ಪುತ್ತೂರು

ಆ.17 : ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 50ನ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷದ್ ಮಾತೃ ಮಂಡಳಿ ಜಂಟಿ ಆಶ್ರದಯದಲ್ಲಿ 50ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.17 ರಂದು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷೆ ವೀಣಾ ಕೊಳತ್ತಾಯ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1974 ರಲ್ಲಿ ನಮ್ಮ ಸಂಸ್ಥೆಯಿಂದ ವರಮಹಾಲಕ್ಷ್ಮೀ ಪೂಜೆ ಆರಂಭಗೊಂಡಿದ್ದು, ಎರಡು ವರ್ಷಗಳ ಕಾಲ ವೆಂಕಟ್ರಮಣ ದೇವಸ್ಥಾನದಲ್ಲಿ ನಡೆಯಿತು. ಬಳಿಕ ಎರಡು […]

ಆ.17 : ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 50ನ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿ | ಹಿಂದೂಗಳ ರಕ್ಷಣೆಗೆ ಕೇಂದ್ರ ಸರಕಾರ ಅಲ್ಲಿನ ಸರಕಾರಕ್ಕೆ ಒತ್ತಡ ತರಬೇಕು : ಡಾ.ಕೃಷ್ಣಪ್ರಸನ್ನ

ಪುತ್ತೂರು: ಬಾಂಗ್ಲಾದಲ್ಲಿ ಅರಾಜಕತೆ ಉಂಟಾಗಿ ಘಟರ್ಷಣೆಗಳು ನಡೆಯುತ್ತಿದ್ದು, ಹಿಂದೂಗಳನ್ನು ಹತ್ಯೆ ಮಾಡುವ ಮೂಲಕ ದೌರ್ಜನ್ಯ ಎಸಗಲಾಗುತ್ತಿದೆ. ತಕ್ಷಣ ಕೇಂದ್ರ ಸರಕಾರ ಅಲ್ಲಿನ ಹಿಂದೂಗಳ ರಕ್ಷಣೆಗೆ ಅಲ್ಲಿನ ಸರಕಾರಕ್ಕೆ ಒತ್ತಡ ತರಬೇಕು ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಗ್ರಹಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಲವಾರು ಸಮಯಗಳಿಂದ ಅಲ್ಲಿನ ಹಿಂದೂ ಧಾರ್ಮಿಕ ಸಂಸ್ಥೆಗಳು, ಹಿಂದೂಗಳ ವ್ಯಾಪಾರ ಸಂಸ್ಥೆಗಳು, ಹಿಂದೂಗಳ ಮನೆಯಗಳನ್ನು ಗುರಿಯಾಗಿಸಿಕೊಂಡು ದಾಳ ನಡೆಸಲಾಗುತ್ತಿದೆ. ಈಗಾಗಲೇ ದಾಳಿ ಪರಿಣಾಮ ಹಿಂದೂಗಳ ರುದ್ರಭೂಮಿ, 100

ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿ | ಹಿಂದೂಗಳ ರಕ್ಷಣೆಗೆ ಕೇಂದ್ರ ಸರಕಾರ ಅಲ್ಲಿನ ಸರಕಾರಕ್ಕೆ ಒತ್ತಡ ತರಬೇಕು : ಡಾ.ಕೃಷ್ಣಪ್ರಸನ್ನ Read More »

ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ

ಪುತ್ತೂರು : ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ವೃತ್ತದ ಬಳಿ ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮ ನಿವಾಸಿ ಮೊಹಮ್ಮದ್ ನಾಸೀರ್ (21), ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್.ಬಿ(21) ಹಾಗೂ ಸಿನಾನ್ ಬಂಧಿತ ಆರೋಪಿಗಳು. ನೆಕ್ಕಿಲಾಡಿ ಜಂಕ್ಷನ್ ಬಳಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ

ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ Read More »

