ಪುತ್ತೂರು

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ 25 ಮಂದಿ ಮರಳಿ ಮಾತೃ ಧರ್ಮಕ್ಕೆ,

ಸುಳ್ಯ: ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ನಡೆಸಲಾಯಿತು. ಈ ಸಂದರ್ಭದಲ್ಲಿ 20 ವರುಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂಡ ಹಿಂದೂ ಸಮುದಾಯದ, ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ ಕರೆ ತರಲಾಯಿತು. ಮರಳಿ ಬಂದ ಕುಟುಂಬಗಳಿಗೆ, ಬಟ್ಟೆಗಳು, ದಿನಸಿ ಸಾಮಗ್ರಿಗಳು, ವಿವಿಧ ದೇವರುಗಳ ಫೋಟೋಗಳು, ಮತ್ತು ಇತರ ಗೃಹ ಉಪಯೋಗಿ […]

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ 25 ಮಂದಿ ಮರಳಿ ಮಾತೃ ಧರ್ಮಕ್ಕೆ, Read More »

ಪಂಜಳ- ಪರ್ಪುಂಜ ರಸ್ತೆ ದುರಸ್ತಿಗೆ ಶಾಸಕರ ಸೂಚನೆ

ಪುತ್ತೂರು; ಪಂಜಳದಿಂದ- ಪರ್ಪುಂಜಕ್ಕೆ ತೆರಳುವ ಜಿಪಂ ರಸ್ತೆಯು ಸಂಪೂರ್ಣ ಹೊಂಡಮಯವಾಗಿದ್ದು ರಸ್ತೆಯನ್ನು ದುರಸ್ತಿ ಮಾಡುವಂತೆ ಶಾಸಕ ಅಶೋಕ್ ರೈಯವರು ಜಿಪಂ ಇಂಜಿನಿಯರ್‌ಗೆ ಸೂಚನೆಯನ್ನು ನೀಡಿದ್ದಾರೆ. ಈ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು ವಾಹನ ಸಂಚಾರಕ್ಕೆ ಅಸಾಧ್ಯವಾಗಿದೆ ಎಂದು ಕುರಿಯ ಆಟೋ ಚಾಲಕರ ಸಂಘದ ವತಿಯಿಂದ ಶಾಸಕರಿಗೆ ಮನವಿ ಮಾಡಿದ್ದರು. ರಸ್ತೆಯ ವಿಚಾರದ ಬಗ್ಗೆ ಜಿಪಂ ಇಂಜಿನಿಯರ್ ಜಿತೆ ಮಾತನಾಡಿದ ಶಾಸಕರು ಪಂಜಳ ಕುರಿಯ ರಸ್ತೆಯ ಅಲ್ಲಲ್ಲಿ ಡಾಮಾರು ಎದ್ದು ಹೊಂಡವಾಗಿದೆ. ಸಂಚಾರಕ್ಕೆ ಅಡಚಣೆಯಾಗಿದೆ ಎಂದು ನಾಗರಿಕರು ತಿಳಿಸಿದ್ದು

ಪಂಜಳ- ಪರ್ಪುಂಜ ರಸ್ತೆ ದುರಸ್ತಿಗೆ ಶಾಸಕರ ಸೂಚನೆ Read More »

ಅಪಾಯವನ್ನು ಆಹ್ವಾನಿಸುತ್ತಿರುವ ಗುಂಡಿ

ಕಾವು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ತಾಲೂಕಿನ ಕಾವು ಸಮೀಪದ ಮದ್ಲ ಎಂಬಲ್ಲಿ ತಡೆಗೋಡೆಯಿಲ್ಲದ ಪೊದೆಗಳಿಂದ ತುಂಬಿದ ತೋಡು.  ಈ ತೋಡಿಗೆ ಸೇತುವೆಯೂ ಇದ್ದು, ಡಾಮಾರು ರಸ್ತೆಯ ಸಮೀಪದಲ್ಲೇ ಇರುವುದರಿಂದ ಮತ್ತು ಯಾವುದೇ ತಡೆಗೋಡೆ ಇಲ್ಲದಿರುವುದು ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟಬುತ್ತಿ. ಇತ್ತೀಚೆಗೆ ಒಂದು ತಾಯಿ ಮತ್ತು ಮಗು ಇದೇ ಸೇತುವೆಯ ಬಳಿ ದೊಡ್ಡ ವಾಹನವೊಂದನ್ನು ತಪ್ಪಿಸಲು ಹೋಗಿ ಅದೃಷ್ಟವಶಾತ್ ಕೂದಲೆಲೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಇನ್ಯಾವುದೇ ಅಪಘಾತ ಸಂಭವಿಸುವ ಮೊದಲೇ ಸಂಬಂಧಿಸಿದ ಇಲಾಖೆ ಈ ಸೇತುವೆಗೆ

