ಪುತ್ತೂರು

ಧರೆ ಕುಸಿತ: ಸವಣೂರು-ಬಂಬಿಲ-ಅಂಕತಡ್ಕ ರಸ್ತೆ ಸಂಚಾರ ನಿರ್ಬಂಧಿಸುವಂತೆ ಒತ್ತಾಯ

ಸವಣೂರು : ಭಾರೀ ಮಳೆಯಿಂದಗಾಗಿ ಸವಣೂರು-ಬಂಬಿಲ- ಅಂಕತಡ್ಕ ರಸ್ತೆಯ ನಾಡೋಳಿ ಎಂಬಲ್ಲಿ ಧರೆ ಕುಸಿಯುತ್ತಿದ್ದ ಕಾರಣ ಮಳೆ ಕಡಿಮೆಯಾಗುವ ತನಕ ಸಂಚಾರ ನಿರ್ಬಂಧಿಸಬೇಕೆಂಬ ಆಗ್ರಹವೂ ವ್ಯಕ್ತವಾಗಿದೆ. ನಾಡೋಳಿಯಲ್ಲಿ ನೂತನ ಸೇತುವೆ ನಿರ್ಮಾಣ ಸಮಯದಲ್ಲಿ ರಸ್ತೆ ಅಗಲೀಕರಣ ಹಾಗೂ ಸೇತುವೆಗೆ ಹೊಂದಿಕೊಂಡಂತೆ ರಸ್ತೆ ನಿರ್ಮಾಣ ಸಲುವಾಗಿ ಬೃಹತ್ ಬರೆಯನ್ನು ಅಗೆಯಲಾಗಿದ್ದು,ಈ ರಸ್ತೆಯ ಎರಡೂ ಬದಿಯ ಬರೆ ಈಗ ಮಳೆಗಾಲದಲ್ಲಿ ದಿನೇ ದಿನೇ ಕುಸಿಯುತ್ತಿದೆ. ಬರೆಯ ಮೇಲೆ ವಿದ್ಯುತ್ ಕಂಬ ಹಾದು ಹೋಗಿದ್ದು, ಅದು ಕೂಡ ಈಗ ಕುಸಿಯುವ ಹಂತಕ್ಕೆ […]

ಧರೆ ಕುಸಿತ: ಸವಣೂರು-ಬಂಬಿಲ-ಅಂಕತಡ್ಕ ರಸ್ತೆ ಸಂಚಾರ ನಿರ್ಬಂಧಿಸುವಂತೆ ಒತ್ತಾಯ Read More »

ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ |  ಸಾಂಪ್ರದಾಯಿಕ ಆಟಗಳಲ್ಲಿ ಸಂಭ್ರಮಿಸಿದ ಜನರು | ಕಾರ್ಯಕ್ರಮಕ್ಕೆ ಮೆರುಗು ತಂದ ಜಾನಪದ ಸೊಗಡು ವಿಷಯಾಧಾರೀತ  ನೃತ್ಯ ಗಾನ ಸಾಂಸ್ಕೃತಿಕ ವೈಭವ

ಕಾವು : ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘ ಇದರ ನೇತೃತ್ವದಲ್ಲಿ  ಒಕ್ಕಲಿಗ ಗೌಡ ಸೇವಾ ಸಂಘ,ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಈಶ್ವರಮಂಗಲ ವಲಯ ಇದರ ಸಹಕಾರದೊಂದಿಗೆ  ಕಂಡಡೊಂಜಿ ದಿನ ಕಾರ್ಯಕ್ರಮ ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ಜು 28 ರಂದು ನಡೆಯಿತು.   ಕಾರ್ಯಕ್ರಮವನ್ನು ಈಶ್ವರಮಂಗಲ   ಮರಕ್ಕಡ ಗದ್ದೆಯ ಮಾಲಕ  ಗಿರೀಶ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು  ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ನಾಗಪ್ಪ

ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ |  ಸಾಂಪ್ರದಾಯಿಕ ಆಟಗಳಲ್ಲಿ ಸಂಭ್ರಮಿಸಿದ ಜನರು | ಕಾರ್ಯಕ್ರಮಕ್ಕೆ ಮೆರುಗು ತಂದ ಜಾನಪದ ಸೊಗಡು ವಿಷಯಾಧಾರೀತ  ನೃತ್ಯ ಗಾನ ಸಾಂಸ್ಕೃತಿಕ ವೈಭವ Read More »

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ಕಡಬ ಸರಸ್ವತಿ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ವತಿಯಿಂದ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗಳಿಸಿದ್ದಾರೆ. ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ, ಲಿಖಿತ್ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ Read More »

ಕಣಿಯ ದೊಡ್ಡಮನೆ ಬೆಳಿಯಪ್ಪ ಗೌಡ ನಿಧನ.

