ಪುತ್ತೂರು

ಸೈಟ್ ಇಲ್ಲದವರಿಗೆ ಕೊಡುವ ವ್ಯವಸ್ಥೆ ಮಾಡಿ | ಕಂದಾಯ ಅಧಿಕಾರಿಗಳ, ಕಡತಗಳ ಮಾಹಿತಿ ಪರಿಶೀಲನೆ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್

ವಿಟ್ಲ: ಸೈಟ್ ಇಲ್ಲದವರಿಗೆ ಸೈಟ್ ಕೊಡಿ ಗ್ರಾಮ ನೋಡಬೇಡಿ, ಮನೆ ಇಲ್ಲದವರು ಮಾತ್ರ ಸೈಟ್ ಗೆ ಅರ್ಜಿ ಹಾಕ್ತಾರೆ. ಅವರಿಗೆ ನಿರ್ದಿಷ್ಟ ಗ್ರಾಮವೇ ಇಲ್ಲದ ಕಾರಣ ಯಾವ ಗ್ರಾಮವಾದರೂ ನಡೆಯುತ್ತದೆ. ಗ್ರಾಮದಲ್ಲಿ ಸೈಟ್ ಇದೆ ಅರ್ಜಿ ಇಲ್ಲಾಂದ್ರೆ ಬೇರೆ ಗ್ರಾಮದವರಿಗೆ ಆ ಸೈಟನ್ನು ಕೊಡಿ ಎಲ್ಲರೂ ನಮ್ಮವರೇ ಆಗಿದ್ದಾರೆ ಎಂದು ಶಾಸಕರು ಸೂಚಿಸಿದರು. ಮನೆ ಇಲ್ಲದವರಿದ್ದಾರೆ, ಮೂರು ಹೊತ್ತಿನ ಊಟಕ್ಕೆ ತೊಂದರೆ ಇದ್ದವರಿದ್ದಾರೆ, ಅನಾರೋಗ್ಯದಿಂದ ಇದ್ದವರು ಇದ್ದಾರೆ. ಅವರು ಏನು ಮಾಡಬೇಕು. ಅವರಿಗೆ ಅನ್ಯಾಯವಾಗಬಾರದು. ಅವರಿಗೆ ಸ್ವಂತ […]

ಸೈಟ್ ಇಲ್ಲದವರಿಗೆ ಕೊಡುವ ವ್ಯವಸ್ಥೆ ಮಾಡಿ | ಕಂದಾಯ ಅಧಿಕಾರಿಗಳ, ಕಡತಗಳ ಮಾಹಿತಿ ಪರಿಶೀಲನೆ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ Read More »

ನಾಳೆ ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು :  ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ‌ ಜನ ವಿರೋಧಿ ನೀತಿ‌ ಅನುಸರಿಸುತ್ತಿರುವ   ರಾಜ್ಯ ಸರಕಾರದ ವಿರುದ್ಧ  ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಸಭೆ  ಜೂ.20 ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ‌ ಸಭೆ ನಡೆದ‌ ಬಳಿಕ‌ ಖಾಸಗಿ ಬಸ್‌ ನಿಲ್ದಾಣದಿಂದ‌ ಮುಖ್ಯ ರಸ್ತೆಯಲ್ಲಿ ತರಳಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮನವಿ ಸಲ್ಲಿಸಲಾಗುವುದು. ಬಿಜೆಪಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ Read More »

ನರೇಂದ್ರ ಕಾಲೇಜಿನಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ

ಪುತ್ತೂರು: ಶಿವಾಜಿ ಇಂದು ಸ್ವಶಕ್ತಿಯಿಂದ ಹಿಂದೂ ಸಾಮ್ರಾಜ್ಯಕ್ಕೆ, ಅಭೀಷಕ್ತನಾದ ದಿನವಾಗಿದ್ದು, ಶ್ರೇಷ್ಟ ಶುದ್ಧ ತ್ರಯೋದಶಿಯನ್ನು ರಾಷ್ಟ್ರಕ್ಕೆ ಪರ್ವದಿನವಾಗಿ, ಹಿಂದೂ ಸಾಮ್ರಾಜ್ಯ ದಿನೋತ್ಸವವಾಗಿ, ರಾಷ್ಟ್ರಜಾಗರಣ ಮಹೋತ್ಸವವಾಗಿ ಆಚರಿಸಲಾಗುತ್ತದೆ ಎಂದು ವಿದ್ಯಾಭಾರತಿ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ ಹೇಳಿದರು. ಅವರು ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆಯ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ ಮಾತನಾಡಿ, ಶಿವಾಜಿಯ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಮರ್ಥರಾಗಬೇಕು ಎಂದು ಹೇಳಿದರು. ಕಾಲೇಜಿನ ಉಪನ್ಯಾಸಕರು,

ನರೇಂದ್ರ ಕಾಲೇಜಿನಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ Read More »

