ಪುತ್ತೂರು

ಬಿಸು ಆಚರಣೆ- ಭಜನೆ, ಆಟೋಟ ಸ್ಪರ್ಧೆಗಳೊಂದಿಗೆ ರಂಗೇರಿದ ಸವಣೂರಿನ ತುಳಸೀಪುರಂ

ಪುತ್ತೂರು: ಸವಣೂರು ಗ್ರಾಮದ ಪರಣೆ- ತುಳಸಿಪುರಂನಲ್ಲಿ ಶ್ರೀ ದೇವಿ ಸೇವಾ ಸಮಿತಿಯ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಏ. 14 ರಂದು ಬಿಸು ಆಚರಣೆ ನಡೆಯಿತು. ಬೆಳಿಗ್ಗೆ ಬಿಸು ಕಣಿ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಹಿರಿಯರ ಆಶೀರ್ವಾದವನ್ನು ಪಡೆದ ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಧ್ಯಾಹ್ನ ಬಿಸು ಪರ್ಬದ ವಿಶೇಷ ಸಹಭೋಜನ ನಡೆಯಿತು. ತುಳಸಿಪುರಂ ಶ್ರೀ ದೇವಿ ಸೇವಾ ಸಮಿತಿಯ ಸಂಚಾಲಕ ಪದ್ಮಯ್ಯ ಗೌಡ ಪರಣೆ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. […]

ಬಿಸು ಆಚರಣೆ- ಭಜನೆ, ಆಟೋಟ ಸ್ಪರ್ಧೆಗಳೊಂದಿಗೆ ರಂಗೇರಿದ ಸವಣೂರಿನ ತುಳಸೀಪುರಂ Read More »

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 56ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.17 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಪುತ್ತೂರು ಜಾತ್ರೆಯ ಜೊತೆಯಲ್ಲಿ ಸೀನಿಪ್ರಿಯರಿಗೆ ಭಾವ ತೀರ ಯಾನ ನೋಡುವ ಅವಕಾಶವಿದೆ.

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

ದಕ್ಷಿಣ ಕನ್ನಡದ ಅತಿ ದೊಡ್ಡ ಚಿನ್ನದ ಮಳಿಗೆ ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯು ವಿಸ್ತರಿತ ನವೀಕೃತ ಮಳಿಗೆ ಪುನರಾರಂಭ | ಏ.20 ರಂದು ಮುಳಿಯ ಆರಂಭೋತ್ಸವಕ್ಕೆ ಚಾಲನೆ

ಪುತ್ತೂರು: ದಕ್ಷಿಣ ಕನ್ನಡದ ಅತಿದೊಡ್ಡ ಚಿನ್ನದ ಮಳಿಗೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯು ವಿಸ್ತರಿತ ನವೀಕೃತ ಮಳಿಗೆಯಲ್ಲಿ ಪುನರಾರಂಭಗೊಳ್ಳುತ್ತಿದೆ. ಇದರ ಲೋಕಾರ್ಪಣೆ ಮತ್ತು ಮುಳಿಯ ಆರಂಭೋತ್ಸವ ಏ.20 ಭಾನುವಾರ ಚಾಲನೆಗೊಳ್ಳಲಿದೆ ಎಂದು ಸಂಸ್ಥೆಯ ಚೇರ್ಮನ್ ಕೇಶವ ಪ್ರಸಾದ್ ಮುಳಿಯ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣ ನಾರಾಯಣ ಮುಳಿಯ ತಿಳಿಸಿದ್ದಾರೆ. ಮಂಗಳವಾರ ಮುಳಿಯ ಸಂಸ್ಥೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಳಿಯ ಸಂಸ್ಥೆಯ ಬ್ರ್ಯಾಂಡ್ ಅಂಬಾಸೀಡರ್ ಆಗಿರುವ ಚಿತ್ರನಟ ರಮೇಶ್ ಅರವಿಂದ್ ಅವರು

ದಕ್ಷಿಣ ಕನ್ನಡದ ಅತಿ ದೊಡ್ಡ ಚಿನ್ನದ ಮಳಿಗೆ ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯು ವಿಸ್ತರಿತ ನವೀಕೃತ ಮಳಿಗೆ ಪುನರಾರಂಭ | ಏ.20 ರಂದು ಮುಳಿಯ ಆರಂಭೋತ್ಸವಕ್ಕೆ ಚಾಲನೆ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಾಹನ ಸಂಚಾರದಲ್ಲಿ ಬದಲಾವಣೆ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾ ವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ. ಸಾರಿಗೆ ಬಸ್, ಆಟೋ ರಿಕ್ಷಾ ಸಂಚಾರ ಮಾರ್ಗದ ಬದಲಾವಣೆ ಮತ್ತು ಭಕ್ತಾದಿಗಳ ವಾಹನ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ (ಎ.16, 17ರಂದು) ಪುತ್ತೂರು ಉಪವಿಭಾಗದ ಪೊಲೀಸ್ ಉಪ ಅಧಿಕ್ಷಕರ ಕೋರಿಕೆಯಂತೆ ಪುತ್ತೂರು

