ಪುತ್ತೂರು

ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ

ಪುತ್ತೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (Kempegowda Institute of Medical Sciences – KIMS) ಹಾಗೂ ರಾಜ್ಯಾದಾದ್ಯಂತ ವಿವಿಧ ಸಂಸ್ಥೆ ಮತ್ತು ಆಸ್ತಿಗಳನ್ನು ಹೊಂದಿರುವ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹಾಗೂ ಸುಳ್ಯದಲ್ಲಿ ದಿವಂಗತ ಡಾ. ಕುರುಂಜಿ ವೆಂಕಟ್ರಮಣ ಗೌಡರು ಕಟ್ಟಿ ಬೆಳೆಸಿದ Academy of Liberal Education ಇದರ ಬಿ ಟೀಂನ ಅಧ್ಯಕ್ಷ, ಡಾ. ರೇಣುಕಾಪ್ರಸಾದ್ ಕೆ. ವಿ.ಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥದ ದೇವಾರ್ಪಣ ಕಾರ್ಯಕ್ರಮಕ್ಕೆ […]

ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ Read More »

ಡಿವೈಡರ್‌ಗೆ ಗುದ್ದಿದ ಕಾರು: ಕುದ್ಮಾರಿನ ಯುವಕ ಮೃತ್ಯು

ಬಂಟ್ವಾಳ: ಕಾರ್ ಒಂದು ಪಾಣೆಮಂಗಳೂರು ಫ್ಲೈ ಓವರ್‌ನ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಪುತ್ತೂರಿನ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕುದ್ಮಾರು ‌ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಪರಿಣಾಮ ಕಾರ್ತಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಡಿವೈಡರ್‌ಗೆ ಗುದ್ದಿದ ಕಾರು: ಕುದ್ಮಾರಿನ ಯುವಕ ಮೃತ್ಯು Read More »

ಪುಂಜಾಲಕಟ್ಟೆಯಲ್ಲಿ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ

ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಅರ್ಥಪೂರ್ಣವಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಇದರ ನಿರ್ದೇಶಕರಾದ ಪ್ರೊ. ಸೀತಾರಾಮ ಕೇವಳ ಇವರು ಮಾತನಾಡಿ “ಮಕ್ಕಳ ಜೀವನವನ್ನು ರೂಪಿಸುವಲ್ಲಿ ಪೋಷಕರ ಪಾತ್ರ” ಹಾಗೂ “ಸಹಕಾರದಿಂದಲೇ ಸಾಧನೆ” ಎಂದು ಪೋಷಕರ ಮನಮುಟ್ಟುವ ಪ್ರೇರಣಾದಾಯಿ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಪ್ರೊ. ಮಾಧವ ಅವರು ಕಾಲೇಜಿನ ಅಭಿವೃದ್ಧಿಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಹಕಾರವನ್ನು ಉಲ್ಲೇಖಿಸಿ, ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸ್ವಾಗತಿಸಿದರು.

ಪುಂಜಾಲಕಟ್ಟೆಯಲ್ಲಿ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ Read More »

ವಿದ್ಯಾರಶ್ಮಿ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ

ಕೆ ಪಿ ಎಸ್ ಕೆಯ್ಯೂರಿನಲ್ಲಿ ನಡೆದ ಪುತ್ತೂರು ತಾಲೂಕಿನ ಸವಣೂರು ವಲಯಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಹಿಸಾಂ ಗುಂಡೆಸತ ಸ್ಪಧೆ೯ಯಲ್ಲಿ ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಆಳ್ವ ಅಭಿನಂದಿಸಿದರು. ದೈಹಿಕಶಿಕ್ಷಕರಾದ ಶಿವಪ್ರಸಾದ್ ಆಳ್ವ ತರಬೇತಿ ನೀಡಿರುತ್ತಾರೆ.