ಫ್ರಿಡ್ಜ್ ಸ್ಫೋಟಗೊಂಡ ಮನೆಗೆ‌ ಮಾಜಿ ಶಾಸಕ ಸಂಜೀವ‌ ಮಠಂದೂರು ಭೇಟಿ

ಪುತ್ತೂರು : ಮನೆಯೊಂದರಲ್ಲಿ ಫ್ರಿಡ್ಜ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ ಘಟನೆ ಜಿಡೆಕಲ್ಲು ಕಾಲೇಜು ಸಮೀಪ ನಿನ್ನೆ ನಡೆದಿದ್ದು, ಘಟನಾ ಸ್ಥಳಕ್ಕೆ ಇಂದು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದರು.  ಈ ಸಂದರ್ಭದಲ್ಲಿ ನಗರಸಭಾ ಆಯುಕ್ತರಿಗೆ ಕರೆ ಮಾಡಿ ಮನೆ ದೊರಕಿಸಿಕೊಡಬೇಕಾಗಿ ಮನವಿ ಮಾಡಿದ್ದಾರೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಎಂಬವರ ಮನೆಯಲ್ಲಿ ರೆಫ್ರಿಜರೇಟ‌ರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಿಂದಾಗಿ ಮನೆಗೆ ಸಂಪೂರ್ಣ ಹಾನಿಯಾದ ಹಿನ್ನೆಲೆ ಆರ್ಥಿಕ ನೆರವು ನೀಡಿದ್ದಾರೆ.

ಫ್ರಿಡ್ಜ್ ಸ್ಫೋಟಗೊಂಡ ಮನೆಗೆ‌ ಮಾಜಿ ಶಾಸಕ ಸಂಜೀವ‌ ಮಠಂದೂರು ಭೇಟಿ Read More »

ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಹತ್ತನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಉಪ್ಪಿನಂಗಡಿ: ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿ ಹತ್ತನೇ ತರಗತಿಯ ಬಾಲಕನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಬಾಲಕ ಹೇಮಾವತಿ ಅವರ ಮನೆಯ ತಂಗಿದ್ದು, ಈತ ಅವರ ಅಕ್ಕನ ಮಗನಾಗಿದ್ದು, ಹತ್ತನೇ ತರಗತಿ ವಿದ್ಯಾರ್ಥಿ. ಬಾಲಕ ಹೇಮಾವತಿ ಅವರು ಮಲಗಿದ್ದಲ್ಲಿ ಹೋಗಿ ದೇಹ ಸುಖ ಬಯಸಿದ್ದಾನೆ. ಇದಕ್ಕೆ ಹೇಮಾವತಿ ಪ್ರತಿರೋದ ಮಾಡಿದ್ದು, ಈ ವೇಳೆ ಆರೋಪಿ ಬಾಲಕ ಕತ್ತು ಹಿಸುಕಿ ಕೊಲೆ

ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಹತ್ತನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು Read More »

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ | ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಜನರು ನೊಂದು ನೋವಿನಲ್ಲಿ ಬರುವ ಜಾಗ ಇದ್ರೆ ಅದು ಆಸ್ಪತ್ರೆ ಮತ್ತು ಪೊಲೀಸ್ ಸ್ಟೇಷನ್. ಆದರೆ ಪೊಲೀಸ್ ಠಾಣೆಗೆ ಹೆದರಿ ಹೋಗುವವರಿದ್ದಾರೆ. ಆಸ್ಪತ್ರೆಗೆ ನೋವು ತೆಗೆದು ಕೊಂಡು ಬರುವವರು ಇದ್ದಾರೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಗೆ ಬರುವವರಿಗೆ ಸ್ಪಂದನೆ ಸಿಗಬೇಕು. ನೊಂದು ಬಂದವರಿಗೆ ಮೊದಲ ಸ್ಪಂದನೆ ನೀಡಿ ಎಂದು ಶಾಸಕ ಅಶೋಕ್ ಕುಮಾರ್ ರೈ ಆಸ್ಪತ್ರೆಯ ವೈದ್ಯರುಗಳಿಗೆ ಸೂಚನೆ ನೀಡಿದರು. ಸರಕಾರಿ ಆಸ್ಪತ್ರೆಯಲ್ಲಿ ನಡೆದ ನೂತನ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ | ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ Read More »

ತುಳು ಚಲನಚಿತ್ರ ನಟಿ ಪುತ್ತೂರಿನ ಪ್ರತಿಭೆಗೆ ‘ಕೋಸ್ಟಲ್ ಫಿಲ್ಮ್ ಅವಾರ್ಡ್’

