ಪುತ್ತೂರು

ಬೆಥನಿ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ

ಪುತ್ತೂರು: ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಮಾತನಾಡಿ, ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ ಅನುಭವ, ಮತದಾನದ ಅವಶ್ಯಕತೆ ಹಾಗೂ ಸಂವಿಧಾನ ಬಗೆಗಿನ ಗೌರವ ಶಾಲಾ […]

ಬೆಥನಿ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ Read More »

ಕಾರ್ಗಿಲ್ ವಿಜಯೋತ್ಸವಕ್ಕೆ ಇಪ್ಪತ್ತೈದು ವರ್ಷ ತುಂಬಿದ ಸಂಭ್ರಮ |ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಅಂತರ್ ಜಿಲ್ಲಾ ಭಾಷಣ, ದೇಶಭಕ್ತಿಗೀತೆ ಸ್ಪರ್ಧೆ

ಪುತ್ತೂರು: ಕಾರ್ಗಿಲ್ ವಿಜಯೋತ್ಸವಕ್ಕೆ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಗಳ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಐದು ಸಾವಿರ ರೂ. ಹಾಗೂ ದ್ವಿತೀಯ ಬಹುಮಾನ ಮೂರು ಸಾವಿರ ರೂ. ನೀಡಲಾಗುತ್ತದೆ. ಭಾಷಣ ಸ್ಪರ್ಧೆಗೆ ಭಾರತೀಯ ಸೈನ್ಯ – ಸಾಧನೆ

ಕಾರ್ಗಿಲ್ ವಿಜಯೋತ್ಸವಕ್ಕೆ ಇಪ್ಪತ್ತೈದು ವರ್ಷ ತುಂಬಿದ ಸಂಭ್ರಮ |ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಅಂತರ್ ಜಿಲ್ಲಾ ಭಾಷಣ, ದೇಶಭಕ್ತಿಗೀತೆ ಸ್ಪರ್ಧೆ Read More »

ಜು.06: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆ 2 ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ಳಾರೆ : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂ‍ಘದ ಬೆಳ್ಳಾರೆ ಶಾಖೆ ಒಂದು ವರ್ಷ ಪೂರೈಸಿ 2 ನೇ ವರ್ಷಕ್ಕೆ ಯಶಸ್ವಿಯಾಗಿ ಪಾದಾರ್ಪಣೆ ಮಾಡಲಿದೆ. ಪಾದಾರ್ಪಣೆ ಅಂಗವಾಗಿ ಜು.06 ಶುಕ್ರವಾರ ಬೆಳಿಗ್ಗೆ ಗಣಹೋಮ ಮತ್ತು ಲಕ್ಷ್ಮೀಪೂಜೆ ನಡೆಯಲಿದೆ. ಈ ಕುರಿತು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಜು.06: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆ 2 ನೇ ವರ್ಷಕ್ಕೆ ಪಾದಾರ್ಪಣೆ Read More »

ನಗರಸಭೆ ವ್ಯಾಪ್ತಿಯಲ್ಲಿ ಮಳೆಗಾಲ ಪೂರ್ವ ಕೈಗೊಳ್ಳದ ಕಾಮಗಾರಿಯಿಂದ ಸಾರ್ವಜನಿಕರಿಗೆ ಸಮಸ್ಯೆ | ನಗರಸಭಾ ಬಿಜೆಪಿ ಸದಸ್ಯರಿಂದ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಮನವಿ | 7 ದಿನದೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಧರಣಿ ಎಚ್ಚರಿಕೆ : ನಿಕಟಪೂರ್ವ ಅಧ್ಯಕ್ಷ ಜೀವಂಧ‌ರ್ ಜೈನ್.