ಅಪಾಯವನ್ನು ಆಹ್ವಾನಿಸುತ್ತಿರುವ ಗುಂಡಿ Read More »

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಾಣಿಲ: ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಯೋಗ ಗುರು ವಿಶ್ವೇಶ್ವರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ವಿವರಿಸಿ, ಹಲವು ಯೋಗಾಸನ ಹಾಗೂ ಪ್ರಾಣಾಯಾಮಗಳ ಅಭ್ಯಾಸ ಮಾಡಿಸಿದರು.    ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀಧರ ಬಾಳೆಕಲ್ಲು, ಸದಸ್ಯ ರಾಜೇಶ್ ಬಾಳೆಕಲ್ಲು ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕಿ ಲತಾ ಯು. ವಹಿಸಿದ್ದರು. ಯೋಗ ಗುರು ವಿಶ್ವೇಶ್ವರ ಭಟ್ , ಎಸ್ ಡಿ ಎಂ ಸಿ ಸದಸ್ಯ

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ಅಕ್ಷಯ ಕಾಲೇಜ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಜ್  ಪುತ್ತೂರು : ಅಕ್ಷಯ ಕಾಲೇಜು  ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಅಂತರಾಷ್ಟ್ರೀಯ ಯೋಗ ಶಿಕ್ಷಕಿ ಹೇಮಚಂದ್ರಹಾಸ   ಉದ್ಘಾಟಿಸಿ, ಯೋಗದ ಮಹತ್ವವನ್ನು ಸ್ವಯಂಸೇವಕರಿಗೆ ತಿಳಿಸಿದರು.  ಸ್ವಯಂ ಸೇವಕಿ ಪ್ರಕೃತಿ ಪ್ರಾರ್ಥಿಸಿ. ವೇನುಶ್ರೀ ಸ್ವಾಗತಿಸಿ, ದೀಕ್ಷಾ ವಂದಿಸಿದರು. ವರ್ಷಿಣಿ ನಿರೂಪಿಸಿದರು. ಸಮಾರಂಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಿಶೋರ್ ರೈ, ಘಟಕ ನಾಯಕ ಜೀವನ್, ನಾಯಕಿ ನವಮಿ ಉಪಸ್ಥಿತರಿದ್ದರು.

ಅಕ್ಷಯ ಕಾಲೇಜ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ವೀರಮಂಗಲ ಶಾಲೆಗೆ ಯೋಗ ಟೀ ಶರ್ಟ್ ಕೊಡುಗೆ

ವೀರಮಂಗಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವೀರಮಂಗಲ ಇದರ ವತಿಯಿಂದ ಪಿಎಂಶ್ರೀ ವೀರಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ   ಯೋಗ ಟೀ ಶರ್ಟ್ ಕೊಡುಗೆಯಾಗಿ ನೀಡಲಾಯಿತು. ಪುತ್ತಿಲ ಪರಿವಾರದ ಮುಖ್ಯಸ್ಥರಾದ ಅರುಣ್ ಕುಮಾರ್ ಪುತ್ತಿಲ ಮಕ್ಕಳಿಗೆ ಟೀ ಶರ್ಟ್ ವಿತರಿಸಿ ಶುಭಹಾರೈಸಿದರು. ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರವಿಣ್ ಮಾರ್ತ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಮಹಾವಿಷ್ಣು ಸೇವಾ ಟ್ರಸ್ಟ್ ಆನಾಜೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ನ ಟ್ರಸ್ಟಿಗಳು ಉಪಸ್ಥಿತರಿದ್ದರು. ಶಾಲಾ ವತಿಯಿಂದ

ವೀರಮಂಗಲ ಶಾಲೆಗೆ ಯೋಗ ಟೀ ಶರ್ಟ್ ಕೊಡುಗೆ Read More »

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಜಯಮಾಲಾ ಮಾತನಾಡಿ, ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿನಿತ್ಯ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿಸಬಹುದು ಎಂದು ಹೇಳಿದರು. ಯೋಗ ಶಿಕ್ಷಕರುಗಳಾದ ನವೀನ್ ಕುಮಾರ್, ವೀಣಾ ವಿದ್ಯಾರ್ಥಿಗಳಿಗೆ ಯೋಗದ ವಿಶೇಷತೆಗಳನ್ನು ತಿಳಿಸಿ ಸಾಮೂಹಿಕ ಯೋಗಾಭ್ಯಾಸಗಳನ್ನು ನಡೆಸಿಕೊಟ್ಟರು.

