ಪುತ್ತೂರು

ಹಿರಿಯರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ : ಭಾಸ್ಕರ ರೈ ಕುಕ್ಕುವಳ್ಳಿ

ಕಲೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ನಮ್ಮ ಹಿರಿಯರು ಮಾಡಿರುವ ಸಾಧನೆಗಳಿಂದ ನಾವು ಸಾಮಾಜಿಕವಾಗಿ ಒಗ್ಗೂಡುವಂತಾಗಿದೆ. ಹಿರಿಯರ ಸಂಸ್ಮರಣೆಯಿಂದ ಈ ವಿಚಾರಧಾರೆಯು ಮುಂದಿನ ಪೀಳಿಗೆಗೆ ಆದರ್ಶವಾಗಿ ದಾರಿದೀಪವಾಗುತ್ತದೆಯೆಂದು ಮಂಗಳೂರು ಯಕ್ಷಾಂಗಣದ ಅಧ್ಯಕ್ಷ, ಅರ್ಥದಾರಿ ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದರು. ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟಿನ 50ನೇ ವರ್ಷದ ನಿಮಿತ್ತ ನಡೆಸುತ್ತಿರುವ ಮಹಾಭಾರತ ಸರಣಿಯ ತಾಳ ಮದ್ದಳೆ, ಪ್ರಶಸ್ತಿ ಪ್ರದಾನ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ […]

ಹಿರಿಯರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ : ಭಾಸ್ಕರ ರೈ ಕುಕ್ಕುವಳ್ಳಿ Read More »

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆಯ “ಬಗ್ಗೆ ಕಾರ್ಯಾಗಾರ

ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ‘ಒತ್ತಡ ನಿರ್ವಹಣೆ’ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ  ಅಕ್ಷಯ ಪದವಿ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ರಶ್ಮಿ.ಕೆ ಭಾಗವಹಿಸಿದ್ದರು. ಮಾನಸಿಕ ಅಥವಾ ದೈಹಿಕ ಒತ್ತಡಗಳು  ಯಾವುದೇ ಕಾರಣಗಳಿಂದ ಉಂಟಾದರೂ ನಿಯಮಿತವಾದ ದೈಹಿಕ ಚಟುವಟಿಕೆ, ಉತ್ತಮ ಆಹಾರ ಸೇವನೆ ಮತ್ತು ಮಾನಸಿಕ  ವಿಶ್ರಾಂತಿಗಳಿಂದ ಒತ್ತಡ  ರಹಿತ ಸಮತೋಲನದ ಬದುಕು ನಡೆಸಬಹುದು; ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದ ಗುರಿಯನ್ನು ಆಯ್ಕೆಮಾಡಿ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆಯ “ಬಗ್ಗೆ ಕಾರ್ಯಾಗಾರ Read More »

ಶ್ರೀ ಮಹಾಭಾರತ ಸರಣಿ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ 50 ನೇ ವರ್ಷದ ನಿಮಿತ್ತ ನಡೆಸುತ್ತಿರುವ ಮಹಾಭಾರತ ಸರಣಿಯ ನಾಲ್ಕನೇ ಹಂತದ ತಾಳಮದ್ದಳೆಯ ಉದ್ಘಾಟನಾ ಕಾರ್ಯಕ್ರಮವು ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು. ಭಾರತೀಯ ಭೂಸೇನೆಯ ನಿವೃತ್ತ ಬಿಎಸ್ಎಫ್ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವಲ್ಲಿ ತಾಳಮದ್ದಳೆಯಂತ ಕಲಾ ಪ್ರಕಾರಗಳು ಸಮರ್ಥ ಮಾಧ್ಯಮವಾಗಿದ್ದು ಇದನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠ0ದೂರು ಮಾತನಾಡಿ ಯಕ್ಷಗಾನ

ಶ್ರೀ ಮಹಾಭಾರತ ಸರಣಿ ತಾಳಮದ್ದಳೆ Read More »