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಕಣಿಯ ದೊಡ್ಡಮನೆ ತರವಾಡು ಮನೆಯ ಯಜಮಾನ, ಕೆ ಎಸ್ ಆರ್ ಟಿ ಸಿಸಂಸ್ಥೆಯ ನಿವೃತ್ತ ಟಿಸಿ ಬೆಳಿಯಪ್ಪ ಗೌಡ (76) ಅವರು ಮಂಗಳವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಉಪ್ಪಿನಂಗಡಿಯಲ್ಲಿ ನೆರೆ ವೀಕ್ಷಿಸಿ ಅಂಚೆಕಚೇರಿಗೆ ತೆರಳಿ ಅಲ್ಲಿಂದ ಹೊರಬರುತ್ತಿರುವಾಗ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕ್ಸಿತೆ ಫಲಕಾರಿಯಾಗದೆ ಮೃತಪಟ್ಟರು. ಪುತ್ತೂರು ಕೆ ಎಸ್ ಆರ್ ಟಿ ಸಿ ಯಲ್ಲಿ ನಿರ್ವಾಹಕನಾಗಿ ಸೇವೆಗೆ ಸೇರಿದ್ದ ಬೆಳಿಯಪ್ಪ ಗೌಡ ಅವರು

ಕಣಿಯ ದೊಡ್ಡಮನೆ ಬೆಳಿಯಪ್ಪ ಗೌಡ ನಿಧನ. Read More »

ಗಯಾಪದ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಂಗಮಕ್ಕೆ ಕ್ಷಣಗಣನೆ | ಗಂಗಾಪೂಜೆ ನಡೆದು ಬಾಗೀನ ಅರ್ಪಣೆ

ಉಪ್ಪಿನಂಗಡಿ: ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಂಗಮಕ್ಕಾಗಿ ಕ್ಷಣಗಣನೆ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ  ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಗಂಗಾಪೂಜೆ ನಡೆದು ಬಾಗೀನ ಅರ್ಪಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಗಂಗಾಪೂಜೆಯಲ್ಲಿ ಪಾಲ್ಗೊಂಡು ಬಾಗೀನ ಅರ್ಪಿಸಿದರು. ನೂರಾರು ಭಕ್ತಾದಿಗಳ ಜಯಘೋಷದೊಂದಿಗೆ ಬಾಗೀನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್‍, ಸಮಿತಿ ಸದಸ್ಯರು, ಅರ್ಚಕರು, ನೂರಾರು ಭಕ್ತಾದಿಗಳು ಸಂಗಮ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.

ಗಯಾಪದ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಂಗಮಕ್ಕೆ ಕ್ಷಣಗಣನೆ | ಗಂಗಾಪೂಜೆ ನಡೆದು ಬಾಗೀನ ಅರ್ಪಣೆ Read More »

ಉಪ್ಪಿನಂಗಡಿ ಸಂಗಮಕ್ಕೆ ಕ್ಷಣಗಣನೆ | ಸಂಗಮ ಕ್ಷೇತ್ರದಲ್ಲಿ ಭಾರೀ ಜನಸ್ತೋಮ

ಉಪ್ಪಿನಂಗಡಿ: ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿಯಾದ ಉಪ್ಪಿನಂಗಡಿ ನೇತ್ರಾವತಿ ಹಾಗೂ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸಂಗಮಕ್ಕೆ ಇನ್ನೇನು ಕ್ಷಣಗಣನೆ ಉಂಟಾಗಿದೆ. ಭಾರೀ ಸಂಖ್ಯೆಯಲ್ಲಿ ಜನಸಮೂಹ ಇಲ್ಲಿ ಸೇರಿದೆ. ಇತ್ತ ಸುಬ್ರಹ್ಮಣ್ಯ ಹಾಗೂ ಅತ್ತ ಧರ್ಮಸ್ಥಳದಿಂದ ಹರಿದು ಬರುತ್ತಿರುವ ಮಳೆಯ ನೀರಿನಿಂದಾಗಿ ಉಪ್ಪಿನಂಗಡಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದೆ. ಪರಿಣಾಮ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಉಪ್ಪಿನಂಗಡಿಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು ಈ ಸಂದರ್ಭದಲ್ಲಿ

