ಪುತ್ತೂರು

ಮುಡಾ, ವಾಲ್ಮೀಕಿ ಹಗರಣದ ಮೂಲಕ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಾಗದೆ ಆಕ್ಸಿಜನ್ ಒಳಗೆ ಸೇರಿಕೊಂಡಿದೆ | ಪತ್ರಿಕಾಗೋಷ್ಠಿಯಲ್ಲಿ ನಳಿನ್ ಕುಮಾರ್ ಕಟೀಲ್

ಪುತ್ತೂರು: ಮುಡಾ, ವಾಲ್ಮೀಕಿ ಸೇರಿದಂತೆ ಹಲವಾರು ಹಗರಣದ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಾಗದೆ ಆಕ್ಸಿಜನ್ ಒಳಗೆ ಸೇರಿಕೊಂಡಿದೆ ಎಂದು ದ.ಕ.ಜಿಲ್ಲಾ ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ ಲೇವಡಿ ಮಾಡಿದ್ದಾರೆ. ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‍ ಸರಕಾರ ರಾಜ್ಯದಲ್ಲಿ ಒಂದೂವರೆ ವರ್ಷದಿಂದ ಭ್ರಷ್ಟಾಚಾರದಲ್ಲೇ ನಿರತರಾಗಿದ್ದಾರೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಜತೆಗೆ ಗಲಭೆಗಳನ್ನು ನಡೆಸುತ್ತಾ ಶಾಂತಿ […]

ಮುಡಾ, ವಾಲ್ಮೀಕಿ ಹಗರಣದ ಮೂಲಕ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಾಗದೆ ಆಕ್ಸಿಜನ್ ಒಳಗೆ ಸೇರಿಕೊಂಡಿದೆ | ಪತ್ರಿಕಾಗೋಷ್ಠಿಯಲ್ಲಿ ನಳಿನ್ ಕುಮಾರ್ ಕಟೀಲ್ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲಾ (RMS) ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತಾ ತರಗತಿ ಪ್ರಾರಂಭ | ಆನ್ಲೈನ್ ಮೂಲಕ ತರಬೇತಿ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ರವೇಶ ಪರೀಕ್ಷೆ(RMS)ಗೆ ಪೂರ್ವಭಾವಿಯಾಗಿ ತರಬೇತಿ ಪ್ರಾರಂಭಿಸಲಿದ್ದು, ಈಗಾಗಲೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಸೈನಿಕ ಶಾಲಾ ಪ್ರವೇಶ ಪರೀಕ್ಷೆ ಸೇರಿದಂತೆ ವಿವಿಧ ವಸತಿಯುಕ್ತ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ಸಂಸ್ಥೆಯ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ರಾಷ್ಟ್ರೀಯ ಮಿಲಿಟರಿ ಶಾಲೆ (RMS) ಪರೀಕ್ಷೆಯ ತರಬೇತಿ ತರಗತಿಗಳು ವಾರದಲ್ಲಿ 5 ದಿನ ರಾತ್ರಿ ಗಂಟೆ 8.00ರಿಂದ

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲಾ (RMS) ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತಾ ತರಗತಿ ಪ್ರಾರಂಭ | ಆನ್ಲೈನ್ ಮೂಲಕ ತರಬೇತಿ Read More »

ಅಶೋಕ‌ ಜನ-ಮನಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಆಹ್ವಾನ

ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ‌ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಯಿತು. ಶುಕ್ರವಾರ ಬೆಂಗಳೂರಿನಲ್ಲಿ ಇಬ್ಬರನ್ನು ಭೇಟಿಯಾದ ಶಾಸಕರು ಪುತ್ತೂರಿನ ಐತಿಹಾಸಿಕ ಈ ಕಾರ್ಯಕ್ರಮಕ್ಕೆ ಬಂದು ಹಾರೈಸುವಂತೆ ‌ಮನವಿ ಮಾಡಿದರು. ಕಾರ್ಯಕ್ರಮಕ್ಕೆ ಬರುವುದಾಗಿ ಇಬ್ಬರೂ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ. ವರ್ಷಂಪ್ರತಿ ದೀಪಾವಳಿ

ಅಶೋಕ‌ ಜನ-ಮನಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಆಹ್ವಾನ Read More »

ಗುಡಿಸಲಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು | ನಗದು, ದಾಖಲೆ ಪತ್ರ, ದಿನಸಿ ಸಾಮಾಗ್ರಿ ಬೆಂಕಿಗಾಹುತಿ

ಪುತ್ತೂರು: ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಸಾರಪುಣಿಪಾದಡ್ಕ ಎಂಬಲ್ಲಿ ನಡೆದಿದೆ. ಪಾದೆಡ್ನ ನಿವಾಸಿ ಪದ್ಮಾವತಿ ಹಾಗೂ ಅವರ 8 ವರ್ಷದ ಪುತ್ರ ವಾಸ್ತವ್ಯವಿದ್ದ, ಶೀಟ್ ಅಳವಡಿಸಿರುವ ಗುಡಿಸಲು ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಅವಘಡದಿಂದ ಮನೆಯೊಳಗೆ ಬ್ಯಾಗ್‌ನಲ್ಲಿ ಇರಿಸಿದ್ದ 15 ಸಾವಿರ ನಗದು,  ಆಧಾರ್ ಕಾರ್ಡ್ ಸಹಿತ ದಾಖಲೆ ಪತ್ರಗಳು, ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಗೋಡೆ ಇಲ್ಲದ ಗುಡಿಸಲಿನ ಸುತ್ತ

ಗುಡಿಸಲಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು | ನಗದು, ದಾಖಲೆ ಪತ್ರ, ದಿನಸಿ ಸಾಮಾಗ್ರಿ ಬೆಂಕಿಗಾಹುತಿ Read More »

ಶೈಕ್ಷಣಿಕ ಸಾಧನೆಗೆ ಕ್ರೀಡೆ ಪೂರಕವಾದದ್ದು : ಪಾರ್ಥ ವಾರಣಾಸಿ | ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಪುತ್ತೂರು: ಕ್ರೀಡೆ ಕೇವಲ ಸ್ಪರ್ಧೆಗಷ್ಟೇ ಸೀಮಿತವಲ್ಲ. ದೈಹಿಕ, ಮಾನಸಿಕ ಆರೋಗ್ಯ, ಮೆದುಳಿನ ಚುರುಕುತನಕ್ಕೆ  ಅತ್ಯಂತ ಉಪಕಾರಿ. ಅದರಲ್ಲೂ ಶೈಕ್ಷಣಿಕ ಸಾಧನೆಗೆ ಅತಿ ಅವಶ್ಯಕ. ಆದ್ದರಿಂದ ದಿನಕ್ಕೆ 30  ರಿಂದ 90 ನಿಮಿಷಗಳ ವರೆಗೆ ಆಟೋಟ, ನೃತ್ಯ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಈಜು ತರಬೇತುದಾರ ಪಾರ್ಥ ವಾರಣಾಸಿ ಹೇಳಿದರು. ಅವರು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶೈಕ್ಷಣಿಕ ಸಾಧನೆಗೆ ಕ್ರೀಡೆ ಪೂರಕವಾದದ್ದು : ಪಾರ್ಥ ವಾರಣಾಸಿ | ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ Read More »

ಸವಣೂರು ಸೀತಾರಾಮ ರೈಯವರಿಗೆ RUPSA ರಾಜ್ಯ ಪ್ರಶಸ್ತಿ | ಅ.21 ರಂದು ಬೆಂಗಳೂರಿನ ಜುಬ್ಲಿ ಅಂತರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ಪ್ರಶಸ್ತಿ ಪ್ರದಾನ

ಸವಣೂರು: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳ ಸಂಘ (Recognised Unaided Private Schools’ Association of Karnataka) ಪ್ರದಾನ ಮಾಡುವ ರಾಜ್ಯಮಟ್ಟದ ಉತ್ತಮ ಶಾಲಾ ಆಡಳಿತಗಾರ ಪ್ರಶಸ್ತಿಯು ಸವಣೂರಿನ ಶಿಲ್ಪಿ, ಸಹಕಾರ ರತ್ನ ಸವಣೂರು ಸೀತಾರಾಮ ರೈಯವರಿಗೆ ಒಲಿದು ಬಂದಿದೆ. ಅಕ್ಟೋಬರ್ 21ರಂದು ಬೆಂಗಳೂರಿನ ಜುಬ್ಲಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಇತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸವಣೂರು ಸೀತಾರಾಮ ರೈ ಅವರು