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ – ಸೆನ್ಸಾಯಿ ಮಾಧವ ಅಳಿಕೆ ಅವರ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವಿಟ್ಲ: ಬಂಟ್ವಾಳ ಮತ್ತು ಪುತ್ತೂರಿನಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ. ಪ್ರಶಸ್ತಿ ಗಳಿಸಿದ ವಿಧ್ಯಾರ್ಥಿಗಳು –  ಬಂಟ್ವಾಳ ತಾಲೂಕಿನ ಓಜಾಲು ಶಾಲೆ ಲಿತಿಕ ಪ್ರಥಮ ಮತ್ತು ಲಿಪಿಕ ದ್ವಿತೀಯ, ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ಸಾನ್ವಿ ಪ್ರಥಮ, ಚೈತನ್ಯ ಕೃಷ್ಣ ಪ್ರಥಮ, ಪ್ರಣವ್ ಪ್ರಥಮ ಮತ್ತು ಪ್ರಥಮ್ ಕಾಮತ್ ದ್ವಿತೀಯ, ಧನ್ವಿ ದ್ವಿತೀಯ,  ಜನಪ್ರಿಯ ಸ್ಕೂಲ್ ಮನಾಫ್ ಪ್ರಥಮ, ಸಂತ ರೀಟಾ ಶಾಲೆಯ ಮೌಶ್ಮಿ ಪ್ರಥಮ,

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ – ಸೆನ್ಸಾಯಿ ಮಾಧವ ಅಳಿಕೆ ಅವರ ವಿದ್ಯಾರ್ಥಿಗಳಿಗೆ ಪ್ರಶಸ್ತಿ Read More »

77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರು ಆಕರ್ಷಣ್‌ ಇಂಡಸ್ಟ್ರೀಸ್‌ ಸಮರ್ಪಿಸುತ್ತಿದೆ ವಿಶೇಷ ಕೊಡುಗೆಗಳು | ಸೈನಿಕರಿಗಾಗಿ ಮತ್ತಷ್ಟು ರಿಯಾಯಿತಿ | ವಿಶೇಷ ಕೊಡುಗೆಗಳು ಆ.10 ರಿಂದ 14 ರ ವರೆಗೆ ಲಭ್ಯ

ಪುತ್ತೂರು: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರು ಆಕರ್ಷಣ್‌ ಇಂಡಸ್ಟ್ರೀಸ್‌ ವಿಶೇಷ ಕೊಡುಗೆಗಳನ್ನು ಸಮರ್ಪಿಸುತ್ತಿದ್ದು, ಸೈನಿಕರಿಗಾಗಿ ಇನ್ನೂ ಹೆಚ್ಚಿನ ರಿಯಾಯಿತಿಗಳನ್ನು ನೀಡುತ್ತಿದೆ. ಈ ವಿಶೇಷ ಕೊಡುಗೆಗಳು ಆಗಸ್ಟ್‌ 10 ರಿಂದ 14ರವರೆಗೆ ಲಭ್ಯವಿದ್ದು, ಕೇವಲ 5 ದಿನಗಳು ಮಾತ್ರ ನಡೆಯಲಿವೆ. ವಿಶೇಷ ಕೊಡುಗೆಗಳ ಅಂಗವಾಗಿ ರೆಡಿವಾಲ್-ರೆಡಿಮೇಡ್‌ ಕಂಪೌಂಡ್‌ ಬುಕ್‌ ಮಾಡಿ ಉಚಿತವಾಗಿ ಅಳವಡಿಸಿಕೊಳ್ಳಿ ಮತ್ತು ಬೇಲಿಕಂಬಗಳು, ಡ್ರ್ಯಾಗನ್‌ ಫ್ರುಟ್‌ ಸ್ಟ್ಯಾಂಡ್‌ಗಳನ್ನು ಬುಕ್‌ ಮಾಡಿ ಸಾಗಾಟದ ವೆಚ್ಚವನ್ನು ಉಚಿತವಾಗಿ ಪಡೆಯಿರಿ. ಆಕರ್ಷಣ್‌ ರೆಡಿವಾಲ್‌ ನಿಮ್ಮ ಮನೆಗೆ ಕಂಪೌಂಡ್‌ ನಿರ್ಮಿಸಿ ಕೇವಲ

77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರು ಆಕರ್ಷಣ್‌ ಇಂಡಸ್ಟ್ರೀಸ್‌ ಸಮರ್ಪಿಸುತ್ತಿದೆ ವಿಶೇಷ ಕೊಡುಗೆಗಳು | ಸೈನಿಕರಿಗಾಗಿ ಮತ್ತಷ್ಟು ರಿಯಾಯಿತಿ | ವಿಶೇಷ ಕೊಡುಗೆಗಳು ಆ.10 ರಿಂದ 14 ರ ವರೆಗೆ ಲಭ್ಯ Read More »

