ಪುತ್ತೂರು

ದ್ವಿಚಕ್ರ ವಾಹನ ಸವಾರನಿಗೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ | ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳಿಂದ ಮನವಿ

ವಿಟ್ಲ : ದ್ವಿಚಕ್ರ ವಾಹನ ಸವಾರನಿಗೆ ಅನ್ಯಕೋಮಿನ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವಿಟ್ಲ ತಾಲೂಕಿನ ಕನ್ಯಾನ ಸಮೀಪದ ಒಡಿಯೂರು ಐಟಿಐ ಕಾಲೇಜು ಬಳಿ ನಡೆದಿದೆ. ಕನ್ಯಾನ ಸಮೀಪದ ಒಡಿಯೂರು ಐಟಿಐ ಕಾಲೇಜು ಬಳಿ ಪ್ರಕಾಶ್ ಎಂಬವರು ಸ್ಕೂಟಿ ವಾಹನದಲ್ಲಿ ಬರುತ್ತಿರುವ ವೇಳೆ ಕೇರಳ ನೋಂದಣಿಯ ಕಾರಿನಲ್ಲಿ ಬರುತ್ತಿದ್ದ ನಾಲ್ವರು ಅನ್ಯಕೋಮಿನವರು ಗುರಾಯಿಸಿಕೊಂಡು ವಾಹನವನ್ನು ಹಿಂದಕ್ಕೆ ಮುಂದಾಕ್ಕೆ ಓವರ್ ಟೇಕ್ ರೀತಿಯಲ್ಲಿ ಚಲಾಯಿಸಿ ರಸ್ತೆಯಲ್ಲಿಯೇ ಅಡ್ಡ ಇಟ್ಟು ಪ್ರಕಾಶ್ ರವರ ಮೇಲೆ ಹಲ್ಲೆ ನಡೆಸಿದ್ದು, ಜಾತಿ ನಿಂದನೆಗೈದು […]

ದ್ವಿಚಕ್ರ ವಾಹನ ಸವಾರನಿಗೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ | ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳಿಂದ ಮನವಿ Read More »

ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ : ಸಂಜೀವ ಮಠಂದೂರು

ಪುತ್ತೂರು: ದ.ಕ.ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 28,690 ಮತಗಳ ಲೀಡ್ ಬಂದಿದೆ. ಈ ಪೈಕಿ ಹಿರೇಬಂಡಾಡಿ ಗ್ರಾಮದ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ ಬಂದಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಹಿರೇಬಂಡಾಡಿ ಗ್ರಾಮದಲ್ಲಿ ಬೂತ್ ಸಂಖ್ಯೆ 47, 48, 49 ಇದ್ದು, ಈ ಬಾರಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಒಂದು ಬೂತ್ ಸಂಖ್ಯೆ ಜಾಸ್ತಿಯಾಗಿದೆ. ಈ

ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ : ಸಂಜೀವ ಮಠಂದೂರು Read More »

ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್

ಪುತ್ತೂರು : ನಗರದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ. ರೈ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ವಿಭಾಗದ ಮಾಸ್ ಕಮ್ಯೂನಿಕೇಷನ್ ಮತ್ತು ಜರ್ನಲಿಸಂ ಸ್ನಾತಕೋತ್ತರ ವಿಭಾಗದಲ್ಲಿ ಪ್ರ 2022-23ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಪುತ್ತೂರಿನ ಅರಿಯಡ್ಕ ಗ್ರಾಮದ ತ್ಯಾಗರಾಜ ನಗರದ ನಿವಾಸಿ ವಿಠಲ್ ರೈ ಹಾಗೂ ಶಾಲಿನಿ ರೈ ದಂಪತಿ ಪುತ್ರಿಯಾದ ದಿವ್ಯಶ್ರೀ. ಪೋಷಕರು ಹಾಗೂ ಸಹೋದರಿ ಮಧುಶ್ರೀ ಅವರೊಂದಿಗೆ ವಾಸವಿದ್ದು, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ.

ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್ Read More »

ನಗರಸಭೆ ಪೌರಾಯುಕ್ತರಿಗೆ ಬೀಳ್ಕೊಡುಗೆ

ಪುತ್ತೂರು: ನಗರಸಭೆ ಪೌರಾಯುಕ್ತ ಬದ್ರುದ್ದೀನ್‌ ಸೌದಾಗರ್‌ ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭ ನಗರಸಭೆ ಸಭಾಂಗಣದಲ್ಲಿ ಇಂದು ನಡೆಯಿತು. ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್‌, ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಕರುಣಾಕರ್‌ ವಿ, ಪದಾಧಿಕಾರಿಗಳು ಮತ್ತು ಸಹಾಯಕ ಅಭಿಯಂತರ ಕೃಷ್ಣಮೂರ್ತಿ ರೆಡ್ಡಿ, ನಗರಸಭಾ ಸದಸ್ಯ ಯೂಸುಫ್‌  ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಈ

ನಗರಸಭೆ ಪೌರಾಯುಕ್ತರಿಗೆ ಬೀಳ್ಕೊಡುಗೆ Read More »

ನಾಳೆ ವಿದ್ಯುತ್ ಕಟ್ | ಎಲ್ಲೆಲ್ಲಿ ಕರೆಂಟಿಲ್ಲ ?

ಪುತ್ತೂರು : ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.8 (ನಾಳೆ) ವಿದ್ಯುತ್ ನಿಲುಗಡೆ ಮಾಡಲಾಗುವುದು. ಕುಂಬ್ರ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮದ್ಲ, ದೇರ್ಲ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಈ ಪ್ರದೇಶದ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಳೆ ವಿದ್ಯುತ್ ಕಟ್ | ಎಲ್ಲೆಲ್ಲಿ ಕರೆಂಟಿಲ್ಲ ? Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ವಿಶ್ವ ಪರಿಸರ ವರ್ಷದ ಧ್ಯೇಯ ನಮ್ಮ ಭೂಮಿ – ನಮ್ಮ ಭವಿಷ್ಯ- ನಾವು ಪರಿಸರದ ಪುನರುತ್ಥಾನದ ಪೀಳಿಗೆ ಆಧಾರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ  ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದೀಪ್ತಿ ರಘುನಾಥ್ ಮಾತನಾಡಿ, ನಮ್ಮ ಹಿರಿಯರು ಪರಿಸರದ ಅವಿಭಾಜ್ಯ ಅಂಗವಾಗಿದ್ದರು. ಇಂದು ಸ್ವಾರ್ಥದ ಬದುಕಿನಲ್ಲಿ ವೈಯುಕ್ತಿಕ ಸುಖಕ್ಕೆ ಮಹತ್ವ ನೀಡುತ್ತಾ ಪರಿಸರವನ್ನು ಮರೆಯುತ್ತಿದ್ದೇವೆ. ಪ್ರತಿದಿನವೂ ಪರಿಸರ ದಿನವಾದಾಗ ಸ್ವಚ್ಛ-ಸುಂದರ ಬಾಳಿನ ಸವಿಯನ್ನು ನಾವು ಸವಿಯುವಂತಾಗಬೇಕು ಎಂದರು. ಶಾಲಾ ಆಡಳಿತ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಪತ್ರಿಕಾ ವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ ತರಬೇತಿ ಕಾರ್ಯಗಾರ

ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪದವಿಯೊಂದಿಗೆ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಮಾಡುವುದರಿಂದ ಉದ್ಯೋಗದಲ್ಲಿ ವಿಫಲ ಅವಕಾಶಗಳಿವೆ. ಪತ್ರಿಕಾ ವರದಿಯಂತ ಕೋರ್ಸುಗಳು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಬದುಕನ್ನು ರೂಪಿಸಲು ಸಹಕಾರಿಯಾಗಬಲ್ಲದು ಎಂದು ಅಂಬಿಕಾ ಮಹಾ ವಿದ್ಯಾಲಯದ ಪ್ರಾಂಶುಪಾಲ ಪ್ರೊ. ರಾಕೇಶ್ ಕುಮಾರ್ ಕಮ್ಮಜೆ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘ ಸಹಯೋಗದಲ್ಲಿ ಆಯೋಜಿಸಿದ ‘ಪತ್ರಿಕಾವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಯಾಗಿ ಮಾತನಾಡಿದರು. ಬರವಣಿಗೆ ಹಾಗೂ ಪತ್ರಿಕೋದ್ಯಮ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಪತ್ರಿಕಾ ವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ ತರಬೇತಿ ಕಾರ್ಯಗಾರ Read More »

ಕೆಯ್ಯೂರು ಗ್ರಾಮದ ತೆಗ್ಗು ಎರೆಕಲಾ ಪ್ರದೇಶದಲ್ಲಿ ಕಾಡಾನೆ ದಾಳಿ | ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ | ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹ

ಪುತ್ತೂರು: ತಾಲೂಕು ಕೆಯ್ಯೂರು ಗ್ರಾಮದ ತೆಗ್ಗು ಎರೆಕಲಾ ಪ್ರದೇಶಕ್ಕೆ ಕಾಡಾನೆಗಳು ದಾಳಿ ಮಾಡಿದ್ದು, ಈ ಪ್ರದೇಶದ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಪ್ರದೇಶದಲ್ಲಿ ಆನೆ ಹಿಂಡುಗಳು ಠಿಕಾಣಿ ಹೂಡಿ ಕೃಷಿಕರಿಗೆ ಭಯದ ವಾತಾವರಣ ಉಂಟು ಮಾಡಿದೆ. ಸರಕಾರ ಆನೆಕಂದಕ, ರಕ್ಷಣಾ, ಸೋಲಾರ್ ಬೇಲಿಗಳನ್ನು ಅಳವಡಿಸುವ ಮೂಲಕ ಸೂಕ್ತ ರಕ್ಷಣೆ ನೀಡಬೇಕಾಗಿದೆ. ತಕ್ಷಣ ಆನೆಗಳನ್ನು ಹಿಡಿದು ಬೇರೆಡೆ ಕಾಡಿಗೆ ಬಿಡಲು ಕ್ರಮ ಕೈಗೊಳ್ಳುವ ಮೂಲಕ ಮತ್ತೊಮ್ಮೆ

ಕೆಯ್ಯೂರು ಗ್ರಾಮದ ತೆಗ್ಗು ಎರೆಕಲಾ ಪ್ರದೇಶದಲ್ಲಿ ಕಾಡಾನೆ ದಾಳಿ | ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ | ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹ Read More »

ಮೈತ್ರಿಕೂಟದ ಸಂಖ್ಯೆ 303 ಕ್ಕೆ ಏರಿಕೆ | ಹೊಸ ಸರಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ

ಪುತ್ತೂರು:  ಮೈತ್ರಿಕೂಟದ ಸಂಖ್ಯೆ ಬುಧವಾರ 303 ಕ್ಕೆ ಏರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹಳೆಯ ಸರಕಾರ ವಿಸರ್ಜನೆ ಮಾಡಿ ರಾಷ್ಟ್ರಪತಿಗಳ ಮನವಿಗೆ ಹೊಸ ಸರಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ ಮುಂದುವರಿಯಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಒಟ್ಟು 293 ಸ್ಥಾನಗಳನ್ನು ಹೊಂದಿತ್ತು. ಆದರೆ ಈಗ ಮೈತ್ರಿಕೂಟದ ಸಂಖ್ಯೆ ಎರಡೇ ದಿನದಲ್ಲಿ 303ಕ್ಕೆ ಏರಿಕೆಯಾಗಿದೆ. ಎನ್‍.ಡಿ.ಎ ಸಭೆ ನಡೆಸಿ ನಾಯಕರ ಸರ್ವಾನುಮತದ ಮೂಲಕ ಎನ್‍.ಡಿ.ಎ ನಾಯಕನಾಗಿ ಮೋದಿಯವರನ್ನು

ಮೈತ್ರಿಕೂಟದ ಸಂಖ್ಯೆ 303 ಕ್ಕೆ ಏರಿಕೆ | ಹೊಸ ಸರಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ Read More »

ವಿಧಾನಪರಿಷತ್ ಚುನಾವಣೆ : ಮೈಸೂರಿನ ಮತ ಎಣಿಕೆ ಕೇಂದ್ರಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು: ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕೇಂದ್ರ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿಗೆ ಅರುಣ್ ಪುತ್ತಿಲ ಭೇಟಿ ನೀಡಿದರು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೇಗೌಡರಿಗೆ ಅರುಣ್ ಕುಮಾರ್ ಪುತ್ತಿಲ ಶುಭಹಾರೈಸಿದರು. ಈ ಸಂದರ್ಭ ಬಿಜೆಪಿ ಶಾಸಕರಾದ ಚೆನ್ನಬಸಪ್ಪ, ಉಡುಪಿ ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ ಸಹಿತ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವಿಧಾನಪರಿಷತ್ ಚುನಾವಣೆ : ಮೈಸೂರಿನ ಮತ ಎಣಿಕೆ ಕೇಂದ್ರಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ Read More »

error: Content is protected !!
Scroll to Top