ಪುತ್ತೂರು

ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶ | ಆಶೀರ್ವಾದ್ ಎಂಟರ್ ಪ್ರೈಸಸ್‍ನಿಂದ ಯೋಜನೆ

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧೈಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ್ ಎಂಟರ್ ಪ್ರೈಸಸ್ ಇದೀಗ ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶವೊಂದನ್ನು ಒದಗಿಸುತ್ತಿದೆ. ತನ್ನ ಪ್ರಥಮ ಯೋಜನೆಯ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶವನ್ನು ನೀಡಿದ್ದ ಆಶೀರ್ವಾದ್ ಸಂಸ್ಥೆ ಇದೀಗ ಆಶೀರ್ವಾದ 2.0ದ ಎರಡನೇ ಲಕ್ಕಿ ಡ್ರಾ ಯೋಜನೆಯಲ್ಲಿ, ಒಬ್ಬ ಅದ್ಯಾಶಾಲಿಗೆ 5 ಸೆಂಟ್ಸ್ ನಿವೇಶನ ಸ್ಥಳವನ್ನು ತಮ್ಮದಾಗಿಸಿಕೊಳ್ಳುವ ಅವಕಾಶವನ್ನು ನೀಡುತ್ತಿದೆ. ಇದಕ್ಕೆ […]

ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶ | ಆಶೀರ್ವಾದ್ ಎಂಟರ್ ಪ್ರೈಸಸ್‍ನಿಂದ ಯೋಜನೆ Read More »

ಕಿಲ್ಲೆ ಮೈದಾನದಲ್ಲೇ ಸೋಮವಾರದ ಸಂತೆ : ಶಾಸಕರ ಸೂಚನೆ

ಪುತ್ತೂರು: ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾrದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಶಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದಾರೆ. ಅದರಂತೆ ಕಿಲ್ಲೆ ಮೈದಾನದಲ್ಲೇ ಸಂತೆ ನಡೆಯಲಿದೆ. ಪುತ್ತೂರು ನಗರಸಭಾ ವ್ಯಾಪ್ತಿಯ ಮತಗಟ್ಟೆಯಿಂದ 200 ಮೀಟರ್ ದೂರದಲ್ಲಿ ಕಿಲ್ಲೆ ಮೈದಾನ ಇರುವ ಕಾರಣ ನೀತಿ ಸಂಹಿತೆ ನೆಪದಲ್ಲಿ ವಾರದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದರು. ಈ ಬಗ್ಗೆ ಸಂತೆ ವ್ಯಾಪಾರಿಗಳು ಶಾಸಕರ

ಕಿಲ್ಲೆ ಮೈದಾನದಲ್ಲೇ ಸೋಮವಾರದ ಸಂತೆ : ಶಾಸಕರ ಸೂಚನೆ Read More »

ಪುತ್ತೂರಿನ ಸೋಮವಾರದ ಸಂತೆ ರದ್ದು | ನಗರಸಭೆ ಪೌರಾಯುಕ್ತರಿಂದ ಆದೇಶ

ಪುತ್ತೂರು: ಅ.21 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ನಡೆಯುವ ಸಂತೆಯನ್ನು ರದ್ದುಗೊಳಿಸಿ ನಗರಸಭೆ ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರೋರ್ವರ  ಆಯ್ಕೆಗಾಗಿ ಅ. 21ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಂತೆ ರದ್ದುಗೊಳಿಸಲಾಗಿದೆ. ನಗರಸಭಾ ಕಚೇರಿಯೂ ಮತಗಟ್ಟೆಯಾಗಿದ್ದು ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಹಾಗಾಗಿ ಅ. 21ರಂದು ಕಿಲ್ಲೆ ಮೈದಾನದಲ್ಲಿ ನಡೆಯಬೇಕಿದ್ದ ಸೋಮವಾರದ ಸಂತೆಯನ್ನು ರದ್ದು ಪಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ

ಪುತ್ತೂರಿನ ಸೋಮವಾರದ ಸಂತೆ ರದ್ದು | ನಗರಸಭೆ ಪೌರಾಯುಕ್ತರಿಂದ ಆದೇಶ Read More »

