ಪುತ್ತೂರು

ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಪೋಷಕರ ಸಭೆ | ಪ್ರತಿಭೋತ್ಸವ-2024

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಹೆತ್ತವರ, ಪೋಷಕರ ಸಭೆ ಮತ್ತು ಪ್ರತಿಭೋತ್ಸವ 2024-25 ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಂಟ್ಯಯ್ಯ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ಹಾಗೂ ಹೆತ್ತವರ ಮತ್ತು ವಿದ್ಯಾರ್ಥಿಗಳ ಸಂಬಂಧ ಮಧುರವಾಗಿ ಸ್ನೇಹಮಯವಾಗಿರಬೇಕಾದ ಅಗತ್ಯವಿದ್ದು, ಹೀಗಾದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ ಎಂದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸುಜಾತ ಮಾತನಾಡಿ, ಮಕ್ಕಳು ಕಲಿಕೆಯ […]

ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಪೋಷಕರ ಸಭೆ | ಪ್ರತಿಭೋತ್ಸವ-2024 Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಪುತ್ತೂರು: ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ, ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯವಿದೆ, ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ, ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು, ಆದರೂ ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಜಾಗೃತಿ ಪಡೆಯಬೇಕು. ಎಂದು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಶ್ರೀರಕ್ಷಾ ಹೇಳಿದರು. ನರೇಂದ್ರ ಪದವಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ Read More »

ಮನೆ ಮೇಲೆ ಶೀಟ್ ಅಳವಡಿಸುತ್ತಿದ್ದ ವೇಳೆ ಯುವಕ ಮೃತ್ಯು !

ಪುತ್ತೂರು : ಆರ್ ಸಿಸಿ ಮನೆಯೊಂದರ ಮೇಲೆ ಶೀಟ್ ಅಳವಡಿಸುವ ಸಂದರ್ಭ ಯುವಕನೋರ್ವ ಮೃತಪಟ್ಟ ಘಟನೆ ಬೆದ್ರಾಳದಲ್ಲಿ ನಡೆದಿದೆ. ವೆಲ್ಡಿಂಗ್ ಕೆಲಸದ ಸಹಾಯಕನಾಗಿದ್ದ, ಕಾಸರಗೋಡು ಮೂಲದ ವೆಳ್ಳರಿಕುಂಡು ಕಲ್ಲಹಳ್ಳಿ ನಿವಾಸಿ ಸೋಮಯ್ಯ ಎಂಬವರ ಪುತ್ರ ದೀಕ್ಷಿತ್ ಎಸ್.ಎಂ.(26) ಮೃತಪಟ್ಟ ಯುವಕ. ದೀಕ್ಷಿತ್, ಸೋಮಯ್ಯ ಗೌಡ ಅವರ ಹೆಂಡತಿಯ ಅಣ್ಣನ ಮಗ ಪ್ರಜ್ವಲ್‌ರೊಂದಿಗೆ ವೆಲ್ಡಿಂಗ್ ಕೆಲಸಕ್ಕೆ ಸಹಾಯಕನಾಗಿ ಹೋಗುತ್ತಿದ್ದು, ಜು.11ರಂದು ಕೆಮ್ಮಿಂಜೆ ಗ್ರಾಮದ ಬೆದ್ರಾಳದ ಆರ್‌ಸಿಸಿ ಮನೆಯೊಂದರಲ್ಲಿ ಶೀಟ್ ಹಾಕುವ ಕೆಲಸ ಮಾಡುತ್ತಿದ್ದ ಸಂದರ್ಭ ದೀಕ್ಷಿತ್ ಬೊಬ್ಬೆ ಹೊಡೆದು

ಮನೆ ಮೇಲೆ ಶೀಟ್ ಅಳವಡಿಸುತ್ತಿದ್ದ ವೇಳೆ ಯುವಕ ಮೃತ್ಯು ! Read More »

