ಪುತ್ತೂರು

ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ | ಇಬ್ಬರು ಮೃತ್ಯು

ಪುತ್ತೂರು: ಕಾರುಗಳೆರಡು ಡಿಕ್ಕಿ ಹೊಡೆದುಕೊಂಡ ಘಟನೆ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ. ಬೊಲೆರೋ ಹಾಗೂ ಆಲ್ಟೋ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಕುರಿತು ತಿಳಿದು ಬಂದಿದೆ. ಮೃತಪಟ್ಟವರನ್ನು ಸೋಮವಾರ ಪೇಟೆ ಮೂಲದ ಲೋಕೇಶ್‍ ಹಾಗೂ ರವೀಂದ್ರ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಬೊಲೆರೋ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ | ಇಬ್ಬರು ಮೃತ್ಯು Read More »

ಕೆಮ್ಮಿಂಜೆ ವಲಯ ಸರ್ವೆ ಒಕ್ಕೂಟದ ತ್ರೈಮಾಸಿಕ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಪುತ್ತೂರು ತಾಲೂಕು ಕೆಮ್ಮಿಂಜೆ ವಲಯ ಸರ್ವೆ ಒಕ್ಕೂಟದ ತ್ರೈಮಾಸಿಕ ಸಭೆ ಭಾನುವಾರ ಕಲ್ಪನೆ ಸಮುದಾಯ ಭವನದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷ ಸುಂದರ ಬಲ್ಲ್ಯಾಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲೂಕು ಕೃಷಿ ಅಧಿಕಾರಿ ಶಿವರಂಜನೆಯ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ರೇಖಾ ರೈ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪ್ರಗತಿ ರಕ್ಷಾ ಕವಚದಲ್ಲಿ ಒಂದು ಸಂಘದ ಸದಸ್ಯರು  ಉಳಿತಾಯ ಮಾಡಿದ

ಕೆಮ್ಮಿಂಜೆ ವಲಯ ಸರ್ವೆ ಒಕ್ಕೂಟದ ತ್ರೈಮಾಸಿಕ ಸಭೆ Read More »

ಎರಡು ದಿನಗಳ ದಕ್ಷಿಣ ಭಾರತ ಉತ್ಸವ-2024 ಕ್ಕೆ ಚಾಲನೆ | ಉತ್ಸವದಲ್ಲಿ  ಪುತ್ತೂರಿನ ದಿ ಪುತ್ತೂರು ಕ್ಲಬ್‍

ಪುತ್ತೂರು: ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಎಫ್‍ ಕೆಸಿಸಿಐ ಆಯೋಜಿಸಿದ ಎರಡು ದಿನಗಳ ದಕ್ಷಿಣ ಭಾರತ ಉತ್ಸವ-2024 ಕ್ಕೆ ಶನಿವಾರ ನಗರದ ಅರಮನೆ ಮೈದಾನದಲ್ಲಿ ಚಾಲನೆ ನೀಡಲಾಗಿದ್ದು,. ಈ ಉತ್ಸವದಲ್ಲಿ ಪುತ್ತೂರಿನ ದಿ ಪುತ್ತೂರು ಕ್ಲಬ್‍ ನ್ನು ಪ್ರಮೋಟ್ ಮಾಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಕ್ಷಿಣ ಭಾರತ ಉತ್ಸವಕ್ಕೆ ಚಾಲನೆ ನೀಡಿದ್ದರು. ಈ ಸಂದರ್ಭದಲ್ಲಿ ಪುತ್ತೂರು ಕ್ಲಬ್‍ ನ ಡಾ.ದೀಪಕ್‍ ರೈ, ವಿಶ್ವಾಸ್ ಶೆಣೈ,, ನಿತಿನ್ ಪಕ್ಕಳ, ಬೂಡಿಯಾರ್ ರಾಧಾಕೃಷ್ಣ ರೈ, ರೂಪೇಶ್‍ ಶೇಟ್, ಜಯಂತ ನಡುಬೈಲು, ಬಾಲಕೃಷ್ಣ ಉಪಸ್ಥಿತರಿದ್ದರು.

