ಪುತ್ತೂರು

ಹಸಿರು  ವಾತಾವರಣ ನಮ್ಮದಾಗಬೇಕು : ಡಾ.ದೇವಿಪ್ರಸಾದ್. ಕೆ .ಎನ್. | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಕಾರ್ಯಕ್ರಮ

ಪುತ್ತೂರು:  ಶುದ್ಧವಾದ ಗಾಳಿ, ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು. ಕಾಲೇಜು ಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದ ಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು. ಹಸಿರಾದ ಪರಿಸರ ಕಣ್ಣಿಗೆ ಹೇಗೆ ಹಿತವೋ ಹಾಗೆಯೇ ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್ ಕೆ.ಎನ್ ಹೇಳಿದರು. ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ […]

ಹಸಿರು  ವಾತಾವರಣ ನಮ್ಮದಾಗಬೇಕು : ಡಾ.ದೇವಿಪ್ರಸಾದ್. ಕೆ .ಎನ್. | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಕಾರ್ಯಕ್ರಮ Read More »

ಲವ್ ಜಿಹಾದ್ ಪ್ರಕರಣ ಖಂಡಿಸಿ ಇಂದು ನಿಗದಿಯಾಗಿದ್ದ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ | ಆಕ್ರೋಶಿತರಾದ ಹಿಂದೂ ಮಹಿಳಾ ಸುರಕ್ಷಾ ಸಮಿತಿ ಪ್ರಮುಖರು

ಮಂಗಳೂರು: ಲವ್ ಜಿಹಾದ್ ಪ್ರಕರಣಗಳನ್ನು ಖಂಡಿಸಿ ಇಂದು ನಿಗದಿಯಾಗಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಿಳಾ ಸುರಕ್ಷಾ ಸಮಿತಿಯ ಪ್ರಮುಖರಾದ ಶ್ರೀಲಕ್ಷ್ಮೀ ಮಠದ ಮೂಲೆ, ಸುಕನ್ಯಾ ರಾವ್ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಲವ್ ಜಿಹಾದ್ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ಇಂದು ಅಪರಾಹ್ನ ಪ್ರತಿಭಟನೆ ನಿಗದಿಯಾಗಿತ್ತು. ಪೊಲೀಸರು ಒತ್ತಡಕ್ಕೆ ಮಣಿದು ಅನುಮತಿ ನಿರಾಕರಿಸಿ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕನ್ನು ಕಿತ್ತು ಕೊಂಡಿದ್ದಾರೆ. ಲವ್ ಜಿಹಾದ್ ಗೆ ಮುಗ್ಧ ಹಿಂದೂ ಹೆಣ್ಮಕ್ಕಳು

ಲವ್ ಜಿಹಾದ್ ಪ್ರಕರಣ ಖಂಡಿಸಿ ಇಂದು ನಿಗದಿಯಾಗಿದ್ದ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ | ಆಕ್ರೋಶಿತರಾದ ಹಿಂದೂ ಮಹಿಳಾ ಸುರಕ್ಷಾ ಸಮಿತಿ ಪ್ರಮುಖರು Read More »

ಜು.19: ಕಾರ್ಗಿಲ್ ವಿಜಯೋತ್ಸವಕ್ಕೆ | ಅಪ್ರತಿಮ ಯೋಧ ಕ್ಯಾ.ಯೋಗೀಂದ್ರ ಯಾದವ್ ಪುತ್ತೂರಿಗೆ

ಪುತ್ತೂರು: ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕದ ಸಂರಕ್ಷಣಾ ಸಮಿತಿ ಹಾಗೂ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಜು.19 ರಂದು ಅಮರ್ ಜವಾನ್ ಸ್ಮಾರಕದ ಬಳಿ ನಡೆಯಲಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ವರ್ಷ ಕಾರ್ಗಿಲ್ ವಿಜಯೋತ್ಸವಕ್ಕೆ ಇಪ್ಪತ್ತೈದರ ಸಂಭ್ರಮ. ಈ ಬಾರಿಯ ಕಾರ್ಗಿಲ್ ವಿಜಯೋತ್ಸವವನ್ನು ದಾಖಲಾರ್ಹ ಚರಿತ್ರೆಯಾಗಿ ರೂಪಿಸಬೇಕೆಂಬ ಇರಾದೆ ಅಂಬಿಕಾ