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛತೆ, ಅಪಾಯಕಾರಿ ಮರದ ಗೆಲ್ಲುಗಳ ತೆರವು,ರಸ್ತೆ ಬದಿ ಗಿಡಗಂಟಿಗಳ ತೆರವು, ಮುಂತಾದ ಮಳೆಗಾಲದ ಮುಂಚಿತವಾಗಿಯೇ ಮಾಡಬೇಕಾದ ಕಾಮಗಾರಿಗಳನ್ನು ನಿರ್ವಹಿಸದೇ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಮತ್ತು ವಿವಿಧ ಅನುದಾನ ಕಾಮಗಾರಿಗಳ ಕುರಿತು ಬೇಡಿಕೆ ಮುಂದಿಟ್ಟು ಪುತ್ತೂರು ನಗರಸಭೆ ಬಿಜೆಪಿ ಸದಸ್ಯರ ವತಿಯಿಂದ ಇಂದು ನಗರಸಭೆ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಭಾರಿ ಮಳೆಗಾಲದ ಪೂರ್ವಭಾವಿಯಾಗಿ ನಗರಸಭೆಯಿಂದ ನಡೆಯುವ ಮುನ್ನೆಚ್ಚರಿಕೆ ಕ್ರಮ, ಗ್ರಾಸ್ ಕಟ್ಟಿಂಗ್ ಕೂಡಾ ಮಾಡಿಲ್ಲ. ಅದೇ ರೀತಿ 15

ನಗರಸಭೆ ವ್ಯಾಪ್ತಿಯಲ್ಲಿ ಮಳೆಗಾಲ ಪೂರ್ವ ಕೈಗೊಳ್ಳದ ಕಾಮಗಾರಿಯಿಂದ ಸಾರ್ವಜನಿಕರಿಗೆ ಸಮಸ್ಯೆ | ನಗರಸಭಾ ಬಿಜೆಪಿ ಸದಸ್ಯರಿಂದ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಮನವಿ | 7 ದಿನದೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಧರಣಿ ಎಚ್ಚರಿಕೆ : ನಿಕಟಪೂರ್ವ ಅಧ್ಯಕ್ಷ ಜೀವಂಧ‌ರ್ ಜೈನ್. Read More »

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅದ್ವಿತ್ ಜಿ. ಹಾಗೂ ಗಾನವಿ ಎನ್‍. ಬಹುಮಾನ ಪಡೆದುಕೊಂಡಿದ್ದಾರೆ. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗ ಗೌಡ ಸೇವಾ  ಸಂಘದ  ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆ ಅಂಗವಾಗಿ ಸ್ಪರ್ಧೆ ಏರ್ಪಡಿಸಿತ್ತು. ಅದ್ವಿತ್ ಜಿ -ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ದ್ವಿತೀಯ ಹಾಗೂ ಗಾನವಿ ಎನ್  ಪ್ರಾಥಮಿಕ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ Read More »

ಜು.6-7 : ಉಪ್ಪಿನಂಗಡಿಯಲ್ಲಿ ಬೃಹತ್ ಹಲಸು ಹಬ್ಬ | ಆದರ್ಶ ದಂಪತಿಗಳು ಸ್ಪರ್ಧೆ, ವಿವಿಧ ಗೋಷ್ಠಿಗಳು

ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಘಟಕ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂ ನಲ್ಲಿ ಜು.6 ಹಾಗೂ 7ರಂದು ಎರಡು ದಿನಗಳ ಕಾಲ ಉಪ್ಪಿನಂಗಡಿ ಎಚ್.ಎಂ.ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಜೇಸಿಐ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಬಿ. ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ನಡೆಯಲಿರುವ ಹಲಸು ಹಬ್ಬದಲ್ಲಿ ಜು.6ರಂದು ಬೆಳಗ್ಗೆ 8ಕ್ಕೆ ಉಪ್ಪಿನಂಗಡಿ

ಜು.6-7 : ಉಪ್ಪಿನಂಗಡಿಯಲ್ಲಿ ಬೃಹತ್ ಹಲಸು ಹಬ್ಬ | ಆದರ್ಶ ದಂಪತಿಗಳು ಸ್ಪರ್ಧೆ, ವಿವಿಧ ಗೋಷ್ಠಿಗಳು Read More »

