ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ, ಎರಡನೇ  ಘಟಕದ ಉದ್ಘಾಟನೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತು ಎರಡನೇ  ಘಟಕದ  ಉದ್ಘಾಟನಾ  ಕಾರ್ಯಕ್ರಮ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ  ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಯಿತು . ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ  ಶೇಷಪ್ಪ ಕೆ  ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಧಿಕೃತವಾಗಿ 2 ನೇ  ಘಟಕಕ್ಕೆ ಚಾಲನೆ ನೀಡಿ, ರಾಷ್ಟ್ರೀಯ ಸೇವಾ ಯೋಜನೆಯು  ಅಂತಾರಾಷ್ಟ್ರೀಯ ಮಟ್ಟದಲ್ಲೂ ಬಹುದೊಡ್ಡ ಕಾರ್ಯಕರ್ತರನ್ನು ಹೊಂದಿರುವ […]

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ, ಎರಡನೇ  ಘಟಕದ ಉದ್ಘಾಟನೆ Read More »

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ : ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿನಿ ದೃಶಾನ ಸುರೇಶ ಸರಳಿಕಾನ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್‌ ನ 14 ವಯೋಮಿತಿ ಒಳಗಿನ (ಬಾಲವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ 100 ಮೀ., ಹಾಗೂ 200 ಮೀ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ದೃಶಾನ ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ : ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ Read More »

ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ಮಹಾಸಭೆ | 32.40 ಕೋಟಿ ವ್ಯವಹಾರ, 10.02 ಲಕ್ಷ ಲಾಭ, ಶೇ.12 ಡಿವಿಡೆಂಡ್ ಘೋಷಣೆ

ಪುತ್ತೂರು: ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ 2023-24ನೇ ಸಾಲಿನಲ್ಲಿ 32.40 ಕೋಟಿ ವ್ಯವಹಾರ ನಡೆಸಿ 10.02 ಲಕ್ಷ ರೂ. ಲಾಭಗಳಿಸಿದೆ. ಲಾಭಾಂಶದಲ್ಲಿ ಸದಸ್ಯರಿಗೆ ಶೇ.12 ಡಿವಿಡೆಂಡ್ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಮಾಡಿದರು. ಸಂಘದ ಪ್ರಧಾನ ಕಚೇರಿಯ ‘ಮಾಧುರಿ ಸೌಧ’ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಘೋಷಣೆ ಮಾಡಿದರು. ವರದಿ ವರ್ಷ ಸಂಘದಲ್ಲಿ 3,030 ಸದಸ್ಯರಿಂದ 13.77 ಲಕ್ಷ ರೂ. ಪಾಲು ಬಂಡವಾಳ, 64.22

ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ಮಹಾಸಭೆ | 32.40 ಕೋಟಿ ವ್ಯವಹಾರ, 10.02 ಲಕ್ಷ ಲಾಭ, ಶೇ.12 ಡಿವಿಡೆಂಡ್ ಘೋಷಣೆ Read More »

ಬಿಜೆಪಿ ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಪ್ರಥಮ ಸಭೆ

ಪುತ್ತೂರು: ಭಾರತಿಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಥಮ ಪದಾಧಿಕಾರಿಗಳ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರತಿ ಬೂತಿನಲ್ಲಿ ಸದಸ್ಯತಾ ಅಭಿಯಾನವನ್ನು ಯಶಸ್ವೀಗೊಳಿಸಲು ಪದಾಧಿಕಾರಿಗಳು ಶಕ್ತೀಮೀರಿ ಕೆಲಸ ಮಾಡುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಮಹಾಶಕ್ತೀ ಕೇಂದ್ರಗಳಿಗೆ ಮತ್ತು ವಿವಿಧ ಮೋರ್ಚಗಳಿಗೆ ಉಸ್ತುವಾರಿಯನ್ನು, ಅಧ್ಯಕ್ಷರು ಘೋಷಣೆ ಮಾಡಿದರು. ವಿಟ್ಲ ಮಹಾಶಕ್ತೀ ಕೇಂದ್ರಕ್ಕೆ ಹರಿಪ್ರಸಾದ್ ಯಾದವ್, ಪುಣಚ ಯತೀಂದ್ರ ಕೊಚ್ಚಿ, ಉಪ್ಪಿನಂಗಡಿ ದಿವ್ಯಾ ಪುರುಷೋತ್ತಮ, ಆರ್ಯಾಪು ಕುಮಾರ ಸುಬ್ರಮಣ್ಯ ಭಟ್, ನರಿಮೊಗರು ವಿದ್ಯಾಧರ