ಸವಣೂರು ಸೀತಾರಾಮ ರೈಯವರಿಗೆ RUPSA ರಾಜ್ಯ ಪ್ರಶಸ್ತಿ | ಅ.21 ರಂದು ಬೆಂಗಳೂರಿನ ಜುಬ್ಲಿ ಅಂತರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ಪ್ರಶಸ್ತಿ ಪ್ರದಾನ Read More »

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ಗುರುವಾರ ಸಂಜೀವ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ Read More »

ಹಿಂದೂ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ | ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್‍ ಪ್ರತಿಭಟನೆ | ಇಂದು ಸಂಜೆಯೊಳಗೆ ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯ ಎಚ್ಚರಿಕೆ

ಪುತ್ತೂರು: ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಮಹಿಳಾ ಬಿಲ್ಲವರು ವ್ಯಭಿಚಾರಿಗಳಾಗಿದ್ದಾರೆ ಎಂದು ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಡಿವೈಎಸ್‍ ಪಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಕಾರ್ಯಕರ್ತನೋರ್ವನ ಜೊತೆ ಮಾತನಾಡಿದ ಆಡಿಯೋ ಜಿಲ್ಲೆಯಾದ್ಯಂತ ವೈರಲ್ ಆದ ಪರಿಣಾಮ ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಬಿಲ್ಲವ ಯುವತಿಯರು ವ್ಯಭಿಚಾರಿಗಳಾಗಿದ್ದಾರೆ ಎನ್ನುವ ಮೂಲಕ ಕಿಚ್ಚು ಹಚ್ಚಿದ್ದರು. ಈ ಪರಿಣಾಮ ಕೆರಳಿರುವ ಹಿಂದೂ ಪರ ಸಂಘಟನೆಗಳು ಇಂದು ಪುತ್ತೂರಿನ ಡಿವೈಎಸ್ಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ,

ಹಿಂದೂ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ | ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್‍ ಪ್ರತಿಭಟನೆ | ಇಂದು ಸಂಜೆಯೊಳಗೆ ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯ ಎಚ್ಚರಿಕೆ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49) ಅಪಘಾತದಿಂದಾಗಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ನೇರಳಕಟ್ಟೆ ಪೆರಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಗುರುವಾರ ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ಡಿಕ್ಕಿ ಹೊಡೆದಿತ್ತು. ತೀವೃ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ನಿಧನರಾದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ನಿರ್ಮಲ ಮನಸ್ಸು ಕಟ್ಟುವ ಕೆಲಸವನ್ನು ಕಲೆಗಳು ಮಾಡುತ್ತಿವೆ | ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ಉದ್ಘಾಟಿಸಿ ಡಾ.ಮೋಹನ್ ಆಳ್ವ

ಪುತ್ತೂರು: ಭಾರತ ದೇಶದ ಸಾಂಸ್ಕೃತಿಕ ಪರಂಪರೆ ಹೊಂದಿರುವ ವಿವಿಧ ಪ್ರಾಕಾರದ ಕಲೆಗಳು ಸವಕಲು ನಾಣ್ಯವಾಗದೆ ಚಲಾವಣೆಯ ನಾಣ್ಯಗಳಾಗಿ ನಿರಂತರ ನಡೆಯುತ್ತಿರಬೇಕು. ಈ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವ ಹೇಳಿದರು. ಅವರು ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ಯುಗಳ ನೃತ್ಯ- ವಿದ್ವಾನ್‍ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ದಂಪತಿಗಳಿಂದ ಪ್ರದರ್ಶನಗೊಂಡ ‘ನೃತ್ಯೋತ್ಕ್ರಮಣ-2024’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮ್ಮಲ್ಲಿ 8 ಬಗೆಯ

ನಿರ್ಮಲ ಮನಸ್ಸು ಕಟ್ಟುವ ಕೆಲಸವನ್ನು ಕಲೆಗಳು ಮಾಡುತ್ತಿವೆ | ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ಉದ್ಘಾಟಿಸಿ ಡಾ.ಮೋಹನ್ ಆಳ್ವ Read More »

error: Content is protected !!
Scroll to Top