ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ನವಾರಂಭ್’ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಲಿಕೆ ಮತ್ತು ಕ್ರೀಡೆ ಎರಡಕ್ಕೂ ಸಮಾನ ಪ್ರಾಶಸ್ತ್ಯ ನೀಡಬೇಕು. ಕ್ರೀಡೆಗೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಮುಂದೆ ವೃತ್ತಿ ಜೀವನದಲ್ಲಿ ಕಷ್ಟ ಎದುರಿಸಬೇಕಾಗುತ್ತದೆ. ಒಬ್ಬ ಉತ್ತಮ ಮನುಷ್ಯನಾಗಲು ತಾರ್ಕಿಕ ಜ್ಞಾನ, ಸೂಕ್ಷ್ಮತೆ, ಓದುವ ಮತ್ತು ಬರೆಯುವ ಕೌಶಲ್ಯ, ಸಾಮಾನ್ಯ ಜ್ಞಾನ ಮತ್ತು ಉತ್ತಮ ಸಂವಹನ ಕೌಶಲ ಎಂಬ ಆರು ಅಂಶಗಳನ್ನು ಉಪಯೋಗಿಸಬೇಕು ಎಂದು ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೋ೦ತೆರೋ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ವಿಭಾಗದ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ನವಾರಂಭ್’ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ Read More »

ಇಂದು ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ

ಬಲ್ನಾಡು: ಬುಳರಿಕಟ್ಟೆ ಸಾಜ ಕ್ರಾಸ್ ನೂತನ ರಿಕ್ಷಾ ತಂಗುದಾಣದ ಉದ್ಘಾಟನಾ ಸಮಾರಂಭ ಇಂದು ಸಂಜೆ ನಡೆಯಲಿದೆ. ಸಂಜೆ 6. ಗಂಟೆಗೆ ತಂಗುದಾಣವನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರ 2023 24ನೇ ಸಾಲಿನ ಸ್ಥಳೀಯ ಪ್ರದೇಶಾಭಿರವೃದ್ಧಿ ಯೋಜನೆ ಅನುದಾನದ ಮೂಲಕ ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ಬುಳರಿಕಟ್ಟೆ ಸಾಜ ಕ್ರಾಸ್ ಬಳಿ ಈ ನೂತನ ತಂಗುದಾಣ ನಿರ್ಮಾಣವಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪರಮೇಶ್ವರಿ

ಇಂದು ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ವಠಾರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಶ್ರೀ ಗಣೇಶನ ಮೂರ್ತಿ ಪ್ರತಿಷ್ಠೆ ಮೂಲಕ ಚಾಲನೆ ನೀಡಲಾಯಿತು. ಶನಿವಾರ ಬೆಳಿಗ್ಗೆ 8 ಕ್ಕೆ ಭಜನೆ ನಡೆಯಿತು. 8.30 ಕ್ಕೆ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಧ್ವಜಾರೋಹಣವನ್ನು ಉದ್ಯಮಿ ವಾಮನ್ ಪೈ ನೆರವೇರಿಸಿದರು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ, ಪ್ರಸಾದ ವಿತರಣೆಯಾಗಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ಜಗತ್ತು ಕಂಡ ಶ್ರೇಷ್ಟ ತತ್ವಶಾಸ್ತ್ರಜ್ಞ ಡಾ.ರಾಧಾಕೃಷ್ಣನ್‌ ರವರು-ಡಾ.ತುಕಾರಾಂ ಪೂಜಾರಿ | ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ | ಸಾಧಕ ಶಿಕ್ಷಕರಿಗೆ ಗುರು ಪುರಸ್ಕಾರ, ಗೌರವ ಸಮ್ಮಾನ

ಪುತ್ತೂರು: ಓರ್ವ ರಾಯಭಾರಿಯಾಗಿ, ಅಧ್ಯಾಪಕನಾಗಿ, ರಾಜನೀತಿ ನಿಪುಣನಾಗಿ, ಎಲ್ಲರಿಗೂ ಅಚ್ಚುಮೆಚ್ಚಿನವರಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರು ಗುರುತಿಸಿಕೊಂಡಿದ್ದರು. ವಿದ್ಯಾರ್ಥಿಗಳ ಹೃದಯವನ್ನು ತಟ್ಟುವಲ್ಲಿ ಅವರು ನಿಸ್ಸೀಮರಾಗಿದ್ದರು ಮಾತ್ರವಲ್ಲ ಜಗತ್ತು ಕಂಡ ಅತೀ ಶ್ರೇಷ್ಟ ತತ್ವಶಾಸ್ತ್ರಜ್ಞರವರಲ್ಲಿ ಡಾ.ರಾಧಾಕೃಷ್ಣನ್‌ರವರೂ ಕೂಡ ಓರ್ವರಾಗಿದ್ದರು ಎಂದು ಬಂಟ್ವಾಳ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿರವರು ಹೇಳಿದರು. ಸಂಪ್ಯದ ಅಕ್ಷಯ ಎಜ್ಯಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ ನಡಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸಾಧಕ ಶಿಕ್ಷಕರಿಗೆ ಗುರು ಪುರಸ್ಕಾರ

