ವಿವೇಕಾನಂದ ಕಾಲೇಜಿನಲ್ಲಿ 43ನೇ ವರ್ಷದ ಮಾನ್ಸೂನ್ ಚೆಸ್ ಪಂದ್ಯಾಟ | ಚದುರಂಗ ಆಟವಲ್ಲ, ಜೀವನ ಪಾಠ : ಗೋಪಾಲಕೃಷ್ಣ ಭಟ್
ಪುತ್ತೂರು: ಚದುರಂಗ ಎಂಬುದು ಕೇವಲ ಆಟ ಮಾತ್ರವಲ್ಲ, ಬದಲಾಗಿ ಜೀವನದುದ್ದಕ್ಕೂ ಅರಿತುಕೊಳ್ಳುವ ಪಾಠ. ಇಲ್ಲಿ ಸ್ಪರ್ಧಾಳುಗಳಾಗಿ ಆಗಮಿಸಿರುವ ಎಲ್ಲಾಆಟಗಾರರು ಚದುರಂಗದ ಆಟದಲ್ಲಿ ಮಾತ್ರ ಚಾಂಪಿಯನ್ಸ್ ಆಗದೆ ಜೀವನ ಎಂಬ ಚದುರಂಗದಲ್ಲೂ ಚಾಂಪಿಯನ್ಸ್ ಗಳಾಗಬೇಕು. ಸಮಾಜದಲ್ಲಿಉತ್ತಮ ನಾಗರಿಕನಾಗಿ, ದೇಶಕ್ಕೆಉತ್ತಮ ಆಸ್ತಿಯಾಗಬೇಕು. ಸ್ವಾಸ್ಥ್ಯ ಮನಸ್ಸಿನೊಂದಿಗೆ, ಸ್ವಾಸ್ಥ್ಯ ಸಮಾಜಕ್ಕಾಗಿದುಡಿಯಬೇಕು” ಎಂದು ದ್ವಾರಕಾ ಕನ್ಸ್ಟ್ರಕ್ಷನ್ ಮಾಲಕ ಗೋಪಾಲಕೃ ಭಟ್ ಹೇಳಿದರು. ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ದೈಹಿಕ ಶಿಕ್ಷಣ ಮತ್ತುಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಕಾಲೇಜಿನ ಸುವರ್ಣ ಮಹೋತ್ಸವ […]










