ಪುತ್ತೂರು

ವಿಧಾನ ಪರಿಷತ್ ಉಪಚುನಾವಣೆ : ಪುತ್ತೂರಿನಲ್ಲಿ ಜನಪ್ರತಿನಿಧಿ, ಕಾರ್ಯಕರ್ತರ ಸಮಾವೇಶ | ಈ ಬಾರಿಯ ಉಪಚುನಾವಣೆ ಕರ್ನಾಟಕಕ್ಕೆ ದಿಕ್ಸೂಚಿ ನೀಡುವ ಚುನಾವಣೆ : ಕ್ಯಾ.ಬ್ರಿಜೇಶ್‍ ಚೌಟ

ಪುತ್ತೂರು: ಈ ಬಾರಿಯ ವಿಧಾನ ಪರಿಷತ್ ಉಪಚುನಾವಣೆ ಕರ್ನಾಟಕಕ್ಕೆ ದಿಕ್ಸೂಚಿ ಕೊಡುವಂತಹ ಚುನಾವಣೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಹೇಳಿದರು. ಅವರು ಭಾನುವಾರ ನಗರದ ಜೈನಭವನದಲ್ಲಿ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಕಾರ್ಯಕರ್ತರಿಗಾಗಿ, ಕಾರ್ಯಕರ್ತರಿಂದ ಕಾರ್ಯಕರ್ತರನ್ನು ಆರಿಸುವ ಚುನಾವಣೆ ಇದಾಗಿದ್ದು, ಈ ಸ್ಥಾನಕ್ಕೆ ನ್ಯಾಯ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ ಸ್ಥಾನಕ್ಕೆ, ಸ್ಥಳೀಯ ಜನಪ್ರತಿನಿಧಿಗಳ ಸಮಸ್ಯೆಗಳಿಗೆ ಧ್ವನಿವಾಗಲು ಕಿಶೋರ್ […]

ವಿಧಾನ ಪರಿಷತ್ ಉಪಚುನಾವಣೆ : ಪುತ್ತೂರಿನಲ್ಲಿ ಜನಪ್ರತಿನಿಧಿ, ಕಾರ್ಯಕರ್ತರ ಸಮಾವೇಶ | ಈ ಬಾರಿಯ ಉಪಚುನಾವಣೆ ಕರ್ನಾಟಕಕ್ಕೆ ದಿಕ್ಸೂಚಿ ನೀಡುವ ಚುನಾವಣೆ : ಕ್ಯಾ.ಬ್ರಿಜೇಶ್‍ ಚೌಟ Read More »

ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್ ಉಮೇಶ್ ಗೌಡ ನಿಧನ

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್, ಕೊಂಬೆಟ್ಟು ನಿವಾಸಿ ಉಮೇಶ್‍ ಗೌಡ (72) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಮಾರು 38 ವರ್ಷಗಳ ಕಾಲ ಕೇಂದ್ರ ಸಹಕಾರಿ ಬ್ಯಾಂಕ್‍ ನಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದರು. ಬೆಂಗಳೂರಿನಲ್ಲಿದ್ದ ಅವರು ಅಲ್ಲಿ ಹೃದಯಾಘಾತದಿಂದ ಶನಿವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕೇಂದ್ರ ಸಹಕಾರಿ ಬ್ಯಾಂಕ್‍ ಪುತ್ತೂರು ಶಾಖಾ ನಿವೃತ್ತ ಮ್ಯಾನೇಜರ್ ಉಮೇಶ್ ಗೌಡ ನಿಧನ Read More »