ಬೆಂಗಳೂರಿನಲ್ಲಿ ಕಲಾಭಿಮಾನಿಗಳ ಮನಸೂರೆಗೊಂಡ ಡ್ಯಾನ್ಸ್ & ಬೀಟ್ಸ್ ತಂಡ ಬೆಳ್ಳಾರೆ

ಬೆಂಗಳೂರು: ತುಳುನಾಡ ಜವನೆರ್ (ರಿ), ಬೆಂಗಳೂರು ವತಿಯಿಂದ ವಿಜಯನಗರದ ಬಂಟರ ಸಂಘದ ಆವರಣದಲ್ಲಿ ನಡೆದ “ಅಷ್ಟಮಿದ ಐಸಿರ” 2025 ರ ತುಳುವ ಸಿರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜೀವನ್ ಟಿ.ಎನ್ ಬೆಳ್ಳಾರೆ ನಿರ್ದೇಶನದ ‘ಡ್ಯಾನ್ಸ್ ಅಂಡ್ ಬೀಟ್ಸ್’ ಬೆಳ್ಳಾರೆ. ಪಂಜ, ಸುಬ್ರಹ್ಮಣ್ಯ, ಕೈಕಂಬ ನೃತ್ಯ ಶಾಖೆಗಳ ಸುಮಾರು 60 ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅತ್ಯುತ್ತಮ ನೃತ್ಯ ಪ್ರದರ್ಶನದ ಮೂಲಕ ನೆರೆದಿದ್ದ ಸಾವಿರಾರು ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿ ಸಂಘಟಕರ ಪ್ರಶಂಸೆ ಪಡೆಯಿತು. ತಂಡದ ಕಾರ್ಯಕ್ರಮದ ಸಂದರ್ಭದಲ್ಲಿ ಆಳ್ವಾಸ್ ಸಂಸ್ಥೆಯ ಡಾ|

ಬೆಂಗಳೂರಿನಲ್ಲಿ ಕಲಾಭಿಮಾನಿಗಳ ಮನಸೂರೆಗೊಂಡ ಡ್ಯಾನ್ಸ್ & ಬೀಟ್ಸ್ ತಂಡ ಬೆಳ್ಳಾರೆ Read More »

ಸೆ.13: ಆದರ್ಶ ವಿವಿಧೋದ್ಧೇಶ ಸಹಕಾರಿ ಸಂಘದ ಮಹಾಸಭೆ | ವಿದ್ಯಾ ನಿಧಿಯಿಂದ 250 ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಪುತ್ತೂರು: ಕಳೆದ 23 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ದ.ಕ.ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 15 ಶಾಖೆಗಳನ್ನು ಹೊಂದಿರುವ ಪುತ್ತೂರಿನ ಆದರ್ಶ ವಿವಿಧೋದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾ ಸಂಸ್ಥೆಯ ನಿಧಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭವು ಸೆ.13 ರಂದು ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ನಿರ್ದೇಶಕರಾದ ಅಶ್ವಿನ್ ಎಲ್ ಶೆಟ್ಟಿ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್

ಸೆ.13: ಆದರ್ಶ ವಿವಿಧೋದ್ಧೇಶ ಸಹಕಾರಿ ಸಂಘದ ಮಹಾಸಭೆ | ವಿದ್ಯಾ ನಿಧಿಯಿಂದ 250 ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ Read More »

ಪುತ್ತೂರು ಐಕ್ಯ ಕಲಾ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ

ಪುತ್ತೂರು ಐಕ್ಯ ಕಲಾ-ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ ರೋಟರಿ ಸಭಾಭವನದಲ್ಲಿ ನಡೆಯಿತು. ಪುತ್ತೂರಿನ ಖ್ಯಾತ ವೈದ್ಯರು ಹಾಗೂ ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ಸುರೇಶ್ ಪುತ್ತೂರಾಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಈ ಒಂದು ಯುವಕರ ತಂಡ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಮೂಲಕ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ “ಐಕ್ಯ ಕಲಾ-ಸೇವಾ ಟ್ರಸ್ಟ್” ನ ಹೆಸರು ಹರಡಬೇಕೆಂದು ಶುಭ ಹಾರೈಸಿದರು. ಜೆಸಿಐ ತರಬೇತುದಾರ ದಾಮೋದರ ಪಾಟಾಳಿ ಅವರಿಂದ

