ಪುತ್ತೂರು

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ

ಪುತ್ತೂರು: ನಗರದ ಪಡೀಲ್‌ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿ.ಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಜಿಂದಗಿ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೆ, ಮನೆಗೂ […]

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ Read More »

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿದ ಆರೋಪಿ ಬಂಧನ

ಟೋಕನ್‌ ವಿಚಾರದಲ್ಲಿ ಜಗಳವಾಡಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಪುತ್ತೂರು : ನಗರದ ದರ್ಬೆಯ ಇಎನ್‌ಟಿ ಕ್ಲಿನಿಕ್‌ನಲ್ಲಿ ಶನಿವಾರ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಅಋೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ದರ್ಬೆಯಲ್ಲಿರುವ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕ್ಲಿನಿಕ್ ಸಿಬ್ಬಂದಿ ಶ್ರೀಕಾಂತ್ ಹಲ್ಲೆಗೊಳಗಾದವರು ಶನಿವಾರ ಬೆಳಗ್ಗೆ 6.30ರ ವೇಳೆ ಬಂದ ಇಬ್ರಾಹೀಂ ತಮ್ಮ ಪರಿಚಯಸ್ಥರಿಗೆ ಆದ್ಯತೆ ನೀಡುವಂತೆ

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿದ ಆರೋಪಿ ಬಂಧನ Read More »

KSRTC ಯಲ್ಲಿನ ವೃತ್ತಿಯಿಂದ ನಿವೃತ್ತರಾಗಲಿರುವ ಸುರೇಶ್ ATI

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಸುರೇಶ್ ATI ಅವರು ನವೆಂಬರ್ 30 ರಂದು ಸೇವಾ ನಿವೃತ್ತಿಯನ್ನು ಹೊಂದುತ್ತಿದ್ದಾರೆ. 1989 ರಲ್ಲಿ ಮಂಗಳೂರು ವಿಭಾಗದಲ್ಲಿ ನಿರ್ವಾಹಕರಾಗಿ ಕಾರ್ಯ ಆರಂಭಿಸಿದ ಅವರು ಆ ಬಳಿಕ ತಮ್ಮ ಉತ್ತಮ ಸೇವೆಯ ಫಲವಾಗಿ ಸಹಾಯಕ ಸಂಚಾರ ನಿಯಂತ್ರಕರಾಗಿ ಮುಂಭಡ್ತಿ ಹೊಂದಿದ್ದರು. ಅವರ ಸೇವಾ ನಿವೃತ್ತಿಗೆ ‌ಶುಭ ಕೋರಿ ಪುತ್ತೂರು ಘಟಕದ ಎಲ್ಲಾ ಚಾಲಕರ ಪರವಾಗಿ ಪುತ್ತೂರು ಘಟಕದ ಚಾಲಕ ಬೋಧಕ ಪಿ. ವಿ.

KSRTC ಯಲ್ಲಿನ ವೃತ್ತಿಯಿಂದ ನಿವೃತ್ತರಾಗಲಿರುವ ಸುರೇಶ್ ATI Read More »

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ

ಪುತ್ತೂರು : ಕ್ಲಿನಿಕ್‌ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕ್ಲಿನಿಕ್‌ ಒಳಗೆ ದಾಂಧಲೆ ಎಸಗಿದ ಘಟನೆ ಶನಿವಾರ ಬೆಳಗ್ಗೆ ಪುತ್ತೂರಿನಲ್ಲಿ ಸಂಭವಿಸಿದೆ. ನಗರದ ದರ್ಬೆಯ ಗಣೇಶ್‌ ಕಾಂಪ್ಲೆಕ್ಸ್‌ನಲ್ಲಿರುವ ಡಾ.ರಾಮ್‌ಮೋಹನ್‌ ಎಂಬವರ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿದೆ. ದಿನವಡೀ ರೋಗಿಗಳಿಂದ ತುಂಬಿರುವ ಈ ಕ್ಲಿನಿಕ್‌ನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಟೋಕನ್‌ ನೀಡುವ ವ್ಯವಸ್ಥೆಯಿದೆ. ಇಂದು ಬೆಳಗ್ಗೆ 6.30ರ ವೇಳೆಗೆ ಕ್ಲಿನಿಕ್‌ ಮುಂಭಾಗದ ರಸ್ತೆಯ ಪಾರ್ಕಿಂಗ್‌ ಶುಲ್ಕ ಸಂಗ್ರಹಿಸುವ ವ್ಯಕ್ತಿ ಬಂದು ತನ್ನ ಪರಿಚಯದವರಿಗೆ ಬೇಗ ಹೋಗುವ ಟೋಕನ್‌ ನೀಡದಿರುವ

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ Read More »