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು

ಪುತ್ತೂರು: ಕಾಂಕ್ರೀಟ್ ಮಿಕ್ಸ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಲಾರಿಯೊಂದಕ್ಕೆ ಸೈಡ್ ಕೊಡುವ ಭರದಲ್ಲಿ ಉರುಳಿ ಬಿದ್ದ ಘಟನೆ ಬೆಟ್ಟಂಪಾಡಿ ಗ್ರಾಮದ ಕೊರಿಂಗಿಲದಲ್ಲಿ ಇಂದು ನಡೆದಿದೆ. ಆರ್ಲಪದವಿನ ಕಾಮಗಾರಿ ಒಂದಕ್ಕೆ ಕಾಂಕ್ರೀಟ್ ಮಿಕ್ಸ್ ಹೇರಿಕೊಂಡು ಹಂಟ್ಯಾರು – ಪಾಣಾಜೆ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ ಕೊರಿಂಗಿಲ ಎಂಬಲ್ಲಿಗೆ ತಲುಪಿದಾಗ ಎದುರಿನಿಂದ ಬಂದ ಲಾರಿಗೆ ಸೈಡ್ ಕೊಡುವ ಭರದಲ್ಲಿ ಈ ದುರಂತ ಸಂಭವಿಸಿದ್ದು ಸುಮಾರು 30 ಅಡಿ ಆಳದ ತೋಟಕ್ಕೆ ಬಿದ್ದಿದೆ.  ಅದರ ಚಾಲಕ ಅದೃಷ್ಟವಶಾತ್ ಪಾರಗಿದ್ದಾನೆ. ಅಗಲ ಕಿರಿದಾದ ರಸ್ತೆ ಹಾಗೂ

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್‍ ಕುಮಾರ್ ರಿಗೆ ‘ನ್ಯೂಸ್ ಪುತ್ತೂರು’ನ ‘ಶಿವಾಮೃತ’ ಸಂಚಿಕೆ ಹಸ್ತಾಂತರ

ಪುತ್ತೂರು: ‘ನ್ಯೂಸ್ ಪುತ್ತೂರು’ ಹೊರತಂದ ‘ಶಿವಾಮೃತ’ ಸಂಚಿಕೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್‍ ಕುಮಾರ್‍ ಅವರಿಗೆ ಶುಕ್ರವಾರ ಹಸ್ತಾಂತರಿಸಲಾಯಿತು. ಯೋಜನೆಯ ನಿರ್ದೇಶಕರ ಕಚೇರಿಗೆ ತೆರಳಿ “ಶಿವಾಮೃತ’ ಸಂಚಿಕೆ ಹಸ್ತಾಂತರಿಸಲಾಯಿತು. ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನ್ಯೂಸ್ ಪುತ್ತೂರು ಹಾಗೂ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ವಸಂತ ಎಸ್‍. ವೀರಮಂಗಲ, ನಾಗೇಶ್‍ ಕೆಡೆಂಜಿ, ಮುರಳೀಧರ ಕೆ.ಎಲ್‍, ಪ್ರೇರಣಾ ಸಂಸ್ಥೆಯ ನಿರ್ದೇಶಕಿ ಮೋಕ್ಷಿತಾ, ಪ್ರೇರಣಾ ಸಂಸ್ಥೆಯ ಮೆನೇಜರ್ ದಯಾಮಣಿ, ಯೋಜನೆಯ ಯೋಜನಾಧಿಕಾರಿ ಮುಖೇಶ್‍, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್‍ ಕುಮಾರ್ ರಿಗೆ ‘ನ್ಯೂಸ್ ಪುತ್ತೂರು’ನ ‘ಶಿವಾಮೃತ’ ಸಂಚಿಕೆ ಹಸ್ತಾಂತರ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ | ಸರತಿ ಸಾಲಿನಲ್ಲಿ ಭಕ್ತರಿಂದ ಹಾಲು, ಸೀಯಾಳ ಅರ್ಪಣೆ

ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಆಚರಿಸಲಾಯಿತು. ನೂರಾರು ಭಕ್ತಾದಿಗಳು ಮುಂಜಾನೆಯಿಂದಲೇ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಾಲು, ಸೀಯಾಳಾ, ಹಣ್ಣುಕಾಯಿ ಅರ್ಪಿಸಿ ಪುನೀತರಾದರು. ದೇವಸ್ಥಾನದ ಅರ್ಚಕರು ಶ್ರೀ ನಾಗನಿಗೆ ಅಭಿಷೇಕ ಮಾಡಿದರು. ಈ ಸಂದರ್ಭದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಸಂಚಾಲಕ ಸವಣೂರು ಸೀತಾರಾಮ ರೈ, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಪಾಲ್ಗೊಂಡಿದ್ದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ | ಸರತಿ ಸಾಲಿನಲ್ಲಿ ಭಕ್ತರಿಂದ ಹಾಲು, ಸೀಯಾಳ ಅರ್ಪಣೆ Read More »

ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಸೌಮ್ಯಾ ಭಟ್ ಕೊಲೆ ಪ್ರಕರಣ | ಪ್ರಕರಣಕ್ಕೆ 27 ವರ್ಷ ಪೂರ್ತಿ | ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿಯ ಸುಳಿವೇ ಇಲ್ಲ

ಪುತ್ತೂರು: ವಿದ್ಯಾರ್ಥಿನಿ ಸೌಮ್ಯಾ ಭಟ್‌ ಕೊಲೆ ಪ್ರಕರಣ ನಡೆದು 27 ವರ್ಷ ತುಂಬಿದ್ದು, ಈ ಪ್ರಕರಣ ಕರಾವಳಿಯನ್ನು ಬೆಚ್ಚಿ ಬೀಳಿಸಿತ್ತು. ಆದರೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿ ಮಿಲಿಟ್ರಿ ಅಶ್ರಫ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಸ್‌ ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಸೌಮ್ಯಾ ಭಟ್‌ ಅವರನ್ನು ಹಿಂಬಾಲಿಸಿ ಕುದಂಬ್ಲಾಜೆಯ ಮಿಲಿಟ್ರಿ ಅಶ್ರಫ್‌ ಬರ್ಬರವಾಗಿ ಕೊಲೆಗೈದಿದ್ದ ಆ ಘಟನೆ ಇಡೀ ಪುತ್ತೂರು ಕೆರಳಿ ಕೆಂಡದಂತೆ ಮಾಡಿತ್ತು. 1997ರ ಆಗಸ್ಟ್‌ 7 ರಂದು ಸಂಜೆ

ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಸೌಮ್ಯಾ ಭಟ್ ಕೊಲೆ ಪ್ರಕರಣ | ಪ್ರಕರಣಕ್ಕೆ 27 ವರ್ಷ ಪೂರ್ತಿ | ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿಯ ಸುಳಿವೇ ಇಲ್ಲ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ | ಸರತಿ ಸಾಲಿನಲ್ಲಿ ನಿಂತು ಹಾಲು, ಸೀಯಾಳ ಅರ್ಪಿಸಿದ ಭಕ್ತಾದಿಗಳು

ಪುತ್ತೂರು: ಶ್ರಾವಣ ಮಾಸ ಶುಕ್ಲ ಪಕ್ಷ ಪಂಚಮಿಯಂದು ನಡೆಯುವ ಪ್ರಥಮ ಹಬ್ಬ ನಾಗರಪಂಚಮಿಯನ್ನು ತಾಲೂಕಿನ ವಿವಿಧ ನಾಗಸನ್ನಿಧಿಗಳಲ್ಲಿ ಸಂಭ್ರಮ ಸಡಗರದಿಂದ ಇಂದು ಮುಂಜಾನೆಯಿಂದ ಆಚರಿಸಲಾಯಿತು. ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಿಸಲಾಯಿತು. ಮುಂಜಾನೆಯಿಂದಲೇ ನೂರಾರು ಭಕ್ತಾದಿಗಳು ಶ್ರೀ ನಾಗಸನ್ನಿಧಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಹಾಲು, ಸೀಯಾಳಾ, ಹಣ್ಣುಕಾಯಿ ಅರ್ಪಿಸಿದರು. ದೇವಸ್ಥಾನದ ಅರ್ಚಕರು ಶ್ರೀ ನಾಗನಿಗೆ ಅಭಿಷೇಕ ಮಾಡಿದರು.

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ | ಸರತಿ ಸಾಲಿನಲ್ಲಿ ನಿಂತು ಹಾಲು, ಸೀಯಾಳ ಅರ್ಪಿಸಿದ ಭಕ್ತಾದಿಗಳು Read More »

error: Content is protected !!
Scroll to Top