ಪುತ್ತೂರು ಐಕ್ಯ ಕಲಾ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ Read More »

ಗತಕಾಲದ ತುಳು ಪರಂಪರೆಯನ್ನು ಯುವಜನರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ: ಬಲರಾಮ ಆಚಾರ್ಯ

ಪುತ್ತೂರು: ಹಿಂದಿನ ಕಾಲದ ತುಳು ಪರಂಪರೆಯನ್ನು ಇಂದಿನ ಯುವಜನರಿಗೆ ತಲುಪಿಸುವ ಕೆಲಸ ಮಾಡುತ್ತಿರುವ ಪುತ್ತೂರು ತುಳುಕೂಟದ ಕಾರ್ಯವೈಖರಿಯನ್ನು ಜಿ. ಎಲ್. ಸಮೂಹ ಸಂಸ್ಥೆಗಳ ಮುಖ್ಯಸ್ಥ ಬಲರಾಮ ಆಚಾರ್ಯ ಅವರು ಶ್ಲಾಘಿಸಿದರು. ಪುತ್ತೂರು ತುಳುಕೂಟ ‌ಮತ್ತು ಚಿಗುರೆಲೆ ಸಾಹಿತ್ಯ ಬಳಗದ ಸಹಯೋಗದಲ್ಲಿ ನಡೆದ ತುಳು ಕಬಿಕೂಟ -2025 ಅನ್ನು ತುಳು ಕಬಿತೆಯನ್ನು ‌ವಾಚಿಸುವ ಮೂಲಕ ಅವರು ಉದ್ಘಾಟನೆ ಮಾಡಿ‌ ಮಾತನಾಡಿದರು. ಮುಖ್ಯ ಅತಿಥಿ ಸುದಾನ ಶಾಲಾ ಶಿಕ್ಷಕಿ, ಸಾಹಿತಿ ಕವಿತಾ ಅಡೂರು ಅವರು ಉದಯೋನ್ಮುಖ ಕವಿಗಳಿಗೆ ಮಾರ್ಗದರ್ಶನ ನೀಡಿದರು.

ಗತಕಾಲದ ತುಳು ಪರಂಪರೆಯನ್ನು ಯುವಜನರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ: ಬಲರಾಮ ಆಚಾರ್ಯ Read More »

ಮಾಧ್ಯಮಗಳ ಕೆಮರಾ ಕಂಡು ಓಡಿ ಹೋದ ಧರ್ಮಸ್ಥಳ ಪ್ರಕರಣದ ಜಯಂತ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಇಂದು SIT ವಿಚಾರಣೆಗೆ ಹಾಜರಾಗಿದ್ದ ಜಯಂತ್‌ ಮಾಧ್ಯಮಗಳ ಕೆಮರಾ ಕಂಡು ಬೇರೊಂದು ಕಾಡು ಹಾದಿಯಲ್ಲಿ ಓಡಿ ಹೋದ ಘಟನೆ ನಡೆದಿದೆ. SIT ಅಧಿಕಾರಿಗಳ ಬುಲಾವ್ ಮೇರೆಗೆ ವಿಚಾರಣೆಗೆ ಆಗಮಿಸಿದ್ದ ಜಯಂತ್, ಆ ಬಳಿಕ ಮಾಧ್ಯಮಗಳನ್ನು ಕಂಡು ಕಚೇರಿಯ ಹಿಂದಿನ ದಾರಿಯಲ್ಲಿ ಓಡಿ ಹೋಗಿದ್ದು, ಇದು ಸಾರ್ವಜನಿಕ ವಲಯದಲ್ಲಿ ಜಯಂತ್ ಅವರ ಮೇಲೆ ಮತ್ತಷ್ಟು ಅನುಮಾನ ಹುಟ್ಟುವಂತೆ ಮಾಡಿದೆ. ಅವರು ಮಾಧ್ಖಮಗಳನ್ನು ಕಂಡ ತಕ್ಷಣ ಯಾತಕ್ಕಾಗಿ ಓಡಿದ್ದಾರೆ. ಬುರುಡೆ ಷಡ್ಯಂತ್ರದ

