ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಸೆಂಟರ್ ಆಶ್ರಯದಲ್ಲಿ ಇಂಜನಿಯರ್ ದಿನಾಚರಣೆ | ಆಕರ್ಷಕ ವಾಕಥಾನ್ ಜಾಥ
ಪುತ್ತೂರು: ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಪುತ್ತೂರು ಸೆಂಟರ್ ಆಶ್ರಯದಲ್ಲಿ ಇಂಜನಿಯರ್ ದಿನಾಚರಣೆ ಪ್ರಯುಕ್ತ ಸೋಮವಾರ ಸಂಜೆ ಪುತ್ತೂರಿನಲ್ಲಿ ಆಕರ್ಷಕ ವಾಕಥಾನ್ ನಡೆಯಿತು. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಳಿಯ ಗಾಂಧಿ ಕಟ್ಟೆಯ ಎದುರು ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ವಾಕಥಾನ್ಗೆ ಎಸಿಸಿಇ(ಐ) ಲಾಂಛನವಿರುವ ಧ್ವಜ ಹಿಡಿದು ಚಾಲನೆ ನೀಡಿದರು. ಬಳಿಕ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಪುತ್ತೂರು ಸೆಂಟರ್ನ ಸದಸ್ಯ ಎಂಜಿನಿಯರ್ಗಳು ಕಾಲ್ನಡಿಗೆಯಲ್ಲಿ ಮುಖ್ಯರಸ್ತೆಯಲ್ಲಿ ಸಾಗಿದರು. ಬಸ್ ನಿಲ್ದಾಣದಿಂದ ಹೊರಟ ವಾಕಥಾನ್ […]