ಜಗತ್ತು ಕಂಡ ಶ್ರೇಷ್ಟ ತತ್ವಶಾಸ್ತ್ರಜ್ಞ ಡಾ.ರಾಧಾಕೃಷ್ಣನ್‌ ರವರು-ಡಾ.ತುಕಾರಾಂ ಪೂಜಾರಿ | ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ | ಸಾಧಕ ಶಿಕ್ಷಕರಿಗೆ ಗುರು ಪುರಸ್ಕಾರ, ಗೌರವ ಸಮ್ಮಾನ Read More »

ನರಿಮೊಗರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗೇಶ್‍ ನಾಯಕ್ ನಿಧನ

ಪುತ್ತೂರು: ನರಿಮೊಗರು ಗ್ರಾಮದ ಸೇರಾಜೆ ರಾಮಣ್ಣ ನಾಯಕ್ ರ ಪುತ್ರ, ನರಿಮೊಗರು ಗ್ರಾ.ಪಂ ಮಾಜಿ ಸದಸ್ಯರು, ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪವಾ ಸಮಿತಿ ಮಾಜಿ ಸದಸ್ಯ ನಾಗೇಶ್ ನಾಯಕ್ (63.) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ನರಿಮೊಗರಿನಲ್ಲಿ ಅನುಗ್ರಹ ಸ್ಟೋರ್ಸ್ ಅಂಗಡಿ ಹಾಗೂ ಬೀಡಿ ಬ್ರಾಂಚ್ ನಡೆಸುತ್ತಿದ್ದರು. ಅವರು ಎಪಿಎಂಸಿ ಮಾಜಿ ನಿರ್ದೇಶಕ, ನರಿಮೊಗರು ಗ್ರಾ.ಪಂ ಮಾಜಿ ಸದಸ್ಯ, ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರು ಸೇರಿದಂತೆ ವಿವಿಧ ಸಾಮಾಜಿಕ, ಧಾರ್ಮಿಕ

ನರಿಮೊಗರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗೇಶ್‍ ನಾಯಕ್ ನಿಧನ Read More »

ಶಿಕ್ಷಕ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ | ರೋಟರಿ ಕ್ಲಬ್‍, ಇನ್ನರ್ ವೀಲ್ ಕ್ಲಬ್ ಜಂಟಿ ಆಶ್ರಯ

ಪುತ್ತೂರು: ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲೆ 3181 ರ 2026-27ರ ನಿಯೋಜಿತ ಗವರ್ನರ್ ಸತೀಶ್ ಬೋಳಾರ್ ಪಾಲ್ಗೊಂಡು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ  ದಾಮೋದರ್ ಕೆ., ವೃತ್ತಿಪರ ವಿಭಾಗ ನಿರ್ದೇಶಕ ರೊ.ಚಿದಾನಂದ ಬೈಲಾಡಿ, ಕಾರ್ಯಕ್ರಮ ಸಂಯೋಜಕ ಶ್ರೀಧರ ಕಣಜಾಲು, ರೋಟರಿ

ಶಿಕ್ಷಕ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ | ರೋಟರಿ ಕ್ಲಬ್‍, ಇನ್ನರ್ ವೀಲ್ ಕ್ಲಬ್ ಜಂಟಿ ಆಶ್ರಯ Read More »

ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ ವಿವಾಹಿತೆ ಮಹಿಳೆ ನಾಪತ್ತೆ | ಪ್ರಕರಣ ದಾಖಲು

ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವಕೊಪ್ಪ ಎಂಬಲ್ಲಿ ನಡೆದಿದೆ. ಕೂವೆಕೊಪ್ಪ ನಿವಾಸಿ ನಾಗೇಶ ಎಂಬವರ ಪತ್ನಿ, ಮೂವರು ಮಕ್ಕಳ ತಾಯಿ ಭಾರತಿ (35) ನಾಪತ್ತೆಯಾದ ಮಹಿಳೆ, ಈಕೆಯ ಪತಿ ನಾಗೇಶ ಎಂಬವರು ದೂರು ನೀಡಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಕೆ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಮನೆ ರಿಪೇರಿಗೆಂದು 85 ಸಾವಿರ ರೂ. ಸಾಲವನ್ನು ಪಡೆದಿದ್ದು, ಬಳಿಕ ಕಳೆದ ಜು.7ರಂದು ಇವರ ಪತಿ

ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ ವಿವಾಹಿತೆ ಮಹಿಳೆ ನಾಪತ್ತೆ | ಪ್ರಕರಣ ದಾಖಲು Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಲಾಂತರಂಗ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರ ಮತ್ತು ಲಲಿತ ಕಲಾ ಸಂಘಗಳ ಜಂಟಿ ಆಶ್ರಯದಲ್ಲಿ ಭಾರತೀಯ ಶಾಸ್ತ್ರೀಯ ಕಲೆಗಳ ಅಂತರ್ಯಯವನ್ನು ಅರಿಯುವ ವಿನೂತನ ಕಾರ್ಯಕ್ರಮ ‘ಕಲಾಂತರಂಗ’ ಕಾಲೇಜಿನ ಪಿ.ಜಿ. ಸೆಮಿನಾರ್‌ ಹಾಲ್‌ನಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಕಲಾವಿದರಿಗೆ ಸಂಸ್ಕೃತಿ , ಸಾಹಿತ್ಯದ ವಿಸ್ತಾರಗಳು, ಪ್ರದರ್ಶನ ಕಲೆಗಳ ಮಹತ್ವದ ಕುರಿತು ಮಾರ್ಗದರ್ಶನ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಲಾವಿದ ಮುಂಡಾಲಗುತ್ತು ಪ್ರಶಾಂತ್ ರೈ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಲಾಂತರಂಗ Read More »

ಬಿಜೆಪಿ ಗ್ರಾಮಾಂತರ ಮಂಡಲ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾಗಿ ಮಹೇಶ್‍‍ ರೈ ಕೇರಿ, ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ನೇಮಕ

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲಕ್ಕೆ ಮಾಧ್ಯಮ ಪ್ರಕೋಷ್ಟದ ಸಂಚಾಲಕರು ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ. ಸಂಚಾಲಕರಾಗಿ ಮಹೇಶ್‍ ರೈ ಕೇರಿ ಹಾಗೂ ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಈ ನೇಮಕವನ್ನು ಘೋಷಿಸಿದ್ದಾರೆ.

ಬಿಜೆಪಿ ಗ್ರಾಮಾಂತರ ಮಂಡಲ ಮಾಧ್ಯಮ ಪ್ರಕೋಷ್ಠದ ಸಂಚಾಲಕರಾಗಿ ಮಹೇಶ್‍‍ ರೈ ಕೇರಿ, ಸಹಸಂಚಾಲಕರಾಗಿ ಸುಶಾಂತ್ ಚಂದಳಿಕೆ ನೇಮಕ Read More »

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಪುತ್ತೂರು: ಬಿಜೆಪಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶುಕ್ರವಾರ ಜೈನಭವನದಲ್ಲಿ ಚಾಲನೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಚಾಲನೆ ನೀಡಿ ಮಾತನಾಡಿ, ತಾಳ್ಮೆಯಿಂದ ಸಂಘಟನಾತ್ಮಕ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಬರುತ್ತದೆ. ಈ ನಿಟ್ಟಿನಲ್ಲಿ ಪುತ್ತೂರು ಕ್ಷೇತ್ರ ಜಿಲ್ಲೆಯಲ್ಲಿ ಕೊಟ್ಟ ಎಲ್ಲಾ ಕೆಲಸವನ್ನು ಸಂಘಟನಾತ್ಮಕವಾಗಿ ಮಾಡಲಾಗಿದೆ ಎಂದ ಅವರು, ಬಿಜೆಪಿಯಲ್ಲಿ ಒಂದು ಸಲ ಪದಾಧಿಕಾರಿಗಳನ್ನು ನೇಮಕ ಮಾಡಿದ ಬಳಿಕ ಗೊಂದಲ ಬೇಡ. ಒಂದು ಸಲ ಮಾಡಿದ ನಿರ್ಧಾರಕ್ಕೆ ಎಲ್ಲರು ಬದ್ಧರಾಗಿರಬೇಕು. ಬಿಜೆಪಿ

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ Read More »

error: Content is protected !!
Scroll to Top