ಭಾರೀ ಮಳೆಗೆ ಕೆರೆಯಂತಾದ ರಸ್ತೆ
ಪುತ್ತೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ನಗರದ ಖಾಸಗಿ ಬಸ್ ನಿಲ್ದಾಣದ ಬಳಿಯ ರಸ್ತೆಗಳಲ್ಲಿ ನೀರು ಹರಿದ ಪರಿಣಾಮ ಸಂಚಾರಕ್ಕೆ ತೊಡಕುಂಟಾಯಿತು. ನೀರು ಹರಿದ ಪರಿಣಾಮ ಪರಿಸರ ಕೆರೆಯಂತಾಗಿತ್ತು. ಈ ಪ್ರದೇಶದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇದ್ದರೂ ಚರಂಡಿ ಬ್ಲಾಕ್ ಆಗಿ ನೀರೆಲ್ಲಾ ರಸ್ತೆಯಲ್ಲಿ ಹರಿದಿದೆ. ವಾಹನ ಸವಾರರು, ಪಾದಚಾರಿಗಳು ನಡೆದಾಡಲು ಹರಸಾಹಸ ಪಡಬೇಕಾಯಿತು.
ಭಾರೀ ಮಳೆಗೆ ಕೆರೆಯಂತಾದ ರಸ್ತೆ Read More »