ಉಪನ್ಯಾಸಕಿ, ಲೇಖಕಿ ಉಷಾ ಕೆ. ಅವರ ಕೃತಿ ‘ತೆರೆದ ಗವಾಕ್ಷಿ’ ಲೋಕಾರ್ಪಣೆ

ಪುತ್ತೂರು: ಕಳೆದ 35 ವರ್ಷಗಳಿಂದ ಉಪನ್ಯಾಸಕಿಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಉಷಾ ಕೆ.  ಅವರು ನಿರಂತರವಾಗಿ ಪತ್ರಿಕೆಗಳಲ್ಲಿ ಪ್ರಕಟಿಸುತ್ತಿದ್ದ ವೈಚಾರಿಕ – ಮಾನವೀಯ ಮೌಲ್ಯಗಳುಳ್ಳ ಲೇಖನಗಳ ಸಂಗ್ರಹ ‘ತೆರೆದ ಗವಾಕ್ಷಿ’ ಕೃತಿ ಪುತ್ತೂರಿನ ಅನುರಾಗ ವಠಾರದಲ್ಲಿ ಲೋಕಾರ್ಪಣೆಗೊಂಡಿತು. ರಾಜೇಶ್‍ ಪವರ್ ಪ್ರೆಸ್ ಮಾಲಕ ರಘುನಾಥ ರಾವ್ ಕೃತಿ ಲೋಕಾರ್ಪಣೆ ಗೊಳಿಸಿದರು. ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಕೃತಿ ಕುರಿತು, ಸಾರಸ್ವತ ಸೌರಭದ ವ್ಯವಸ್ಥಾಪಕ ಸಂಪಾದಕ ಸುಳ್ಳಿ ರಾಧಾಕೃಷ್ಣ ನಾಯಕ್ ಕೃತಿಕಾರರ ಕುರಿತು  ಮಾತನಾಡಿದರು. ಹಿರಿಯ

ಉಪನ್ಯಾಸಕಿ, ಲೇಖಕಿ ಉಷಾ ಕೆ. ಅವರ ಕೃತಿ ‘ತೆರೆದ ಗವಾಕ್ಷಿ’ ಲೋಕಾರ್ಪಣೆ Read More »

ಇತಿಹಾಸ ಪ್ರಸಿದ್ಧ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ | ಕರ್ನಾಟಕ-ಕೇರಳದ ಕಲಾತಂಡಗಳ ಆಕರ್ಷಣೀಯ ಪ್ರದರ್ಶನ.

ಪುತ್ತೂರು: ನವರಾತ್ರಿ ಉತ್ಸವದ ಹಿನ್ನಲೆಯಲ್ಲಿ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆಸಲಾಗುತ್ತಿರುವ 90 ನೇ ವರ್ಷದ ಶ್ರೀ ಶಾರದೋತ್ಸವದ ಅದ್ದೂರಿ ಶೋಭಾಯಾತ್ರೆಯು ಶನಿವಾರ ಸಂಜೆ ನಡೆಯಿತು.  ಶೋಭಾಯಾತ್ರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕೇರಳದ ಕೇರಳದ ಪಂದಳಾಟಮ್, ಸಿಂಗಾರಿ ಕಾವಡಿ, ಕಥಕ್ಕಳಿ, ಮಹಿಳಾ ಸಿಂಗಾರಿ ಮೇಳಮ್, ತಿರಾಯಾಟ್ಟಮ್, ಸಿಂಗಾರಿ ಮೇಳ ಕಲಾತಂಡಗಳು ಭಾಗವಹಿಸಿತ್ತು.  ಇದರೊಂದಿಗೆ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಕಡೆಗಳ ಕಲಾತಂಡ ಭಜನಾ ತಂಡಗಳು ಪಾಲ್ಗೊಂಡಿತ್ತು, , ಮಹಿಳೆಯರಿಂದ ವೇದಘೋಷ, ಚೆಂಡೆ ಮೇಳ, ವಾದ್ಯಘೋಷ,

ಇತಿಹಾಸ ಪ್ರಸಿದ್ಧ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ | ಕರ್ನಾಟಕ-ಕೇರಳದ ಕಲಾತಂಡಗಳ ಆಕರ್ಷಣೀಯ ಪ್ರದರ್ಶನ. Read More »

ಆಲಂಕಾರಿನಲ್ಲಿ ‘ದೈವಾನುಗ್ರಹ’ ಮೆಡಿಕಲ್ ಶುಭಾರಂಭ

ಆಲಂಕಾರು: ನೂತನ ‘ದೈವಾನುಗ್ರಹ ಮೆಡಿಕಲ್’ ಇಂದು ಆಲಂಕಾರಿನಲ್ಲಿ ಶುಭಾರಂಭಗೊಂಡಿತು. ಮಾಜಿ ಸಚಿವ ಎಸ್‍.ಅಂಗಾರ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ರಿಬ್ಬನ್ ಕಟ್‍ ಮಾಡುವ ಮೂಲಕ ಉದ್ಘಾಟಿಸಿದರು. ಭಾಸ್ಕರ ಗೌಡ ದೇವಸ್ಯ ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶಿಲಾ, ಪ್ರವೀಣ್‍ ಕುಂಟ್ಯಾನ, ಜಿನ್ನಪ್ಪ ಮಳುವೇಲು, ಪಂಚಾಯಿತಿ ಉಪಾಧ್ಯಕ್ಷ ರವಿ, ಆಶಾ ತಿಮ್ಮಪ್ಪ, ದಾಮೋದರ ಗೌಡ ಕಕ್ವೆ, ಸುಚಿತಾ ಬರೆಂಬೆಟ್ಟು, ಪ್ರದೀಪ್‍ ರೈ

