ಪುತ್ತೂರು

ಮಲಗಿದಲ್ಲೇ ವ್ಯಕ್ತಿ ಸಾವು

ಸುಳ್ಯ; ಮಲಗಿದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಾಳುಗೋಡಿನ ಕಿರಿಭಾಗದಲ್ಲಿ ನಡೆದಿದೆ. ಕಿರಿಭಾಗದ ದಿ. ಸೀತಾರಾಮ ಗೌಡ ಎಂಬವರ ಪುತ್ರ ಪವಿತ್ ಕಿರಿಭಾಗ (35) ಮೃತಪಟ್ಟವರು. ಪವಿತ್ ಹಾಗೂ ಅವರ ತಾಯಿ ಇಬ್ಬರೇ ಮನೆಯಲ್ಲಿ ವಾಸವಿದ್ದು ಅವರ ತಾಯಿ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿರುವ ತಮ್ಮ ಮಗಳ ಮನೆಗೆ ತೆರಳಿದ್ದರು. ಪವಿತ್ ಒಬ್ಬರೇ ಮನೆಯಲ್ಲಿದ್ದರು. ಅತಿಯಾದ ಮದ್ಯ ಸೇವನೆ ಮಾಡುತ್ತಿದ್ದ ಪವಿತ್ ಕುಡಿದು ಮಲಗಿದವರು ಅಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮಲಗಿದಲ್ಲೇ ವ್ಯಕ್ತಿ ಸಾವು Read More »

ಪುತ್ತೂರು ಬಿಜೆಪಿಯಿಂದ ಚುನಾವಣಾ ಸಂಚಾಲಕ, ಸಹ ಸಂಚಾಲಕರ ನೇಮಕ

ಪುತ್ತೂರು: ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ಗ್ರಾಮಾಂತರ ಮಂಡಲ ನಿಕಟಪೂರ್ವ ಪ್ರ.ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ಹಾಗೂ ಸಹ ಸಂಚಾಲಕರಾಗಿ ನಗರ ಮಂಡಲ ಉಪಾಧ್ಯಕ್ಷ ಸಂತೋಷ್ ಕುಮಾರ್ ಕೈಕಾರ ಅವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರು ನಿಯುಕ್ತಿಗೊಳಿಸಿರುತ್ತಾರೆ. ಅಕ್ಟೋಬರ್ 21 ರಂದು

ಪುತ್ತೂರು ಬಿಜೆಪಿಯಿಂದ ಚುನಾವಣಾ ಸಂಚಾಲಕ, ಸಹ ಸಂಚಾಲಕರ ನೇಮಕ Read More »

ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ | ಎಸ್. ಜಿ. ಎಫ್. ಐ ಗೆ ಆಯ್ಕೆ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇಯ ವಿದ್ಯಾರ್ಥಿಗಳು ಮಧ್ಯಪ್ರದೇಶದ ಮಂಡ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ  ಮುಂದಿನ ಹಂತ ಎಸ್. ಜಿ. ಎಫ್. ಐ (ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ) ಗೆ ಆಯ್ಕೆಗೊಂಡಿದ್ದಾರೆ. 10ನೇ ತರಗತಿ ವರ್ಧಿನ್ ದೀಪಕ್ ರೈ 50 ಮೀ. ಬಟರ್ ಪ್ಲೈಯ ಲ್ಲಿ ಚಿನ್ನ, 50 ಮೀ.  ಬ್ರೆಸ್ಟ್ ಸ್ಟ್ರೋಕ್‌ ನಲ್ಲಿ ಬೆಳ್ಳಿ ಹಾಗೂ 100 ಮೀ.

ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ | ಎಸ್. ಜಿ. ಎಫ್. ಐ ಗೆ ಆಯ್ಕೆ Read More »

ಪಿಕ್‍ ಅಪ್ – ಬೈಕ್ ಡಿಕ್ಕಿ : ಬೈಕ್‍ ಸವಾರರಿಬ್ಬರಿಗೆ ಗಂಭೀರ ಗಾಯ

ಸವಣೂರು: ಪಿಕ್ ಅಪ್ ಮತ್ತು ಬೈಕ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಇಂದು ನಡೆದಿದೆ. ಘಟನೆಯಿಂದ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಾಳುಗಳಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಪಿಕ್‍ ಅಪ್ – ಬೈಕ್ ಡಿಕ್ಕಿ : ಬೈಕ್‍ ಸವಾರರಿಬ್ಬರಿಗೆ ಗಂಭೀರ ಗಾಯ Read More »

ಪ್ರತಿಷ್ಠಿತ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ನವರಾತ್ರಿ ಪ್ರಯುಕ್ತ ‘ಜಿ.ಎಲ್‍.ಸ್ವರ್ಣಹಬ್ಬ’ ಕ್ಕೆ ಚಾಲನೆ | ವಜ್ರ, ಚಿನ್ನ, ಬೆಳ್ಳಿ ಆಭರಣಗಳ ಖರೀದಿಗೆ ಭಾರೀ ರಿಯಾಯಿತಿ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ‘ಜಿ.ಎಲ್‍.ಆಚಾರ್ಯ’ ಜ್ಯುವೆಲ್ಲರ್ಸ್‍ ನಲ್ಲಿ ನವರಾತ್ರಿ ಪ್ರಯುಕ್ತ ‘ಜಿ.ಎಲ್‍.ಸ್ವರ್ಣಹಬ್ಬ’ಕ್ಕೆ ಇಂದು ಚಾಲನೆ ನೀಡಲಾಯಿತು. ಪುತ್ತೂರಿನ ಶುಶ್ರುತ ಆರ್ಯುವೇದ ಆಸ್ಪತ್ರೆಯ ಮಾಲಕರಾದ ಡಾ.ರವಿಶಂಕರ್ ಪೆರುವಾಜೆ ಹಾಗೂ ಡಾ.ಜಯಶ್ರೀ ಆರ್‍.ಪೆರುವಾಜೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಬಲರಾಮ ಆಚಾರ್ಯ ಹಾಗೂ ರಾಜೇಶ್ವರಿ ಬಲರಾಮ ಆಚಾರ್ಯ ಉಪಸ್ಥಿತರಿದ್ದರು. ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆ ಪ್ರಕಟಿಸಿದ್ದು, ವಜ್ರದ ಆಭರಗಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಅದ್ಭುತ

ಪ್ರತಿಷ್ಠಿತ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ನವರಾತ್ರಿ ಪ್ರಯುಕ್ತ ‘ಜಿ.ಎಲ್‍.ಸ್ವರ್ಣಹಬ್ಬ’ ಕ್ಕೆ ಚಾಲನೆ | ವಜ್ರ, ಚಿನ್ನ, ಬೆಳ್ಳಿ ಆಭರಣಗಳ ಖರೀದಿಗೆ ಭಾರೀ ರಿಯಾಯಿತಿ Read More »

ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ | ಭಾಗಿಯಾದ ವಿದ್ಯಾಮಾತಾ ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯಲ್ಲಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ದ್ವಾರಕಾ ಕನ್‍ ಸ್ಟ್ರಕ್ಷನ್ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್, ಭವಿಷ್ಯದ ಯೋಧರಿಗೆ ಭದ್ರ ಬುನಾದಿ ಹಾಕುತ್ತಿರುವ ವಿದ್ಯಾಮಾತಾ ಅಕಾಡೆಮಿಗೆ ಸದಾ ನಾವು ಬೆನ್ನೆಲುಬಾಗಿ ನಿಂತು ಗ್ರಾಮೀಣ ಪ್ರದೇಶದ ಯುವ ಜನತೆ ದೇಶ ಸೇವೆಗೆ ಸೇರುವ ಕನಸನ್ನು ನನಸಾಗಿಸಲು

ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ | ಭಾಗಿಯಾದ ವಿದ್ಯಾಮಾತಾ ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು Read More »

ಮನೆಯಿಂದ ಹೊರಟು ಹೋದ ವಿದ್ಯಾರ್ಥಿ ಮನೋಜ್‍ ನಾಪತ್ತೆ

ಪುತ್ತೂರು: ಮನೆಯಿಂದ ಹೊರಹೋದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಹರುನಗರದ ಗಣೇಶ್ ಬಾಗ್‍ ನ ಲಕ್ಷ್ಮೀ ಪ್ರಸಾದ್ ಕಂಪೌಂಡ್‍ ನಿವಾಸಿ ದಿ.ಕೇಶವಮೂರ್ತಿ ಎಂಬವರ ಪುತ್ರ ಮನೋಜ್ (20) ನಾಪತ್ತೆಯಾದ ವಿದ್ಯಾರ್ಥಿ. ಸಂತ ಫಿಲೋಮಿನಾ ಕಾಲೇಜಿನ 2ನೇ ವರ್ಷದ ಬಿಎಸ್ಸಿ ಪದವಿ ವಿದ್ಯಾರ್ಥಿಯಾಗಿದ್ದ ಮನೋಜ್‍ ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಬಳಿಕ ಮನೆಗೆ ಹಿಂತಿರುಗಿಲ್ಲ. ಸಂಬಂಧಿಕರಲ್ಲಿ, ಸುತ್ತಮುತ್ತಲಿನವರಲ್ಲಿ ವಿಚಾರಿಸಿದರೂ ಪತ್ತೆಯಾಗಿಲ್ಲ.ಆತನ ಮೊಬೈಲ್‍ ಸ್ವಿಚ್‍ ಆಫ್‍ ಆಗಿದೆ.  ಈ ಕುರಿತು

ಮನೆಯಿಂದ ಹೊರಟು ಹೋದ ವಿದ್ಯಾರ್ಥಿ ಮನೋಜ್‍ ನಾಪತ್ತೆ Read More »

ಇಂಜಿನಿಯರಿಂಗ್, ಮೆಡಿಕಲ್ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | “ಪ್ರೇರಣಾ” ಪುತ್ತೂರು ಸಂಸ್ಥೆಯಲ್ಲಿ NEET/JEE/CET ತರಗತಿಗಳು ಪ್ರಾರಂಭ

ಪುತ್ತೂರು: ಪ್ರತಿಷ್ಠಿತ ಪ್ರೇರಣಾ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆಗಳಾದ NEET/CET/JEE  ತರಗತಿಗಳು ಪ್ರಾರಂಭಗೊಂಡಿದ್ದು, ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗುವುದು. ತರಬೇತಿಯನ್ನು “ಪ್ರೇರಣಾ” ಸಂಸ್ಥೆಯಲ್ಲಿ ನೀಡಲಾಗುವುದು. ಪುತ್ತೂರಿನ ಹೃದಯ ಭಾಗದಲ್ಲಿರುವ “ಪ್ರೇರಣಾ” ಸುಸಜ್ಜಿತ ಹವಾನಿಯಂತ್ರಿತ ತರಗತಿ ಕೊಠಡಿ, ಅನುಭವಿ ಉಪನ್ಯಾಸಕ ವರ್ಗವನ್ನು ಹೊಂದಿದ್ದು ಆಸಕ್ತ ವಿದ್ಯಾರ್ಥಿಗಳು ಕೂಡಲೇ ಈ ಲಿಂಕ್‍ ನಲ್ಲಿ ತಮ್ಮ ಹೆಸರು ನೋಂದಾಯಿಸಬಹುದು. ( https://myprerana.in/2024/10/03/neet-cet-jee-foundation-classes-for-i-and-ii-pu-going-students/ ) ಮತ್ತು ಕಚೇರಿಗೂ ಸಂಪರ್ಕಿಸಲು ಕೋರಲಾಗಿದೆ. ವಿಳಾಸ: ಮೊದಲ ಮಹಡಿ, ಪ್ರಭು ಬಿಲ್ಡಿಂಗ್‍,