ಜು.19: ಕಾರ್ಗಿಲ್ ವಿಜಯೋತ್ಸವಕ್ಕೆ | ಅಪ್ರತಿಮ ಯೋಧ ಕ್ಯಾ.ಯೋಗೀಂದ್ರ ಯಾದವ್ ಪುತ್ತೂರಿಗೆ Read More »

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು : ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಇಂದು ಪತ್ತೆಯಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದೊಳಗೆ ಮೇಲ್ಮಹಡಿಗೆ ತೆರಳುವ ಮೆಟ್ಟಿಲುಗಳ ಕೆಳಗೆ ವ್ಯಕ್ತಿಯೊಬ್ಬರು ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಸಾಮೆತ್ತಡ್ಕ ನಿವಾಸಿ ಶಿವಪ್ರಸಾದ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಸಾಮೆತ್ತಡ್ಕ 2ನೇ ಕ್ರಾಸ್ ನಿವಾಸಿಯೊಬ್ಬರು ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಪ್ರಸಾದ್ (39) ಆತ್ಮಹತ್ಯೆ ಮಾಡಿಕೊಂಡಡವರು. ಸಾಮೆತ್ತಡ್ಕ ದಿ.ಗಣೇಶ್ ರಾವ್ ಅವರ ಪುತ್ರ ಶಿವಪ್ರಸಾದ್ ಅವಿವಾಹಿತರಾಗಿದ್ದು, ಮಾರುತಿ ಓಮ್ಮಿಯಲ್ಲಿ ಶಾಲಾ ಮಕ್ಕಳನ್ನು ಟ್ರಿಪ್ ಮಾಡುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದರು. ಬೆಳಗ್ಗಿನ ಜಾವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಪತ್ತೆಯಾಗಿದ್ದಾರೆ. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಸಾಮೆತ್ತಡ್ಕ ನಿವಾಸಿ ಶಿವಪ್ರಸಾದ್ ನೇಣು ಬಿಗಿದು ಆತ್ಮಹತ್ಯೆ Read More »

ಕಾಂಗ್ರೆಸ್ ನಾಯಕ ಎಂ.ಎಸ್‍.ಮಹಮ್ಮದ್ ಶಾಸಕ ಭರತ್ ಶೆಟ್ಟಿಯವರನ್ನು ಭಯೋತ್ಪಾದಕ ಎಂದಿರುವುದು ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು: ದೇಶದಲ್ಲಿ ಮಾತ್ರವಲ್ಲದೇ ಜಗತ್ತಿನಲ್ಲಿ ಭಯೋತ್ಪಾದನೆ ಮಾಡುವ ಭಯೋತ್ಪಾದಕರು ಎಲ್ಲರೂ ಯಾವ ಸಂತತಿಯವರು ಎಂಬುದು ಜಗಜ್ಜಾಹೀರು ಆಗಿರುವಾಗ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿಯವರನ್ನು ಭಯೋತ್ಪಾದಕ ಎಂದು ಕಾಂಗ್ರೇಸ್ ನಾಯಕ ಎಂ.ಎಸ್ ಮಹಮ್ಮದ್ ಹೇಳಿರುವುದು ಖಂಡನೀಯ. ಅವರು ಬಹಿರಂಗ ಕ್ಷಮೆಯಾಚಿಸಬೇಕೆಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದಲ್ಲಿ ಹುಟ್ಟಿ ಅದರ ಸಂಸ್ಕ್ರತಿಯನ್ನು ಪಾಲಿಸುವವನಿಗೆ ಧರ್ಮದ ಮೇಲೆ ಅಪವಾದ ಹೊರಿಸುವಾಗ ತನ್ನ ಪದವಿಗಿಂತ ದೊಡ್ಡದು ನನ್ನ

ಕಾಂಗ್ರೆಸ್ ನಾಯಕ ಎಂ.ಎಸ್‍.ಮಹಮ್ಮದ್ ಶಾಸಕ ಭರತ್ ಶೆಟ್ಟಿಯವರನ್ನು ಭಯೋತ್ಪಾದಕ ಎಂದಿರುವುದು ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ Read More »

ಅನಾರೋಗ್ಯದಿಂದ ನಿಧನರಾದ ಮೂಡಂಬೈಲು ರಾದೀಪ್‍ ಪೂಜಾರಿ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

ವಿಟ್ಲ : ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ನಿಧನರಾದ ಮೂಡಂಬೈಲು ನಿವಾಸಿ ರಾದೀಪ್ ಪೂಜಾರಿ ರವರ ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿ, ಧೈರ್ಯ ತುಂಬಿದರು. ಈ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರಸನ್ನ ಮಾರ್ತ, ರಘುನಾಥ್ ರೈ ಮತ್ತಿತ್ತರು ಉಪಸ್ಥಿತರಿದ್ದರು.