ಅಂಗನವಾಡಿ ಕಾರ್ಯಕರ್ತೆಯರ ಸೇವಾಂಜಲಿ ಟ್ರಸ್ಟ್‌ಗೆ ಶಾಸಕರಿಂದ 50 ಸಾವಿರ ರೂ. ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕ ಅಶೋಕ್ ರೈಯವರು 50 ಸಾವಿರ ರೂ. ಸಹಾಯಧನ ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ

ಅಂಗನವಾಡಿ ಕಾರ್ಯಕರ್ತೆಯರ ಸೇವಾಂಜಲಿ ಟ್ರಸ್ಟ್‌ಗೆ ಶಾಸಕರಿಂದ 50 ಸಾವಿರ ರೂ. ಸಹಾಯಧನ Read More »

ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು. ಒಟ್ಟು 34 ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ. ಆಕಸ್ಮಿಕ ಮರಣಾವಾದರೆ ಒಂದು ಲಕ್ಷ  ಮತ್ತು ಅಪಘಾತದಲ್ಲಿ ಮರಣ ಹೊಂದಿದರೆ 5 ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು

ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ Read More »

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಯುವಜನತೆ ಮತ್ತು ಭಾರತೀಯತೆ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಅಲ್ಲಿಯ ಯುವಶಕ್ತಿಯ ಕೊಡುಗೆ ನಿರ್ಣಾಯಕ, ಸಂಶೋಧನೆಗಳು, ಹೊಸತನದ ಹುಡುಕಾಟಗಳು, ಅನ್ವೇಷಣೆ, ಆವಿಷ್ಕಾರಗಳು-ಹೀಗೆ ಎಲ್ಲ ರಂಗಗಳಲ್ಲೂ ಯುವಜನತೆಯ ಉತ್ಸಾಹ, ಪ್ರಾಮಾಣಿಕತೆ ಹಾಗೂ ಸಾಹಸಗಳೇ ದೇಶಗಳ ನಿಜವಾದ ಬಂಡವಾಳವಾಗಿವೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ಗಣರಾಜ್ ಭಟ್‍ ಕೆದಿಲ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಯುವಜನತೆ ಮತ್ತು ಭಾರತೀಯತೆ ಎಂಬ ವಿಚಾರದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರೇ ದೇಶದ ಶಕ್ತಿ. ಇವರು ತಮ್ಮ

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಯುವಜನತೆ ಮತ್ತು ಭಾರತೀಯತೆ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ Read More »

ನಿವೃತ್ತ ಭಾರತೀಯ ನೌಕಾಪಡೆ ಉದ್ಯೋಗಿ ಬಾಲಕೃಷ್ಣ ನಾಯ್ಕ ನಿಧನ

ಪುತ್ತೂರು: ನಿವೃತ್ತ ಭಾರತೀಯ ನೌಕಾಪಡೆಯ ಉದ್ಯೋಗಿ, ಕಲ್ಲಾರೆ ನಿವಾಸಿ ಬಾಲಕೃಷ್ಣ ನಾಯ್ಕ  (68) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಭಾರತೀಯ ನೌಕಾಪಡೆಯು ಸಬ್‍ ಮೆಷಿನರಿಯಲ್ಲಿ ಉದ್ಯೋಗಿಯಾಗಿದ್ದ ಅವರು ನಿವೃತ್ತರಾಗಿ 16 ವರ್ಷಗಳು ಕಳೆದಿದ್ದವು. ಇಂದು ಮಧ್ಯಾಹ್ನ ಮನೆಯಲ್ಲಿ ಹಠಾತ್ತನೇ ಕುಸಿದು ಬಿದ್ದು ನಿಧನರಾದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

ನಿವೃತ್ತ ಭಾರತೀಯ ನೌಕಾಪಡೆ ಉದ್ಯೋಗಿ ಬಾಲಕೃಷ್ಣ ನಾಯ್ಕ ನಿಧನ Read More »

error: Content is protected !!
Scroll to Top