ಪುತ್ತೂರು

ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿಶೇಷ ಅನುಬಂಧ ಕಾರ್ಯಕ್ರಮ

ಪುತ್ತೂರು: ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಮುಳಿಯದ ವತಿಯಿಂದ ಅಪ್ಪಂದಿರ ದಿನಕ್ಕೆ ವಿಶೇಷ ಸ್ಥಾನವನ್ನು ನೀಡಿ ಆಚರಣೆಗೆ ತರಲಾಗಿದೆ. ಐದು ಶೋರೂಂ ನಲ್ಲಿ ಸೇರಿದ ಜನರನ್ನು ನೋಡಿದರೆ ಮಹತ್ವವಿದೆ ಎಂಬುದು ತಿಳಿಯುತ್ತದೆ ಎಂದು ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಶನಿವಾರ ಪುತ್ತೂರು ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಅಪ್ಪಂದಿರ ದಿನದ ಅಂಗವಾಗಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು. […]

ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿಶೇಷ ಅನುಬಂಧ ಕಾರ್ಯಕ್ರಮ Read More »

ಕುಂಬ್ರದಲ್ಲಿ ಶುಭಾರಂಭಗೊಂಡಿದೆ ಪ್ರಿವೆಂಟಿವ್ ಹೆಲ್ತ್ ಕೇರ್ ವೆಲ್‍ ನೆಸ್ ಮತ್ತು ತರಬೇತಿ ಕೇಂದ್ರ “ಕಾಯಕಲ್ಪ ಆರೋಗ್ಯ ಧಾಮ”

ಕುಂಬ್ರ: ಪ್ರಿವೆಂಟಿವ್ ಹೆಲ್ತ್ ಕೇರ್ ವೆಲ್‍ ನೆಸ್ ಮತ್ತು ತರಬೇತಿ ಕೇಂದ್ರ “ಕಾಯಕಲ್ಪ ಆರೋಗ್ಯ ಧಾಮ” ಪುತ್ತೂರು ತಾಲೂಕಿನ ಕುಂಬ್ರ ವೃತ್ತದ ಬಳಿ ಬೆಳ್ಳಾರೆಯ ರಸ್ತೆಯಲ್ಲಿರುವ ಅರ್ಚನಾ ಆರ್ಕೇಡ್ ನಲ್ಲಿ ಶುಭಾರಂಭಗೊಂಡಿತು. ಕೆದಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ದೀಪ ಬೆಳಗಿಸಿ ಸಂಸ್ಥೆಯನ್ನು ಉದ್ಘಾಟಿಸಿದರು. ಸಂಸ್ಥೆಯಲ್ಲಿ ಬೆನ್ನುನೋವು, ಕತ್ತು ನೋವು, ಮೈಕೈನೋವು, ಮಂಡಿನೋವು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಅಸ್ತಮಾ, ನರಗಳ ದೌರ್ಬಲ್ಯ, ಕಣ್ಣಿನ ತೊಂದರೆ, ಕಿವಿ, ಮೂಗು, ಗಂಟಲುನೋವು, ಹೃದಯ ಬೊಜ್ಜು, ಮೂತ್ರಕೋಶ ತೊಂದರೆ, ಮೂಲವ್ಯಾದಿ, ಮಹಿಳೆಯರ

ಕುಂಬ್ರದಲ್ಲಿ ಶುಭಾರಂಭಗೊಂಡಿದೆ ಪ್ರಿವೆಂಟಿವ್ ಹೆಲ್ತ್ ಕೇರ್ ವೆಲ್‍ ನೆಸ್ ಮತ್ತು ತರಬೇತಿ ಕೇಂದ್ರ “ಕಾಯಕಲ್ಪ ಆರೋಗ್ಯ ಧಾಮ” Read More »

ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ “ಲಮ್ಹೆ”

