ಪುತ್ತೂರು

ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು : ಜೊತೆಗಿದ್ದ ಯುವತಿ ಎಸ್ಕೇಪ್‌

ಒಂದು ವಾರದಿಂದ ಹೋಟೆಲ್‌ ಕೊಠಡಿಯಲ್ಲಿ ತಂಗಿದ್ದ ಯುವಕ-ಯುವತಿ ಬೆಂಗಳೂರು: ಎಂಟು ದಿನ ಪ್ರೇಯಸಿ ಜೊತೆಗೆ ಹೋಟೆಲಿನಲ್ಲಿ ತಂಗಿದ್ದ ಪುತ್ತೂರಿನ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಡಿವಾಳದ ಲಾಡ್ಜ್‌ವೊಂದರಲ್ಲಿ ಸಂಭವಿಸಿದ್ದು, ಈ ಘಟನೆ ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದೆ. ಯುವಕನನ್ನು ಪುತ್ತೂರಿನ ತಕ್ಷಿತ್ (20) ಎಂದು ಗುರುತಿಸಲಾಗಿದೆ. ಅವನ ಜೊತೆಗಿದ್ದ ಯುವತಿ ಎಸ್ಕೇಪ್‌ ಆಗಿದ್ದಾಳೆ. ಶುಕ್ರವಾರ (ಅ.18) ಯುವಕ ಸಾವನ್ನಪ್ಪಿದ್ದು, ಬೆಳಗ್ಗೆ ಲಾಡ್ಜ್ ಸಿಬ್ಬಂದಿ ರೂಂ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ತನ್ನ ಪ್ರೇಯಸಿಯೊಂದಿಗೆ […]

ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು : ಜೊತೆಗಿದ್ದ ಯುವತಿ ಎಸ್ಕೇಪ್‌ Read More »

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರಗೋಷ್ಟಿಯ ಸಮಾಪನ

ಪುತ್ತೂರು: ಜಿಡೆಕಲ್ಲಿನಲ್ಲಿರುವ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರಿನ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶಗಳ ಸಹಯೋಗದಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆಯ ಒಂದು ದಿನದ ಕಾರ್ಯಕ್ರಮ ನಡೆಯಿತು. ಗೋಷ್ಟಿ – 1ಉದ್ಘಾಟನ ಸಮಾರಂಭದ ಬಳಿಕ ನಡೆದ ಮೊದಲ ಗೋಷ್ಠಿಯ ಅಧ್ಯಕ್ಷತೆಯನ್ನು ವಾಮದಪದವಿನ ಸ.ಪ್ರ.ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀಮತಿ ರೇಶ್ಮಾ ಭಟ್ ವಹಿಸಿ ಮಾತನಾಡಿ ಸಾಹಿತ್ಯದಲ್ಲಿ ಕಾಲಕಾಲಕ್ಕೆ ಗಮನ ಸೆಳೆಯುವ ದೃಷ್ಟಿಯಿಂದ ಬದಲಾವಣೆಗಳಾಗುತ್ತಾ ಇರುತ್ತವೆ.

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರಗೋಷ್ಟಿಯ ಸಮಾಪನ Read More »

ಹೆಬ್ಬಾರಬೈಲು ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ ಅವರ ಪುತ್ರ ತಾರನಾಥ್ ಹೆಚ್. (49) ರವರು ಅಕ್ಟೋಬ‌ರ್ 13ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಂದೆ ಹಾಗೂ ಸಹೋದರರೊಂದಿಗೆ ಹೆಚ್. ನಾರಾಯಣ ಅಂಡ್ ಸನ್ಸ್‌ ಜವುಳಿ ಮಳಿಗೆಯಲ್ಲಿ ವ್ಯವಹಾರ ನಿರ್ವಹಿಸುತ್ತಿದ್ದ ಅವರು ಇತ್ತೀಚಿನ ಕೆಲ ವರ್ಷಗಳಿಂದ ಪಿಗ್ನಿ ಸಂಗ್ರಾಹಕರಾಗಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್ 13ರ ಸಂಜೆ ಎಂದಿನಂತೆ ಪಿಗ್ನಿ ಸಂಗ್ರಹಣೆಯ ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ

ಹೆಬ್ಬಾರಬೈಲು ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ Read More »

ಕಾರ್ಕಳ : ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆ

ಬ್ರಹ್ಮಾವರದಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆಗೆ ಶರಣು ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಎಚ್.ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸುದೀಪ್ ಭಂಡಾರಿ ಎಂದು ಗುರುತಿಸಲಾಗಿದೆ. ನಿನ್ನೆ ಸಾಯಂಕಾಲ ಅವರು ಹೆಬ್ರಿಯಲ್ಲಿದ್ದು ಬಳಿಕ ಬ್ರಹ್ಮಾವರಕ್ಕೆ ಹೋಗಿದ್ದರು ಎನ್ನಲಾಗಿದೆ. ಸುದೀಪ್‌ ಭಂಡಾರಿ ಬಾರಕೂರಿನಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಾರ್ಕಳ : ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆ Read More »

