ಪುತ್ತೂರು

ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ  ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ ಸರಿಪಡಿಸಲು ವರದಿ ತಯಾರಿಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು. […]

ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ಮುಳಿಯ ಜ್ಯುವೆಲ್ಸ್ ನಿಂದ ಭಾರತೀಯ ಸೇನೆಗೆ ಆಯ್ಕೆಯಾದ ಭವಿಶ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು. ಪುತ್ತೂರು ಮುಳಿಯ ಜ್ಯುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಭವಿಶ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸನ್ಮಾನ ಸ್ವೀಕರಿಸಿ ಮಾತಾನಾಡಿದ ಅಗ್ನಿವೀರ ಭವಿಶ್ ತಾರಿಗುಡ್ಡೆ, ಸೇನೆಯಲ್ಲಿ ದೇಶ ಸೇವೆಯನ್ನು ಮಾಡಬೇಕೆಂಬ ಕನಸು ಸಣ್ಣದರಲ್ಲೇ ಇತ್ತು. ಆರ್ಥಿಕ ಕಷ್ಟ

ಮುಳಿಯ ಜ್ಯುವೆಲ್ಸ್ ನಿಂದ ಭಾರತೀಯ ಸೇನೆಗೆ ಆಯ್ಕೆಯಾದ ಭವಿಶ್ ಅವರಿಗೆ ಅಭಿನಂದನಾ ಕಾರ್ಯಕ್ರಮ Read More »

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.17 ರ ಸಂಜೆ ಬೆಳಕಿಗೆ ಬಂದಿದೆ. ನಿಡ್ಪಳ್ಳಿ ಗ್ರಾಮ ವಾಲ್ತಾಜೆ ರಾಜಮೂಲೆ ನಿವಾಸಿ ದೇವಣ್ಣ ನಾಯ್ಕ(77) ಮೃತಪಟ್ಟವರು. ಅವರು ಮನೆಯ ಒಳಗೆ ನೈಲಾನ್ ಹಗ್ಗದಿಂದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಪುತ್ರ ಮಂಜುನಾಥ ನಾಯ್ಕರವರು ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಸಮಯ ಘಟನೆ ಬೆಳಕಿಗೆ ಬಂದಿದೆ. ಘಟನೆ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಅಗ್ನಿ ಅವಘಡ : ಫ್ರಿಡ್ಜ್ ಸ್ಪೋಟ

ಪುತ್ತೂರು : ಜಿಡೆಕಲ್ಲು ಕಾಲೇಜು ಬಳಿ ಇರುವ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಎಂಬವರ ಮನೆಯಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಮನೆ ಹಾನಿಗೊಂಡಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದು, ಬಳಿಕ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಅಗ್ನಿ ಅವಘಡ : ಫ್ರಿಡ್ಜ್ ಸ್ಪೋಟ Read More »

ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ : ಅಶೋಕ್ ಕುಮಾರ್ ರೈ | ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರಿಂದ ಗೌರವ ಸನ್ಮಾನ

ಪುತ್ತೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹೆಜ್ಜೆ ಇಡುವಲ್ಲಿ ನಡೆಯುವ ನೀಟ್ ಪರೀಕ್ಷೆಯಲ್ಲೇ ಹಗರಣ ನಡೆದಿದೆ ಎಂದಾದರೆ ಇದು ವಿದ್ಯಾರ್ಥಿ ಹಾಗೂ ಪೋಷಕರ ಪಾಲಿಗೆ ಬಹು ದೊಡ್ಡ ದುರಂತವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ನೀಟ್, ಕೆಸಿಇಟಿ ಮತ್ತು ಜೆಇಇ ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ತಮ್ಮ ಕಚೇರಿಯಲ್ಲಿ ಸೋಮವಾರ ಗೌರವಿಸಿ,

ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ : ಅಶೋಕ್ ಕುಮಾರ್ ರೈ | ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರಿಂದ ಗೌರವ ಸನ್ಮಾನ Read More »

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣವಿದ್ದರೆ ಅದು ಅವರ ಮುಂದಿನ ಜೀವನಕ್ಕೆ ಪ್ರೇರಣೆ ನೀಡುತ್ತದೆ. ಹಾಗಾಗಿ ಉತ್ತಮ ನಾಯಕತ್ವದ ಲಕ್ಷಣ ಮಕ್ಕಳಲ್ಲಿ ಮೂಡಿ ಬರಬೇಕು. ಸಂವಿಧಾನದ ಮೌಲ್ಯ ಉಳಿದುಕೊಳ್ಳಬೇಕಾದರೆ ಸರಿಯಾದ ವಿರೋಧ ಪಕ್ಷದ ಅಗತ್ಯವಿದೆ. ಅಂತಹ ಕಲ್ಪನೆ ಎಳೆಯ ವಯಸ್ಸಿನಿಂದಲೇ ಮೂಡಿಬರಬೇಕು ಎಂದು ನ್ಯಾಯವಾದಿ ಮಹೇಶ್ ಕಜೆ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಆಯೋಜಿಸಲಾದ ಶಾಲಾ ಸಂಸತ್ತಿನ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ Read More »

ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ | ಪೊಲೀಸರಿಂದ ತನಿಖೆ

ಉಪ್ಪಿನಂಗಡಿ: ಮಹಿಳೆಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್‍ ನಿಂದ ವರದಿಯಾಗಿದೆ. ದರ್ಖಾಸ್ ನಿವಾಸಿ ಹೇಮಾವತಿ (37 ) ಮೃತ ಮಹಿಳೆ. ಈ ಕುರಿತು ಕೊಲೆ ಶಂಕೆ ವ್ಯಕ್ತವಾಗಿದ್ದು,  ಹೇಮಾವತಿ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ವಿಚಾರಣೆಗಾಗಿ ಮೃತರ ಅಕ್ಕನ ಮಗ ಎಸೆಸ್ಸೆಲ್ಸಿ

ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ | ಪೊಲೀಸರಿಂದ ತನಿಖೆ Read More »

ವಿದ್ಯಾರಶ್ಮಿ ಶಾಲಾ ವಿಭಾಗದ ಪ್ರಾಂಶುಪಾಲೆಯಾಗಿ  ಶಶಿಕಲಾ ಆಳ್ವ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದ ಎಲ್.ಕೆ.ಜಿ.ಯಿಂದ ಹತ್ತನೇ ತರಗತಿವರೆಗಿನ ವಿಭಾಗಕ್ಕೆ ನೂತನ ಪ್ರಾಂಶುಪಾಲೆಯಾಗಿ ಶ್ರೀಮತಿ ಶಶಿಕಲಾ ಆಳ್ವ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಬಿ. ಎ., ಬಿ. ಎಡ್. ಪದವಿಗಳೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಕನ್ನಡ ಭಾಷಾ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಇವರು ಉತ್ತಮ ಚದುರಂಗ ಆಟಗಾರ್ತಿಯೂ ಆಗಿದ್ದಾರೆ. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಅವರು ನೂತನ ಪ್ರಾಂಶುಪಾಲೆಯವರಿಗೆ ಅಧಿಕಾರ ವಹಿಸಿಕೊಡುವ ಸಂದರ್ಭದಲ್ಲಿ ಹಿರಿಯ ಟ್ರಸ್ಟಿ ಎನ್ . ಸುಂದರ ರೈ, ಟ್ರಸ್ಟಿ ಶ್ರೀಮತಿ ರಶ್ಮಿ ಅಶ್ವಿನ್,

ವಿದ್ಯಾರಶ್ಮಿ ಶಾಲಾ ವಿಭಾಗದ ಪ್ರಾಂಶುಪಾಲೆಯಾಗಿ  ಶಶಿಕಲಾ ಆಳ್ವ Read More »

ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪುತ್ತೂರು: ಕಳೆದ ಲೋಕಸಭಾ ಚುನಾವಣೆಯ ಮೊದಲು ಶಿಲಾನ್ಯಾಸಗೈದ ಕಾಮಗಾರಿಗಳು ಆರಂಭಗೊಂಡಿದ್ದು, ಶೀಘ್ರದಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಭಾನುವಾರ 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುರಿಯ ಗ್ರಾಮದ ಎನ್ ಆರ್ ಸಿ ಸಿ – ಅಮ್ಮುಂಜ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಆದ್ಯತೆ ಮೇರೆಗೆ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಅಗತ್ಯ ಬೇಡಿಕೆ ಇರುವ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು ಎಂದು ಹೇಳಿದ ಅವರು, ಪಾಲಿಂಜೆ ಶ್ರೀ

ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ Read More »

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ವಿಧಿವಿಧಾನಗಳು ಮತ್ತು ಪ್ರಬಂಧ ರಚನೆ ಕಾರ್ಯಗಾರ

ಪುತ್ತೂರು: ಸಂಶೋಧನ ವರದಿ ತಯಾರಿಸುವುದರಲ್ಲಿ ವಿದ್ಯಾರ್ಥಿಗಳು ಆರಂಭಿಕ ಹಂತದಲ್ಲಿ ಸಮಸ್ಯೆಗಳನ್ನು ಎದುರಿಸುವುದು ಸಹಜ. ಇದನ್ನು ಮಾರ್ಗದರ್ಶಕರೊಂದಿಗೆ ಸಮಾಲೋಚನೆ ಮಾಡಿ ಪರಿಹರಿಸಿಕೊಳ್ಳಬೇಕು. ತಳಮಟ್ಟದ ಅಧ್ಯಯನ, ವಿಷಯಗಳ ಆಸಕ್ತಿ ನಮ್ಮ ಅಧ್ಯಯನಗಳನ್ನು ಬಲಗೊಳಿಸುತ್ತದೆ ಎಂದು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ನಿರ್ದೇಶಕ ಡಾ. ರಾಬಿನ್ ಮನೋಹರ್ ಶಿಂದೆ ತಿಳಿಸಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ವಿವೇಕಾನಂದ ಸಂಶೋಧನಾ ಕೇಂದ್ರ ಸಹಯೋಗದಲ್ಲಿ ನಡೆದ ಸಂಶೋಧನೆಯ ವಿಧಿ ವಿಧಾನಗಳು ಮತ್ತು

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ವಿಧಿವಿಧಾನಗಳು ಮತ್ತು ಪ್ರಬಂಧ ರಚನೆ ಕಾರ್ಯಗಾರ Read More »

error: Content is protected !!
Scroll to Top