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಾಹನ ಸಂಚಾರದಲ್ಲಿ ಬದಲಾವಣೆ Read More »

ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ ನಿಧನ

ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಮಿ ಸಂಗ್ರಹಕ್ಕೆ ವಿಜಯ್ ಬಂದಿಲ್ಲ ಎಂದು ಗ್ರಾಹಕರು ಕರೆ ಮಾಡಿದಾಗ, ಮೊಬೈಲ್ ಕರೆ ಸ್ವೀಕರಿಸಿಲ್ಲ. ಬಳಿಕ ಮನೆ ಮಾಲಕರಿಗೆ ಕರೆ ಮಾಡಿ ವಿಚಾರಿಸಿದರು. ಅವರು ಮನೆ ಬಳಿ ಹೋಗಿ ನೋಡಿದಾಗ, ವಿಜಯ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ವಿಜಯ್ ಅವರು ಅವಿವಾಹಿತರಾಗಿದ್ದು, ಮುಕ್ವೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ

ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ ನಿಧನ Read More »

ಪ್ರೇರಣಾ ಸಂಸ್ಥೆಯ “ಪ್ರೇರಣಾ ಸಮ್ಮರ್ ಕ್ಯಾಂಪ್-2025” ಸಮಾರೋಪ | ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ | ನಮ್ಮನ್ನು ನಾವು ಅರಿತುಕೊಳ್ಳಲು ಶಿಬಿರ ಪೂರಕ ವಾತಾವರಣ ಕಲ್ಪಿಸುತ್ತದೆ : ವಚನಾ ಪ್ರದೀಪ್‍ | ಪ್ರೇರಣಾ ಬೇಸಿಗೆ ಶಿಬಿರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ : ಡಿ.ವಿ.ಮನೋಹರ್ | ಪ್ರೇರಣಾ ಬೇಸಿಗೆ ಶಿಬಿರ ಮಕ್ಕಳಿಗೆ ಉತ್ತಮ ಚಟುವಟಿಕೆಗಳಿಗೆ ಪ್ರೇರಣೆ ನೀಡಿದೆ : ಉಲ್ಲಾಸ ಪೈ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹೊರ ಹಾಕಲು ಶಿಬಿರದ ಪಾತ್ರ ಬಹುಮುಖ್ಯ : ಕೆ.ರಾಜೇಂದ್ರ ಪ್ರಸಾದ್‍ ಶೆಟ್ಟಿ,

ಪುತ್ತೂರು: ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೆಲ್ಲಿಕಟ್ಟೆಯಲ್ಲಿರುವ ಒಕ್ಕಲಿಗ ಸೌಧದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ “ಪ್ರೇರಣಾ ಸಮ್ಮರ್ ಕ್ಯಾಂಪ್-2025” ಇದರ ಸಮಾರೋಪ ಸಮಾರಂಭ ಇಂದು ಖಾಸಗಿ ಬಸ್ ನಿಲ್ದಾಣದ ಎದುರಿನ ಒಕ್ಕಲಿಗ ಸೌಧದಲ್ಲಿ ನಡೆಯಿತು. ನಮ್ಮನ್ನು ನಾವು ಅರಿತುಕೊಳ್ಳಲು ಶಿಬಿರ ಪೂರಕ ವಾತಾವರಣ ಕಲ್ಪಿಸುತ್ತದೆ : ವಚನಾ ಪ್ರದೀಪ್‍ ಮುಖ್ಯ ಅತಿಥಿಯಾಗಿ ಪುತ್ತೂರು ಅದಿವ ಸಂಸ್ಥೆಯ ಪಾಲುದಾರರಾದ ವಚನಾ ಪ್ರದೀಪ್ ಮಾತನಾಡಿ ನಮ್ಮ ಬಗ್ಗೆ ನಾವು ಅರಿತುಕೊಳ್ಳಲು ಮಕ್ಕಳಿಗೆ ಶಿಬಿರ

ಪ್ರೇರಣಾ ಸಂಸ್ಥೆಯ “ಪ್ರೇರಣಾ ಸಮ್ಮರ್ ಕ್ಯಾಂಪ್-2025” ಸಮಾರೋಪ | ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ | ನಮ್ಮನ್ನು ನಾವು ಅರಿತುಕೊಳ್ಳಲು ಶಿಬಿರ ಪೂರಕ ವಾತಾವರಣ ಕಲ್ಪಿಸುತ್ತದೆ : ವಚನಾ ಪ್ರದೀಪ್‍ | ಪ್ರೇರಣಾ ಬೇಸಿಗೆ ಶಿಬಿರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ : ಡಿ.ವಿ.ಮನೋಹರ್ | ಪ್ರೇರಣಾ ಬೇಸಿಗೆ ಶಿಬಿರ ಮಕ್ಕಳಿಗೆ ಉತ್ತಮ ಚಟುವಟಿಕೆಗಳಿಗೆ ಪ್ರೇರಣೆ ನೀಡಿದೆ : ಉಲ್ಲಾಸ ಪೈ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹೊರ ಹಾಕಲು ಶಿಬಿರದ ಪಾತ್ರ ಬಹುಮುಖ್ಯ : ಕೆ.ರಾಜೇಂದ್ರ ಪ್ರಸಾದ್‍ ಶೆಟ್ಟಿ, Read More »