ಅ. 18: ಪೆರುವಾಜೆಯ ಜೆ. ಡಿ. ಆಡಿಟೋರಿಯಂ‌ನಲ್ಲಿ ಮಕ್ಕಳ ‘ಗೊಂಬೆ ರಾವಣ’ ನಾಟಕ

ಪುತ್ತೂರು: ಯುವ ರಾಜ್ಯ ಪ್ರಶಸ್ತಿ ಪುರಸ್ಕೃತ ರಂಗ ನಿರ್ದೇಶಕ ವಿದ್ದು ಉಚ್ಚಿಲ ಅವರ ಮಾರ್ಗದರ್ಶನದಲ್ಲಿ, ಡ್ಯಾನ್ಸ್ & ಬೀಟ್ಸ್ ನೃತ್ಯ ಸಂಸ್ಥೆ ಬೆಳ್ಳಾರೆ ನೇತೃತ್ವದ ಗೊಂಬೆ ರಾವಣ ಎಂಬ ಮಕ್ಕಳ ರಂಗ ನಾಟಕ ಅ. 18 ಶನಿವಾರದಂದು ಪೆರುವಾಜೆಯ ಜೆ. ಡಿ. ಆಡಿಟೋರಿಯಂ‌ನಲ್ಲಿ ಚೊಚ್ಚಲ ಪ್ರದರ್ಶನ ಕಾಣಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಬಳಿಕ ವಿವಿಧ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 13 ಮಕ್ಕಳು ಈ ರಂಗನಾಟಕದಲ್ಲಿ ಅಭಿನಯಿಸಲಿದ್ದಾರೆ. ಕಲಾ ಪೋಷಕರ ಸಹಕಾರದ ಜೊತೆಗೆ ‘ಮುದ್ರಾರಂಗ’ – ಚಿಣ್ಣರ

ಅ. 18: ಪೆರುವಾಜೆಯ ಜೆ. ಡಿ. ಆಡಿಟೋರಿಯಂ‌ನಲ್ಲಿ ಮಕ್ಕಳ ‘ಗೊಂಬೆ ರಾವಣ’ ನಾಟಕ Read More »

ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು

ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಯರ ಮೇಲೆ ದಾಳಿ ನಡೆಸಿದ ಹೆಜ್ಜೇನು ಪುತ್ತೂರು: ಹೆಜ್ಜೇನು ದಾಳಿಯಿಂದ ಬಾಲಕಿ ಮೃತಪಟ್ಟ ದಾರುಣ ಘಟನೆ ಸೇಡಿಯಾಪು ಕೂಟೇಲು ಸಮೀಪ ಸಂಭವಿಸಿದೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿರುವಾಗ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮೂವರು ಗಾಯಗೊಂಡಿದ್ದರು. ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ (7) ಮೃತ ಬಾಲಕಿ. 5ನೇ ತರಗತಿ

ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು Read More »

ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು

ಮನೆಯ ಎದುರು ಕುಳಿತಿದ್ದ ವೇಳೆ ಬಡಿದ ಸಿಡಿಲು ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಆನಡ್ಕ ನಿವಾಸಿ ವಾಮನ (40) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಸಿಡಲು ಬಡಿದಿದ್ದು,

ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಸಭೆ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆಯು ಪುತ್ತೂರಿನ ಸ್ವಾಗತ ಹೋಟೆಲ್ ನಲ್ಲಿ ಜರಗಿತು . ಪಡುಮಲೆ ಶ್ರೀ ಕೂವೆ ಶಾಸ್ತರ ದೇವಸ್ಥಾನದಲ್ಲಿ ಇತ್ತೀಚೆಗೆ ಜರಗಿದ ಜಿಲ್ಲಾಮಟ್ಟದ ಹಿರಿಯರ ಕಾರ್ಯಾಗಾರದ ಫಲಶ್ರುತಿ ಬಗ್ಗೆ ಚರ್ಚಿಸಲಾಯಿತು. ಮೂರು ವಿಚಾರಗೋಷ್ಠಿಗಳು, ಹಿರಿಯರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ ಪುತ್ತೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಆಳ್ವ ಪಡುಮಲೆ ಇವರನ್ನು ಅಭಿನಂದಿಸಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದಿನಾಂಕ 18.10.2025 ರಂದು ಜರಗಲಿರುವ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಸಭೆ Read More »

4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್‌ : ಕಂಬನಿ ಮಿಡಿದ ಪುತ್ತೂರಿನ ಜನ

ಮುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಅಪೂರ್ವ ಭಟ್‌ ಪುತ್ತೂರು: ನಾಲ್ಕು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ‌ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಬರೋಬ್ಬರಿ 134 ದಿನ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿದ ಅಪೂರ್ವ ಭಟ್‌ ಅಗಲಿಕೆ ಭಾರಿ ದುಃಖ ತಂದಿದ್ದು, ಸಾವಿರಾರು ಮಂದಿ ಸೋಷಿಯಲ್‌ ಮೀಡಿಯಾದಲ್ಲಿ ಕಂಬನಿ

4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್‌ : ಕಂಬನಿ ಮಿಡಿದ ಪುತ್ತೂರಿನ ಜನ Read More »

ಕಾರಿನಲ್ಲಿ ಡ್ರಗ್ಸ್‌ ಸಾಗಾಟ : ಆರೋಪಿ ಸೆರೆ

ಪುತ್ತೂರು : ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ರಜಾಕ್ (43) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 30ರಂದು ಉಪ್ಪಿನಂಗಡಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅವಿನಾಶ್ ಎಚ್ ಮತ್ತು ಅವರ ತಂಡ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ರಜಾಕ್ ಸ್ವಲ್ಪ ಮುಂದೆ ವಾಹನ ಚಲಾಯಿಸಿ ಕಾರು ನಿಲ್ಲಿಸಿ ಓಡಿ ಪರಾರಿಯಾಗಲು ಪ್ರಯತ್ನಿಸಿದ್ದ. ಪೊಲೀಸರು ಆತನನ್ನು

ಕಾರಿನಲ್ಲಿ ಡ್ರಗ್ಸ್‌ ಸಾಗಾಟ : ಆರೋಪಿ ಸೆರೆ Read More »

error: Content is protected !!
Scroll to Top