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗಗಳ ವತಿಯಿಂದ ತೃತೀಯ ಬಿ ಎಸ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ‘ಲಮ್ಹೆ’ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಶನಿವಾರ ನಡೆಯಿತು. ಕಾಲೇಜಿನ ವಿಜ್ಞಾನ ವಿಭಾಗದ ಡೀನ್, ಐಕ್ಯೂಎಸಿ ಸಂಯೋಜಕಿ ಡಾ.ಮಾಲಿನಿ ಕೆ. ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಕಾಲೇಜಿನ ಅಂತಿಮ ಬಿಎಸ್ಸಿ  ವಿದ್ಯಾರ್ಥಿಗಳಾದ ನಾದ ಐ.ಎ. ಶ್ರಾವ್ಯ ಆರ್.ಎಸ್. ಅನುಭವಗಳನ್ನು ಹಂಚಿಕೊಂಡರು. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಮಲಿಹಾ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು. ಪ್ರಿನ್ಸಿಪಾಲ್ ರೆ.ಡಾ. ಆ್ಯಂಟನಿ

ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ “ಲಮ್ಹೆ” Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

ಸವಣೂರು : ವಿದ್ಯಾರಶ್ಮಿ ವಿದ್ಯಾಲಯದ 2024 -25 ನೇ ಸಾಲಿನ ವಿದ್ಯಾರ್ಥಿ ಸರಕಾರ ರಚನೆಯಾಯಿತು. ಅಧ್ಯಕ್ಷರಾಗಿ ದ್ವಿತೀಯ ಪಿ ಯು ಸಿ ವಾಣಿಜ್ಯ ವಿಭಾಗದ ಕೆ.ಯಶಸ್ವಿ ರೈ ,ಉಪಾಧ್ಯಕ್ಷರಾಗಿ 10 ನೇ ತರಗತಿಯ ಎಂ ವೈಷ್ಣವಿ, ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಖದೀಜ ಅಝೀಲಾ ಎ.ಎಸ್ , ಜತೆ ಕಾರ್ಯದರ್ಶಿಯಾಗಿ 5 ನೇ ತರಗತಿಯ ಶ್ರೀ ಹರ್ಷ ಸಿ. ಕೆ, ಕ್ರೀಡಾ ಕಾರ್ಯದರ್ಶಿಯಾಗಿ ಪ.ಪೂ ವಿಭಾಗದಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪ್ರತೀಕ್ ಮತ್ತು ಶಾಲಾ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಡಾ.ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ | ಬಲಿದಾನ್ ದಿವಸ್ ಆಚರಣೆ

ಪುತ್ತೂರು : ಬಿಜೆಪಿ ಕಛೇರಿಯಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಪುಣ್ಯಸ್ಮರಣೆಯನ್ನು ಬಲಿದಾನ್ ದಿವಸ್ ಆಗಿ ಇಂದು ಆಚರಿಸಲಾಯಿತು. ಬಿಜೆಪಿ ಮುಖಂಡ ಚಂದ್ರಶೇಖರ ರಾವ್ ಬಪ್ಪಳಿಗೆ, ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನ ವೃತ್ತಾಂತ ಹಾಗು ಸಿದ್ಧಾಂತಕ್ಕಾಗಿ ಹೋರಾಟದ ಹಾದಿಯನ್ನು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಗೌರಿ, ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ,

ಡಾ.ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ | ಬಲಿದಾನ್ ದಿವಸ್ ಆಚರಣೆ Read More »

ಪುಡ ಅಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಅಭಿನಂದನೆ 

ಪುತ್ತೂರು: ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸಾಹಿತಿ ನ್ಯಾಯವಾದಿ ಭಾಸ್ಕರ ಕೋಡಿಂಬಾಳ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಅವರನ್ನು  ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾದ ಶಾಸನ ಅಧ್ಯಯನ ಸಂರಕ್ಷಣಾ ಯೋಜನೆ ಹಾಗೂ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಹಾಗೂ ಇತರ ಸಾಹಿತ್ಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಭಿನಂದಿಸಿದರು. ರೋಟರಿ ಕ್ಲಬ್ ಪುತ್ತೂರು

ಪುಡ ಅಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಅಭಿನಂದನೆ  Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ಕೇಂದ್ರ ಒಕ್ಕೂಟದ ಸಭೆ