ಎರಡು ದಿನಗಳ ದಕ್ಷಿಣ ಭಾರತ ಉತ್ಸವ-2024 ಕ್ಕೆ ಚಾಲನೆ | ಉತ್ಸವದಲ್ಲಿ  ಪುತ್ತೂರಿನ ದಿ ಪುತ್ತೂರು ಕ್ಲಬ್‍ Read More »

ಹಣದ ಬೇಡಿಕೆಯಿಟ್ಟು ಉದ್ಯಮಿಗೆ ಅನಾಮಿಕ ವ್ಯಕ್ತಿಯಿಂದ ಕರೆ : ಪ್ರಕರಣ ದಾಖಲು

ಪುತ್ತೂರು : ಬೊಳುವಾರಿನ ಉದ್ಯಮಿಯೊಬ್ಬರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನಾಮಿಕ ವ್ಯಕ್ತಿಯೊಬ್ಬ 4 ದಿನಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಿಬಿಐ ಕ್ರೈಂ ಬ್ರಾಂಚ್‌ನಿಂದ ಮಾತನಾಡುತ್ತಿದ್ದೇನೆ ಎಂದು ಪರಿಚಯಿಸಿಕೊಂಡು ಉದ್ಯಮಿಯ ಪುತ್ರನ ಹೆಸರು ಹೇಳಿ, ನಿಮ್ಮ ಮಗನನ್ನು ಡ್ರಗ್ಸ್ ಕೇಸ್‌ನಲ್ಲಿ ಅರೆಸ್ಟ್ ಮಾಡಿದ್ದೇವೆ. ನಿಮ್ಮ ಮಗ ಸೇರಿದಂತೆ ಮೂವರನ್ನು ಈ ಕೇಸ್‌ನಲ್ಲಿ ಬಂಧಿಸಿ ದೆಹಲಿಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದ್ದಾನೆ. ಈ ಸಂದರ್ಭದಲ್ಲಿ ಉದ್ಯಮಿಯು ಪುತ್ರನ ಜತೆ

ಹಣದ ಬೇಡಿಕೆಯಿಟ್ಟು ಉದ್ಯಮಿಗೆ ಅನಾಮಿಕ ವ್ಯಕ್ತಿಯಿಂದ ಕರೆ : ಪ್ರಕರಣ ದಾಖಲು Read More »

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ’ ಪ್ರಶಸ್ತಿ ಪ್ರದಾನ | ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: 2023-24ನೇ ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ ಶೇ.100 ಅಂಕ ಪಡೆದ ಮತ್ತು 10ನೇ ತರಗತಿಯಲ್ಲಿ 605ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ  ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಇಂದು ಪ್ರಯತ್ನ ಮಾಡಿದರೆ ಎನೂ

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ’ ಪ್ರಶಸ್ತಿ ಪ್ರದಾನ | ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ  ‘ಉದ್ಘೋಷ-2024’

ಪುತ್ತೂರು: ಇಂದು ಐಎಎಸ್, ಐಪಿಎಸ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ಬರೆಯುವುದಕ್ಕೆ ಮತ್ತು ಕನ್ನಡದಲ್ಲೇ ಸಂದರ್ಶನ ಎದುರಿಸುವುದಕ್ಕೆ ಅವಕಾಶವಿದೆ. ನಮ್ಮ ಭಾಗದ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಬಳಸಿಕೊಳ್ಳಬೇಕು. ಆಡಳಿತ ವ್ಯವಸ್ಥೆಗೆ ನಮ್ಮನ್ನು ನಾವು ಒಡಮೂಡಿಸಿಕೊಂಡು ಉತ್ಕೃಷ್ಟ ರಾಷ್ಟ್ರ ನಿರ್ಮಾಣದಲ್ಲಿ ಭಾಗಿಗಳಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ  ‘ಉದ್ಘೋಷ=2024’ ೨ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳಿಂದ ದೂರ ಸರಿಯದೆ ರಾಷ್ಟ್ರಭಕ್ತರಾಗಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ  ‘ಉದ್ಘೋಷ-2024’ Read More »

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ಭವಿಷ್ಯದ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ. ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು ಎಂದು ಮುಕ್ರಂಪಾಡಿಯಲ್ಲಿರುವ ಎಸ್. ಆರ್. ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ Read More »

ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ವಿವೇಕಾನಂದದ ರಕ್ಷಾ ಜಿ. ಆಯ್ಕೆ

ಪುತ್ತೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಜರುಗಿದ  ರಾಜ್ಯ ಮಟ್ಟದ  ಜೂನಿಯರ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ +87 ವಿಭಾಗದಲ್ಲಿ ಭಾಗವಹಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ  ವಿದ್ಯಾರ್ಥಿನಿ ರಕ್ಷಾ.ಜಿ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಜೂ.18 ರಿಂದ 21 ರ ತನಕ ಮಧ್ಯಪ್ರದೇಶದ ಇಂಧೊರ್ ನಲ್ಲಿ ನಡೆಯಲಿರುವ ’ಅಸ್ಮಿತಾ ಖೇಲೊ ಇಂಡಿಯಾ’ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ  ರವಿಶಂಕರ್ ಹಾಗೂ ಯತೀಶ್

ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ವಿವೇಕಾನಂದದ ರಕ್ಷಾ ಜಿ. ಆಯ್ಕೆ Read More »

ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಕಡ್ಡಾಯ | ಆದೇಶ ರದ್ದುಗೊಳಿಸುವಂತೆ ಶಾಸಕರಿಗೆ ಮನವಿ

ಪುತ್ತೂರು; ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಲ್ಲಿ ಬಿಇಡಿ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದು ಈ ಸುತ್ತೋಲೆಯನ್ನು ರದ್ದು ಮಾಡುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗಾಗಲೇ ಪಿಜಿ ಪದವಿಧರರು ಅತಿಥಿ ಉಪನ್ಯಾಸಕರಾಗಿ ಕರ್ತವ್ಯದಲ್ಲಿದ್ದಾರೆ. ಹಲವು ವರ್ಷಗಳಿಂದ ಉಪನ್ಯಾಸವನ್ನು ಮಾಡುತ್ತಿದ್ದಾರೆ. ಇವರು ಮುಂದಿನ ದಿನಗಳಲ್ಲಿ ಉಪನ್ಯಾಸಕರಾಗಿ ಮುಂದುವರೆಯಬೇಕಾದಲ್ಲಿ ಬಿಇಡಿ ಕಡ್ಡಾಯವಾಗಿ ಮಾಡಬೇಕಿದೆ ಎಂಬುದು ಶಿಕ್ಷಣ ಇಲಾಖೆಯ ಆದೇಶವಾಗಿದೆ. ಈ ಆದೇಶ ಜಾರಿಯಾದಲ್ಲಿ ಹಲವು ಮಂದಿ ಉಪನ್ಯಾಸಕರು ಕೆಲಸವನ್ನು ಕಳೆದುಕೊಳ್ಳಲಿದ್ದೇವೆ. ಅತಿಥಿ

ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಕಡ್ಡಾಯ | ಆದೇಶ ರದ್ದುಗೊಳಿಸುವಂತೆ ಶಾಸಕರಿಗೆ ಮನವಿ Read More »

ಭಕ್ತಕೋಡಿಯ ದೀಪಿಕಾ ನಾಪತ್ತೆ

ಪುತ್ತೂರು: ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರು ತಾಲೂಕು ಸರ್ವೆ ಗ್ರಾಮದ ಕಲ್ಲಗುಡ್ಡೆ, ಭಕ್ತಕೋಡಿಯ ಹರೀಶ ಎಂಬವರ ಪತ್ನಿ ದೀಪಿಕಾ (23) ನಾಪತ್ತೆಯಾದವರು. ಪತಿ ಹರೀಶ್‌ರವರು ನೀಡಿದ ದೂರಿನಲ್ಲಿ ತನ್ನ ಪತ್ನಿ ತಾನು ಕಟ್ಟಿದ ತಾಳಿಯನ್ನು ಮನೆಯಲ್ಲಿ ಬಿಚ್ಚಿಟ್ಟು ಜೂ. 13ರಂದು ಬೆಳಿಗ್ಗೆ 05 ಗಂಟೆಗೆ ಮನೆಯಿಂದ ಹೋದವಳು ನಾಪತ್ತೆಯಾಗಿರುತ್ತಾಳೆ.. ಮನೆಯ ಸುತ್ತಮುತ್ತ ಪರಿಸರದಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡಿಕಾಡಿದರೂ ಇಲ್ಲಿವರೆಗೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೂರು ತಿಂಗಳ

ಭಕ್ತಕೋಡಿಯ ದೀಪಿಕಾ ನಾಪತ್ತೆ Read More »

error: Content is protected !!
Scroll to Top