ಪುತ್ತೂರು

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಗೆ ದಿನಾಂಕ, ಸಮಯ ಪ್ರಕಟ

ಪುತ್ತೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಚುನಾವಣೆ ನಡೆಸುವ ಕುರಿತು ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 3 ರಂದು ದಿನಾಂಕ ಪ್ರಕಟವಾಗಿದ್ದು, ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಮಯ ಮಧ್ಯಾಹ್ನ 12.30 ರಿಂದ 1.30 ರ ತನಕ, ನಾಮಪತ್ರ ಪರಿಶೀಲನೆ 2.30 ರಿಂದ 3, ಕ್ರಮಬದ್ಧವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಘೋಷಣೆ ಮಧ್ಯಾಹ್ನ 3 ರಿಂದ 3.15, ನಾಮಪತ್ರ ವಾಪಸಾತಿಗೆ ಮಧ್ಯಾಹ್ನ 3.15 ರಿಂದ 3.30 ಹಾಗೂ ಅವಶ್ಯಕತೆಯಿದ್ದಲ್ಲಿ ಚುನಾವಣೆ ನಡೆಸಲು 3.30 ರ ನಂತರ. ನಾಮಪತ್ರವನ್ನು ಅಭ್ಯರ್ಥಿಗಳು ನಿಗದಿತ […]

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಗೆ ದಿನಾಂಕ, ಸಮಯ ಪ್ರಕಟ Read More »

ದ.ಕ.ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಪ್ರಸನ್ನ ಮಾರ್ತ ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ದಕ್ಷಿಣಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತರವರು ಪ್ರಥಮ ಬಾರಿಗೆ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಅವರಿಗೆ ಮಂಡಲದ ವತಿಯಿಂದ ಗ್ರಾಮಾಂತರ ಮತ್ತು ನಗರ ಮಂಡಲ ಮಾಜಿ ಅಧ್ಯಕ್ಷರುಗಳಾದ ಸಾಜ ರಾಧಕೃಷ್ಣ ಆಳ್ವಾ, ಪಿ.ಜಗನ್ನೀವಾಸ ರಾವ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರು. ಈ ವೇಳೆ ಮಾತಾನಾಡಿದ ಪ್ರಸನ್ನ ಮಾರ್ತರವರು, ನಿಮ್ಮೆಲ್ಲರ ಸಹಕಾರದಿಂದ ಹಿಂದುತ್ವದ ಆಧಾರದಲ್ಲಿ ಪಾರ್ಟಿಯನ್ನು ಪುತ್ತೂರಿನಲ್ಲಿ ಬಲಪಡಿಸಲು ಒಗ್ಗಟ್ಟಾಗಿ ಕೆಲಸ ಮಾಡುವ ಎಂದು ಹೇಳಿದರು.

ದ.ಕ.ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಪ್ರಸನ್ನ ಮಾರ್ತ ಬಿಜೆಪಿ ಕಚೇರಿಗೆ ಭೇಟಿ Read More »

ರಾತ್ರಿ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ

ಪುತ್ತೂರು: ಪುತ್ತೂರಿನ ಫ್ಯಾನ್ಸಿ ಅಂಗಡಿಯೊಂದಕ್ಕೆ ದುಷ್ಕರ್ಮಿಯೋರ್ವ ತಡರಾತ್ರಿ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಪುತ್ತೂರಿನ ಮಾಯಿದೇ ದೇವುಸ್ ಚರ್ಚ್ ಬಿಲ್ಡಿಂಗ್ ನಲ್ಲಿರುವ ಶಫೀಕ್ ಮಾಲಕತ್ವದ ಬ್ಲ್ಯಾಕ್ ಡೈಮಂಡ್ ಫ್ಯಾನ್ಸಿ ಅಂಗಡಿಗೆ ತಡರಾತ್ರಿ ಬೆಂಕಿ ಹಚ್ಚಿದ್ದಾನೆ. ಹೆಲ್ಮೆಟ್ ಧರಿಸಿ ಬಂದ ದುಷ್ಕರ್ಮಿ ಫ್ಯಾನ್ಸಿ ಅಂಗಡಿಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದುಬಂದಿದೆ.