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 55ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.16 ಬುಧವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಡಾ. ಬಿ ಆರ್.  ಅಂಬೇಡ್ಕರ್ ಜಯಂತಿ ಆಚರಣೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಭೀಮಾರಾವ್ ಅಂಬೇಡ್ಕರ್ ರವರ 134 ನೆಯ ಜನ್ಮ ದಿನಾಚರಣೆಯನ್ನು ಆಚರಿಸಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಎಸ್. ಡಿ. ಎಂ. ಸಿ. ಅದಕ್ಷರಾದ ರವಿಚಂದ್ರ ಇವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದರು. ಶಾಲಾ ಮುಖ್ಯಗುರು ತಾರಾನಾಥ ಪಿ ಇವರು ಅಂಬೇಡ್ಕರ್ರವರ ಬಾಲ್ಯ ಜೀವನವನ್ನು ಅವರ ಶೈಕ್ಷಣಿಕ ಬದುಕನ್ನು ವಿವರಿಸಿದರು. ಸಂವಿಧಾನದ ದಾಖಲಿಸಿದ ಸಂಗತಿಗಳನ್ನು ವಿವರಿಸಲಾಯಿತು.  ಶಾಲಾ ಶಿಕ್ಷಕರಾದ ಹರಿಣಾಕ್ಷಿ, ಶೋಭಾ,ಶ್ರೀಲತಾ, ಕವಿತಾ,ಹೇಮಾವತಿ,ಶಿಲ್ಪರಾಣಿ, ಸೌಮ್ಯ ಉಪಸ್ಥಿತರಿದ್ದರು

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಡಾ. ಬಿ ಆರ್.  ಅಂಬೇಡ್ಕರ್ ಜಯಂತಿ ಆಚರಣೆ Read More »

ಕಾರುಗಳ ನಡುವೆ ಅಪಘಾತ

ಪುತ್ತೂರು: ಕಾರು- ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಕುಂಬ್ರ ಸಮೀಪದಲ್ಲಿ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ನಡುವೆ ಅಪಘಾತ Read More »

ಬಿಸಿಲ ಬೇಗೆಯಲ್ಲಿ ಬೆಂದು, ಬಳಲಿ ಬಾಯಾರಿದವರಿಗೆ ತಂಪು ಪಾನೀಯ ವಿತರಿಸಿ ಮಾನವೀಯತೆಯ ಮಾತೃ ಸೇವೆ ನೀಡಿದ 9ರ ಪುಟಾಣಿ ಬಾಲಕಿ

ಪುತ್ತೂರು :  ಏಪ್ರಿಲ್ 13 ರ ಭಾನುವಾರದ ಸುಡು ಬಿಸಿಲಿನ ಬೆಂಕಿಗೂಡಿನಲ್ಲಿ  ನಡೆದ ಹೃದಯಸ್ಪರ್ಶಿ ಕಾರ್ಯಕ್ರಮವಿದು. ಕೇವಲ 9 ವರ್ಷದ ಬಾಲಕಿ ಸಂಪ್ರೀತಿ ಎಸ್. ಪ್ರಭು ಅವರು ತಮ್ಮ ಕರುಣಾಮಯಿ ಕಾರ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬೇಸಿಗೆಯ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಪ್ರೀತಿ ಅವರು ಪೆಟ್ರೋಲ್ ಪಂಪ್‌ ಗಳಲ್ಲಿ, ಬೀದಿ ಬದಿ ತರಕಾರಿ ಮಾರುಕಟ್ಟೆಗಳಲ್ಲಿ, ವಾಹನ ದುರಸ್ತಿ ಕೇಂದ್ರಗಳಲ್ಲಿ ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ತಂಪಾದ ಜ್ಯೂಸ್ ಮತ್ತು ಪಾನೀಯಗಳನ್ನು ವಿತರಿಸುವ ಉದಾತ್ತ

ಬಿಸಿಲ ಬೇಗೆಯಲ್ಲಿ ಬೆಂದು, ಬಳಲಿ ಬಾಯಾರಿದವರಿಗೆ ತಂಪು ಪಾನೀಯ ವಿತರಿಸಿ ಮಾನವೀಯತೆಯ ಮಾತೃ ಸೇವೆ ನೀಡಿದ 9ರ ಪುಟಾಣಿ ಬಾಲಕಿ Read More »

error: Content is protected !!
Scroll to Top