ಪುತ್ತೂರು

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಇಂದು ನಡೆದಿದೆ. ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಪಾರ್ಕಿಂಗ್ ವಿಚಾರವಾಗಿ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರ ಕೈ ಗೆ ಚೂರಿ ತಾಗಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ Read More »

ಬ್ರೈನ್ ಸ್ಟ್ರೋಕ್ ತುತ್ತಾಗಿರುವ ಜನಾರ್ದನ ಅವರ ಚಿಕಿತ್ಸೆಗೆ ಬೇಕಾಗಿದೆ ನೆರವಿನ ಹಸ್ತ

ಪುತ್ತೂರು : ನಗರದ ನೆಲ್ಲಿಕಟ್ಟೆ ನಿವಾಸಿ ಜನಾರ್ದನ ಗೌಡ ಅವರು ಬೈನ್ ಸ್ಟ್ರೋಕ್ ಗೆ ತುತ್ತಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಗೆ ದಾನಿಗಳ ನೆರವಿನ ಹಸ್ತ ಚಾಚಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಪತ್ನಿ ಹಾಗೂ ಎರಡು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಜನಾರ್ದನ ಅವರು ಕಳೆದ ಕೆಲವು ದಿನಗಳಿಂದ ಬ್ರೈನ್ ಸ್ಟ್ರೋಕ್ ತುತ್ತಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಸಾಲಮಾಡಿ ಲಕ್ಷಾಂತರ ರೂಪಾಯಿ

ಬ್ರೈನ್ ಸ್ಟ್ರೋಕ್ ತುತ್ತಾಗಿರುವ ಜನಾರ್ದನ ಅವರ ಚಿಕಿತ್ಸೆಗೆ ಬೇಕಾಗಿದೆ ನೆರವಿನ ಹಸ್ತ Read More »

ವಿವೇಕಾನಂದ ಕಾಲೇಜಿನಲ್ಲಿ ವಿವರ್ಥನ – 2024 ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣಾ ಕಾರ್ಯಕ್ರಮ

ಪುತ್ತೂರು: ಯಶಸ್ಸನ್ನು ತಲುಪುವ ಛಲ ಇರುವವನು ಎಂದೂ ಅನುಕೂಲಗಳನ್ನು ಬಯಸುವುದಿಲ್ಲ, ಅನಾನುಕೂಲಗಳನ್ನು ಅವಕಾಶಗಳನ್ನಾಗಿ ಬದಲಿಸಿ ಮುನ್ನಡೆಯುವುದು ಯಶಸ್ವಿ ವ್ಯಕ್ತಿಗಳ ಲಕ್ಷಣ ಎಂದು ಉದ್ಯಮಿ, ಹುಬ್ಬಳ್ಳಿ ಅನನ್ಯ ಫೀಡ್ಸ್ ನ ಸ್ಥಾಪಕ ದಿವಾನ್ ಗೋವಿಂದ ಭಟ್ ಅಭಿಪ್ರಾಯಪಟ್ಟರು. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ ವಿವರ್ಥನ-2024 ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಡುವ ಕೆಲಸದ ಬಗ್ಗೆ ಶ್ರದ್ಧೆ, ಛಲ ಮತ್ತು ವಿಧೇಯತೆ ಇದ್ದರೆ ಯಶಸ್ಸು ನಿಮ್ಮ ಸಮೀಪಕ್ಕೆ

ವಿವೇಕಾನಂದ ಕಾಲೇಜಿನಲ್ಲಿ ವಿವರ್ಥನ – 2024 ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣಾ ಕಾರ್ಯಕ್ರಮ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು. ವಿಚಾರ ಸಂಕಿರಣವನ್ನು ದೀಪ ಬೆಳಿಗಿಸಿ ಉದ್ಘಾಟಿಸಿದ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕ ಕೆ. ದ್ವಾರಕನಾಥ್ ಬಾಬು ಮಾತನಾಡಿ, ಅಪರಾಧಿಕ ನ್ಯಾಯ ವ್ಯವಸ್ಥೆಯ ಅಪರಾಧಿಕ ವಿಚಾರಣೆಯಲ್ಲಿ ಸಂತ್ರಸ್ತರು ಅಥವಾ ನೊಂದವರು ಪ್ರಧಾನ ಸಾಕ್ಷಿಗಳಾಗಿರುತ್ತಾರೆ. ಯಾವುದೇ ರೀತಿಯ ಪಕ್ಷಪಾತವಿಲ್ಲದೇ ನ್ಯಾಯ ಪ್ರಕ್ರಿಯೆ ನಡೆಸುವಲ್ಲಿ ಈ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ Read More »

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಕರ್ನಾಟಕ ಬ್ಯಾಂಕ್‍ ವತಿಯಿಂದ ಶಾಲಾ ಬಸ್ ಕೊಡುಗೆ