ಉಪ್ಪಿನಂಗಡಿ ಸಂಗಮಕ್ಕೆ ಕ್ಷಣಗಣನೆ | ಸಂಗಮ ಕ್ಷೇತ್ರದಲ್ಲಿ ಭಾರೀ ಜನಸ್ತೋಮ Read More »

ಭಾರೀ ಮಳೆ ಎಪಿಎಂಸಿ ರಸ್ತೆ ಮುಳುಗಡೆ

ಪುತ್ತೂರು : ಭಾರೀ ಮಳೆಗೆ ಎಪಿಎಂಸಿ ರಸ್ತೆ ನದಿಯಂತಾಗಿದ್ದು, ಪಕ್ಕದ ಆದರ್ಶ ಆಸ್ಪತ್ರೆಯ ಮೆಟ್ಟಿಲುವರೆಗೆ ನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಹಾಗೂ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ನೀರು ತುಂಬಿದೆ. ಸರಿಯಾಗಿ ರಸ್ತೆ ಕಾಣದೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಜೆವರೆಗೆ ಈ ರೀತಿ ಮಳೆ ಮುಂದುವರಿದರೆ ಆಸ್ಪತ್ರೆಯೊಳಗೂ ನೀರು ನುಗ್ಗುವ ಸಾಧ್ಯತೆಯಿದೆ.

ಭಾರೀ ಮಳೆ ಎಪಿಎಂಸಿ ರಸ್ತೆ ಮುಳುಗಡೆ Read More »

ಶೇಖಮಲೆಯಲ್ಲಿ ಗುಡ್ಡ ಕುಸಿದು ಪುತ್ತೂರು – ಸುಳ್ಯ ರಾಷ್ಟ್ರೀಯ ಹೆದ್ದಾರಿ ಬಂದ್

ಪುತ್ತೂರು :  ಮೈಸೂರು – ಮಾಣಿ ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಭಾರೀ ಗುಡ್ಡ ಕುಸಿದ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ.

ಶೇಖಮಲೆಯಲ್ಲಿ ಗುಡ್ಡ ಕುಸಿದು ಪುತ್ತೂರು – ಸುಳ್ಯ ರಾಷ್ಟ್ರೀಯ ಹೆದ್ದಾರಿ ಬಂದ್ Read More »

ಕನ್ನಡ ಸಾಹಿತ್ಯ ಪರಿಷತ್‍ ನಿಂದ ಮುಂಡೂರು ಗ್ರಾಮ ಸಾಹಿತ್ಯ ಸಂಭ್ರಮ 15ನೇ ಸರಣಿ ಕಾರ್ಯಕ್ರಮ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಮುಂಡೂರು ಗ್ರಾಮ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಕಾರದಲ್ಲಿ, ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ  ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮದ 15ನೇ ಕಾರ್ಯಕ್ರಮ ಮುಂಡೂರು ಪ್ರಾ. ಕೃ. ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಮೊದಲು ವೈಭವದ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳ ಆಕರ್ಷಕ  ಬ್ಯಾಂಡ್ ಸೆಟ್

ಕನ್ನಡ ಸಾಹಿತ್ಯ ಪರಿಷತ್‍ ನಿಂದ ಮುಂಡೂರು ಗ್ರಾಮ ಸಾಹಿತ್ಯ ಸಂಭ್ರಮ 15ನೇ ಸರಣಿ ಕಾರ್ಯಕ್ರಮ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ 50ನೇ ವರ್ಷ : ಕವಚದಾನ- ಕರ್ಣ ವಿವಾಹ ತಾಳಮದ್ದಳೆ

ಉಪ್ಪಿನಂಗಡಿ:  ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 38ನೇ ಕಾರ್ಯಕ್ರಮವಾಗಿ ‘ಕವಚದಾನ -ಕರ್ಣ ವಿವಾಹ’ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ನಿತೀಶ್ ಕುಮಾರ್ ವೈ ,ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ  ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ,ಪ್ರಚೇತ್ ಆಳ್ವ ಸಹಕರಿಸಿದರು. ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ,ಶ್ರೀಧರ ಎಸ್.ಪಿ ಸುರತ್ಕಲ್(ಕರ್ಣ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ಮಂತ್ರಿ) ಹರೀಶ್ ಆಚಾರ್ಯ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ 50ನೇ ವರ್ಷ : ಕವಚದಾನ- ಕರ್ಣ ವಿವಾಹ ತಾಳಮದ್ದಳೆ Read More »

error: Content is protected !!
Scroll to Top