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ನಗರದ ಬೈಪಾಸ್ ರಸ್ತೆಯ ತೆಂಕಿಲ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ಬೃಹತ್ ಗಾತ್ರದ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದೆ. ಮರ ಬಿದ್ದ ಪರಿಣಾಮ ರಸ್ತೆ ಸಂಚಾರ ಬಂದ್‍ ಆಗಿತ್ತು. ಬೈಪಾಸ್ ರಸ್ತೆಯ ವಿವೇಕಾನಂದ ಶಾಲೆ ಬಳಿ ಇರುವ ಕಿರು ಸೇತುವೆಗೆ ಮರ ಬಿದ್ದಿದೆ. ವಾಹನ ಸವಾರರು ಪುತ್ತೂರು ನಗರಕ್ಕೆ ಬಂದು ಸುಳ್ಯ, ಮಂಗಳೂರು ಕಡೆಗೆ ಚಲಿಸಬೇಕಾಯಿತು. ತೆರವು ಕಾರ್ಯ ಇನ್ನಷ್ಟೇ ನಡೆಯಬೇಕಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರದಲ್ಲಿ ವ್ಯತ್ಯಯ Read More »

ಬಲ್ನಾಡಿನಲ್ಲಿ ಶಾಂತಿಧಾಮ ಹಿಂದೂ ರುದ್ರಭೂಮಿಗೆ ಭೂಮಿ ಪೂಜೆ

ಪುತ್ತೂರು: ಬಲ್ನಾಡು ಗ್ರಾಮದ ನಾರಾಜಿಲಮೂಲೆ ಎಂಬಲ್ಲಿ ಶಾಂತಿಧಾಮ ಹಿಂದೂ ರುದ್ರಭೂಮಿಗೆ ಭೂಮಿ ಪೂಜೆ ಇಂದು ನಡೆಯಿತು. ಬಲ್ನಾಡು ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿ ಹಾಗೂ ಬಲ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣಗೊಳ್ಳಲಿರುವ ಹಿಂದೂ ರುದ್ರ ಭೂಮಿಗೆ ಭೂಮಿ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ,  ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಭಟ್ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಬಲ್ನಾಡಿನಲ್ಲಿ ಶಾಂತಿಧಾಮ ಹಿಂದೂ ರುದ್ರಭೂಮಿಗೆ ಭೂಮಿ ಪೂಜೆ Read More »

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ | ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ. ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬರುತ್ತಿದ್ದು ಬಸ್ ಸಂಚಾರವಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಶೀಘ್ರವೇ ಅಂತರಾಜ್ಯ ಪರವಾನಿಗೆಯನ್ನು

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ | ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ Read More »

ಸಿ.ಎ ಗ್ರೂಪ್ 1 ಹಾಗೂ 2 ಪರೀಕ್ಷೆ ತೇರ್ಗಡೆಯಾದ ಅಂಬಿಕಾ ಮಹಾವಿದ್ಯಾಲಯದ ಸಿಂಚನಾ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಸಿಂಚನಾ ಎಂ. ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ 1 ಹಾಗೂ ಗ್ರೂಪ್ 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ. ಸಿಂಚನಾ ಅವರು ಸುಳ್ಯದ ಐವತ್ತೊಕ್ಲು ಗ್ರಾಮದ ದಿ.ಸೀತಾರಾಮ ಎಂ. ಹಾಗೂ ಸರೋಜಾ ದಂಪತಿ ಪುತ್ರಿ. ಕಳೆದ ಕೆಲವು ವರ್ಷಗಳಿಂದ ಅಂಬಿಕಾ ಪದವಿಪೂರ್ವ ಹಾಗೂ ಪದವಿ ಮಹಾವಿದ್ಯಾಲಯಗಳಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ

ಸಿ.ಎ ಗ್ರೂಪ್ 1 ಹಾಗೂ 2 ಪರೀಕ್ಷೆ ತೇರ್ಗಡೆಯಾದ ಅಂಬಿಕಾ ಮಹಾವಿದ್ಯಾಲಯದ ಸಿಂಚನಾ Read More »