ಬಿಜೆಪಿ ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಪ್ರಥಮ ಸಭೆ Read More »

ಕೆಮ್ಮಾಯಿಯಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು: ಕೆಮ್ಮಾಯಿಯಲ್ಲಿ ನೂತನ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ,  ಈ ಹಿಂದೆ ನಾವು ಪುತ್ತೂರು ನಗರ ಸಭೆಯ ಹಲವು ಕಡೆ ಹೈಟೆಕ್ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಿದ್ದೆವು. ಕೆಮ್ಮಾಯಿಯಲ್ಲಿ ಈಗ  ನೇರವೇರುತ್ತಿದೆ. ಈ ಪ್ರಯಾಣಿಕರ ತಂಗುದಾಣಕ್ಕೆ ಸಹಕರಿಸುವ ಕೌಶಲ್ ಮಿಡಿಯ ಹಾಗೂ ಸುಂದರ ಪೂಜಾರಿ ಬಡಾವು ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ,

ಕೆಮ್ಮಾಯಿಯಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ Read More »

ಖಾಸಗಿ ಆಸ್ಪತ್ರೆಯ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್

ಪುತ್ತೂರು: ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗೀ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೊಳುವಾರಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದು, ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಶಂಕರ ಸಹಾಯಕ, ಪ್ರಮುಖ

ಖಾಸಗಿ ಆಸ್ಪತ್ರೆಯ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಭರತನಾಟ್ಯ ತರಗತಿ ಸೆ.9ರಂದು ಪ್ರಾರಂಭಗೊಂಡಿತು. ಐಕ್ಯಮ್ ಕಲಾ ಅಕಾಡೆಮಿ ಶಿಕ್ಷಕಿ ವಿದುಷಿ ನಿಖಿತಾ ಪಾಣಾಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಭರತನಾಟ್ಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಅಧ್ಯಕ್ಷ ತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದು ಭರತನಾಟ್ಯದ ಮಹತ್ವದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕಿ ಪ್ರತಿಭಾ ದೇವಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸವಿತಾ ಕೆ. ಸ್ವಾಗತಿಸಿದರು. ಶಿಕ್ಷಕಿ ಯಶುಭ ರೈ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ Read More »

ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾದ ಪ್ರಕರಣದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರು  ಅತ್ಯಾಚಾರ ಆರೋಪದಡಿ ದೂರು ನೀಡಿದ್ದು, ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ಹೊಟೇಲೊಂದರಲ್ಲಿ ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪಿ. ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ

ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾದ ಪ್ರಕರಣದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ Read More »

ದ ಕ ಜಿಲ್ಲಾ ಕ.ಸಾ.ಪ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆ -4 | 16 ನೇ ಶತಮಾನದ ವಿಗ್ರಹ ಪತ್ತೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ನಡೆಸುವಂತಹ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆಯಡಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಎಂಬಲ್ಲಿ ಇರುವ ಪುರಾತನ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲಭ್ಯವಾದ ಸುಮಾರು 302 ವರ್ಷ ಪುರಾತನ 17ನೇ ಶತಮಾನದ ಕನ್ನಡ ಶಿಲಾಶಾಸನವನ್ನು ಸಂಶೋಧಕರಾದ ಡಾ. ಉಮಾನಾಥ ಶೆಣೈ ಅವರ ನೇತೃತ್ವದಲ್ಲಿ ಯುವ ಅಧ್ಯಯನಕಾರರಾದ ಶ್ರೀಶಾವಾಸವಿ (ವಿದ್ಯಾಶ್ರೀ ಎಸ್) ತುಳುನಾಡ್ ಸಹಕಾರದೊಂದಿಗೆ ಅಧ್ಯಯನ ಮಾಡಲಾಯಿತು. ಪುತ್ತೂರು ತಾಲೂಕು ಕನ್ನಡ

ದ ಕ ಜಿಲ್ಲಾ ಕ.ಸಾ.ಪ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆ -4 | 16 ನೇ ಶತಮಾನದ ವಿಗ್ರಹ ಪತ್ತೆ Read More »

ಅ.3-12 : ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು; ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.3 ರಿಂದ 12 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಮಧ್ಯಾಹ್ನ ದೇವಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಭಕ್ತಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ಸದಸ್ಯರುಗಳು, ವಿಶ್ವ ಯುವಕ ವೃಂದದ ಸದಸ್ಯರುಗಳು, ಶ್ರೀಕ್ಷೇತ್ರ ಧರ್ಮಸ್ಥಳದ

ಅ.3-12 : ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top