ಪುತ್ತೂರು : ಪುತ್ತೂರಿನ ಚೆಲುವೆ ರಚನಾ ರೈ ಅವರಿಗೆ ‘ಉತ್ತಮ ತುಳು ಚಲನಚಿತ್ರ ನಟಿ’ ಕೋಸ್ಟಲ್ ಫಿಲ್ಮ್ ಅವಾರ್ಡ್ ಲಭಿಸಿದೆ. ಜೂ.16ರಂದು ಮೂಲ್ಕಿ ನುಂದರ್ ರಾಮ್ ಶೆಟ್ಟಿ ಕನ್ವೆನ್ಸನ್ ಸೆಂಟರ್ ನಲ್ಲಿ ಗಣ್ಯರು, ತುಳು ಚಲನಚಿತ್ರರಂಗದ ನಟ, ನಟಿಯರು, ನಿರ್ಮಾಪಕರು, ನಿರ್ದೇಶಕರು, ಗಾಯಕರು, ತಾಂತ್ರಿಕ ವರ್ಗದವರೆಲ್ಲರ ಉಪಸ್ಥಿತಿಯಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ 2024ರಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಯಿತು. ರಚನಾ ರೈ ಪುತ್ತೂರು ಹಾರಾಡಿ ಶಾಲಾ ಶಿಕ್ಷಕಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ

ತುಳು ಚಲನಚಿತ್ರ ನಟಿ ಪುತ್ತೂರಿನ ಪ್ರತಿಭೆಗೆ ‘ಕೋಸ್ಟಲ್ ಫಿಲ್ಮ್ ಅವಾರ್ಡ್’ Read More »

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಯೋಗ ತರಬೇತಿ ಉದ್ಘಾಟನೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಬೇತಿಯನ್ನು ಆರಂಭಗೊಳಿಸಲಾಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಮನಸ್ಸು ಮತ್ತು ದೇಹದ ಸಂಯೋಗವೇ ಯೋಗ. ಇದರ ಭಾಗವಾದ ಸುದರ್ಶನ ಕ್ರಿಯಾ ಯೋಗವನ್ನು ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡುವಂತೆ ತರಬೇತಿ ನೀಡಲಾಗುತ್ತದೆ. ಇದರ ಅಭ್ಯಾಸದಿಂದ ಒಬ್ಬ  ವ್ಯಕ್ತಿಯು ಸನಾತನ ಧರ್ಮದ ನಿಜವಾದ ಅನುಯಾಯಿಯಾಗುತ್ತಾನೆ ಎಂದು ಹೇಳಿದ ಅವರು, ನಕರಾತ್ಮಕ ಭಾವನೆಗಳಾದ ಸಿಟ್ಟು ಗೊಂದಲಗಳು ಮನುಷ್ಯನ ಉಸಿರಾಟದ ವೇಗವನ್ನು ಹೆಚ್ಚಿಸುತ್ತವೆ.

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಯೋಗ ತರಬೇತಿ ಉದ್ಘಾಟನೆ Read More »

ಜೂ.20 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ

ಪುತ್ತೂರು: ಉಪ್ಪಿನಂಗಡಿ-ಪುತ್ತೂರು ಮಾರ್ಗದಲ್ಲಿ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ ಸಪ್ಲೈ ಮತ್ತು ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್ ನಲ್ಲಿ ಜೂ.20 ಗುರುವಾರ ಬೆಳಗ್ಗೆ 10 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‍ ನಿಂದ ವಿದ್ಯುತ್ ನಿಲುಗಡೆಗೊಳ್ಳಲಿದೆ. ವಿದ್ಯುತ್ ಸರಬರಾಜಾಗುವ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.20 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ Read More »

ಕಾರ್ಯಕರ್ತರ ಅವಿರತ ಶ್ರಮ, ಮತದಾರರ ಬೆಂಬಲದಿಂದ ಪಾರ್ಟಿಗೆ ಗೆಲುವು : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ದಕ್ಷಿಣಕನ್ನಡ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಇಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಘ ಕಾರ್ಯಾಲಯ ಪಂಚವಟಿಗೆ ಭೇಟಿ ನೀಡಿ ಭಾರತಮಾತೆಗೆ ಪುಷ್ಪಾರ್ಚನೆಗೈದು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಅವಿರತ ಶ್ರಮ ಮತ್ತು ಮತದಾರರ ಬೆಂಬಲದಿಂದ ಪಾರ್ಟಿಗೆ ಗೆಲುವಾಗಿದೆ. ಜಿಲ್ಲೆಯ ಸಮಗ್ರ ದೃಷ್ಟಿಕೋನವನ್ನು ಇಟ್ಟುಕೊಂಡು ಅಭಿವೃದ್ದಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ರವರು ಶಾಲು ಹೊದಿಸಿ ಹಾರ

ಕಾರ್ಯಕರ್ತರ ಅವಿರತ ಶ್ರಮ, ಮತದಾರರ ಬೆಂಬಲದಿಂದ ಪಾರ್ಟಿಗೆ ಗೆಲುವು : ಕ್ಯಾ.ಬ್ರಿಜೇಶ್ ಚೌಟ Read More »

error: Content is protected !!
Scroll to Top