ಪುತ್ತೂರು

ಆ.31 : ವಿಎಚ್‍ ಪಿ ವತಿಯಿಂದ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ | ಆ.24 ಕಬಡ್ಡಿ ಪಂದ್ಯಾಟ, ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ

ಪುತ್ತೂರು: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಮುಳಿಯ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿ, ವಿಶ್ವ ಹಿಂದೂ ಪರಿಷದ್ ಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆರಂಭಗೊಂಡ […]

ಆ.31 : ವಿಎಚ್‍ ಪಿ ವತಿಯಿಂದ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ | ಆ.24 ಕಬಡ್ಡಿ ಪಂದ್ಯಾಟ, ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ Read More »

ಆ.23, 24, 25 : ಚಿನ್ನಾಭರಣಗಳ ಮಳಿಗೆ ‘ಜೋಯಾಲುಕ್ಕಾಸ್’ ನಿಂದ ವಿಶಿಷ್ಟ ಆಭರಣಗಳ ಪ್ರದರ್ಶನ

ಪುತ್ತೂರು: ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಜೋಯಾಲುಕ್ಕಾಸ್ ವತಿಯಿಂದ ವಿಶಿಷ್ಟ ಆಭರಣ ಪ್ರದರ್ಶನ ಆ.23, 24 ಹಾಗೂ 25 ರಂದು ಅರುಣ ಕಲಾ ಮಂದಿರದಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಆಭರಣ ಪ್ರದರ್ಶನದಲ್ಲಿ ಚಿನ್ನ ಮತ್ತು ವಜ್ರಾಭರಣಗಳ ಖರೀದಿ ಮೇಲೆ ಉಚಿತ ಚಿನ್ನದ ನಾಣ್ಯ ನೀಡಲಾಗುವುದು. ವಿಶೇಷ ಕೊಡುಗೆಯಾಗಿ ಹಳೆಯ ಚಿನ್ನ ವಿನಿಮಯ ವ್ಯವಸ್ಥೆ ಇದೆ. ಅತ್ಯುನ್ನತ ಸೌಲಭ್ಯ ಮತ್ತು ಆಭರಣ ಪ್ರದರ್ಶನದಲ್ಲಿನ ಉತ್ಕೃಷ್ಟ ಸೇವೆಗಳು ನಿಮ್ಮ ಆಭರಣಗಳ ಖರೀದಿಯನ್ನು ಸಂತಸದಾಯಕ ಮತ್ತು ಸ್ಮರಣೀಯ ಅನುಭವವನ್ನಾಗಿ ಮಾಡುವುದಲ್ಲದೆ, ಗ್ರಾಹಕರ

ಆ.23, 24, 25 : ಚಿನ್ನಾಭರಣಗಳ ಮಳಿಗೆ ‘ಜೋಯಾಲುಕ್ಕಾಸ್’ ನಿಂದ ವಿಶಿಷ್ಟ ಆಭರಣಗಳ ಪ್ರದರ್ಶನ Read More »

ಬಸ್-ಲಾರಿ ಡಿಕ್ಕಿ

ಪುತ್ತೂರು : ಸರಕಾರಿ ಬಸ್ ಹಾಗೂ ಲಾರಿ ಡಿಕ್ಕಿ ಹೊಡೆದುಕೊಂಡ ಘಟನೆ ಕಬಕ ಸಮೀಪ ನಡೆದಿದೆ. ಮಂಗಳೂರಿನಿಂದ ಪುತ್ತೂರು ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ವಾಹನಕ್ಕೆ ಅಲ್ಪ ಪ್ರಮಾಣದ ಹಾನಿಯಾಗಿದೆನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಬಸ್-ಲಾರಿ ಡಿಕ್ಕಿ Read More »

ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‍ ಎನ್‍.