ಅನಾರೋಗ್ಯದಿಂದ ನಿಧನರಾದ ಮೂಡಂಬೈಲು ರಾದೀಪ್‍ ಪೂಜಾರಿ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ Read More »

ನೀಟ್ ಪರೀಕ್ಷೆಯಲ್ಲಿ ಅಕ್ರಮ ಖಂಡಿಸಿ ಎನ್‍ ಎಸ್‍ ಯುಐನಿಂದ ಪ್ರತಿಭಟನೆ

ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮತ್ತು ಮರು ಪರೀಕ್ಷೆಗೆ ಆಗ್ರಹಿಸಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು. ಎನ್‍ ಎಸ್‍ ಯುಐ ಅಧ್ಯಕ್ಷ ಎಡ್ವರ್ಡ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‍ ಎಸ್‍ ಯುಐ ಮಾಜಿ ಅಧ್ಯಕ್ಷ ಕಾವು ಹೇಮಾನಾಥ ಶೆಟ್ಟಿ ಮಾತನಾಡಿ, ನೀಟ್ ಅಕ್ರಮ ಗಂಭೀರ ವಿಷಯವಾಗಿದೆ. ಆದರೆ ಕೇಂದ್ರ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸುತ್ತಿರುವುದು ಖಂಡನೀಯ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಂದು

ನೀಟ್ ಪರೀಕ್ಷೆಯಲ್ಲಿ ಅಕ್ರಮ ಖಂಡಿಸಿ ಎನ್‍ ಎಸ್‍ ಯುಐನಿಂದ ಪ್ರತಿಭಟನೆ Read More »

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಲೆ

ಉಪ್ಪಿನಂಗಡಿ:  ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ಅಂಗವಾಗಿ ಶ್ರೀ ಮಹಾಭಾರತ ಸರಣಿಯಲ್ಲಿ ತಾಳಮದ್ದಳಲೆ ನಡೆಯಿತು. ಸರಣಿ ಕಾರ್ಯಕ್ರಮದಲ್ಲಿ ನಿವಾತಕವಚ ಕಾಲಕೇಯರ ವಧೆ ತಾಳಮದ್ದಲೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ ಅರ್ಥಧಾರಿಗಳಾಗಿ ಜಯರಾಮ ಬಲ್ಯ, ಹರೀಶ್ ಆಚಾರ್ಯ ಬಾರ್ಯ ( ನಿವಾತ ಕವಚರು ), ಶ್ರುತಿ  ವಿಸ್ಮಿತ್ ( ದೇವೇಂದ್ರ ಮತ್ತು ಕಾಲಕೇಯರು), ಸಂಜೀವ ಪಾರೆಂಕಿ(ಅಗ್ನಿ), ಶ್ರೀಧರ್  ಮಂಗಳೂರು (ಅರ್ಜುನ),

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಲೆ Read More »

ವಿದ್ಯುತ್ ಶಾಕ್‍ ಗೆ ಯುವ ಕಬಡ್ಡಿ ಆಟಗಾರ ಮೃತ್ಯು

ಉಪ್ಪಿನಂಗಡಿ : ಪ್ಯೂಸ್ ಹಾಕಲು ಹೋದ ಯುವಕನೋರ್ವ ವಿದ್ಯುತ್ ಶಾಕ್ ಗೊಳಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದಿದೆ. ಪುಲೇರಿ ಗೋಳಿತ್ತಡಿ ಯುವ ಕಬಡ್ಡಿ ಆಟಗಾರ ಹರೀಶ್ (32) ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ವಿದ್ಯುತ್ ಶಾಕ್‍ ಗೆ ಯುವ ಕಬಡ್ಡಿ ಆಟಗಾರ ಮೃತ್ಯು Read More »

error: Content is protected !!
Scroll to Top