ಬಿಎಮ್ಎಸ್ ಅಖಿಲ ಭಾರತೀಯ ಅಧ್ಯಕ್ಷ ಹಿರಣ್ಮಯಿ ಪಾಂಡ್ಯ ಪುತ್ತೂರಿಗೆ ಭೇಟಿ

ಪುತ್ತೂರು: ಭಾರತೀಯ ಮಜ್ದೂರ್ ಸಂಘದ ಅಖಿಲ ಭಾರತೀಯ ಅಧ್ಯಕ್ಷರಾದ ಹಿರಣ್ಮಯಿ ಪಾಂಡ್ಯ ಅವರು ದಕ್ಷಿಣ ಕನ್ನಡ ಜಿಲ್ಲಾ ಬಿಎಮ್ಎಸ್ ಕಚೇರಿಗೆ ಭೇಟಿ ನೀಡಿದರು. ಸಂಘದ ಸದಸ್ಯರನ್ನು ಉದ್ದೇಶಿಸಿ ಮಾರ್ಗದರ್ಶನವನ್ನು ಮಾಡಿದರು. ಈ ಸಂದರ್ಭದಲ್ಲಿ ಹೆಚ್ ಎಲ್ ವಿಶ್ವನಾಥ್ ಅವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಎಮ್ಎಸ್ ನ ಅಧ್ಯಕ್ಷರಾದ ವಕೀಲರಾದ ಅನಿಲ್ ಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಕಾಸರಗೋಡು ಜಿಲ್ಲಾ ಬಿಎಮ್ಎಸ್ ನ ಅಧ್ಯಕ್ಷರಾದ ಉಪೇಂದ್ರ ಅವರು ಉಪಸ್ಥಿತರಿದ್ದರು. ಜಿಲ್ ಬಿ ಎಂ ಎಸ್ ನ

ಬಿಎಮ್ಎಸ್ ಅಖಿಲ ಭಾರತೀಯ ಅಧ್ಯಕ್ಷ ಹಿರಣ್ಮಯಿ ಪಾಂಡ್ಯ ಪುತ್ತೂರಿಗೆ ಭೇಟಿ Read More »

ರಸ್ತೆ ಬದಿ ಕಸ ಬಿಸಾಡಿದ ವ್ಯಕ್ತಿ | ದಂಡ ವಿಧಿಸಿದ ಗ್ರಾಮ ಪಂಚಾಯಿತಿ

ಉಪ್ಪಿನಂಗಡಿ: ಪುತ್ತೂರು ತಾಲೂಕಿನ 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ -ಶಾಂತಿ ನಗರ ರಸ್ತೆಯಲ್ಲಿ ರಸ್ತೆ ಬದಿ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿ ದಂಡ ವಿಧಿಸಿದೆ. ಪೆರ್ನೆ ಪಂಚಾಯತ್ ವ್ಯಾಪ್ತಿಯ  ಕರ್ವೆಲ್ ನಿವಾಸಿ ಬದ್ರುದ್ದಿನ್, ಅಬ್ದುಲ್ ರಹಿಮಾನ್ ರಸ್ತೆ ಬದಿ ಕಸ ಬಿಸಾಡಿ ಹೋಗಿದ್ದು ಅದನ್ನ 34ನೆಕ್ಕಿಲಾಡಿ ಗ್ರಾಮ ಪಂಚಾಯತ್  ಸದಸ್ಯರು ಹಾಗೂ ಅಧಿಕಾರಿಗಳು ಪರಿಶೀಲನೆ ಮಾಡಿ ದಂಡ ವಿಧಿಸಿದ್ದಾರೆ. ಮೂರು ಸಾವಿರ ರೂ. ದಂಡ ವಿಧಿಸಲಾಗಿದೆ.

ರಸ್ತೆ ಬದಿ ಕಸ ಬಿಸಾಡಿದ ವ್ಯಕ್ತಿ | ದಂಡ ವಿಧಿಸಿದ ಗ್ರಾಮ ಪಂಚಾಯಿತಿ Read More »

‘ಪ್ರಿಂಟ್ ಹೌಸ್’ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು: ಬೊಳುವಾರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಪ್ರಿಂಟ್ ಹೌಸ್’ ಸಂಸ್ಥೆ ಹೊಸ ತಂತ್ರಜ್ಞಾನದೊಂದಿಗೆ ಸ್ಥಳಾಂತರಗೊಂಡು ಇಂದು ನೆಹರುನಗರದ ಅಶ್ವಿನಿ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ಮಂಗಳೂರು ಗುಜ್ಜಾಡಿ ಸ್ವರ್ಣ ಜ್ಯುವೆಲ್ಲರ್ಸ್ ಮಾಲಕ ಅಜಯ್ ನಾಯಕ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪುತ್ತೂರು ಮುಳಿಯ ಜ್ಯುವೆಲ್ಲರ್ಸ್ ನ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ದೀಪ ಪ್ರಜ್ವಲನೆ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಾಣಿ ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಪಿ. ಶೆಟ್ಟಿ, ಪುತ್ತೂರು ಯೂನಿಯನ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ

‘ಪ್ರಿಂಟ್ ಹೌಸ್’ ಸ್ಥಳಾಂತರಗೊಂಡು ಶುಭಾರಂಭ Read More »

error: Content is protected !!
Scroll to Top