ಪುತ್ತೂರು: ಮಂಗಳವಾರ ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಹೇಳಿಕೆಯಂತೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‍ ಎನ್‍. ಹೇಳಿದ್ದಾರೆ. ಬುಧವಾರ ಪುತ್ತೂರು ನಗರ ಠಾಣೆಗೆ ಭೇಟಿ ನೀಡಿದ ಸಂದರ್ಭ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ತನಿಖೆಯಲ್ಲಿ ಹೊರಬರುವ ಸತ್ಯಾಸತ್ಯತೆಯನ್ನು ಆಧರಿಸಿ ಸಮಗ್ರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ಪ್ರಕರಣದ ಕುರಿತು ವಿದ್ಯಾರ್ಥಿನಿಯು ನೀಡಿದ ಹೇಳಿಕೆ ಮೇರೆಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ಆರಂಭಿಸಿದ್ದೇವೆ, ತನಿಖೆ ನಡೆಯುತ್ತಿದೆ,. ತನಿಖೆಯ

ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‍ ಎನ್‍. Read More »

ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

ಪುತ್ತೂರು: ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಮೂರು ದಿನಗಳ ಶ್ರೀ ಗುರು ಸಾರ್ವಭೌಮರ  ಆರಾಧನಾ ಮಹೋತ್ಸವಕ್ಕೆ ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಮಂಗಳವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಪಂಚಾಮೃತಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ ನಡೆದು ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ ಮಹಾಪೂಜೆ, ಪಲ್ಲಕ್ಕಿ ಉತ್ಸವ, ರಥೋತ್ಸವ ಸೇವೆ ನಡೆಯಿತು. ಬುಧವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಫಲ ಪಂಚಾಮೃತಾಭಿಷೇಕ, ಶ್ರೀ ಗುರುಗಳ ಆರಾಧನೆ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ

ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ Read More »

ಚೂರಿ ಇರಿತ ಪ್ರಕರಣ : ವಿದ್ಯಾರ್ಥಿಯ ಮನೆಗೆ ಅರುಣ್ ಪುತ್ತಿಲ ಭೇಟಿ

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಸುಳ್ಳು ಪ್ರಕರಣ ದಾಖಲಾದ ವಿದ್ಯಾರ್ಥಿಯ ಮನೆಗೆ ಬುಧವಾರ ಅರುಣ್ ಪುತ್ತಿಲ ಭೇಟಿ ನೀಡಿ ಧೈರ್ಯ ತುಂಬಿದರು. ವಿದ್ಯಾರ್ಥಿಯ ಮಿತ್ತೂರಿನಲ್ಲಿರುವ ಮನೆಗೆ ಭೇಟಿ ನೀಡಿ, ವಿದ್ಯಾರ್ಥಿ ಶಾಲಾ ಚಟುವಟಿಕೆಯಲ್ಲಿ ಮೊದಲಿನಂತೆ ತೊಡಗಿಸಿಕೊಳ್ಳುವಂತೆ ಹೇಳಿದರು. ನಿನ್ನೆ ನಾಟಕೀಯ ಪ್ರಹಸನದಲ್ಲಿ ವಿದ್ಯಾರ್ಥಿನಿಯ ಹಾಗೂ ಅವರ ಸಂಗಡಿಗರ ನಡೆಯಿಂದ ಮಾಡದ ತಪ್ಪಿಗೆ ವಿದ್ಯಾರ್ಥಿ ರಾತ್ರಿಯವರೆಗೆ ಪೊಲೀಸ್ ವಶದಲ್ಲಿದ್ದು ಮಾನಸಿಕವಾಗಿ ನೊಂದಿದ್ದನ್ನು. ನಂತರ ರಾತ್ರಿ ಕೆಲವು ಸಮಾಜಘಾತುಕ ಶಕ್ತಿಗಳು ವಿದ್ಯಾರ್ಥಿಗಳ ಫೋಟೋ ಹಂಚಿಕೊಂಡು

ಚೂರಿ ಇರಿತ ಪ್ರಕರಣ : ವಿದ್ಯಾರ್ಥಿಯ ಮನೆಗೆ ಅರುಣ್ ಪುತ್ತಿಲ ಭೇಟಿ Read More »

ಆ.24 : ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾನಿಧಿ- ಸಹಾಯಧನ ವಿತರಣಾ ಸಮಾರಂಭ

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವರ್ಷಂಪ್ರತಿಯಂತೆ ಸಂಘದ ಧರ್ಮಾರ್ಥಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಆ.24ರಂದು ಬೆಳಿಗ್ಗೆ 11.30ಕ್ಕೆ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್‌ನಲ್ಲಿ ನಡೆಯಲಿದೆ ಎಂದು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ

ಆ.24 : ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾನಿಧಿ- ಸಹಾಯಧನ ವಿತರಣಾ ಸಮಾರಂಭ Read More »

ಮುಡಾ ಹಗರಣ : ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾರಿಂದ ದೇಶ ವಿರೋಧಿ ಹೇಳಿಕೆ | ಮೊಕದ್ದಮೆ ದಾಖಲಿಸುವಂತೆ ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ನಗರ ಠಾಣೆಗೆ ದೂರು

ಪುತ್ತೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಒಪ್ಪಿಗೆ ನೀಡಿದ ರಾಜ್ಯಪಾಲರ ನಡೆಯ ವಿರುದ್ಧ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಪುತ್ತೂರು ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರ ಠಾಣೆಗೆ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ರಾಜ್ಯಪಾಲರು ಒಪ್ಪಿಗೆ ನೀಡಿದ ಪ್ರಾಸಿಕ್ಯೂಷನ್ ಹಿಂತೆಗೆದುಕೊಳ್ಳಬೇಕು ಅಥವಾ ಇಲ್ಲಿಂದ ವಾಪಾಸು ಹೋಗಬೇಕು. ಇಲ್ಲದಿದ್ದರೆ ಬಾಂಗ್ಲಾ ದೇಶದ ಪ್ರಧಾನಿಗೆ ಆದ ಗತಿ ಬರಲಿದೆ

ಮುಡಾ ಹಗರಣ : ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾರಿಂದ ದೇಶ ವಿರೋಧಿ ಹೇಳಿಕೆ | ಮೊಕದ್ದಮೆ ದಾಖಲಿಸುವಂತೆ ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ನಗರ ಠಾಣೆಗೆ ದೂರು Read More »

ರಾಜ್ಯ-ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜಿಲ್ಲಾ ಸಮಿತಿ ಸಭೆ

ಪುತ್ತೂರು: ದ. ಕ ಜಿಲ್ಲೆಯ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸಂಘದ ಸಭೆ ಪುತ್ತೂರಿನ ಮಾತೃಛಾಯಾ ಸಭಾಂಗಣದಲ್ಲಿ  ಜಿಲ್ಲಾಧ್ಯಕ್ಷ ರಾಷ್ಟ್ರ ಪ್ರಶಸ್ತಿ ಪುರಸ್ಕೃತ  ಬಿ.ಐತಪ್ಪ ನಾಯ್ಕ್ ಅಧ್ಯಕ್ಷತೆಯಲ್ಲಿ ಜರಗಿತು. ಬೆಂಗಳೂರಿನ ಕೇಂದ್ರ ಸಂಘದ ಸಭೆಯ  ಈ ವರೆಗಿನ ಬೆಳವಣಿಗೆಗಳನ್ನು ಕಾರ್ಯದರ್ಶಿ  ರಮೇಶ್. ರಾಯಿ ವಿವರಿಸಿದರು. ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನ ಎಲ್ಲಾ ಸಭೆಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪರವಾಗಿ ಭಾಗವಹಿಸಿದ  ರಮೇಶ್ ರಾಯಿ ಅವರನ್ನು  ಸನ್ಮಾನಿಸಲಾಯಿತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಂಗಾಧರ ಆರ್ ಕೆ

ರಾಜ್ಯ-ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜಿಲ್ಲಾ ಸಮಿತಿ ಸಭೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಪುತ್ತೂರು:  ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನದ ಸ್ಮರಣಾರ್ಥವಾಗಿ ಸದ್ಭಾವನಾ ದಿನವನ್ನು ಆಚರಿಸಲಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಡಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಚಂದ್ರಶೇಖರ್ ಕೆ ಸದ್ಭಾವನಾ ದಿನದ ಮಹತ್ವವನ್ನು ವಿವರಿಸಿ, ಸದ್ಭಾವನಾ ದಿನ ಅಂದರೆ ಸೌಹಾರ್ದತೆ ಮತ್ತು ಸಮರಸತೆಯ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು. ಪ್ರಾಚಾರ್ಯರಾದ ರೆ.ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋರವರ ನೇತೃತ್ವದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ  ಸಂದರ್ಭದ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ Read More »

error: Content is protected !!
Scroll to Top