ಪುತ್ತೂರು: ಮಂಗಳೂರಿನ ಕರ್ನಾಟಕ ಬ್ಯಾಂಕ್ ಪ್ರಧಾನ ಕಛೇರಿ ವತಿಯಿಂದ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಗೆ ಭಾರತ್ ಬೆಂಜ್ ಕಂಪೆನಿಯ ಶಾಲಾ ಬಸ್ಸನ್ನು ಕೊಡುಗೆಯಾಗಿ ನೀಡಿದ್ದಾರೆ. ಬ್ಯಾಂಕ್‍ ನ ಮುಖ್ಯ ವ್ಯವಸ್ಥಾಪಕ ರಾಜ ಬಿ.ಎಸ್‍. ವಿದ್ಯಾಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಅವರಿಗೆ ಬಸ್‍ ಕೀಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ನಿರ್ಮಲ ಕುಮಾರ್,. ಸಾಂಡ್ರಾ..ಎಂ.ಲೊರೇನಾ, ನಿರಂಜನ್ ಕುಮಾರ್, ಶ್ರೀಹರಿ.ಪಿ,  ಉಪ ವ್ಯವಸ್ಥಾಪಕರಾದ ವನಂತ ಆರ್. ಹೇರಳೆ, ಸಹಾಯಕ ವ್ಯವಸ್ಥಾಪಕರಾದ ಮಾಧವ ನಾವಡ, ಶ್ರೀಶ, ವಿದ್ಯಾಸಂಸ್ಥೆಯ ಸಂಚಾಲಕ

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಕರ್ನಾಟಕ ಬ್ಯಾಂಕ್‍ ವತಿಯಿಂದ ಶಾಲಾ ಬಸ್ ಕೊಡುಗೆ Read More »

ಎಸ್‍.ಎಸ್‍.ಎಲ್‍.ಸಿ., ಪಿಯುಸಿಯಲ್ಲಿ ಶೇ.95 ಕ್ಕಿಂತ ಅಧಿಕ ಅಂಕ ಪಡೆದ  ಒಕ್ಕಲಿಗ ಸಮುದಾಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪುತ್ತೂರು: ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ವತಿಯಿಂದ 2023-24 ನೇ ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿ.  ವಾರ್ಷಿಕ ಪರೀಕ್ಷೆಯಲ್ಲಿ ಶೇ 95 ಕ್ಕಿಂತ  ಅಧಿಕ ಅಂಕ ಗಳಿಸಿರುವ ಒಕ್ಕಲಿಗ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಕ್ಕಲಿಗ ಜನಾಂಗದ  ಅರ್ಹ ವಿದ್ಯಾರ್ಥಿಗಳು ತಮ್ಮ ಸ್ವ ವಿವರ, ಶಾಲಾ ಕಾಲೇಜಿನ ಹೆಸರು, ಎಸ್. ಎಸ್.ಎಲ್. ಸಿ / ಪಿ.ಯು.ಸಿ ಅಂಕಪಟ್ಟಿಯ  ದೃಡೀಕೃತ ನಕಲು ಪ್ರತಿಗಳು,

ಎಸ್‍.ಎಸ್‍.ಎಲ್‍.ಸಿ., ಪಿಯುಸಿಯಲ್ಲಿ ಶೇ.95 ಕ್ಕಿಂತ ಅಧಿಕ ಅಂಕ ಪಡೆದ  ಒಕ್ಕಲಿಗ ಸಮುದಾಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಪುತ್ತೂರು ವಕೀಲರ ಸಂಘದ ವತಿಯಿಂದ ಪರಿಸರ ದಿನಾಚರಣೆ, ಉಚಿತ ಸಸಿಗಳ ವಿತರಣೆ

ಪುತ್ತೂರು: ಪುತ್ತೂರು ವಕೀಲರ ಸಂಘದ ವತಿಯಿಂದ ಪರಿಸರ ದಿನಾಚರಣೆ ಹಾಗೂ ಉಚಿತ ಸಸಿಗಳ ವಿತರಣಾ ಸಮಾರಂಭ ಬುಧವಾರ ಕೋರ್ಟ್ಆವರಣದಲ್ಲಿ ನಡೆಯಿತು. ಹಿರಿಯ ನ್ಯಾಯವಾದಿ ಪಿ.ಕೆ.ಸತೀಶನ್ ಅವರಿಗೆ ಪುತ್ತೂರು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಿಯ ಜೋಗ್ಲೆಕರ್ ಗಿಡ ವಿತರಿಸಿ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಗಿಡ-ಮರಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಕೇವಲ ಗಿಡ ನೆಟ್ಟರೆ ಸಾಲದು. ಗಿಡವನ್ನು ಮಗುವಿನಂತೆ ಲಾಲನೆ, ಪಾಲನೆಯೊಂದಿಗೆ ಫೋಷಿಸುವ ಮನೋಭಾವ ಪ್ರತಿಯೊಬ್ಬರಲ್ಲಿ ಬರಬೇಕು. ಈ ಮೂಲಕ ಪರಿಸರ ರಕ್ಷಣೆಯ ಕಾಳಜಿಯೊಂದಿಗೆ

ಪುತ್ತೂರು ವಕೀಲರ ಸಂಘದ ವತಿಯಿಂದ ಪರಿಸರ ದಿನಾಚರಣೆ, ಉಚಿತ ಸಸಿಗಳ ವಿತರಣೆ Read More »

ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು | ಮರಿಗಳ ರಕ್ಷಿಸಿದ ಪುತ್ತೂರಿನ ಸ್ನೇಕ್ ತೇಜಸ್

ಪುತ್ತೂರು: 25 ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ರಕ್ಷಿಸಿ ಜಿಲ್ಲೆಯ ಬೇರೆ ಬೇರೆ ಅರಣ್ಯಕ್ಕೆ ಬಿಡುವ ಮೂಲಕ ಉರಗ ಪ್ರೇಮಿಯೊಬ್ಬರು ತನ್ನ ಉರಗಪ್ರೇಮವನ್ನು ಮೆರೆದಿದ್ದಾರೆ. ಯುವ ಉರಗಪ್ರೇಮಿ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ತೇಜಸ್ ಬನ್ನೂರು ಅವರೇ ಸುಮಾರು 25 ಮರಿಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಕಳೆದ ಐದಾರು ವರ್ಷಗಳಿಂದ ಸಂಕಷ್ಟದಲ್ಲಿರುವ ಉರಗ ಸಂತಾನವನ್ನು ರಕ್ಷಿಸಿ, ಅವುಗಳನ್ನು ಮತ್ತೆ ಪ್ರಕೃತಿಗೆ ನೀಡುವ ಕಾರ್ಯವನ್ನು ನಡೆಸುತ್ತಿದ್ದಾರೆ. ಈವರೆಗೆ ಸುಮಾರು 100 ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ಕಾಡಿಗೆ ಬಿಟ್ಟು ಹೆಬ್ಬಾವುಗಳ

ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು | ಮರಿಗಳ ರಕ್ಷಿಸಿದ ಪುತ್ತೂರಿನ ಸ್ನೇಕ್ ತೇಜಸ್ Read More »

ಪುತ್ತೂರಿನ ಪ್ರತಿಷ್ಠಿತ ರೋಟರಿ ಕ್ಲಬ್ ಪೂತ್ತೂರು ಪೂರ್ವದ ಅತ್ಯುತ್ತಮ ಸಮಾಜ ಸೇವೆ | ಪ್ಲಾಟಿನಂ ಪ್ಲಸ್ ಸಹಿತ ಹಲವು ಪ್ರಶಸ್ತಿ ಪಡೆದುಕೊಂಡ ಕ್ಲಬ್

ಪುತ್ತೂರು: ಪ್ರತಿಷ್ಠಿತ ರೋಟರಿ ಕ್ಲಬ್ ಪುತ್ತೂರು ಪೂರ್ವ 2023-24ನೇ ಸಾಲಿನಲ್ಲಿ ಸಲ್ಲಿಸಿದ ಅತ್ಯುತ್ತಮ ಸಮಾಜ ಸೇವೆಗೆ ರೋಟರಿ ಕ್ಲಬ್‌ನ ಅತ್ಯುನ್ನತ ಪ್ರಶಸ್ತಿ ಪ್ಲಾಟಿನಂ ಪ್ಲಸ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ-3181 ವತಿಯಿಂದ ಮೈಸೂರಿನಲ್ಲಿ ನಡೆದ 2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಪೂರ್ವದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಪ್ರಶಸ್ತಿ ಸ್ವೀಕರಿಸಿದರು. ಅತೀ ಹೆಚ್ಚು ಸದಸ್ಯತ್ವ ನೋಂದಾವಣೆಗೆ ಎಕ್ಸಲೆನ್ಸ್ ಪ್ರಶಸ್ತಿ, ಕ್ಲಬ್‌ನ ಶಾಶ್ವತ ಯೋಜನೆಗಳಿಗೆ ಮಹೋನ್ನತ ಕೊಡುಗೆ, ಜಿಲ್ಲಾ

ಪುತ್ತೂರಿನ ಪ್ರತಿಷ್ಠಿತ ರೋಟರಿ ಕ್ಲಬ್ ಪೂತ್ತೂರು ಪೂರ್ವದ ಅತ್ಯುತ್ತಮ ಸಮಾಜ ಸೇವೆ | ಪ್ಲಾಟಿನಂ ಪ್ಲಸ್ ಸಹಿತ ಹಲವು ಪ್ರಶಸ್ತಿ ಪಡೆದುಕೊಂಡ ಕ್ಲಬ್ Read More »

ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ “ತುಡರ್” ತುಳು ಸಿನಿಮಾ | ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ಸಿದ್ಧಾರ್ಥ್

ಪುತ್ತೂರು: ಸುಮುಖ ಪೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ ಎ೦ದು ನಾಯಕ ನಟ ಸಿದ್ಧಾರ್ಥ್ ಎಚ್ ಶೆಟ್ಟಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆ‌ರ್, ಸಿನಿಪೊಲಿಸ್, ಸುರತ್ನಲ್ ನಲ್ಲಿ ಸಿನಿಗ್ಯಾಲಕ್ಕಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್. ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ರಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ

ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ “ತುಡರ್” ತುಳು ಸಿನಿಮಾ | ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ಸಿದ್ಧಾರ್ಥ್ Read More »

error: Content is protected !!
Scroll to Top