ಪುತ್ತೂರು

ಬಾಂಗ್ಲಾದ ಹಿಂದೂಗಳ ವಿರುದ್ಧ ಕ್ರೌರ್ಯ | ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರು: ನಗರದ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಂಗ್ಲಾದೇಶದ ಮತಾಂಧರ ಅಟ್ಟಹಾಸಕ್ಕೆ ಬಲಿಯಾದ ಹಿಂದೂ ಬಾಂಧವರ ದಯನೀಯ ಸ್ಥಿತಿಗಾಗಿ ಅಶ್ರು ತರ್ಪಣ, ಮೌನ ಪ್ರಾರ್ಥನೆ ನಡೆಯಿತು. ಹಿಂದೂಗಳ ವಿರುದ್ಧದ ಅತ್ಯಾಚಾರ, ಅನಾಚಾರ, ಆಕ್ರಮಣ, ಅಮಾನವೀಯ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧವಾಗಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಹಿಂದೂ ವಿರೋಧಿ ದುಷ್ಟ ಶಕ್ತಿಗಳ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ನಮ್ಮ ದೇಶದ ಪ್ರಧಾನ ಮಂತ್ರಿಯವರಿಗೆ ಬಾಂಗ್ಲಾದ ಹಿಂದೂಗಳ ಹಿತರಕ್ಷಣೆಗಾಗಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪತ್ರಬರೆಯುವ ನಿರ್ಣಯ ಕೈಗೊಳ್ಳಲಾಯಿತು. ವಿದ್ಯಾರ್ಥಿ […]

ಬಾಂಗ್ಲಾದ ಹಿಂದೂಗಳ ವಿರುದ್ಧ ಕ್ರೌರ್ಯ | ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ | ನಾರಾಯಣ ಗುರುಗಳು ಮೋಡದ ಮಧ್ಯೆ ಮೂಡಿ ಬಂದ ಬೆಳ್ಳಿರೇಖೆ : ಪ್ರೊ. ಎ.ಕೃಷ್ಣಪ್ಪ ಪೂಜಾರಿ

ಪುತ್ತೂರು: ಶೋಷಣೆಯ ಸುಳಿಗೆ ಸಿಲುಕಿದ್ದ ಬಿಲ್ಲವ ಸಮಾಜ ಇಂದು ಈ ಹಂತಕ್ಕೆ ತಲುಪಲು ನಾರಾಯಣ ಗುರುಗಳ ಸಂದೇಶ, ಮಾರ್ಗದರ್ಶನ ಕಾರಣ. ಅನ್ನ, ನೀರು, ಭೂಮಿ, ತಂದೆ- ತಾಯಿಗಳ ಋಣ ನಮ್ಮ ಮೇಲೆ ಇರುವಂತೆ ಎಲ್ಲ ತುಳಿತಕ್ಕೆ ಒಳಗಾದ ಸಮಾಜಗಳಿಗೆ ನಾರಾಯಣ ಗುರುಗಳ ಋಣವಿದೆ ಎಂದು ನಿವೃತ್ತ ಪ್ರಾಂಶುಪಾಲರಾದ ಬೆಳ್ತಂಗಡಿಯ ಪ್ರೊ..ಎ.ಕೃಷ್ಣಪ್ಪ ಪೂಜಾರಿ ಹೇಳಿದರು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಪುತ್ತೂರು ನಾರಾಯಣ ಗುರು ಸಭಾಭವನದಲ್ಲಿ 

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ | ನಾರಾಯಣ ಗುರುಗಳು ಮೋಡದ ಮಧ್ಯೆ ಮೂಡಿ ಬಂದ ಬೆಳ್ಳಿರೇಖೆ : ಪ್ರೊ. ಎ.ಕೃಷ್ಣಪ್ಪ ಪೂಜಾರಿ Read More »

ಚೂರಿ ಇರಿತ ಸುಳ್ಳು ಕಥೆ ಸೃಷ್ಟಿ | ಠಾಣೆಗೆ ಆಗಮಿಸಿದ ಬಿಜೆಪಿ ಮುಖಂಡರು –  ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿ ಬಿಡುಗಡೆ | ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್‍, SDPI ಮುಖಂಡರನ್ನು ಬಂಧಿಸಬೇಕು – ಪುತ್ತಿಲ