ವಿದ್ಯಾರಶ್ಮಿ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಕ್ಟೋಬರ್ 27 ರಂದು ಸಾಹಿತ್ಯ ಸಂಘದ ಆಶ್ರಯದಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ ನಡೆಯಿತು. ಪೆರ್ನಾಜೆ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗೋಪಾಲ ಕೃಷ್ಣರವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕತೆ, ಹಾಡು, ಪ್ರಹಸನ ಎಲ್ಲವನ್ನು ಒಳಗೊಂಡ ಲೋಕವೇ ಸಾಹಿತ್ಯ ಲೋಕ ಎಂದರು. ಮನುಷ್ಯನ ದೈನಂದಿನ ಬದುಕಿನ ಆಗುಹೋಗುಗಳನ್ನು ಹಾಡುಗಳ ಮೂಲಕ ವರ್ಣಿಸಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಸಾಹಿತ್ಯ ನಿನಾದದ

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ Read More »

ಬೆಳ್ಳಿರಥ ಸಮರ್ಪಣಾ ಕಾರ್ಯಕ್ರಮಕ್ಕೆ ಡಾ. ರೇಣುಕಾಪ್ರಸಾದ್ ರಿಂದ ಪುತ್ತೂರಿನಲ್ಲಿ ಆಮಂತ್ರಣ

ಪುತ್ತೂರು: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಮತ್ತು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಬಿ ಟೀಂ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಅವರ ಕುಟುಂಬದವರು ಸುಬ್ರಹ್ಮಣ್ಯದ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥದ ಯಾತ್ರೆ ಮತ್ತು ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪುತ್ತೂರಿನಲ್ಲಿ ವಿತರಿಸಿ ಆಹ್ವಾನಿಸುವ ಕಾರ್ಯ ನಡೆಯಿತು. ನಮಗೆ ಸಿಕ್ಕಿದ ಅವಕಾಶ ಸಮಾಜಕ್ಕೆ ಸಲ್ಲಬೇಕುತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದ ಡಾ. ಕುರುಂಜಿ ವೆಂಕಟ್ರಮಣ ವೇದಿಕೆಯಲ್ಲಿ ನಡೆದ

ಬೆಳ್ಳಿರಥ ಸಮರ್ಪಣಾ ಕಾರ್ಯಕ್ರಮಕ್ಕೆ ಡಾ. ರೇಣುಕಾಪ್ರಸಾದ್ ರಿಂದ ಪುತ್ತೂರಿನಲ್ಲಿ ಆಮಂತ್ರಣ Read More »

ಪ್ರಭಾಕರ ಭಟ್‌ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್‌ ಆದೇಶ

ದ್ವೇಷ ಭಾಷಣ ದೂರಿನ ವಿಚಾರಣೆ ಅ.29ಕ್ಕೆ ಮುಂದೂಡಿಕೆ ಪುತ್ತೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್​ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ತಿಳಿಸಿದ್ದು, ವಿಚಾರಣೆಯನ್ನು ಅ.29ಕ್ಕೆ ಕೋರ್ಟ್​ ಮುಂದೂಡಿದೆ. ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್​ ಭಟ್​ ದ್ವೇಷ ಭಾವನೆ ಕೆರಳಿಸುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ

ಪ್ರಭಾಕರ ಭಟ್‌ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್‌ ಆದೇಶ Read More »

ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌

ಉಪ್ಪಳಿಗೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಫ್‌ಐಆರ್‌ ಪುತ್ತೂರು : ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ 118/2025ಕ್ಕೆ ಸಂಬಂಧಿಸಿದಂತೆ ಅ.30ರಂದು ಕಲಂ 35 (3 )ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಪ್ರಭಾಕರ ಭಟ್ ಮನೆಗೆ ನೋಟಿಸ್ ಜಾರಿ ಮಾಡಲಾಗಿದೆ. ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಮೇರೆಗೆ

ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ Read More »

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದೂರು

ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಭಾಕರ ಭಟ್‌ ಪುತ್ತೂರು: ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಎಂಬವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಈಶ್ವರಿ

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದೂರು Read More »

ಸುಳ್ಯ : ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ 2.90 ಲ.ರೂ. ವಂಚನೆ

ಸುಳ್ಯ: ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಪೊಂದರ ಮೂಲಕ ಪರಿಚಯವಾದ ಮಹಿಳೆಯ ಮಾತು ನಂಬಿ ಅವರು ಹಣ ಕಳೆದುಉಕೊಂಡಿದ್ದಾರೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ವೇಳೆ ಇಶಾ ಸಿಂಗ್‌ ಕ್ರಿಪ್ಟೋ

ಸುಳ್ಯ : ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ 2.90 ಲ.ರೂ. ವಂಚನೆ Read More »

error: Content is protected !!
Scroll to Top