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ವಿದ್ಯಾರ್ಥಿಗಳು ನೈಜ ನಾಯಕರಂತೆ ಮುನ್ನಡೆಯಬೇಕು | ಅಂಬಿಕಾ ಪ.ಪೂ ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನದಲ್ಲಿ ಸುಬೇದಾರ್ ರಮೇಶ್ ಬಾಬು

ಪುತ್ತೂರು: ವಿದ್ಯಾರ್ಥಿಗಳು ನಾಯಕತ್ವ ಬೆಳೆಸಿಕೊಂಡು ತಮ್ಮಿಂದಾದ ಉತ್ಕ್ರಷ್ಟ ಪ್ರಯತ್ನ ಮಾಡುವುದಲ್ಲದೆ ತಾವು ವಿದ್ಯಾಭ್ಯಾಸಗೈಯುವ ವಿದ್ಯಾದೇಗುಲದ ಒಳಿತಿಗಾಗಿಯೂ ಚಿಂತನೆ ನಡೆಸಬೇಕು ಎಂದು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಸುಬೇದಾರ್ ರಮೇಶ್ ಬಾಬು ಪಿ. ಹೇಳಿದರು. ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಕಾಲೇಜು ಸಂಸತ್ತಿನ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಹೇಗೆ ನಾಯಕರು ಮತ್ತು ಪ್ರಜೆಗಳ ಒಡನಾಟ, ಚರ್ಚೆ, ತೀರ್ಮಾನ ಕೈಗೊಳ್ಳುವ ಪರಿ ನಡೆಯುತ್ತದೆಯೋ ಅದೇ ರೀತಿ ವಿದ್ಯಾರ್ಥಿ ನಾಯಕರೂ ಮುನ್ನಡೆಯಬೇಕು ಎಂದು

ವಿದ್ಯಾರ್ಥಿಗಳು ನೈಜ ನಾಯಕರಂತೆ ಮುನ್ನಡೆಯಬೇಕು | ಅಂಬಿಕಾ ಪ.ಪೂ ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನದಲ್ಲಿ ಸುಬೇದಾರ್ ರಮೇಶ್ ಬಾಬು Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಯೋಗಾಭ್ಯಾಸ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಾಧನ. ಯೋಗದ ನಿರಂತರ ಅಭ್ಯಾಸದಿಂದ ಮನೋನಿಯಂತ್ರಣ, ಇಂದ್ರಿಯ ನಿಗ್ರಹ, ಅಧಿಕ ಕಾರ್ಯೋತ್ಸಾಹ ಮೊದಲಾದ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬಹುದು. ಪಾರಮಾರ್ಥಿಕ ಸತ್ಯದೆಡೆಗೆ, ಆತ್ಮದ ಅರಿವನ್ನು ಪಡೆಯುವುದರೆಡೆಗೆ ಸಾಗಲು ಮನುಷ್ಯರಿಗೆ ನೆರವಾಗುವಂತದ್ದೆಲ್ಲವೂ ಯೋಗವೇ ಎಂದು ಪುತ್ತೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗಶಿಕ್ಷಕಿ ಶರಾವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಯೋಗದ ಪ್ರಾಮುಖ್ಯತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಮಾತನಾಡಿ, ,ವಾಸ್ತವವಾಗಿ ಯೋಗ ಎಂಬುದು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ Read More »

ಉಪ್ಪಿನಂಗಡಿಯಲ್ಲಿ ಬೆಂಕಿ ಅವಘಡ

ಉಪ್ಪಿನಂಗಡಿ : ಅಗ್ನಿ ಅವಘಡ ಸಂಭವಿಸಿದ ಘಟನೆ ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕಾಂಪ್ಲೆಕ್ಸ್ ನಲ್ಲಿರುವ ಮಳಿಗೆಗಳು ಹೊತ್ತಿ ಉರಿದ ಪರಿಣಾಮ ಫ್ಯಾನ್ಸಿಯೊಂದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿರುವವರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ವೇಗವಾಗಿ ಹರಡಿ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬಳಿಕ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ. ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಪ್ಪಿನಂಗಡಿಯಲ್ಲಿ ಬೆಂಕಿ ಅವಘಡ Read More »

error: Content is protected !!
Scroll to Top