ರಾತ್ರಿ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ Read More »

ಆ.25 : ಬೀರ್ನಹಿತ್ಲುವಿನಲ್ಲಿ ‘ಕೆಸರ್ಡ್ ಒಂಜಿ ದಿನ’ ವಿವಿಧ ಗ್ರಾಮೀಣ ಕ್ರೀಡಾಕೂಟ | ಗ್ರಾಮ ದೈವಸ್ಥಾನ ಪುಳುವಾರು, ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯ

ಪುತ್ತೂರು: ಗ್ರಾಮ ದೈವಸ್ಥಾನ ಪುಳುವಾರು ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ವಿವಿಧ ಗ್ರಾಮೀಣ ಕ್ರೀಡಾಕೂಟ ಆ.25 ಭಾನುವಾರ ಬೀರ್ನಹಿತ್ತಲುನಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ಕ್ಕೆ ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು ಸಮಾರಂಭ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪಾಳ್ಗೊಳ್ಳಲಿದ್ದಾರೆ.

ಆ.25 : ಬೀರ್ನಹಿತ್ಲುವಿನಲ್ಲಿ ‘ಕೆಸರ್ಡ್ ಒಂಜಿ ದಿನ’ ವಿವಿಧ ಗ್ರಾಮೀಣ ಕ್ರೀಡಾಕೂಟ | ಗ್ರಾಮ ದೈವಸ್ಥಾನ ಪುಳುವಾರು, ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯ Read More »

ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ | ಮಾರ್ಗಸೂಚಿಯಲ್ಲಿ ಏನೆಲ್ಲಾ ಇದೆ ? | ಇಲ್ಲಿದೆ ಡಿಟೈಲ್ಸ್

ಪುತ್ತೂರು : ಈ ವರ್ಷದ  ಗೌರಿ ಗಣೇಶ ಹಬ್ಬವನ್ನು ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ದ.ಕ.ಜಿಲ್ಲಾಡಳಿತ ಸೂಚಿಸಿದೆ. ವಿಗ್ರಹ ವಿಸರ್ಜನೆ ಕಾರಣದಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲಮೂಲ ಸಂರಕ್ಷಿಸುವ ನಿಟ್ಟಿನಲ್ಲಿ ಫ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ರಾಸಾಯನಿಕ ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಕೆರೆ, ಬಾವಿ ಮುಂತಾದ ಜಲಮೂಲಗಳಲ್ಲಿ ವಿಸರ್ಜಿಸಿರುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅನುಸಾರ ಕ್ರಮ ಕೈಗೊಳ್ಳಲಾಗುವುದು. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ

ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ | ಮಾರ್ಗಸೂಚಿಯಲ್ಲಿ ಏನೆಲ್ಲಾ ಇದೆ ? | ಇಲ್ಲಿದೆ ಡಿಟೈಲ್ಸ್ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ

ಪುತ್ತೂರು: ಅಧ್ಯಾಪನ ಎನ್ನುವುದು ವೃತ್ತಿಯಲ್ಲ ಒಂದು ಜವಾಬ್ಧಾರಿ, ಇದನ್ನು ಅರಿತುಕೊಂಡು ಕಾರ್ಯ ನಿರ್ವಹಿಸಿದರೆ ಮಾತ್ರ ಆತನೊಬ್ಬ ಉತ್ತಮ ಅಧ್ಯಾಪಕನಾಗಬಲ್ಲ ಎಂದು ಐಐಐಟಿ ಧಾರವಾಡದ ಪೂರ್ವ ರಿಜಿಸ್ಟ್ರಾರ್ ಡಾ.ಚನ್ನಪ್ಪ.ಬಿ.ಅಕ್ಕಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆಯುತ್ತಿರುವ ಅತ್ಯುತ್ತಮ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತಾಡಿದರು. ನಮ್ಮ ವಿದ್ಯಾರ್ಹತೆ, ಡಿಗ್ರಿಗಳು ನಮಗೆ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ Read More »