ಅಕ್ಷಯ ಕಾಲೇಜಿನಲ್ಲಿ “ಸೈಬರ್ ಸೆಕ್ಯುರಿಟಿ” ಕಾರ್ಯಾಗಾರ

ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ. ಸಿ.ಎ. ವಿಭಾಗ ಮತ್ತುಆಂತರಿಕ ಗುಣಮಟ್ಟದ ಭರವಸೆ ಕೋಶ ಹಾಗೂ ನಿಯೋಇನ್ನೋವೇಶನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಸೈಬರ್‌ ಸೆಕ್ಯುರಿಟಿ ಎಂಬ ವಿಷಯಗಳಲ್ಲಿ ಕಾರ್ಯಾಗಾರ ನಡೆಯಿತು. ಇನ್ನೋವೇಶನ್ ಸಂಸ್ಥೆಯ ವಸುಮತಿ ಮಾಹಿತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ, ಸೈಬರ್ ಸೆಕ್ಯುರಿಟಿ ಎನ್ನುವುದು ಡಿಜಿಟಲ್ ದಾಳಿಯಿಂದ ಸಿಸ್ಟಮ್‌ಗಳು, ನೆಟ್‌ವರ್ಕ್‌ಗಳು ಮತ್ತು ಪ್ರೋಗ್ರಾಂಗಳನ್ನು ರಕ್ಷಿಸಲು ಪರಿಣಾಮಕಾರಿಯಾಗಿದ್ದು,  ಸೈಬರ್‌ ಸುರಕ್ಷತಾ ಕ್ರಮಗಳನ್ನು ಕಾರ್ಯಗತಗೊಳಿಸುವುದಾಗಿದೆ. ಪ್ರಬಲವಾದ ಪಾಸ್‌ ವರ್ಡ್‌ ಗಳನ್ನು

ಅಕ್ಷಯ ಕಾಲೇಜಿನಲ್ಲಿ “ಸೈಬರ್ ಸೆಕ್ಯುರಿಟಿ” ಕಾರ್ಯಾಗಾರ Read More »

ಕುರಿಯದಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.2 ರಂದು ನಡೆಯುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಗ್ರಾಮದ ಪ್ರತೀಯೊಬ್ಬರೂ ಬಂದು ನಮ್ಮ ಆಶೀರ್ವಾದ ಮಾಡಬೇಕು ನಿಮ್ಮ ಆಗಮನವೇ ನಮಗೆ ದೊಡ್ಡ ಆಶೀರ್ವಾದ ಎಂದು ಟ್ರಸ್ಟ್‌ನ ಪ್ರಮುಖ ನಿಹಾಲ್ ಪಿ. ಶೆಟ್ಟಿ ಹೇಳಿದರು. ಅವರು ಕುರಿಯ ಗ್ರಾಮದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮದ ಪ್ರಚಾರ ಸಭೆ ಹಾಗೂ ಆಹ್ವಾನ ಸಮಾರಂಭದಲ್ಲಿ ಮಾತನಾಡಿದರು. ಕಳೆದ

ಕುರಿಯದಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ Read More »

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್‍ಪಂದ್ಯಾಟ ಸಮಾರೋಪ | ತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್, ವಿದ್ಯಾಭಾರತಿ ಕರ್ನಾಟಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್‍ಪಂದ್ಯಾಟದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರುಣ ವರ್ಗದ ಹುಡುಗರ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರದ ಕೈಂರಂಗಳ ಶಾರದಾ ಗಣಪತಿ ವಿದ್ಯಾಸಂಸ್ಥೆ ಹಾಗೂ ಹುಡುಗಿಯರ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರದ ಮಡಂತ್ಯಾರು ಪದವಿಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ತರುಣ ವರ್ಗದ

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್‍ಪಂದ್ಯಾಟ ಸಮಾರೋಪ | ತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್ Read More »

ಸರಣಿ ಅಪಘಾತ : ಟ್ರಾಫಿಕ್ ಜಾಮ್‍

ಪುತ್ತೂರು: ಸರಣಿ ಅಪಘಾತ ಸಂಭವಿಸಿದ ಘಟನೆ ದರ್ಬೆ ನಿರೀಕ್ಷಣಾ ಮಂದಿರದ ಎದುರು ಇಂದು ಸಂಜೆ ನಡೆದಿದೆ. ಆಟೋ ರಿಕ್ಷಾ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಕಾರು ಚಾಲಕ ಆಟೋ ರಿಕ್ಷಾ ಹಾಗೂ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸರಣಿ ಅಪಘಾತ : ಟ್ರಾಫಿಕ್ ಜಾಮ್‍ Read More »

