ಪುತ್ತೂರು

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಡ ತರಲಾಗುವುದು | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಪತ್ರಿಕಾ ದಿನಾಚರಣೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಶನಿವಾರ ಪುತ್ತೂರು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ತರುವ ಕೆಲಸ ಮಾಡುವ ಜೊತೆಗೆ, ರಾಜ್ಯದಲ್ಲಿ ತುಳು ಭಾಷೆಯನ್ನು […]

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಡ ತರಲಾಗುವುದು | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಪತ್ರಿಕಾ ದಿನಾಚರಣೆಯಲ್ಲಿ ಶಾಸಕ ಅಶೋಕ್ ರೈ Read More »

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು. ಶಿಕ್ಷಕರು ಸಮಾಜದಲ್ಲಿ ಎಂದೆಂದಿಗೂ ಉತ್ಕೃಷ್ಟ ಸ್ಥಾನದಲ್ಲಿರುವವರು. ವಿದ್ಯಾರ್ಥಿಗಳಲ್ಲಿ ಶ್ರೇಷ್ಠ ಮೌಲ್ಯಗಳನ್ನು ತುಂಬಿ ಒಬ್ಬ ಉತ್ತಮ ನಾಗರೀಕನನ್ನಾಗಿ ಬೆಳೆಸುವವರು ಶಿಕ್ಷಕರು.ದೇಶದ  ಉನ್ನತ  ಪ್ರಜೆಯ ಹಿಂದೆ ಆತನ ಶಿಕ್ಷಕರ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಒಬ್ಬ ಶಿಕ್ಷಕ ಸದಾ ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಸಮಾಜದ ಏಳಿಗೆಯಲ್ಲಿ ಹಾಗೂ ದೇಶದ ಪ್ರಗತಿಯಲ್ಲಿ ಶಿಕ್ಷಕರು ಬಹು ಮುಖ್ಯ ಪಾತ್ರ ವಹಿಸಬೇಕು  ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ Read More »

ವಿದೇಶಕ್ಕೆ ತೆರಳಿದ ಪುತ್ತೂರಿನ ಯುವಕ ಸಂಶಯಾಸ್ಪದ ಸಾವು | ನ್ಯಾಯ ಒದಗಿಸುವಂತೆ ಹೆತ್ತವರಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟರಿಗೆ ಮನವಿ

ಪುತ್ತೂರು: 3 ತಿಂಗಳ ಹಿಂದೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ ನಗರದ ಕಲ್ಲೇಗ ಅಜೇಯನಗರ ನಿವಾಸಿ ಭರತ್ ಕುಮಾರ್ ಎಂಬವರು ಮೃತಪಟ್ಟಿದ್ದು, ಮಗನ ಸಾವಿನ ಬಗ್ಗೆ ನಮಗೆ ಸಂಶಯವಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನಮಗೆ  ಒದಗಿಸಿಕೊಡಬೇಕು ಎಂದು ಮೃತ ಭರತ್ ಕುಮಾರ್ ಅವರ ತಾಯಿ ಸಂಸದ ಕ್ಯಾ|ಬ್ರಿಜೇಶ್ ಚೌಟರಿಗೆ ಮನವಿ ಸಲ್ಲಿಸಿದ್ದಾರೆ. ನಾನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಜೇಯ ನಗರ ನಿವಾಸಿ ಭರತ್ ಕುಮಾರ್ 44 ವರ್ಷ ಇವರ ತಾಯಿ ಸುಲೋಚನಾ.

ವಿದೇಶಕ್ಕೆ ತೆರಳಿದ ಪುತ್ತೂರಿನ ಯುವಕ ಸಂಶಯಾಸ್ಪದ ಸಾವು | ನ್ಯಾಯ ಒದಗಿಸುವಂತೆ ಹೆತ್ತವರಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟರಿಗೆ ಮನವಿ Read More »

ಪುತ್ತೂರಿನಲ್ಲಿ ಮೇಳೈಸಿದ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ | ತೆರೆದ ವಾಹನದಲ್ಲಿ ಕರೆದೊಯ್ಯುವ ಮೂಲಕ ಇಬ್ಬರು ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ

