ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿಣಿ ಸಭೆ | ಪ್ರತೀ ತಾಲೂಕಿನಲ್ಲಿ ಜಿಲ್ಲಾ ಸಮಿತಿಯ ಸಭೆ ನಡೆಸಲು ನಿರ್ಧಾರ
ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿಣಿ ಸಮಿತಿ ಸಭೆ ಪುತ್ತೂರಿನ ದರ್ಬೆಯಲ್ಲಿರುವ ಶ್ರೀರಾಮ ಸೌಧದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯ ಆವರಣದಲ್ಲಿ ನಡೆಯಿತು. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ.ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತೀ ತಾಲೂಕುಗಳಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಗಳನ್ನು ಸರದಿಯಂತೆ ನಡೆಸಲು ನಿರ್ಧರಿಸಲಾಯಿತು. . ಕಳೆದ ತಿಂಗಳು ಉಜಿರೆಯಲ್ಲಿ ನಡೆದ ಸಭೆಯ ನಿರ್ಣಯಗಳನ್ನು ಗೌರವ ಕಾರ್ಯದರ್ಶಿ ರಾಜೇಶ್ವರಿ ಸಭೆಗೆ ಓದಿ ಹೇಳಿದರು. ಗೌರವ ಕೋಶಾಧ್ಯಕ್ಷ ಐತಪ್ಪ ನಾಯ್ಕ್, ರಾಜ್ಯ […]