ವಿಟ್ಲ : ಎಟಿಎಂ ಕಾರ್ಡ್‌ ಪಡೆದು ಮಹಿಳೆಗೆ ಲಕ್ಷಕ್ಕೂ ಅಧಿಕ ವಂಚನೆ

ವಿಟ್ಲ : ಅಪರಿಚಿತ ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬರಿಂದ ಎಟಿಎಂ ಕಾರ್ಡ್‌ ಪಡೆದು ಲಕ್ಷಾಂತರ ರೂ. ವಂಚಿಸಿದ ಘಟನೆ ವಿಟ್ಲದಲ್ಲಿ ಶುಕ್ರವಾರ ನಡೆದಿದೆ. ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ಮಹಿಳೆ ವಿಟ್ಲಕಸಬಾ ಗ್ರಾಮದ ಫಾತಿಮ ಬಿಲ್ಡಿಂಗ್‌ನಲ್ಲಿರುವ ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ತೆರಳಿ 6,000 ರೂ. ಡ್ರಾ ಮಾಡಿ ಹೊರಗಡೆ ಬರುತ್ತಿದ್ದ ಸಂದರ್ಭ ಎಟಿಎಂ ಕೇಂದ್ರದ ಒಳಗಡೆಯಿದ್ದ ಅಪರಿಚಿತ ವ್ಯಕ್ತಿಗಳು ಮಹಿಳೆಯನ್ನು ಕರೆದು ಎಟಿಎಂ ಅನ್ನು ಸರಿಯಾಗಿ ಮುಚ್ಚಬೇಕೆಂದು ಹೇಳಿದ್ದಾರೆ. ಅದರಂತೆ ಮಹಿಳೆ ಕೇಂದ್ರದ ಒಳಗೆ ಹೋಗಿ ನೋಡಿ ಹೊರಗಡೆ ಬರುವಾಗ

ವಿಟ್ಲ : ಎಟಿಎಂ ಕಾರ್ಡ್‌ ಪಡೆದು ಮಹಿಳೆಗೆ ಲಕ್ಷಕ್ಕೂ ಅಧಿಕ ವಂಚನೆ Read More »

ಬಿಜೆಪಿ ಹುದ್ದೆಯಿಂದ ಪುತ್ತಿಲ ಪರಿವಾರದವರಿಗೆ ಕೊಕ್‌

ಪುತ್ತೂರು ರಾಜಕೀಯದಲ್ಲಿ ಕುತೂಹಲ ಕೆರಳಿಸಿದ ದಿಢೀರ್‌ ಬೆಳವಣಿಗೆ ಪುತ್ತೂರು: ಪುತ್ತೂರಿನ ಗ್ರಾಮಾಂತರ ಮತ್ತು ನಗರ ಮಂಡಲಗಳನ್ನು ಐಕ್ಯಗೊಳಿಸಿ ಅಖಂಡ ಪುತ್ತೂರು ಮಂಡಲ ರಚಿಸಿ ನನನ್ನು ಅಧ್ಯಕ್ಷನನ್ನಾಗಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಪುತ್ತೂರಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ತೋರಿಸುತ್ತೇನೆ ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಮುಂದಿಟ್ಟಿದ್ದ ಬೇಡಿಕೆಯನ್ನು ಜಿಲ್ಲಾ ಬಿಜೆಪಿ ನಿರಾಕರಿಸಿದ ಬೆನ್ನಲ್ಲೇ, ಇದೀಗ ಪುತ್ತಿಲ ಪರಿವಾರಕ್ಕೆ ಮತ್ತೊಂದು ಶಾಕ್‌ ನೀಡಿದೆ. ಪುತ್ತಿಲ ಪರಿವಾರದಿಂದ ಬಿಜೆಪಿ ಪದಾಧಿಕಾರಿ ಹುದ್ದೆಗೆ ಸ್ಥಳಾಂತರಗೊಂಡಿದ್ದ ಮೂವರನ್ನು ಆ ಹುದ್ದೆಗಳಿಂದ

ಬಿಜೆಪಿ ಹುದ್ದೆಯಿಂದ ಪುತ್ತಿಲ ಪರಿವಾರದವರಿಗೆ ಕೊಕ್‌ Read More »