ಪುತ್ತೂರು: ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ, ಪುತ್ತೂರು ಮಾಜಿ ಸೈನಿಕರ ಸಂಘ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ ಆಡಳಿತ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೀತಿ ಸ್ಮಾರಕದ ಬಳಿ ಶುಕ್ರವಾರ ನಡೆಯಿತು. ಕಾರ್ಗಿಲ್ ವರ್ಷಾಚರಣೆ ಅಂಗವಾಗಿ ನಗರದ ದರ್ಬೆ ವೃತ್ತದಿಂದ ಬೆಳಿಗ್ಗೆ 9.30 ಕ್ಕೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಬ್ಯಾಂಡ್‍, ವಾದ್ಯಗಳೊಂದಿಗೆ ಪಥ ಸಂಚಲನ, ದೇಶ ಹಾಗೂ ಮಿಲಿಟರಿ ಶಕ್ತಿಯನ್ನು ಅನಾವರಣಗೊಳಿಸುವ ಸ್ತಬ್ಧಚಿತ್ರ ಮೂಲಕ

ಪುತ್ತೂರಿನಲ್ಲಿ ಮೇಳೈಸಿದ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ | ತೆರೆದ ವಾಹನದಲ್ಲಿ ಕರೆದೊಯ್ಯುವ ಮೂಲಕ ಇಬ್ಬರು ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ Read More »

ಭಾರೀ  ಭೂಕುಸಿತ | ಮಚ್ಚಿಮಲೆ-ಬಲ್ನಾಡು ಸಂಪರ್ಕ ಸಂಪೂರ್ಣ ಕಡಿತ

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಎಕ್ರೆಜಾಲ್ ನಲ್ಲೊಂದು ಭೂಕುಸಿತ ಇಂದು ನಡೆದಿದೆ. ಮಚ್ಚಿಮಲೆ-ಬಲ್ನಾಡು ಸಂಪರ್ಕಿಸುವ ಮಾರ್ಗ ಮಧ್ಯೆ ಈ ಭೂಕುಸಿತ ಉಂಟಾಗಿದ್ದು, ಕಾಂಕ್ರಿಟ್ ರಸ್ತೆಯ ಪಕ್ಕದಿಂದಲೇ ಭೂಕುಸಿತ ಉಂಟಾಗಿದೆ. ಸುಮಾರು 40 ಅಡಿ ಎತ್ತರದಿಂದ ಮಣ್ಣು ಮರಗಳೆಲ್ಲ ಇಳಿಜಾರಿಗೆ ಬಿದ್ದಿದೆ. ಅಕ್ಕಪಕ್ಕದಲ್ಲಿ ಯಾವುದೇ ಮನೆಗಳು ಇಲ್ಲದಿರುವುದರಿಂದ ಅಪಾಯ ತಪ್ಪಿದೆ. 100 ಮೀಟ‌ರ್ ಅಂತರದಲ್ಲಿ ಒಂದು ಮನೆ ಇರುವುದು ಬಿಟ್ಟರೆ, ಬೇರೆ ಯಾವುದೇ ಅಪಾಯದ ಭೀತಿ ಇಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಭಾರೀ  ಭೂಕುಸಿತ | ಮಚ್ಚಿಮಲೆ-ಬಲ್ನಾಡು ಸಂಪರ್ಕ ಸಂಪೂರ್ಣ ಕಡಿತ Read More »

ಮನೆ ಮೇಲೆ ಬೃಹತ್ ಮರ ಬಿದ್ದು ಹಾನಿ | ಎನ್‍ ಎಸ್‍ ಯುಐ ಕಾರ್ಯಕರ್ತರಿಂದ ಶೀಟ್, ಕಂಬ, ಸಿಮೆಂಟ್ ಕೊಡುಗೆ