ಆಲಂಕಾರಿನಲ್ಲಿ ‘ದೈವಾನುಗ್ರಹ’ ಮೆಡಿಕಲ್ ಶುಭಾರಂಭ Read More »

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ | ಬಿಜೆಪಿ ಪ್ರಮುಖರ ಸಭೆ

ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಅ.21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ಉಡುಪಿ – ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸದಸ್ಯರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಈ ಸ್ಥಾನಕ್ಕೆ ಉಪಚುನಾವಣೆ

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ | ಬಿಜೆಪಿ ಪ್ರಮುಖರ ಸಭೆ Read More »

ಹಿಂದೂ ಯುವಕನಿಗೆ ಅನ್ಯ ಧರ್ಮದ ಯುವಕರಿಂದ ಹಲ್ಲೆ! | ಹಲ್ಲೆ ನಡೆಸಿದ ನಾಲ್ವರು ಪೊಲೀಸ್ ವಶಕ್ಕೆ !

ಪುತ್ತೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಸುಳ್ಯದ ಹಿಂದೂ ಯುವಕನಿಗೆ ಅದೇ ರೈಲಿನಲ್ಲಿ ಬಂದ ಅನ್ಯ ಧರ್ಮದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಆದ್ರೆ ತತ್ ಕ್ಷಣ ಎಚ್ಚೆತ್ತ ಪುತ್ತೂರು ಪೊಲೀಸರು ಹಲ್ಲೆ ನಡೆಸಿ ಪರಾರಿಯಾದ ನಾಲ್ವರನ್ನು  ಸಾಲ್ಮರ ಮಸೀದಿ ಬಳಿಯಿಂದ ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಪುತ್ತೂರು ಆಗಿ ಮಂಗಳೂರು ಕಡೆ ಹೋಗುವ ರೈಲಿನಲ್ಲಿ ಕೆಲ ಮಂದಿ ಗಲಾಟೆ ಮಾಡುತ್ತಿರುವುದನ್ನು ಯುವಕನೊಬ್ಬ

ಹಿಂದೂ ಯುವಕನಿಗೆ ಅನ್ಯ ಧರ್ಮದ ಯುವಕರಿಂದ ಹಲ್ಲೆ! | ಹಲ್ಲೆ ನಡೆಸಿದ ನಾಲ್ವರು ಪೊಲೀಸ್ ವಶಕ್ಕೆ ! Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧಪೂಜೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧಪೂಜೆ ಶನಿವಾರ ಬೆಳಿಗ್ಗೆ ನಡೆಯಿತು. ದೇವಾಲಯದ ಅರ್ಚಕರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸ್ಥಳೀಯ ಹಲವಾರು ಭಕ್ತಾದಿಗಳು ತಮ್ಮ ವಾಹನಗಳನ್ನು ಸಿಂಗರಿಸಿ ಪೂಜೆ ಮಾಡಿಸಿದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧಪೂಜೆ Read More »

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ : ಚಾಲಕ ಮೃತ್ಯು

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಇಂದು ನಸುಕಿನ ಜಾವ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ : ಚಾಲಕ ಮೃತ್ಯು Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನಲ್ಲಿ ಶ್ರೀ ಶಾರದಾ ಪೂಜೆ, ವಾಹನ ಪೂಜೆ

ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಇಂದು ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆಗಳೊಂದಿಗೆ ವಾಹನ ಪೂಜೆ ಹಾಗೂ ವೈದಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆದವು. ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿತ್ಯ ಚಪಾತಿಯ ರಾಧಾಕೃಷ್ಣ ಇಟ್ಟಿಗುಂಡಿ ಶಾರದಾ ಪೂಜೆ ಹಾಗೂ ಆಯುಧ ಪೂಜೆಗಳ ಮಹತ್ವಗಳನ್ನೂ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಎ.ವಿ. ನಾರಾಯಣರವರು ಎವಿಜಿ ಅಸೋಸಿಯೇಟ್ಸ್’ನ ಹಿರಿಯ ಕಾರ್ಮಿಕರ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನಲ್ಲಿ ಶ್ರೀ ಶಾರದಾ ಪೂಜೆ, ವಾಹನ ಪೂಜೆ Read More »

error: Content is protected !!
Scroll to Top