ಮಹಿಳೆಯರಿಗೆ ಡ್ರೋನ್ ಹಾರಿಸುವ ಉಚಿತ ತರಬೇತಿಗೆ ಸಂದರ್ಶನ

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್, ಪುತ್ತೂರು, ಅರಸ್ ಟ್ರಸ್ಟ್, ಪುತ್ತೂರು ಮತ್ತು ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಮಹಿಳೆಯರಿಗಾಗಿ ನಡೆಯಲಿರುವ ಡ್ರೋನ್ ಹಾರಿಸುವ ಅತ್ಯುನ್ನತ ದರ್ಜೆಯ 12 ದಿನಗಳ ಉಚಿತ ತರಬೇತಿಗೆ ಸಂದರ್ಶನ ನಡೆಯಲಿದೆ. ಸಂದರ್ಶನ ಯಾವಾಗ, ಎಲ್ಲಿ, ಎಷ್ಟೊತ್ತಿಗೆ? ಯಾರು ಅರ್ಹರು? ಸಂದರ್ಶನಕ್ಕೆ ಹಾಜರಾಗುವಾಗ ಏನೇನು ತರಬೇಕು? ತರಬೇತಿಯ ಪ್ರಯೋಜನ ತರಬೇತಿ ಯಾವಾಗ?2025ರ ದಶಂಬರ ತಿಂಗಳ ಎರಡನೇ ವಾರದಲ್ಲಿ ತರಬೇತಿ ನಡೆಯಲಿದೆ. ಆಸಕ್ತ ಮಹಿಳೆಯರು 9448725813 / 8217595631 ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಮಹಿಳೆಯರಿಗೆ ಡ್ರೋನ್ ಹಾರಿಸುವ ಉಚಿತ ತರಬೇತಿಗೆ ಸಂದರ್ಶನ Read More »

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ

ಬೆಳ್ತಂಗಡಿ: ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವೇಣೂರಿನ ‌ಮಹಮ್ಮದ್ ಇರ್ಷಾದ್ ಮತ್ತು ಪಡಂಗಡಿಯ ಸಾದಿಕ್ ಖಾನ್ ಬಂಧಿತ‌ ಆರೋಪಿಗಳು. ಬೆಳ್ತಂಗಡಿ ಕುಕ್ಕೇಡಿಯ ಸಂಪತ್ ಕುಮಾರ್ ಎಂಬವರಿಗೆ ‌ಸೇರಿದ ವಾಹನ ಇದಾಗಿತ್ತು. ಆರೋಪಿಗಳಿಂದ ಪೊಲೀಸರು ಕದ್ದೊಯ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ Read More »

ಸ್ವಚ್ಛತೆ ಮತ್ತು ಆರೋಗ್ಯ ಸೇವಾ ಕಾರ್ಯಗಳಿಗೆ ಮಹತ್ವ: ಕೆಯ್ಯೂರು ನಾರಾಯಣ ಭಟ್

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಇದರ ಕೇಂದ್ರ ಸಮಿತಿಯ ಸಭೆಯನ್ನುಬೊಳುವಾರು ಬೈಲಿನ ಸೌಭರಿ ನಿವಾಸದಲ್ಲಿ ಸದಾನಂದ ರಾವ್ ಮತ್ತು ವನಿತಾ ಎಸ್ ರಾವ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಯ್ಯೂರು ನಾರಾಯಣ ಭಟ್ ಮಾತನಾಡಿ, ಅನಾರೋಗ್ಯದ ಸಂದರ್ಭಗಳಲ್ಲಿ ಚಿಕಿತ್ಸೆ ಪಡೆಯಲು ನಾನಾ ಸೌಲಭ್ಯಗಳಿದ್ದರೂ ಅದನ್ನು ಪಡೆಯುವಲ್ಲಿ ಎದುರಾಗುವ ಸಮಸ್ಯೆಗಳು, ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಟ, ರೋಗಿಯ ಜೀವ ಉಳಿಸಲು ಕುಟುಂಬದ ಸದಸ್ಯರು ಎದುರಿಸುವ ಸಮಸ್ಯೆಗಳನ್ನು ನೋಡಿದಾಗ

ಸ್ವಚ್ಛತೆ ಮತ್ತು ಆರೋಗ್ಯ ಸೇವಾ ಕಾರ್ಯಗಳಿಗೆ ಮಹತ್ವ: ಕೆಯ್ಯೂರು ನಾರಾಯಣ ಭಟ್ Read More »

ಅಕ್ಷಯ ಪದವಿ ಕಾಲೇಜು: “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ:

ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದಅಟರ್ನೆಸ್ 2K25 ಪಿಯು ಫೆಸ್ಟ್ ಅತ್ಯುತ್ತಮವಾಗಿ ಸಂಪನ್ನಗೊಂಡಿತು. 18 ಕಾಲೇಜುಗಳಿಂದ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಸ್ಟ್ ನಲ್ಲಿ ಭಾಗವಹಿಸಿದ್ದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಕಬಡ್ಡಿ ತರಬೇತುದಾರ ಪ್ರಶಾಂತ್ ರೈ ಕೈಕಾರ (ಮ್ಯಾನೇಜರ್, ಬ್ಯಾಂಕ್ ಆಫ್ ಬರೋಡ ಪುತ್ತೂರು) ಆಗಮಿಸಿದ್ದು, ಅವರನ್ನು ಕ್ರೀಡಾ ಸಾಧನೆಗಾಗಿ ಸನ್ಮಾನಿಸಲಾಯಿತು.

ಅಕ್ಷಯ ಪದವಿ ಕಾಲೇಜು: “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ: Read More »

error: Content is protected !!
Scroll to Top