ಪುತ್ತೂರು: ಕೌಡಿಚ್ಚರ್ ನಲ್ಲಿ ಮೂರು ದಿನಗಳ ಹಿಂದೆ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಹಾನಿಯಾಗಿದ್ದು, ಸ್ಥಳಕ್ಕೆ ಎನ್‍ ಎಸ್‍ ಯು ಐ ಪುತ್ತೂರಿನ ಪ್ರಮುಖರು ಭೇಟಿ ನೀಡಿದ್ದರು. ಬಳಿಕ ತಹಶೀಲ್ದಾರ್ ಸೇರಿದಂತೆ ಹಲವರು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಮನೆಯವರ ಕಷ್ಟವನ್ನು ಅರಿತ ಎನ್ ಎಸ್‍ ಯುಐ  ಪ್ರಮುಖ ಪ್ರಜ್ವಲ್ ಕೌಡಿಚ್ಚಾರ್ ಸಹಿತ ಕಾರ್ಯಕರ್ತರು ಹಾನಿಗೊಳಗಾಗಿದ್ದ ಮನೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ನೀಡಿದರು. ರಾಜ್ಯ ಎನ್‍ ಎಸ್‍ ಯುಐ ಕಾರ್ಯದರ್ಶಿ

ಮನೆ ಮೇಲೆ ಬೃಹತ್ ಮರ ಬಿದ್ದು ಹಾನಿ | ಎನ್‍ ಎಸ್‍ ಯುಐ ಕಾರ್ಯಕರ್ತರಿಂದ ಶೀಟ್, ಕಂಬ, ಸಿಮೆಂಟ್ ಕೊಡುಗೆ Read More »

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಮಾಣಿಲ: ಶ್ರೀ ಸತ್ಯ ಸಾಯಿ ಅನ್ನ ಪೂರ್ಣ ಟ್ರಸ್ಟ್ , ಮುದ್ದೇನಹಳ್ಳಿ ಇದರ ಸ್ಥಾಪಕರಾದ ಶ್ರೀಮಧುಸೂಧನ್ ಸಾಯಿ ಅವರ 45 ನೇ ಜನ್ಮದಿನೋತ್ಸವ ಪ್ರಯುಕ್ತ  ಪ್ರದಾನ ಮಾಡಲಾಗುತ್ತಿರುವ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ಮಾಣಿಲ ಸರಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಹಚ್ಚ ಹಸುರಿನ ಸುಂದರ, ಪ್ರಶಾಂತ ಕಲಿಕಾ ವಾತಾವರಣ ಹೊಂದಿರುವ ಈ ಶಾಲೆ ಕಳೆದ ಹಲವಾರು ವರ್ಷಗಳಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿದೆ. ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರತಿ ತರಗತಿಗಳಿಗೂ ಪ್ರೊಜೆಕ್ಟರ್, ಸ್ಮಾರ್ಟ್ ಕ್ಲಾಸ್

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಮಂಗಳೂರು ವಿಭಾಗ ಮಟ್ಟದ ಒಂದು ದಿನದ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ ನಡೆಯಿತು. ಕಾರ್ಯಾಗಾರವನ್ನು ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಪ್ರೋ. ಸಿ. ಬಸವರಾಜು ಉದ್ಘಾಟಿಸಿ ಮಾತನಾಡಿ, ಕಾನೂನು ಕಲಿಕಾರ್ಥಿಗಳಿಗೆ ಜ್ಞಾನವನ್ನು ಗಳಿಸುವ ಆಸಕ್ತಿ ಇರಬೇಕು. ಅದಕ್ಕಾಗಿ ನಿರಂತರ ಪ್ರಯತ್ನವನ್ನು ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಸಾಧನೆಯನ್ನು ಮಾಡಬಹುದು. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ವ್ಯಕ್ತಪಡಿಸಲು ಉತ್ತಮ ವೇದಿಕೆ ಬೇಕಾಗುತ್ತೆ. ಅಂತಹ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು Read More »