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲೂಕು ವ್ಯಾಪ್ತಿಯ  ಕೇಂದ್ರ ಒಕ್ಕೂಟದ  ಸಭೆ ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯ್ ಕುಮಾರ್ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಯೋಜನಾಧಿಕಾರಿ ಶಶಿಧರ್ ಎಂ . ಸ್ವಾಗತಿಸಿ, ತಾಲೂಕಿನ 2023-24 ನೇ ಸಾಲಿನ ಆರ್ಥಿಕ ವರ್ಷದ ಸಾಧನಾ ವರದಿಯನ್ನು ಮಂಡಿಸಿದರು. ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಮಾತನಾಡಿ, ಶ್ರೀ ಕ್ಷೇತ್ರದ ಹಿನ್ನೆಲೆಯಲ್ಲಿ ಸೇವಕನಾಗಿ ಮುನ್ನುಡಿ ಹಾಕಿದ್ದು ಅಣ್ಣಪ್ಪ ಸ್ವಾಮಿ. ನಾವೆಲ್ಲ ಅದೇ ಅಣ್ಣಪ್ಪ ಸೇವಕನಾಗಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ಕೇಂದ್ರ ಒಕ್ಕೂಟದ ಸಭೆ Read More »

ಎಸ್.ಸಿ.ಐ. ಪುತ್ತೂರು ವತಿಯಿಂದ ನೋಟ್ ಪುಸ್ತಕ, ಲೇಖನಿ ವಿತರಣೆ

ಪುತ್ತೂರು: ಸಂಟ್ಯಾರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ  ಸೀನಿಯರ್ ಚೇಂಬರ್  ಇಂಟರ್  ನ್ಯಾಷನಲ್ ಪುತ್ತೂರು ಲೀಜನ್ ಹಾಗೂ ಸ್ಪಂದನ ಟ್ರಸ್ಟ್ ವತಿಯಿಂದ ಸುಮಾರು ₹10000 /- ಮೌಲ್ಯದ ಪೆನ್ ಮತ್ತು ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್  ನ್ಯಾಷನಲ್ ಪುತ್ತೂರು ಅಧ್ಯಕ್ಷೆ ಮಲ್ಲಿಕಾ ಜೆ ಆರ್. ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲ ಶಣೈ, ಶಾರದಾ ಪ್ರಭು ಹಾಗೂ ಸದಸ್ಯರು, ಸ್ಪಂದನ ಟ್ರಸ್ಟ್ ನ ಅಧ್ಯಕ್ಷೆ ಸುಮಿತ್ರ, ಕೋಶಾಧಿಕಾರಿ ಕಾವ್ಯ, ಸದಸ್ಯ ಅವಿನಾಶ್,

ಎಸ್.ಸಿ.ಐ. ಪುತ್ತೂರು ವತಿಯಿಂದ ನೋಟ್ ಪುಸ್ತಕ, ಲೇಖನಿ ವಿತರಣೆ Read More »

ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

ಪುತ್ತೂರು: ದರ್ಬೆ ಪಾಂಗ್ಲಾಯ್ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರಕ್ಷಕ – ಶಿಕ್ಷಕ ಸಂಫದ ಮಹಾಸಭೆ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪನ್ಯಾಸಕ ಪ್ರೋ. ಸೆವ್ರಿನ್ ಪಿಂಟೊ ಮಾತನಾಡಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಎರಡು ಕಂಬಗಳಿದ್ದಂತೆ. ಎರಡು ಕಂಬಗಳಲ್ಲಿ ಒಂದು ಅಲ್ಲಾಡಿದರೂ ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆಯಿಂದ ಕಾರ್ಯಪ್ರವೃತ್ತರಾಗಬೇಕು. ಮಕ್ಕಳ ಶೈಕ್ಷಣಿಕ ಪಯಣ ಅತೀ ಅಮೂಲ್ಯ ಈ

ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ Read More »

ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಕೃಷ್ಣ ನಗರದ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕ ಹರಿಪ್ರಸಾದ್ ಪಿ.ಕೆ. ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಒತ್ತಡ ರಹಿತ ಬದುಕನ್ನು ನಡೆಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಎವಿಜಿ ಶಾಲಾ ಅಧ್ಯಕ್ಷರ ವೆಂಕಟರಮಣ ಗೌಡ ಕಳುವಾಜೆ ಶುಭ ಹಾರೈಸಿದರು. ಯೋಗ ತರಬೇತಿದಾರರಾಗಿ ಲಲಿತ, ಸತೀಶ್ ವೇದಿಕೆಯಲ್ಲಿ

ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ Read More »

error: Content is protected !!
Scroll to Top