ಇಂಜಿನಿಯರಿಂಗ್, ಮೆಡಿಕಲ್ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | “ಪ್ರೇರಣಾ” ಪುತ್ತೂರು ಸಂಸ್ಥೆಯಲ್ಲಿ NEET/JEE/CET ತರಗತಿಗಳು ಪ್ರಾರಂಭ Read More »

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಿ : ಸೌತಡ್ಕದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ

ಕೊಕ್ಕಡ: ದೇವಾಲಯಗಳನ್ನು ಸರ್ಕಾರೀಕರಣದಿಂದ ಮುಕ್ತಗೊಳಿಸುವಂತೆ ಹಾಗೂ ಪ್ರತ್ಯೇಕ ಸ್ವಾಯತ್ತ ಮಂಡಳಿ ರಚಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ ಇದರ ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹ  ಭಾನುವಾರ ಬೆಳಗ್ಗಿನಿಂದ ಸಂಜೆಯ ವರೆಗೆ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನಡೆಯಿತು. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಚುನಾಯಿತ ಸರಕಾರ ವ್ಯಾಪಾರ ಕೇಂದ್ರಗಳಂತೆ ನಡೆಸುತ್ತಿರುವುದು ಹಿಂದೂಗಳ ಮನಸ್ಸಿಗೆ ಘಾಸಿಯನ್ನುಟು ಮಾಡಿದೆ. ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಿಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ ಹಿಂದೂ ಧಾರ್ಮಿಕ ಧತ್ತಿ

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಿ : ಸೌತಡ್ಕದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ Read More »

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಶಾರದಾ ಪೂಜೆ | ಅಕ್ಷರವನ್ನು ಆರಾಧಿಸುವ ಪರಂಪರೆ ನಮ್ಮದೆಂಬುದು ಹೆಮ್ಮೆ : ರಾಕೇಶ ಕಮ್ಮಜೆ

ಪುತ್ತೂರು: ಯಾರೂ ಅಕ್ಷರದ್ವೇಷಿಗಳಾಗಬಾರದು. ಅಕ್ಷರವನ್ನು ಪ್ರೀತಿಸುತ್ತಾ ಸಾಗಿದಂತೆ ನಮ್ಮ ಜ್ಞಾನ ವೃದ್ಧಿಯಾಗುತ್ತಾ ಹೋಗುತ್ತದೆ. ಅಕ್ಷರವನ್ನು ಗೌರವಿಸುವ, ಆರಾಧಿಸುವ ಪರಂಪರೆಗೆ ನಾವು ಸೇರಿದ್ದೇವೆ ಎಂಬ ಹೆಮ್ಮೆ ನಮ್ಮಲ್ಲಿರಬೇಕು. ಅಕ್ಷರ ಸರಸ್ವತಿಯ ವರಪುತ್ರ-ಪುತ್ರಿಯರಾಗಿ ನಾವು ಹೊರಹೊಮ್ಮಬೇಕು. ಆಗ ಸುಜ್ಞಾನ ನಮ್ಮದಾಗುತ್ತದೆ ಎಂದು ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಶ್ರೀ ಶಾರದಾ ಪೂಜೆಯ ಪ್ರಯುಕ್ತ ಆಯೋಜಿಸಲಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪುಸ್ತಕಗಳನ್ನು ಓದುವುದು ಕೂಡ

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಶಾರದಾ ಪೂಜೆ | ಅಕ್ಷರವನ್ನು ಆರಾಧಿಸುವ ಪರಂಪರೆ ನಮ್ಮದೆಂಬುದು ಹೆಮ್ಮೆ : ರಾಕೇಶ ಕಮ್ಮಜೆ Read More »

error: Content is protected !!
Scroll to Top