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಆರೋಪದ ಬಗ್ಗೆ ಕ್ಷಣಕ್ಕೊಂದು ಹೇಳಿಕೆ ಬಗ್ಗೆ ಅನುಮಾನ ಸೃಷ್ಟಿಯಾಗಿದ್ದು, ಇದೀಗ ಪೊಲೀಸರು ತನಿಖೆ ನಡೆಸಿ ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿಯದ್ದು ಯಾವೂದೇ ತಪ್ಪು ಕಂಡು ಬರದ ಕಾರಣ ಪೊಲೀಸರು ವಿದ್ಯಾರ್ಥಿಯ ಬಿಡುಗಡೆಗೊಳಿಸಿದ್ದಾರೆ. ಮೊದಲು ಚೂರಿಯಿಂದ ಇರಿತ ಎಂಬ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿತ್ತು,  ನಂತರ  ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ವಿಡಿಯೋ ಬಿಡುಗಡೆಗೊಳಿಸಲಾಯಿತು. ಇದೀಗ  ಚೂರಿ ಎಂಬ  ಆರೋಪದ ಬದಲು ಬ್ಲೇಡ್, ಗ್ಲಾಸ್ ನಿಂದ ಇರಿದಿದ್ದಾರೆ ಎಂಬ ಆರೋಪ 

ಚೂರಿ ಇರಿತ ಸುಳ್ಳು ಕಥೆ ಸೃಷ್ಟಿ | ಠಾಣೆಗೆ ಆಗಮಿಸಿದ ಬಿಜೆಪಿ ಮುಖಂಡರು –  ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿ ಬಿಡುಗಡೆ | ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್‍, SDPI ಮುಖಂಡರನ್ನು ಬಂಧಿಸಬೇಕು – ಪುತ್ತಿಲ Read More »

ಪುತ್ತೂರು : ವಿದ್ಯಾರ್ಥಿಯ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಜಗಳ | ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

ಪುತ್ತೂರು : ಹಿಂದೂ ಯುವಕ ತನಗೆ ಚೂರಿ ಇರಿದಿದ್ದಾನೆ ಎಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಹೈಡ್ರಾಮ ‌ನಡೆದಿದ್ದು, ಈ ಪ್ರಕರಣ ಸತ್ಯಾಸತ್ಯತೆ ಬೇರೆಯೇ ಇದೆ. ಈಗಾಗಲೇ ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟು ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಆದರೆ ಅವಳ ಕೈಯಲ್ಲಿ ಕೇವಲ ಗೀರಿದ ಗುರುತು ಕಂಡು ಬಂದಿದೆ. ಆದರೆ ಮಾಹಿತಿ ಪ್ರಕಾರ,

ಪುತ್ತೂರು : ವಿದ್ಯಾರ್ಥಿಯ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಜಗಳ | ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು Read More »

ಐವನ್‌ ಡಿಸೋಜ ಮತಾಂಧ ಮನಸ್ಥಿತಿಯುಳ್ಳವರು : ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು : ರಾಜ್ಯಪಾಲರನ್ನು ರಾಷ್ಟ್ರಪತಿಯವರು ಹಿಂದಕ್ಕೆ ಕರೆಸಿಕೊಳ್ಳಬೇಕು ಇಲ್ಲದಿದ್ದರೆ ಬಾಂಗ್ಲಾ ರೀತಿಯಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕಾಂಗ್ರೆಸ್ ನಾಯಕ ಐವನ್ ಡಿ.ಸೋಜ ಹೇಳಿರುವುದು ಆ ದೇಶದ ಮತಾಂಧ ಮೂಲಭೂತವಾದಿಗಳ ಮನಸ್ಥಿತಿಯೇ ಇವರಿಗೂ ಇರುವುದೆಂದೂ ತೋರಿಸುತ್ತದೆ . ಸಂವಿಧಾನ,ಪ್ರಜಾಪ್ರಭುತ್ವವನ್ನು ಉಳಿಸುವವರು ನಾವೇ ಎಂದು ಹೇಳುವ ಕಾಂಗ್ರೇಸಿಗರ ಈ ರೀತಿಯ ವರ್ತನೆಯನ್ನು ಈ ರಾಜ್ಯದ ಜನರು ಸಹಿಸುವುದಿಲ್ಲ ಎಂದು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ ತಿಳಿಸಿದರು. ಕ್ರಿಶ್ಚಿಯನ್ ಕೋಟಾದಿಂದ ಜನಪ್ರತಿನಿಧಿ ಮತ್ತು ನಾಯಕನಾಗಿರುವ ಐವನ್ ರವರು