ಕೂರ್ನಡ್ಕ ವೃತ್ತದ ಬಳಿ ಅಪಾಯದ ಸ್ಥಿತಿಯಲ್ಲಿರುವ ಮರ | ತೆರವಿಗೆ ಆಗ್ರಹ

ಪುತ್ತೂರು : ಕೂರ್ನಡ್ಕ ಜಂಕ್ಷನ್ ಬಳಿ ಅಪಾಯಕಾರಿ ಮರವೊಂದು  ಬೀಳುವ ಅಪಾಯದ ಸ್ಥಿತಿಯಲ್ಲಿದೆ.  ಇದನ್ನು ತೆರವುಗೊಳಿಸದೇ ಹೋದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂಬ ಆತಂಕದಲ್ಲಿದ್ದಾರೆ. ಸ್ಥಳೀಯರು ಪುತ್ತೂರು ನಗರದಿಂದ ಒಂದು ಕಿಲೋಮೀಟರ್ ದೂರದಲ್ಲಿ ಇರುವ ಈ ಪ್ರದೇಶ  ಆಗಿದ್ದು, ಇದೇ ಮಾರ್ಗದಲ್ಲಿ ದಿನನಿತ್ಯ  ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಸಂಚಾರಿಸುತ್ತಾರೆ.   ಈ ಮಾರ್ಗದಲ್ಲಿ ನಿರಂತರವಾಗಿ ವಾಹನ ಸಂಚಾರವೂ ಇರುವುದರಿಂದ ವಾಹನಗಳ ಮೇಲೆಯೂ ಕೂಡ ಬೀಳುವ ಅಪಾಯ ಇದೆ ಅದಲ್ಲದೇ ಅದರ ಹತ್ತಿರವೇ ವಿದ್ಯುತ್ ತಂತಿಗಳೂ ಹಾದು ಹೋಗಿದ್ದು

ಕೂರ್ನಡ್ಕ ವೃತ್ತದ ಬಳಿ ಅಪಾಯದ ಸ್ಥಿತಿಯಲ್ಲಿರುವ ಮರ | ತೆರವಿಗೆ ಆಗ್ರಹ Read More »

ರೈತರ ಕುಮ್ಕಿ ಜಮೀನನ್ನು ಗುತ್ತಿಗೆ ನೀಡಲು ಆಕ್ಷೇಪ | ಲೀಸಿಗೆ ಅರ್ಜಿ ಹಾಕುವುದು ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ರೈತರಿಗೆ ಯಂ.ಜಿ.ಸತ್ಯನಾರಾಯಣ ಭಟ್ ಸಲಹೆ.

ಪುತ್ತೂರು: ಕರ್ನಾಟಕ ಸರಕಾರ ಮಾ.12, 2024ರ ಸುತ್ತೋಲೆ ಸಂಖ್ಯೆ ಆರ್‌ಡಿ07 ಎಲ್‌ಜಿಪಿ 2023 ರಂತೆ 30 ವರ್ಷಗಳ ಗೇಣಿ ಮೌಲ್ಯವನ್ನು ಏಕಗಂಟಿನಲ್ಲಿ ಸರಕಾರಕ್ಕೆ ಪಾವತಿ ಮಾಡಿ ಅನುಭವಿಸಬಹುದು ಎಂಬ ವಿಚಾರಕ್ಕೆ ಸಂಬಂಧಿಸಿರುವ ಸುತ್ತೋಲೆ ಬೆಳಕಿಗೆ ಬಂದಿದ್ದು, ಈ ಸುತ್ತೋಲೆಯಿಂದ ರೈತರು ಭಯ ಪಡುವ ಅವಶ್ಯಕತೆಯಿಲ್ಲ.ಕುಮ್ಕಿದಾರರು ದಾಖಲೆಯನ್ನು ಸರಿ ಮಾಡಿ ಇಟ್ಟುಕೊಳ್ಳಿ. ಮೂಲ ದಾಖಲೆಯನ್ನು ಅದಕ್ಕೆ ಸಂಬಂಧಿಸಿ ಇಟ್ಟುಕೊಂಡರೆ ಲೀಸ್ ಅಗತ್ಯವಿಲ್ಲ. ಲೀಸಿಗೆ ಅರ್ಜಿ ಹಾಕುವುದು ಅಕ್ರಮ ಎಂದು ಕುಮ್ಕಿ ಹಕ್ಕು ಹೋರಾಟದ ಸಂಚಾಲಕ ಯಂ.ಜಿ.ಸತ್ಯನಾರಾಯಣ ಭಟ್ ಹೇಳಿದ್ದಾರೆ.

ರೈತರ ಕುಮ್ಕಿ ಜಮೀನನ್ನು ಗುತ್ತಿಗೆ ನೀಡಲು ಆಕ್ಷೇಪ | ಲೀಸಿಗೆ ಅರ್ಜಿ ಹಾಕುವುದು ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ರೈತರಿಗೆ ಯಂ.ಜಿ.ಸತ್ಯನಾರಾಯಣ ಭಟ್ ಸಲಹೆ. Read More »

error: Content is protected !!
Scroll to Top