಯಬೇಕಿದ್ದ ಸೋಮವಾರದ ಸಂತೆಯನ್ನು ರದ್ದು ಪಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ

ಪುತ್ತೂರಿನ ಸೋಮವಾರದ ಸಂತೆ ರದ್ದು | ನಗರಸಭೆ ಪೌರಾಯುಕ್ತರಿಂದ ಆದೇಶ Read More »

ಅಕ್ಷಯ ಕಾಲೇಜಿನಲ್ಲಿ “ಸೈಬರ್ ಸೆಕ್ಯುರಿಟಿ” ಕಾರ್ಯಾಗಾರ

ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ. ಸಿ.ಎ. ವಿಭಾಗ ಮತ್ತುಆಂತರಿಕ ಗುಣಮಟ್ಟದ ಭರವಸೆ ಕೋಶ ಹಾಗೂ ನಿಯೋಇನ್ನೋವೇಶನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಸೈಬರ್‌ ಸೆಕ್ಯುರಿಟಿ ಎಂಬ ವಿಷಯಗಳಲ್ಲಿ ಕಾರ್ಯಾಗಾರ ನಡೆಯಿತು. ಇನ್ನೋವೇಶನ್ ಸಂಸ್ಥೆಯ ವಸುಮತಿ ಮಾಹಿತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ, ಸೈಬರ್ ಸೆಕ್ಯುರಿಟಿ ಎನ್ನುವುದು ಡಿಜಿಟಲ್ ದಾಳಿಯಿಂದ ಸಿಸ್ಟಮ್‌ಗಳು, ನೆಟ್‌ವರ್ಕ್‌ಗಳು ಮತ್ತು ಪ್ರೋಗ್ರಾಂಗಳನ್ನು ರಕ್ಷಿಸಲು ಪರಿಣಾಮಕಾರಿಯಾಗಿದ್ದು,  ಸೈಬರ್‌ ಸುರಕ್ಷತಾ ಕ್ರಮಗಳನ್ನು ಕಾರ್ಯಗತಗೊಳಿಸುವುದಾಗಿದೆ. ಪ್ರಬಲವಾದ ಪಾಸ್‌ ವರ್ಡ್‌ ಗಳನ್ನು

ಅಕ್ಷಯ ಕಾಲೇಜಿನಲ್ಲಿ “ಸೈಬರ್ ಸೆಕ್ಯುರಿಟಿ” ಕಾರ್ಯಾಗಾರ Read More »

ಕುರಿಯದಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.2 ರಂದು ನಡೆಯುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಗ್ರಾಮದ ಪ್ರತೀಯೊಬ್ಬರೂ ಬಂದು ನಮ್ಮ ಆಶೀರ್ವಾದ ಮಾಡಬೇಕು ನಿಮ್ಮ ಆಗಮನವೇ ನಮಗೆ ದೊಡ್ಡ ಆಶೀರ್ವಾದ ಎಂದು ಟ್ರಸ್ಟ್‌ನ ಪ್ರಮುಖ ನಿಹಾಲ್ ಪಿ. ಶೆಟ್ಟಿ ಹೇಳಿದರು. ಅವರು ಕುರಿಯ ಗ್ರಾಮದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮದ ಪ್ರಚಾರ ಸಭೆ ಹಾಗೂ ಆಹ್ವಾನ ಸಮಾರಂಭದಲ್ಲಿ ಮಾತನಾಡಿದರು. ಕಳೆದ

ಕುರಿಯದಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ Read More »

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್‍ಪಂದ್ಯಾಟ ಸಮಾರೋಪ | ತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್, ವಿದ್ಯಾಭಾರತಿ ಕರ್ನಾಟಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್‍ಪಂದ್ಯಾಟದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರುಣ ವರ್ಗದ ಹುಡುಗರ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರದ ಕೈಂರಂಗಳ ಶಾರದಾ ಗಣಪತಿ ವಿದ್ಯಾಸಂಸ್ಥೆ ಹಾಗೂ ಹುಡುಗಿಯರ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರದ ಮಡಂತ್ಯಾರು ಪದವಿಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ತರುಣ ವರ್ಗದ

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್‍ಪಂದ್ಯಾಟ ಸಮಾರೋಪ | ತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್ Read More »

ಸರಣಿ ಅಪಘಾತ : ಟ್ರಾಫಿಕ್ ಜಾಮ್‍

ಪುತ್ತೂರು: ಸರಣಿ ಅಪಘಾತ ಸಂಭವಿಸಿದ ಘಟನೆ ದರ್ಬೆ ನಿರೀಕ್ಷಣಾ ಮಂದಿರದ ಎದುರು ಇಂದು ಸಂಜೆ ನಡೆದಿದೆ. ಆಟೋ ರಿಕ್ಷಾ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಕಾರು ಚಾಲಕ ಆಟೋ ರಿಕ್ಷಾ ಹಾಗೂ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸರಣಿ ಅಪಘಾತ : ಟ್ರಾಫಿಕ್ ಜಾಮ್‍ Read More »

error: Content is protected !!
Scroll to Top