ವಿವೇಕಾನಂದ  ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಪುತ್ತೂರು: ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಚುನಾವಣೆಯ ಮುಖಾಂತರ ರಚಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿ ಕೆ ಆಶೀಶ್ ಆಳ್ವ, ಕಾರ್ಯದರ್ಶಿಯಾಗಿ ಬಿಸಿಎ ವಿಭಾಗದ ನಿಖಿಲ್ ಕುಮಾರ್ ಕೆ. ಟಿ., ಜೊತೆ ಕಾರ್ಯದರ್ಶಿಯಾಗಿ  ಕಲಾ ವಿಭಾಗದ ಪೃಥ್ವಿ ಆರ್ ಆಳ್ವ ಆಯ್ಕೆಯಾದರು.  ಚುನಾವಣೆಯು  ಕಾಲೇಜಿನ ಮುಖ್ಯ ಚುನಾವಣಾಧಿಕಾರಿ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ತಂಡದ ನೇತೃತ್ವದಲ್ಲಿ ನಡೆಯಿತು. ಈ

ವಿವೇಕಾನಂದ  ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಚೂರಿ ಇರಿತ ಕಟ್ಟುಕಥೆ ಹೆಣೆದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾ ಮಾಡಬೇಕು | ನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳಿಂದ ಮನವಿ

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಕಟ್ಟು ಕಥೆ ಹೆಣೆದು ಸಮಾಜದಲ್ಲಿ ಅಶಾಂತಿಗೆ ಕಾರಣಳಾದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ನಗರ ಪೊಲೀಸರಿಗೆ, ಕಾಲೇಜಿನ ಪ್ರಾಂಶುಪಾಲರಿಗೆ, ಗುರುವಾರ ಮನವಿ ಸಲ್ಲಿಸಿದ್ದಾರೆ. ಚೂರಿ ಇರಿತ ಪ್ರಕರಣದಲ್ಲಿ ವಿದ್ಯಾರ್ಥಿನಿಯೊರ್ವಳ ಕಟ್ಟು ಕಥೆ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿತ್ತು. ವಿದ್ಯಾರ್ಥಿನಿಯ ಈ ಕಟ್ಟು ಕಥೆ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ. ಸುಳ್ಳು ದೂರು ನೀಡಿ ಯುವಕನ ಮಾನ ಹಾನಿಗೊಳಿಸಿ

ಚೂರಿ ಇರಿತ ಕಟ್ಟುಕಥೆ ಹೆಣೆದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾ ಮಾಡಬೇಕು | ನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳಿಂದ ಮನವಿ Read More »

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರಿಗಾಗಿ ಪ್ರಸ್ತುತಪಡಿಸಲಿದೆ ವಿಶೇಷ ಕೊಡುಗೆ | ಶಿಕ್ಷಕರ ದಿನಾಚರಣೆ ಪ್ರಯುಕ್ತ ನಡೆಯುವ ಈ ವಿಶೇಷ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ ನೀಡಲಿದೆ. ಶಿಕ್ಷಕರಿಗಾಗಿ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ 150 ವಿಶೇಷ ರಿಯಾಯಿತಿ, ಬೆಳ್ಳಿ ಎಂ.ಆರ್‍.ಪಿ. ಆಭರಣಗಳ ಮೇಲೆ 5% ರಿಯಾಯಿತಿ, ಬೆಳ್ಳಿ ಆಭರಣ ಹಾಗೂ ಸಾಮಾಗ್ರಿಗಳ ಮೇಲೆ 3% ರಿಯಾಯಿತಿ ನೀಡುವ ವ್ಯವಸ್ಥೆ ಮಾಡಿದೆ. ಈ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ ಲಭ್ಯವಿದ್ದು, ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಐಡಿ ಕಾರ್ಡ್

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರಿಗಾಗಿ ಪ್ರಸ್ತುತಪಡಿಸಲಿದೆ ವಿಶೇಷ ಕೊಡುಗೆ | ಶಿಕ್ಷಕರ ದಿನಾಚರಣೆ ಪ್ರಯುಕ್ತ ನಡೆಯುವ ಈ ವಿಶೇಷ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ Read More »

ರಿಕ್ಷಾ-ಕಾರು ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಘಟನೆ  ಹಾರಾಡಿ ಸಮೀಪ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದುಕೊಂಡಿದೆ.

ರಿಕ್ಷಾ-ಕಾರು ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ Read More »

error: Content is protected !!
Scroll to Top