ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. : ಡಾ. ಗಿರೀಶ್ ಅಜಕ್ಕಳ | ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ
ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಸೋಮವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಅಜಕ್ಕಳ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿದ್ದ ಸಂಪತ್ತನ್ನು ಸದುಪಯೋಗಪಡಿಸಿಕೊಳ್ಳಬೇಕು. ಹಾಗಾದಾಗ ಅದು ಜೀವನ ಪರ್ಯಂತ ಫಲವನ್ನು ನೀಡುತ್ತದೆ. ಹಿರಿಯರಿಗೆ ತೃಪ್ತಿ ನೀಡುವ ರೀತಿಯಲ್ಲಿ ಎಳೆಯರು ಕಾರ್ಯನಿರ್ವಹಿಸಬೇಕು. ಬುದ್ಧಿವಂತಿಕೆಯಿಂದ ಕಾರ್ಯೋನ್ಮುಖರಾಗುವ ಮೂಲಕ ಯಶಸ್ಸನ್ನು ಪಡೆಯಬೇಕು. ಇದು ವಿದ್ಯಾರ್ಥಿ ಜೀವನಕ್ಕೆ ಮುಕುಟಪ್ರಾಯವಾದ ಸಂಗತಿಯಾಗುತ್ತದೆ ಎಂದು ಅವರು ಪ್ರತಿಪಾದಿಸಿದರು. […]