ಮುಡಾ, ವಾಲ್ಮೀಕಿ ಹಗರಣದ ಮೂಲಕ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಾಗದೆ ಆಕ್ಸಿಜನ್ ಒಳಗೆ ಸೇರಿಕೊಂಡಿದೆ | ಪತ್ರಿಕಾಗೋಷ್ಠಿಯಲ್ಲಿ ನಳಿನ್ ಕುಮಾರ್ ಕಟೀಲ್

ಪುತ್ತೂರು: ಮುಡಾ, ವಾಲ್ಮೀಕಿ ಸೇರಿದಂತೆ ಹಲವಾರು ಹಗರಣದ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಾಗದೆ ಆಕ್ಸಿಜನ್ ಒಳಗೆ ಸೇರಿಕೊಂಡಿದೆ ಎಂದು ದ.ಕ.ಜಿಲ್ಲಾ ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ ಲೇವಡಿ ಮಾಡಿದ್ದಾರೆ. ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‍ ಸರಕಾರ ರಾಜ್ಯದಲ್ಲಿ ಒಂದೂವರೆ ವರ್ಷದಿಂದ ಭ್ರಷ್ಟಾಚಾರದಲ್ಲೇ ನಿರತರಾಗಿದ್ದಾರೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಜತೆಗೆ ಗಲಭೆಗಳನ್ನು ನಡೆಸುತ್ತಾ ಶಾಂತಿ

ಮುಡಾ, ವಾಲ್ಮೀಕಿ ಹಗರಣದ ಮೂಲಕ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಾಗದೆ ಆಕ್ಸಿಜನ್ ಒಳಗೆ ಸೇರಿಕೊಂಡಿದೆ | ಪತ್ರಿಕಾಗೋಷ್ಠಿಯಲ್ಲಿ ನಳಿನ್ ಕುಮಾರ್ ಕಟೀಲ್ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲಾ (RMS) ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತಾ ತರಗತಿ ಪ್ರಾರಂಭ | ಆನ್ಲೈನ್ ಮೂಲಕ ತರಬೇತಿ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ರವೇಶ ಪರೀಕ್ಷೆ(RMS)ಗೆ ಪೂರ್ವಭಾವಿಯಾಗಿ ತರಬೇತಿ ಪ್ರಾರಂಭಿಸಲಿದ್ದು, ಈಗಾಗಲೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಸೈನಿಕ ಶಾಲಾ ಪ್ರವೇಶ ಪರೀಕ್ಷೆ ಸೇರಿದಂತೆ ವಿವಿಧ ವಸತಿಯುಕ್ತ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ಸಂಸ್ಥೆಯ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ರಾಷ್ಟ್ರೀಯ ಮಿಲಿಟರಿ ಶಾಲೆ (RMS) ಪರೀಕ್ಷೆಯ ತರಬೇತಿ ತರಗತಿಗಳು ವಾರದಲ್ಲಿ 5 ದಿನ ರಾತ್ರಿ ಗಂಟೆ 8.00ರಿಂದ

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲಾ (RMS) ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತಾ ತರಗತಿ ಪ್ರಾರಂಭ | ಆನ್ಲೈನ್ ಮೂಲಕ ತರಬೇತಿ Read More »

ಅಶೋಕ‌ ಜನ-ಮನಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಆಹ್ವಾನ

ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ‌ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಯಿತು. ಶುಕ್ರವಾರ ಬೆಂಗಳೂರಿನಲ್ಲಿ ಇಬ್ಬರನ್ನು ಭೇಟಿಯಾದ ಶಾಸಕರು ಪುತ್ತೂರಿನ ಐತಿಹಾಸಿಕ ಈ ಕಾರ್ಯಕ್ರಮಕ್ಕೆ ಬಂದು ಹಾರೈಸುವಂತೆ ‌ಮನವಿ ಮಾಡಿದರು. ಕಾರ್ಯಕ್ರಮಕ್ಕೆ ಬರುವುದಾಗಿ ಇಬ್ಬರೂ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ. ವರ್ಷಂಪ್ರತಿ ದೀಪಾವಳಿ

ಅಶೋಕ‌ ಜನ-ಮನಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಆಹ್ವಾನ Read More »

error: Content is protected !!
Scroll to Top