ಐವನ್‌ ಡಿಸೋಜ ಮತಾಂಧ ಮನಸ್ಥಿತಿಯುಳ್ಳವರು : ಸಾಜ ರಾಧಾಕೃಷ್ಣ ಆಳ್ವ Read More »

ವಿದ್ಯಾರ್ಥಿನಿಗೆ  ಚೂರಿ ಇರಿತ

ಪುತ್ತೂರು : ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳಿಗೆ   ಅದೇ ಕಾಲೇಜಿನ  ಹಿಂದೂ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವಳ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ.ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಅಂಚೆ ಕಚೇರಿ ಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಮುಂಭಾಗ ಘಟನೆ ನಡೆದಿದೆ.

ವಿದ್ಯಾರ್ಥಿನಿಗೆ  ಚೂರಿ ಇರಿತ Read More »

ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ | ಗಂಭೀರ ಗಾಯ

ಪುತ್ತೂರು : ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಸ್ಕೂಟರ್ ಸವಾರನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಕುಂಬ್ರ ಪೆಟ್ರೋಲ್‌ ಪಂಪ್ ನ ಮ್ಯಾನೇಜ‌ರ್ ಆಗಿರುವ ಧನುಷ್ ಗಾಯಗೊಂಡವರು. ಧನುಷ್‌ ಅವರು ಮನೆಯಿಂದ ತನ್ನ ಉದ್ಯೋಗದ ಸ್ಥಳವಾದ, ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ ಕುರುಂಜ ಮಣ್ಣಾಪು ಬಳಿ ಕಾಡು ಹಂದಿ ದಿಢೀ‌ರ್ ದಾಳಿ ನಡೆಸಿದೆ. ಇದರಿಂದ ಸವಾರ ಗಲಿಬಿಲಿಗೊಂಡಿದ್ದು, ಬೈಕ್‌ ಸಮೇತ

ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ | ಗಂಭೀರ ಗಾಯ Read More »

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ “ಅಷ್ಟಾದಶ” ಸಂಭ್ರಮ

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 18ನೇ ವರ್ಷದ “ಅಷ್ಟಾದಶ ಸಂಭ್ರಮ” ವಿಜೃಂಭಣೆಯಿಂದ ಆಚರಿಸಲಾಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಬದುಕಿನಲ್ಲಿ ಗುರಿ ಹಾಗೂ ಗುರು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ನಾವು ನಮ್ಮ ಗುರಿಯನ್ನು ಮರೆಯಬಾರದು ಎಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ ಗೋಕುಲ್‌ನಾಥ್ ಪ್ರಸ್ತಾವಿಕವಾಗಿ ಮಾತನಾಡಿ, ಪ್ರಗತಿಯ ಮುಂದಿನ ಗುರಿಗಳ ಬಗ್ಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕ ಗೋಕುಲ್‌ನಾಥ್

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ “ಅಷ್ಟಾದಶ” ಸಂಭ್ರಮ Read More »

ಈಜು ಸ್ಪರ್ಧೆ : ಸಿಯಾ ಭಾವಿನ್ ಸವಜಾನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಂಗಳೂರು : ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟೋತ್ಥಾನ ವಿದ್ಯಾಕೇಂದ್ರದಲ್ಲಿ ಆ. 17ರಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯಾ ಭಾವಿನ್ ಸವಜಾನಿ ಅವರು 200 ಮೀಟರ್ ಫ್ರೀ ಸ್ಟೈಲ್ ಮತ್ತು 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. 100 ಮೀಟರ್ ಬ್ಯಾಕ್ ಸ್ಟ್ರೋಕ್, 4×100 ರಿಲೇ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿಪದಕ ಪಡೆದು ರಾಷ್ಟ್ರ ಮಟ್ಟಕ್ಕೆ

ಈಜು ಸ್ಪರ್ಧೆ : ಸಿಯಾ ಭಾವಿನ್ ಸವಜಾನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ  ರಕ್ಷಾಬಂಧನ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗದ ಕಾಲೇಜು ವಿದ್ಯಾರ್ಥಿ ಪ್ರಮುಖ್ ರೋಹಿತ್  ಹೇಳಿದರು. ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು. ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »

error: Content is protected !!
Scroll to Top