ಮಾಧ್ಯಮಗಳ ಕೆಮರಾ ಕಂಡು ಓಡಿ ಹೋದ ಧರ್ಮಸ್ಥಳ ಪ್ರಕರಣದ ಜಯಂತ Read More »

ಅಕ್ಷಯ ಕಾಲೇಜಿನಲ್ಲಿ  ಸಂಭ್ರಮದ ಓಣಂ ಹಬ್ಬ  ಆಚರಣೆ

ಪುತ್ತೂರು: ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ   ಸಂಭ್ರಮದ  ಓಣಂ ಹಬ್ಬವನ್ನು   ಶುಕ್ರವಾರ ಆಚರಿಸಲಾಯಿತು. ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷ  ಬಿ.ಎಂ. ಮಾಧವ ಕಾರ್ಯಕ್ರಮ ಉದ್ಘಾಟಿಸಿ,  ಓಣಂ ಕೇರಳದ ಸಾಂಸ್ಕೃತಿಕ ಮತ್ತು ಸುಗ್ಗಿ ಹಬ್ಬ. ಮಾತ್ರವಲ್ಲ ಪ್ರಕೃತಿ ಜೊತೆಗಿನ ಅವಿನಾಭಾವ ಸಂಬಂಧವನ್ನು ಬೆಸೆಯುವ ಹಬ್ಬವಾಗಿದೆ. ಪ್ರಕೃತಿಯು ರಮಣೀಯತೆ  ಹಾಗೂ ಸಮೃದ್ಧ ಫಸಲಿನಿಂದ     ಕಂಗೊಳಿಸುವ   ಈ ಸಂದರ್ಭದಲ್ಲಿ ಜನರು ಐಕ್ಯತೆ, ಶಾಂತಿ ನೆಮ್ಮದಿಯ, ಸಮೃದ್ಧಿಯ ಪ್ರತೀಕವಾಗಿ   ಹಬ್ಬವನ್ನು ನಾಡಿನೆಲ್ಲೆಡೆ ವಿಜ್ರಂಭಣೆಯಿಂದ ಆಚರಿಸುತ್ತಾರೆ  ಎಂದರು.      ಮುಖ್ಯ ಅತಿಥಿಗಳಾಗಿ

ಅಕ್ಷಯ ಕಾಲೇಜಿನಲ್ಲಿ  ಸಂಭ್ರಮದ ಓಣಂ ಹಬ್ಬ  ಆಚರಣೆ Read More »

ನ.29-30 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಅಹಂಕಾರ ದೂರ ಸರಿದು ಮಮಕಾರ ಇರುವಲ್ಲಿ ಶ್ರೇಯಸ್ಸು ಖಂಡಿತ. ಪರಮಾತ್ಮ, ಜೀವತ್ಮ ಜತೆಯಾದಾಗ ಧರ್ಮ ಉಳಿಯುವ ಕಾರ್ಯ ಆಗುತ್ತಿದೆ. ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಜತೆಗೆ ಧರ್ಮ ಕಾರ್ಯದ ಮೂಲಕ ಹಿಂದೂ ಸಮಾಜಕ್ಕೆ ಶಕ್ತಿ ತುಂಬುವ ಕಾರ್ಯ ಆಗಲಿ ಎಂದು ಒಡಿಯೂರು ಶ್ರೀ ಸಾಧ್ವಿ ಮಾತಾನಂದಮಯೀ ನುಡಿದರು. ಭಾನುವಾರ ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 3ನೇ ವರ್ಷದ ಶ್ರೀನಿವಾಸ

ನ.29-30 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top