ಪುತ್ತೂರು

ತ್ರೋಬಾಲ್ ಪಂದ್ಯಾಟ : ಬಾಲಕಿಯರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಪ್ರಾಥಮಿಕ  ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿ .ಪ್ರಾ ಶಾಲೆ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ/ಬಾಲಕಿಯರ ತ್ರೋಬಾಲ್ ಪಂದ್ಯಾಟ ಸುಳ್ಯಪದವು ಸರ್ವೋದಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪುತ್ತೂರು ಪಾಂಗ್ಲಯಿ ಬೆಥನಿ ಆಂಗ್ಲ ಮಾದ್ಯಮ  ಶಾಲೆ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಪಂದ್ಯಾಟದಲ್ಲಿ ಉತ್ತಮ ಆಲ್ರೌಂಡರ್ ಆಗಿ ಬೆಥನಿಯ ಆದ್ಯಾ ಕೆ. ಪ್ರಶಸ್ತಿಯನ್ನು ಪಡೆದಿರುತ್ತಾರೆ. ತಂಡದ ಆಟಗಾರರಾದ […]

ತ್ರೋಬಾಲ್ ಪಂದ್ಯಾಟ : ಬಾಲಕಿಯರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಪ್ರಾಥಮಿಕ  ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕಾಲೇಜಿನಲ್ಲಿ  43ನೇ ವರ್ಷದ ಶ್ರೀಗಣೇಶೋತ್ಸವ | ಮಣ್ಣು ಸೃಷ್ಟಿಯ ಕೊಡುಗೆ : ಡಾ. ಎಚ್. ಎನ್.ಉದಯಶಂಕರ

ಪುತ್ತೂರು: ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ ನಿಧಿ ಎಂದರೆ ಅದು ಮಣ್ಣು. ತಂತ್ರಜ್ಞಾನ ಮುಂದುವರೆದರೂ ಮಣ್ಣನ್ನು ಯಾರು ಉತ್ಪದಿಸಲಾರರು. ಮಣ್ಣಿಗೆ ಅದರದೇ ಆದ ಮಹತ್ವವಿದೆ. ನಮ್ಮ ಸ್ವಾರ್ಥಕ್ಕಾಗಿ  ಪಶ್ಚಿಮ ಘಟ್ಟವನ್ನು ಹಾಳುಮಾಡುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿ ಭೂಮಿಯನ್ನು ಕೆಡಿಸುತ್ತಿದ್ದೇವೆ. ಪ್ರಕೃತಿಯ ಮುಂದೆ ಯಾರು ದೊಡ್ಡವರಲ್ಲ, ಮಣ್ಣುಇಲ್ಲದೆ ಜೀವ ಇಲ್ಲಎಂದು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಭೂ ವಿಜ್ಞಾನಿ ಡಾ. ಎಚ್.ಎನ್‌. ಉದಯಶಂಕರ  ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )

ವಿವೇಕಾನಂದ ಕಾಲೇಜಿನಲ್ಲಿ  43ನೇ ವರ್ಷದ ಶ್ರೀಗಣೇಶೋತ್ಸವ | ಮಣ್ಣು ಸೃಷ್ಟಿಯ ಕೊಡುಗೆ : ಡಾ. ಎಚ್. ಎನ್.ಉದಯಶಂಕರ Read More »

ಸವಣೂರಿನಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ 2ನೇ ದಿನ ನಡೆಯಿತು ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ಗಣೇಶ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ : ಡಾ.ಹಂದಾಡಿ ಮಾಧವ ಭಟ್

ಸವಣೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 42ನೇ ವರ್ಷದ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಭಾಗವಾಗಿ ಎರಡನೇ ದಿನ ಧಾರ್ಮಿಕ ಉಪನ್ಯಾಸ, ಮನರಂಜನೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಡಾ.ಹಂದಾಡಿ ಮಾಧವ ಭಟ್, ಎಲ್ಲರಿಗೂ ಸಲ್ಲುವವ ಶ್ರೀ ಗಣೇಶ. ಏಕೆಂದರೆ ಆತ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ. ಆತನು ಆದಿ ಪೂರ್ವದಲ್ಲಿಯೇ ಸ್ವೀಕೃತವಾದವ. ಸಂಘಟನೆಯಲ್ಲಿ ಮುಖ್ಯವಾದುದು ಎಂದರೆ “Religion is what we do in privacy” ಎಂಬ

ಸವಣೂರಿನಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ 2ನೇ ದಿನ ನಡೆಯಿತು ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ಗಣೇಶ ಧಾರ್ಮಿಕ ಚೌಕಟ್ಟನ್ನು ಮೀರಿ ಬೆಳೆದವ : ಡಾ.ಹಂದಾಡಿ ಮಾಧವ ಭಟ್ Read More »

ಅಪಾಯದ ಸ್ಥಿತಿಯಲ್ಲಿರುವ ನಗರ ರಸ್ತೆಗಳನ್ನು ಶೀಘ್ರ ಸರಿಪಡಿಸಬೇಕು | ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ನಗರಸಭೆಗೆ ಮನವಿ

ಪುತ್ತೂರು: ಪುತ್ತೂರು ಪೇಟೆಯ ಹಲವು ಭಾಗದಲ್ಲಿ ರಸ್ತೆಗಳು ಹೊಂಡ ಗುಂಡಿಗಳಿಂದ ಕೂಡಿದ್ದು, ಅಪಾಯದ ಸ್ಥಿತಿಯಲ್ಲಿದೆ. ಇದನ್ನು ತಕ್ಷಣ ಸರಿಪಡಿಸುವಂತೆ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಪುತ್ತೂರು ನಗರಸಭೆಗೆ ಮನವಿ ಮಾಡಿದೆ. ಈಗಾಗಲೇ ದ್ವಿಚಕ್ರ ವಾಹನ ಸವಾರರು ಅಪಘಾತ ಸಂಭವಿಸಿ ಬಿದ್ದಿರುತ್ತಾರೆ. ಅಲ್ಲದೆ ಜನರಿಗೆ ನಡೆದಾಡಲು ಪುಟ್‍ ಪಾತ್‍ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಅಪಾಯ ಸ್ಥಿತಿಯಲ್ಲಿರುವ ಫುಟ್ ಪಾತ್ ಗಳನ್ನು ಸರಿಪಡಿಸಬೇಕಾಗಿದೆ ಎಂದು ನಗರಸಭೆಯ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಮನವಿ ಮಾಡಲಾಯಿತು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ

ಅಪಾಯದ ಸ್ಥಿತಿಯಲ್ಲಿರುವ ನಗರ ರಸ್ತೆಗಳನ್ನು ಶೀಘ್ರ ಸರಿಪಡಿಸಬೇಕು | ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ನಗರಸಭೆಗೆ ಮನವಿ Read More »

ಗೇರುಕಟ್ಟೆ 52ನೇ ವರ್ಷದ ಶ್ರೀ ಗಣೇಶೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಳಮದ್ದಳೆ

ಗೇರುಕಟ್ಟೆ : ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ‘ಶಿವಭಕ್ತ ಪುರುಷಮೃಗ’ ತಾಳಮದ್ದಳೆ ಗೇರುಕಟ್ಟೆ ಮಂಜಲಡ್ಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಸಭಾಭಾವನ ದಲ್ಲಿ ಜರಗಿತು. ಭಾಗವತರಾಗಿ ಮಧೂರು ವಿಷ್ಣು ಪ್ರಸಾದ್ ಕಲ್ಲೂರಾಯ ಗೇರುಕಟ್ಟೆ. ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ಪುರುಷಮೃಗ), ರಾಘವೇಂದ್ರ ಆಸ್ರಣ್ಣ ನಾಳ (ಹನುಮಂತ ), ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀಕೃಷ್ಣ), ರಾಘವ ಪೂಜಾರಿ ಮೆದಿನ (ಧರ್ಮರಾಯ

ಗೇರುಕಟ್ಟೆ 52ನೇ ವರ್ಷದ ಶ್ರೀ ಗಣೇಶೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಳಮದ್ದಳೆ Read More »

ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ | 4 ಲಕ್ಷ ರೂ. ವೆಚ್ಚದ ತಂಗುದಾಣ

ಪುತ್ತೂರು ಬಲ್ನಾಡು: ಬುಳರಿಕಟ್ಟೆ ಸಾಜ ಕ್ರಾಸ್ ಬಳಿ 4 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಿಕ್ಷಾ ತಂಗುದಾಣದ ಉದ್ಘಾಟನಾ ಸಮಾರಂಭ ಭಾನುವಾರ ಸಂಜೆ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಂಗುದಾಣವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಾಸಕರ 2023 24ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದ ಮೂಲಕ ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ಈ ನೂತನ ತಂಗುದಾಣ ನಿರ್ಮಾಣವಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮ ಪಂಚಾಯತ್‌

ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ | 4 ಲಕ್ಷ ರೂ. ವೆಚ್ಚದ ತಂಗುದಾಣ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶನ ಪ್ರತಿಷ್ಠೆ – ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 58 ನೇ ವರ್ಷದ ಗಣೇಶೋತ್ಸವಕ್ಕೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಂಟಾರು ಗುರುತಂತ್ರಿಯವರು ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಮಾಡುವ ಮೂಲಕ ಶನಿವಾರ ಚಾಲನೆ ನೀಡಿದರು. ಬೆಳಿಗ್ಗೆ ಸಮಿತಿ ಪದಾಧಿಕಾರಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಬಳಿಕ ದೇವಳದ  ಎದುರು ಗದ್ದೆಯ ಬೃಹತ್ ಚಪ್ಪರದಲ್ಲಿ ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಕಾರ್ಯ ನಡೆಯಿತು. ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಬಳಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶನ ಪ್ರತಿಷ್ಠೆ – ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಧಾರ್ಮಿಕ ಸಭಾ ಕಾರ್ಯಕ್ರಮ Read More »

ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು : ಕಿಲ್ಲೇ ಮೈದಾನದಲ್ಲಿ ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆಯುವ 67ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ಗಣೇಶನ ಮೂರ್ತಿ ರಚನಾ ಸ್ಥಳದಿಂದ ಮೆರವಣಿಗೆ ಮೂಲಕ ಶ್ರೀ ಗಣೇಶನನ್ನು ಕರೆತಂದು ಕಿಲ್ಲೇ ಮೈದಾನದ ಭವ್ಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಮಧ್ಯಾಹ್ನ ಮಹಾಪೂಜೆ ನಡೆದು, ಸಾವಿರಾರು ಮಂದಿಗೆ ಅನ್ನಸಂತಪರ್ಣೆ ಜರಗಿತು. ಏಳು ದಿನಗಳ ಕಾಲ ನಡೆಯುವ ಕಿಲ್ಲೇ ಮೈದಾನದ ಗಣಪತಿ ಅತ್ಯಂತ ಪುರಾತನವಾಗಿದ್ದು, ಇಲ್ಲಿ ಒಟ್ಟು

ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ವೈವಾಹಿಕ ಜೀವನ ಪ್ರವೇಶಿಸಿದ ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕಿ ಮೋಕ್ಷಿತಾ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕಿ ಮೋಕ್ಷಿತಾ ಅವರು ನೆಲ್ಯಾಡಿಯ ಉದ್ಯಮಿ ಮಿಥುನ್ ಅವರೊಂದಿಗೆ ವೈವಾಹಿಕ ಜೀವನ ಪ್ರವೇಶಿಸಿದರು. ಉಪ್ಪಿನಂಗಡಿ ಎಚ್‍.ಎಂ.ಅಡಿಟೋರಿಯಂ ನಲ್ಲಿ ಭಾನುವಾರ ವಿವಾಹ ಸಮಾರಂಭ ನಡೆಯಿತು. ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ವೈವಾಹಿಕ ಜೀವನ ಪ್ರವೇಶಿಸಿದ ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕಿ ಮೋಕ್ಷಿತಾ Read More »

ಸುಲ್ತಾನ್ ಡೈಮಂಡ್ & ಗೋಲ್ಡ್ ನಲ್ಲಿ ವಿಶ್ವ ವಜ್ರ-ಡೈಮಂಡ್ ಎಕ್ಸಿಬಿಷನ್ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ

ಪುತ್ತೂರು: ಏಳ್ಳುಡಿಯ ತಾಜ್ ಟವರಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ – ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ ವಿಶ್ವ ವಜ್ರ-ಡೈಮಂಡ್ ಎಕ್ಸಿಬಿಷನ್ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ಈ ಸುಲ್ತಾನ್ ಡೈಮಂಡ್ ಗೋಲ್ಡ್ ನ ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿ ಮಾತನಾಡಿ, ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ ಎಲ್ಲರೂ ಪ್ರಶಂಸನೀಯ ಸೇವೆ ನೀಡುತ್ತಿದ್ದಾರೆ

ಸುಲ್ತಾನ್ ಡೈಮಂಡ್ & ಗೋಲ್ಡ್ ನಲ್ಲಿ ವಿಶ್ವ ವಜ್ರ-ಡೈಮಂಡ್ ಎಕ್ಸಿಬಿಷನ್ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »

error: Content is protected !!
Scroll to Top